Homeಅಂತರಾಷ್ಟ್ರೀಯಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

- Advertisement -
- Advertisement -

ಇರಾನ್‌ನ ಪರಮಾಣು ಮತ್ತು ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ಬೃಹತ್ ದಾಳಿಯ ನಂತರ ಇರಾನ್ ಶನಿವಾರ ಮುಂಜಾನೆ ಪ್ಯಾಲೆಸ್ತೀನ್‌ ಆಕ್ರಮಿತ ಇಸ್ರೇಲ್‌ನ ರಾಜಧಾನಿ ಸೇರಿದಂತೆ ಹಲವಾರು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಕನಿಷ್ಠ 40 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್‌ ಪ್ರತಿಕಾರ

ಶುಕ್ರವಾರ ರಾತ್ರಿ ಇಸ್ರೇಲ್‌ನಾದ್ಯಂತ ಸೈರನ್‌ಗಳು ಮೊಳಗುತ್ತಿದ್ದಂತೆ ಟೆಲ್ ಅವೀವ್ ಮತ್ತು ಜೆರುಸಲೆಮ್ ಮೇಲೆ ಸ್ಫೋಟಗಳು ಕೇಳಿಬಂದವು. ಶುಕ್ರವಾರ ಮುಂಜಾನೆ ಇಸ್ರೇಲ್ ನಡೆಸಿದ ಭಾರಿ ದಾಳಿಯ ನಂತರ ಇದು ಸಂಭವಿಸಿದೆ. ಇರಾನ್‌ ದಾಳಿಯ ನಂತರ ನಿವಾಸಿಗಳು ಬಂಕರ್‌ಗಳಲ್ಲಿ ಆಶ್ರಯ ಪಡೆಯುವಂತೆ ಶನಿವಾರ ಬೆಳಿಗ್ಗೆ ಅದರ ಮಿಲಿಟರಿ ಕರೆ ನೀಡಿದೆ.

ಇರಾನ್ ಮೇಲೆ ದಾಳಿ ಮಾಡಿ ಹಲವಾರು ಉನ್ನತ ಮಟ್ಟದ ಮಿಲಿಟರಿ ಕಮಾಂಡರ್‌ಗಳು ಮತ್ತು ಆರು ಪರಮಾಣು ವಿಜ್ಞಾನಿಗಳನ್ನು ಕೊಂದು “ಅಪರಾಧ” ಮಾಡಿದ ನಂತರ ಇಸ್ರೇಲ್‌ “ಕಠಿಣ ಶಿಕ್ಷೆಯನ್ನು ನಿರೀಕ್ಷಿಸಬೇಕು” ಎಂದು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್‌ಗೆ ಎಚ್ಚರಿಕೆ ನೀಡಿದ್ದಾರೆ. ದೂರದರ್ಶನದ ಭಾಷಣದಲ್ಲಿ ಅವರು ಇಸ್ರೇಲ್ ಅನ್ನು “ನಾಶ” ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಇಸ್ರೇಲ್‌ನ ದಾಳಿಗಳು “ಯುದ್ಧವನ್ನು ಪ್ರಾರಂಭಿಸಿವೆ” ಮತ್ತು ಪರಿಣಾಮಗಳಿಲ್ಲದೆ “ಹಿಟ್ ಅಂಡ್ ರನ್” ದಾಳಿಗಳನ್ನು ಮಾಡಲು ಅದಕ್ಕೆ ಅನುಮತಿ ನೀಡುವುದಿಲ್ಲ ಎಂದು ಅವರು ಹೇಳಿದ್ದು, “ಜಿಯೋನಿಸ್ಟ್ ಆಡಳಿತ [ಇಸ್ರೇಲ್] ತನ್ನ ಅಪರಾಧದ ಪರಿಣಾಮಗಳಿಂದ ಪಾರಾಗುವುದಿಲ್ಲ. ನಮ್ಮ ಪ್ರತಿಕ್ರಿಯೆ ಅರ್ಧದಷ್ಟು ಅಳತೆಯಾಗಿರುವುದಿಲ್ಲ ಎಂದು ಇರಾನ್ ರಾಷ್ಟ್ರಕ್ಕೆ ಖಾತರಿ ನೀಡಬೇಕು” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಖಮೇನಿ ಅವರ ಆಜ್ಞೆಯ ಮೇರೆಗೆ ಇಸ್ರೇಲ್‌ನಲ್ಲಿರುವ “ಡಜನ್‌ಗಟ್ಟಲೆ ಗುರಿಗಳು, ಮಿಲಿಟರಿ ಕೇಂದ್ರಗಳು ಮತ್ತು ವಾಯುನೆಲೆಗಳ ವಿರುದ್ಧ ದಾಳಿ ಮಾಡಲಾಗಿದೆ” ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿದೆ. ಶುಕ್ರವಾರ ರಾತ್ರಿ ಇಸ್ರೇಲ್ ಮೇಲೆ ಮೂರು ಪ್ರತ್ಯೇಕ ದಾಳಿ ಅಲೆಗಳು ಮತ್ತು ನೂರಾರು ಕ್ಷಿಪಣಿಗಳನ್ನು ಹಾರಿಸಲಾಯಿತು ಎಂದು ಇರಾನ್‌ನ ಸರ್ಕಾರಿ ಮಾಧ್ಯಮ ತಿಳಿಸಿದೆ. ಕನಿಷ್ಠ ಒಂದು ಕ್ಷಿಪಣಿ ಇಸ್ರೇಲ್ ರಾಜಧಾನಿ ಟೆಲ್ ಅವೀವ್ ಮೇಲೆ ಪರಿಣಾಮ ಬೀರಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಇಸ್ರೇಲ್ ಮೇಲಿನ ದಾಳಿಯ ನಂತರ, ಶನಿವಾರ ಸ್ಥಳೀಯ ಸಮಯ ಮಧ್ಯಾಹ್ನ 2 ಗಂಟೆಯವರೆಗೆ ತನ್ನ ವಾಯುಪ್ರದೇಶವನ್ನು ಮುಚ್ಚಲಾಗುವುದು ಎಂದು ಇರಾನ್ ಘೋಷಿಸಿದೆ. ಅದೇ ಸಮಯದಲ್ಲಿ, ಹೊಸ ಇಸ್ರೇಲಿ ದಾಳಿಗಳನ್ನು ತಡೆಯಲು ರಾಜಧಾನಿ ಟೆಹ್ರಾನ್‌ನಲ್ಲಿ ವಾಯು ರಕ್ಷಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ IRNA ವರದಿ ಮಾಡಿದೆ.

ಶುಕ್ರವಾರ ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಶಸ್ತ್ರ ಪಡೆಗಳ ಮುಖ್ಯಸ್ಥ ಮೇಜರ್-ಜನರಲ್ ಮೊಹಮ್ಮದ್ ಬಾಘೇರಿ ಮತ್ತು IRGC ಮುಖ್ಯಸ್ಥ ಹೊಸೇನ್ ಸಲಾಮಿ ಸೇರಿದಂತೆ ಹಲವಾರು ಉನ್ನತ ಇರಾನಿನ ಜನರಲ್‌ಗಳು ಮತ್ತು ವಿಜ್ಞಾನಿಗಳು ಸಾವನ್ನಪ್ಪಿದರು. ಆದಾಗ್ಯೂ, ಮೇಜರ್-ಜನರಲ್ ಮೊಹಮ್ಮದ್ ಪಕ್ಪೂರ್ ಅವರನ್ನು ಹೊಸೇನ್ ಸಲಾಮಿ ಬದಲಿಗೆ ಶೀಘ್ರವಾಗಿ ಬಡ್ತಿ ನೀಡಲಾಯಿತು.

ಇಸ್ರೇಲ್‌ನ ಶುಕ್ರವಾರದ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 78 ಜನರು ಸಾವನ್ನಪ್ಪಿದ್ದಾರೆ ಮತ್ತು 320 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಇರಾನ್ ರಾಯಭಾರಿ ಅಮೀರ್ ಸಯೀದ್ ಇರಾವನಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ತಿಳಿಸಿದ್ದಾರೆ.

ದೇಶದ ಸರ್ವೋಚ್ಛ ನಾಯಕ ಖೊಮೇನಿಗೆ ನೂತತ IRGC ಮುಖ್ಯಸ್ಥ ಮೊಹಮ್ಮದ್ ಪಕ್ಪೂರ್ ಬರೆದ ಪತ್ರದಲ್ಲಿ, ಇಸ್ರೇಲ್ ಅನ್ನು ಉಲ್ಲೇಖಿಸಿ, “ಮಕ್ಕಳನ್ನು ಕೊಲ್ಲುವ ಆಡಳಿತಕ್ಕೆ ನರಕದ ದ್ವಾರಗಳು ತೆರೆಯುತ್ತವೆ” ಎಂದು ಹೇಳಿದ್ದಾರೆ.

ಇರಾನ್ ಮೇಲೆ ನಡೆಸಿದ ಅನಿರೀಕ್ಷಿತ ದಾಳಿಯ ಸಮಯದಲ್ಲಿ ಇಸ್ರೇಲ್‌ ಸೇನೆಯು ಇರಾನ್‌ನಾದ್ಯಂತ 200 ಕ್ಕೂ ಹೆಚ್ಚು ಗುರಿಗಳನ್ನು ಹೊಡೆದಿದೆ ಎಂದು ಹೇಳಿದೆ. ಇರಾನ್‌ನ ಪ್ರತೀಕಾರದ ದಾಳಿಯ ಮೊದಲು ಮಾತನಾಡಿದ್ದ ಇಸ್ರೇಲ್ ಮಿಲಿಟರಿ ವಕ್ತಾರ ಬ್ರಿಗೇಡಿಯರ್-ಜನರಲ್ ಎಫೀ ಡೆಫ್ರಿನ್, ಇಸ್ರೇಲ್ ಸೈನ್ಯವು “ದಾಳಿಯನ್ನು ಮುಂದುವರಿಸುತ್ತಿದೆ” ಎಂದು ಹೇಳಿದ್ದರು.

ಇರಾನ್‌ನ ಇಸ್ಫಹಾನ್‌ನಲ್ಲಿರುವ ಪರಮಾಣು ಕೇಂದ್ರಗಳನ್ನು ಸೇನೆ ಗುರಿಯಾಗಿಸಿಕೊಂಡಿದ್ದು, ಕಾರ್ಯಾಚರಣೆ “ಇನ್ನೂ ಮುಂದುವರೆದಿದೆ” ಎಂದು ಡೆಫ್ರಿನ್ ಹೇಳಿದ್ದರು. ಅದಕ್ಕೂ ಮೊದಲು, ಇಸ್ರೇಲ್ ಇರಾನ್‌ನಲ್ಲಿರುವ ನಟಾಂಜ್ ಪರಮಾಣು ಪುಷ್ಟೀಕರಣ ತಾಣದ ಮೇಲೆಯೂ ದಾಳಿ ಮಾಡಿದೆ.

ಶನಿವಾರ ಮುಂಜಾನೆ ಇರಾನ್‌ನ ರಾಜಧಾನಿ ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಿಂದ ಬೆಂಕಿ ಮತ್ತು ಭಾರೀ ಹೊಗೆ ಹೊರಹೊಮ್ಮಿತು ಎಂದು AFP ಪತ್ರಕರ್ತರೊಬ್ಬರು ಹೇಳಿದ್ದು, ಸ್ಥಳೀಯ ಮಾಧ್ಯಮಗಳು ಕೂಡಾ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಖಚಿತಪಡಿಸಿವೆ. ಇರಾನ್ ತನ್ನ ವಾಯು ರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದೆ ಮತ್ತು ರಾಜಧಾನಿಯಾದ್ಯಂತ ಸ್ಫೋಟಗಳ ಶಬ್ದ ಕೇಳಿಬರುತ್ತಿದೆ ಎಂದು ಹೇಳಿತ್ತು.

ಇಸ್ರೇಲ್ ನಡೆಸಿದ ಈ ದಾಳಿಯನ್ನು ವಿರೋಧಿಸಿ  ತಮ್ಮ ದೇಶದ ಮಿಲಿಟರಿ ಪ್ರತಿಕ್ರಿಯೆಯನ್ನು ನಿರೀಕ್ಷಿಸಿ ನೂರಾರು ಜನರು ರಾತ್ರಿಯಿಡೀ ಇರಾನ್‌ನ ರಾಜಧಾನಿ ಟೆಹ್ರಾನ್‌ನ ಬೀದಿಗಳಿಗೆ ಇಳಿದು ರಾಷ್ಟ್ರೀಯ ಧ್ವಜಗಳನ್ನು ಬೀಸುತ್ತಾ ಮತ್ತು ಇಸ್ರೇಲ್ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.

ಇರಾನ್‌ನಿಂದ ಡಜನ್ಗಟ್ಟಲೆ ಕ್ಷಿಪಣಿಗಳನ್ನು ಹಾರಿಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿದ್ದು, ಕೆಲವು ಕ್ಷಿಪಣಿಗಳನ್ನು ತಡೆಹಿಡಿಯಲಾಗಿದೆ ಎಂದು ಅದು ತಿಳಿಸಿದೆ. ಪ್ಯಾಲೆಸ್ತೀನ್ ಆಕ್ರಮಿತ ಇಸ್ರೇಲ್‌ನ ರಾಜಧಾನಿ ಟೆಲ್ ಅವೀವ್‌ನ ಡೌನ್‌ಟೌನ್‌ನಲ್ಲಿರುವ ಗಗನಚುಂಬಿ ಕಟ್ಟಡಗಳ ಮೇಲೆ ಹೊಗೆ ಬರುತ್ತಿದೆ ಎಂದು ಎಎಫ್‌ಪಿ ಪತ್ರಕರ್ತರೊಬ್ಬರು ವರದಿ ಮಾಡಿದ್ದಾರೆ.

ಇರಾನಿನ ಕ್ಷಿಪಣಿ ದಾಳಿಯ ನಂತರ ತನ್ನ ರಕ್ಷಣಾ ತಂಡಗಳು ಪ್ರತಿಕ್ರಿಯಿಸುತ್ತಿವೆ ಎಂದು ಇಸ್ರೇಲ್‌ನ ಅಗ್ನಿಶಾಮಕ ಸೇವೆ ತಿಳಿಸಿದೆ. ಈ ತಂಡಗಳು ಎತ್ತರದ ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಕೆಲಸವೂ ಮಾಡುತ್ತಿದೆ ಎಂದು ಅದು ತಿಳಿಸಿದೆ.

ಅಮೆರಿಕ ಮತ್ತು ಇತರ ಪಾಶ್ಚಿಮಾತ್ಯ ಸರ್ಕಾರಗಳು ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಸಂಗ್ರಹಿಸುತ್ತಿದೆ ಎಂದು ಪದೇ ಪದೇ ಆರೋಪಿಸಿದ್ದು, ಆದರೆ ಇರಾನ್ ಅದನ್ನು ನಿರಂತರವಾಗಿ ನಿರಾಕರಿಸುತ್ತಲೆ ಬಂದಿದೆ. ಈ ನಡುವೆ, ಇರಾನ್ ತನ್ನ ಪರಮಾಣು ಕಾರ್ಯಕ್ರಮದಲ್ಲಿ “ಹಿಂದಿರುಗಿಸಲಾಗದ ಹಂತ”ವನ್ನು ತಲುಪುತ್ತಿದೆ ಎಂದು ಇಸ್ರೇಲ್ ಗುಪ್ತಚರ ಇಲಾಖೆ ತೀರ್ಮಾನಿಸಿದೆ ಎಂದು ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿದ್ದಾರೆ. ಇರಾನ್‌ ಪ್ರತಿಕಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆಗಳು 7%ಕ್ಕಿಂತ ಹೆಚ್ಚು ಏರಿಕೆ

ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆಗಳು 7%ಕ್ಕಿಂತ ಹೆಚ್ಚು ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...