Homeಅಂತರಾಷ್ಟ್ರೀಯಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

- Advertisement -
- Advertisement -

ಇರಾನ್‌ನ ಪರಮಾಣು ಮತ್ತು ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ಬೃಹತ್ ದಾಳಿಯ ನಂತರ ಇರಾನ್ ಶನಿವಾರ ಮುಂಜಾನೆ ಪ್ಯಾಲೆಸ್ತೀನ್‌ ಆಕ್ರಮಿತ ಇಸ್ರೇಲ್‌ನ ರಾಜಧಾನಿ ಸೇರಿದಂತೆ ಹಲವಾರು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಕನಿಷ್ಠ 40 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್‌ ಪ್ರತಿಕಾರ

ಶುಕ್ರವಾರ ರಾತ್ರಿ ಇಸ್ರೇಲ್‌ನಾದ್ಯಂತ ಸೈರನ್‌ಗಳು ಮೊಳಗುತ್ತಿದ್ದಂತೆ ಟೆಲ್ ಅವೀವ್ ಮತ್ತು ಜೆರುಸಲೆಮ್ ಮೇಲೆ ಸ್ಫೋಟಗಳು ಕೇಳಿಬಂದವು. ಶುಕ್ರವಾರ ಮುಂಜಾನೆ ಇಸ್ರೇಲ್ ನಡೆಸಿದ ಭಾರಿ ದಾಳಿಯ ನಂತರ ಇದು ಸಂಭವಿಸಿದೆ. ಇರಾನ್‌ ದಾಳಿಯ ನಂತರ ನಿವಾಸಿಗಳು ಬಂಕರ್‌ಗಳಲ್ಲಿ ಆಶ್ರಯ ಪಡೆಯುವಂತೆ ಶನಿವಾರ ಬೆಳಿಗ್ಗೆ ಅದರ ಮಿಲಿಟರಿ ಕರೆ ನೀಡಿದೆ.

ಇರಾನ್ ಮೇಲೆ ದಾಳಿ ಮಾಡಿ ಹಲವಾರು ಉನ್ನತ ಮಟ್ಟದ ಮಿಲಿಟರಿ ಕಮಾಂಡರ್‌ಗಳು ಮತ್ತು ಆರು ಪರಮಾಣು ವಿಜ್ಞಾನಿಗಳನ್ನು ಕೊಂದು “ಅಪರಾಧ” ಮಾಡಿದ ನಂತರ ಇಸ್ರೇಲ್‌ “ಕಠಿಣ ಶಿಕ್ಷೆಯನ್ನು ನಿರೀಕ್ಷಿಸಬೇಕು” ಎಂದು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್‌ಗೆ ಎಚ್ಚರಿಕೆ ನೀಡಿದ್ದಾರೆ. ದೂರದರ್ಶನದ ಭಾಷಣದಲ್ಲಿ ಅವರು ಇಸ್ರೇಲ್ ಅನ್ನು “ನಾಶ” ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಇಸ್ರೇಲ್‌ನ ದಾಳಿಗಳು “ಯುದ್ಧವನ್ನು ಪ್ರಾರಂಭಿಸಿವೆ” ಮತ್ತು ಪರಿಣಾಮಗಳಿಲ್ಲದೆ “ಹಿಟ್ ಅಂಡ್ ರನ್” ದಾಳಿಗಳನ್ನು ಮಾಡಲು ಅದಕ್ಕೆ ಅನುಮತಿ ನೀಡುವುದಿಲ್ಲ ಎಂದು ಅವರು ಹೇಳಿದ್ದು, “ಜಿಯೋನಿಸ್ಟ್ ಆಡಳಿತ [ಇಸ್ರೇಲ್] ತನ್ನ ಅಪರಾಧದ ಪರಿಣಾಮಗಳಿಂದ ಪಾರಾಗುವುದಿಲ್ಲ. ನಮ್ಮ ಪ್ರತಿಕ್ರಿಯೆ ಅರ್ಧದಷ್ಟು ಅಳತೆಯಾಗಿರುವುದಿಲ್ಲ ಎಂದು ಇರಾನ್ ರಾಷ್ಟ್ರಕ್ಕೆ ಖಾತರಿ ನೀಡಬೇಕು” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಖಮೇನಿ ಅವರ ಆಜ್ಞೆಯ ಮೇರೆಗೆ ಇಸ್ರೇಲ್‌ನಲ್ಲಿರುವ “ಡಜನ್‌ಗಟ್ಟಲೆ ಗುರಿಗಳು, ಮಿಲಿಟರಿ ಕೇಂದ್ರಗಳು ಮತ್ತು ವಾಯುನೆಲೆಗಳ ವಿರುದ್ಧ ದಾಳಿ ಮಾಡಲಾಗಿದೆ” ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿದೆ. ಶುಕ್ರವಾರ ರಾತ್ರಿ ಇಸ್ರೇಲ್ ಮೇಲೆ ಮೂರು ಪ್ರತ್ಯೇಕ ದಾಳಿ ಅಲೆಗಳು ಮತ್ತು ನೂರಾರು ಕ್ಷಿಪಣಿಗಳನ್ನು ಹಾರಿಸಲಾಯಿತು ಎಂದು ಇರಾನ್‌ನ ಸರ್ಕಾರಿ ಮಾಧ್ಯಮ ತಿಳಿಸಿದೆ. ಕನಿಷ್ಠ ಒಂದು ಕ್ಷಿಪಣಿ ಇಸ್ರೇಲ್ ರಾಜಧಾನಿ ಟೆಲ್ ಅವೀವ್ ಮೇಲೆ ಪರಿಣಾಮ ಬೀರಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಇಸ್ರೇಲ್ ಮೇಲಿನ ದಾಳಿಯ ನಂತರ, ಶನಿವಾರ ಸ್ಥಳೀಯ ಸಮಯ ಮಧ್ಯಾಹ್ನ 2 ಗಂಟೆಯವರೆಗೆ ತನ್ನ ವಾಯುಪ್ರದೇಶವನ್ನು ಮುಚ್ಚಲಾಗುವುದು ಎಂದು ಇರಾನ್ ಘೋಷಿಸಿದೆ. ಅದೇ ಸಮಯದಲ್ಲಿ, ಹೊಸ ಇಸ್ರೇಲಿ ದಾಳಿಗಳನ್ನು ತಡೆಯಲು ರಾಜಧಾನಿ ಟೆಹ್ರಾನ್‌ನಲ್ಲಿ ವಾಯು ರಕ್ಷಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ IRNA ವರದಿ ಮಾಡಿದೆ.

ಶುಕ್ರವಾರ ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಶಸ್ತ್ರ ಪಡೆಗಳ ಮುಖ್ಯಸ್ಥ ಮೇಜರ್-ಜನರಲ್ ಮೊಹಮ್ಮದ್ ಬಾಘೇರಿ ಮತ್ತು IRGC ಮುಖ್ಯಸ್ಥ ಹೊಸೇನ್ ಸಲಾಮಿ ಸೇರಿದಂತೆ ಹಲವಾರು ಉನ್ನತ ಇರಾನಿನ ಜನರಲ್‌ಗಳು ಮತ್ತು ವಿಜ್ಞಾನಿಗಳು ಸಾವನ್ನಪ್ಪಿದರು. ಆದಾಗ್ಯೂ, ಮೇಜರ್-ಜನರಲ್ ಮೊಹಮ್ಮದ್ ಪಕ್ಪೂರ್ ಅವರನ್ನು ಹೊಸೇನ್ ಸಲಾಮಿ ಬದಲಿಗೆ ಶೀಘ್ರವಾಗಿ ಬಡ್ತಿ ನೀಡಲಾಯಿತು.

ಇಸ್ರೇಲ್‌ನ ಶುಕ್ರವಾರದ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 78 ಜನರು ಸಾವನ್ನಪ್ಪಿದ್ದಾರೆ ಮತ್ತು 320 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಇರಾನ್ ರಾಯಭಾರಿ ಅಮೀರ್ ಸಯೀದ್ ಇರಾವನಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ತಿಳಿಸಿದ್ದಾರೆ.

ದೇಶದ ಸರ್ವೋಚ್ಛ ನಾಯಕ ಖೊಮೇನಿಗೆ ನೂತತ IRGC ಮುಖ್ಯಸ್ಥ ಮೊಹಮ್ಮದ್ ಪಕ್ಪೂರ್ ಬರೆದ ಪತ್ರದಲ್ಲಿ, ಇಸ್ರೇಲ್ ಅನ್ನು ಉಲ್ಲೇಖಿಸಿ, “ಮಕ್ಕಳನ್ನು ಕೊಲ್ಲುವ ಆಡಳಿತಕ್ಕೆ ನರಕದ ದ್ವಾರಗಳು ತೆರೆಯುತ್ತವೆ” ಎಂದು ಹೇಳಿದ್ದಾರೆ.

ಇರಾನ್ ಮೇಲೆ ನಡೆಸಿದ ಅನಿರೀಕ್ಷಿತ ದಾಳಿಯ ಸಮಯದಲ್ಲಿ ಇಸ್ರೇಲ್‌ ಸೇನೆಯು ಇರಾನ್‌ನಾದ್ಯಂತ 200 ಕ್ಕೂ ಹೆಚ್ಚು ಗುರಿಗಳನ್ನು ಹೊಡೆದಿದೆ ಎಂದು ಹೇಳಿದೆ. ಇರಾನ್‌ನ ಪ್ರತೀಕಾರದ ದಾಳಿಯ ಮೊದಲು ಮಾತನಾಡಿದ್ದ ಇಸ್ರೇಲ್ ಮಿಲಿಟರಿ ವಕ್ತಾರ ಬ್ರಿಗೇಡಿಯರ್-ಜನರಲ್ ಎಫೀ ಡೆಫ್ರಿನ್, ಇಸ್ರೇಲ್ ಸೈನ್ಯವು “ದಾಳಿಯನ್ನು ಮುಂದುವರಿಸುತ್ತಿದೆ” ಎಂದು ಹೇಳಿದ್ದರು.

ಇರಾನ್‌ನ ಇಸ್ಫಹಾನ್‌ನಲ್ಲಿರುವ ಪರಮಾಣು ಕೇಂದ್ರಗಳನ್ನು ಸೇನೆ ಗುರಿಯಾಗಿಸಿಕೊಂಡಿದ್ದು, ಕಾರ್ಯಾಚರಣೆ “ಇನ್ನೂ ಮುಂದುವರೆದಿದೆ” ಎಂದು ಡೆಫ್ರಿನ್ ಹೇಳಿದ್ದರು. ಅದಕ್ಕೂ ಮೊದಲು, ಇಸ್ರೇಲ್ ಇರಾನ್‌ನಲ್ಲಿರುವ ನಟಾಂಜ್ ಪರಮಾಣು ಪುಷ್ಟೀಕರಣ ತಾಣದ ಮೇಲೆಯೂ ದಾಳಿ ಮಾಡಿದೆ.

ಶನಿವಾರ ಮುಂಜಾನೆ ಇರಾನ್‌ನ ರಾಜಧಾನಿ ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಿಂದ ಬೆಂಕಿ ಮತ್ತು ಭಾರೀ ಹೊಗೆ ಹೊರಹೊಮ್ಮಿತು ಎಂದು AFP ಪತ್ರಕರ್ತರೊಬ್ಬರು ಹೇಳಿದ್ದು, ಸ್ಥಳೀಯ ಮಾಧ್ಯಮಗಳು ಕೂಡಾ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಖಚಿತಪಡಿಸಿವೆ. ಇರಾನ್ ತನ್ನ ವಾಯು ರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದೆ ಮತ್ತು ರಾಜಧಾನಿಯಾದ್ಯಂತ ಸ್ಫೋಟಗಳ ಶಬ್ದ ಕೇಳಿಬರುತ್ತಿದೆ ಎಂದು ಹೇಳಿತ್ತು.

ಇಸ್ರೇಲ್ ನಡೆಸಿದ ಈ ದಾಳಿಯನ್ನು ವಿರೋಧಿಸಿ  ತಮ್ಮ ದೇಶದ ಮಿಲಿಟರಿ ಪ್ರತಿಕ್ರಿಯೆಯನ್ನು ನಿರೀಕ್ಷಿಸಿ ನೂರಾರು ಜನರು ರಾತ್ರಿಯಿಡೀ ಇರಾನ್‌ನ ರಾಜಧಾನಿ ಟೆಹ್ರಾನ್‌ನ ಬೀದಿಗಳಿಗೆ ಇಳಿದು ರಾಷ್ಟ್ರೀಯ ಧ್ವಜಗಳನ್ನು ಬೀಸುತ್ತಾ ಮತ್ತು ಇಸ್ರೇಲ್ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.

ಇರಾನ್‌ನಿಂದ ಡಜನ್ಗಟ್ಟಲೆ ಕ್ಷಿಪಣಿಗಳನ್ನು ಹಾರಿಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿದ್ದು, ಕೆಲವು ಕ್ಷಿಪಣಿಗಳನ್ನು ತಡೆಹಿಡಿಯಲಾಗಿದೆ ಎಂದು ಅದು ತಿಳಿಸಿದೆ. ಪ್ಯಾಲೆಸ್ತೀನ್ ಆಕ್ರಮಿತ ಇಸ್ರೇಲ್‌ನ ರಾಜಧಾನಿ ಟೆಲ್ ಅವೀವ್‌ನ ಡೌನ್‌ಟೌನ್‌ನಲ್ಲಿರುವ ಗಗನಚುಂಬಿ ಕಟ್ಟಡಗಳ ಮೇಲೆ ಹೊಗೆ ಬರುತ್ತಿದೆ ಎಂದು ಎಎಫ್‌ಪಿ ಪತ್ರಕರ್ತರೊಬ್ಬರು ವರದಿ ಮಾಡಿದ್ದಾರೆ.

ಇರಾನಿನ ಕ್ಷಿಪಣಿ ದಾಳಿಯ ನಂತರ ತನ್ನ ರಕ್ಷಣಾ ತಂಡಗಳು ಪ್ರತಿಕ್ರಿಯಿಸುತ್ತಿವೆ ಎಂದು ಇಸ್ರೇಲ್‌ನ ಅಗ್ನಿಶಾಮಕ ಸೇವೆ ತಿಳಿಸಿದೆ. ಈ ತಂಡಗಳು ಎತ್ತರದ ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಕೆಲಸವೂ ಮಾಡುತ್ತಿದೆ ಎಂದು ಅದು ತಿಳಿಸಿದೆ.

ಅಮೆರಿಕ ಮತ್ತು ಇತರ ಪಾಶ್ಚಿಮಾತ್ಯ ಸರ್ಕಾರಗಳು ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಸಂಗ್ರಹಿಸುತ್ತಿದೆ ಎಂದು ಪದೇ ಪದೇ ಆರೋಪಿಸಿದ್ದು, ಆದರೆ ಇರಾನ್ ಅದನ್ನು ನಿರಂತರವಾಗಿ ನಿರಾಕರಿಸುತ್ತಲೆ ಬಂದಿದೆ. ಈ ನಡುವೆ, ಇರಾನ್ ತನ್ನ ಪರಮಾಣು ಕಾರ್ಯಕ್ರಮದಲ್ಲಿ “ಹಿಂದಿರುಗಿಸಲಾಗದ ಹಂತ”ವನ್ನು ತಲುಪುತ್ತಿದೆ ಎಂದು ಇಸ್ರೇಲ್ ಗುಪ್ತಚರ ಇಲಾಖೆ ತೀರ್ಮಾನಿಸಿದೆ ಎಂದು ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿದ್ದಾರೆ. ಇರಾನ್‌ ಪ್ರತಿಕಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆಗಳು 7%ಕ್ಕಿಂತ ಹೆಚ್ಚು ಏರಿಕೆ

ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆಗಳು 7%ಕ್ಕಿಂತ ಹೆಚ್ಚು ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...