Homeಅಂತರಾಷ್ಟ್ರೀಯಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

ಇರಾನ್‌ ಪ್ರತಿಕಾರ | ಇಸ್ರೇಲ್‌ನಾದ್ಯಂತ ಕ್ಷಿಪಣಿ ದಾಳಿ; 40 ಜನರಿಗೆ ಗಾಯ

- Advertisement -
- Advertisement -

ಇರಾನ್‌ನ ಪರಮಾಣು ಮತ್ತು ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ಬೃಹತ್ ದಾಳಿಯ ನಂತರ ಇರಾನ್ ಶನಿವಾರ ಮುಂಜಾನೆ ಪ್ಯಾಲೆಸ್ತೀನ್‌ ಆಕ್ರಮಿತ ಇಸ್ರೇಲ್‌ನ ರಾಜಧಾನಿ ಸೇರಿದಂತೆ ಹಲವಾರು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಕನಿಷ್ಠ 40 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್‌ ಪ್ರತಿಕಾರ

ಶುಕ್ರವಾರ ರಾತ್ರಿ ಇಸ್ರೇಲ್‌ನಾದ್ಯಂತ ಸೈರನ್‌ಗಳು ಮೊಳಗುತ್ತಿದ್ದಂತೆ ಟೆಲ್ ಅವೀವ್ ಮತ್ತು ಜೆರುಸಲೆಮ್ ಮೇಲೆ ಸ್ಫೋಟಗಳು ಕೇಳಿಬಂದವು. ಶುಕ್ರವಾರ ಮುಂಜಾನೆ ಇಸ್ರೇಲ್ ನಡೆಸಿದ ಭಾರಿ ದಾಳಿಯ ನಂತರ ಇದು ಸಂಭವಿಸಿದೆ. ಇರಾನ್‌ ದಾಳಿಯ ನಂತರ ನಿವಾಸಿಗಳು ಬಂಕರ್‌ಗಳಲ್ಲಿ ಆಶ್ರಯ ಪಡೆಯುವಂತೆ ಶನಿವಾರ ಬೆಳಿಗ್ಗೆ ಅದರ ಮಿಲಿಟರಿ ಕರೆ ನೀಡಿದೆ.

ಇರಾನ್ ಮೇಲೆ ದಾಳಿ ಮಾಡಿ ಹಲವಾರು ಉನ್ನತ ಮಟ್ಟದ ಮಿಲಿಟರಿ ಕಮಾಂಡರ್‌ಗಳು ಮತ್ತು ಆರು ಪರಮಾಣು ವಿಜ್ಞಾನಿಗಳನ್ನು ಕೊಂದು “ಅಪರಾಧ” ಮಾಡಿದ ನಂತರ ಇಸ್ರೇಲ್‌ “ಕಠಿಣ ಶಿಕ್ಷೆಯನ್ನು ನಿರೀಕ್ಷಿಸಬೇಕು” ಎಂದು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಇಸ್ರೇಲ್‌ಗೆ ಎಚ್ಚರಿಕೆ ನೀಡಿದ್ದಾರೆ. ದೂರದರ್ಶನದ ಭಾಷಣದಲ್ಲಿ ಅವರು ಇಸ್ರೇಲ್ ಅನ್ನು “ನಾಶ” ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಇಸ್ರೇಲ್‌ನ ದಾಳಿಗಳು “ಯುದ್ಧವನ್ನು ಪ್ರಾರಂಭಿಸಿವೆ” ಮತ್ತು ಪರಿಣಾಮಗಳಿಲ್ಲದೆ “ಹಿಟ್ ಅಂಡ್ ರನ್” ದಾಳಿಗಳನ್ನು ಮಾಡಲು ಅದಕ್ಕೆ ಅನುಮತಿ ನೀಡುವುದಿಲ್ಲ ಎಂದು ಅವರು ಹೇಳಿದ್ದು, “ಜಿಯೋನಿಸ್ಟ್ ಆಡಳಿತ [ಇಸ್ರೇಲ್] ತನ್ನ ಅಪರಾಧದ ಪರಿಣಾಮಗಳಿಂದ ಪಾರಾಗುವುದಿಲ್ಲ. ನಮ್ಮ ಪ್ರತಿಕ್ರಿಯೆ ಅರ್ಧದಷ್ಟು ಅಳತೆಯಾಗಿರುವುದಿಲ್ಲ ಎಂದು ಇರಾನ್ ರಾಷ್ಟ್ರಕ್ಕೆ ಖಾತರಿ ನೀಡಬೇಕು” ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಖಮೇನಿ ಅವರ ಆಜ್ಞೆಯ ಮೇರೆಗೆ ಇಸ್ರೇಲ್‌ನಲ್ಲಿರುವ “ಡಜನ್‌ಗಟ್ಟಲೆ ಗುರಿಗಳು, ಮಿಲಿಟರಿ ಕೇಂದ್ರಗಳು ಮತ್ತು ವಾಯುನೆಲೆಗಳ ವಿರುದ್ಧ ದಾಳಿ ಮಾಡಲಾಗಿದೆ” ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹೇಳಿದೆ. ಶುಕ್ರವಾರ ರಾತ್ರಿ ಇಸ್ರೇಲ್ ಮೇಲೆ ಮೂರು ಪ್ರತ್ಯೇಕ ದಾಳಿ ಅಲೆಗಳು ಮತ್ತು ನೂರಾರು ಕ್ಷಿಪಣಿಗಳನ್ನು ಹಾರಿಸಲಾಯಿತು ಎಂದು ಇರಾನ್‌ನ ಸರ್ಕಾರಿ ಮಾಧ್ಯಮ ತಿಳಿಸಿದೆ. ಕನಿಷ್ಠ ಒಂದು ಕ್ಷಿಪಣಿ ಇಸ್ರೇಲ್ ರಾಜಧಾನಿ ಟೆಲ್ ಅವೀವ್ ಮೇಲೆ ಪರಿಣಾಮ ಬೀರಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಇಸ್ರೇಲ್ ಮೇಲಿನ ದಾಳಿಯ ನಂತರ, ಶನಿವಾರ ಸ್ಥಳೀಯ ಸಮಯ ಮಧ್ಯಾಹ್ನ 2 ಗಂಟೆಯವರೆಗೆ ತನ್ನ ವಾಯುಪ್ರದೇಶವನ್ನು ಮುಚ್ಚಲಾಗುವುದು ಎಂದು ಇರಾನ್ ಘೋಷಿಸಿದೆ. ಅದೇ ಸಮಯದಲ್ಲಿ, ಹೊಸ ಇಸ್ರೇಲಿ ದಾಳಿಗಳನ್ನು ತಡೆಯಲು ರಾಜಧಾನಿ ಟೆಹ್ರಾನ್‌ನಲ್ಲಿ ವಾಯು ರಕ್ಷಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ IRNA ವರದಿ ಮಾಡಿದೆ.

ಶುಕ್ರವಾರ ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಶಸ್ತ್ರ ಪಡೆಗಳ ಮುಖ್ಯಸ್ಥ ಮೇಜರ್-ಜನರಲ್ ಮೊಹಮ್ಮದ್ ಬಾಘೇರಿ ಮತ್ತು IRGC ಮುಖ್ಯಸ್ಥ ಹೊಸೇನ್ ಸಲಾಮಿ ಸೇರಿದಂತೆ ಹಲವಾರು ಉನ್ನತ ಇರಾನಿನ ಜನರಲ್‌ಗಳು ಮತ್ತು ವಿಜ್ಞಾನಿಗಳು ಸಾವನ್ನಪ್ಪಿದರು. ಆದಾಗ್ಯೂ, ಮೇಜರ್-ಜನರಲ್ ಮೊಹಮ್ಮದ್ ಪಕ್ಪೂರ್ ಅವರನ್ನು ಹೊಸೇನ್ ಸಲಾಮಿ ಬದಲಿಗೆ ಶೀಘ್ರವಾಗಿ ಬಡ್ತಿ ನೀಡಲಾಯಿತು.

ಇಸ್ರೇಲ್‌ನ ಶುಕ್ರವಾರದ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 78 ಜನರು ಸಾವನ್ನಪ್ಪಿದ್ದಾರೆ ಮತ್ತು 320 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಇರಾನ್ ರಾಯಭಾರಿ ಅಮೀರ್ ಸಯೀದ್ ಇರಾವನಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ತಿಳಿಸಿದ್ದಾರೆ.

ದೇಶದ ಸರ್ವೋಚ್ಛ ನಾಯಕ ಖೊಮೇನಿಗೆ ನೂತತ IRGC ಮುಖ್ಯಸ್ಥ ಮೊಹಮ್ಮದ್ ಪಕ್ಪೂರ್ ಬರೆದ ಪತ್ರದಲ್ಲಿ, ಇಸ್ರೇಲ್ ಅನ್ನು ಉಲ್ಲೇಖಿಸಿ, “ಮಕ್ಕಳನ್ನು ಕೊಲ್ಲುವ ಆಡಳಿತಕ್ಕೆ ನರಕದ ದ್ವಾರಗಳು ತೆರೆಯುತ್ತವೆ” ಎಂದು ಹೇಳಿದ್ದಾರೆ.

ಇರಾನ್ ಮೇಲೆ ನಡೆಸಿದ ಅನಿರೀಕ್ಷಿತ ದಾಳಿಯ ಸಮಯದಲ್ಲಿ ಇಸ್ರೇಲ್‌ ಸೇನೆಯು ಇರಾನ್‌ನಾದ್ಯಂತ 200 ಕ್ಕೂ ಹೆಚ್ಚು ಗುರಿಗಳನ್ನು ಹೊಡೆದಿದೆ ಎಂದು ಹೇಳಿದೆ. ಇರಾನ್‌ನ ಪ್ರತೀಕಾರದ ದಾಳಿಯ ಮೊದಲು ಮಾತನಾಡಿದ್ದ ಇಸ್ರೇಲ್ ಮಿಲಿಟರಿ ವಕ್ತಾರ ಬ್ರಿಗೇಡಿಯರ್-ಜನರಲ್ ಎಫೀ ಡೆಫ್ರಿನ್, ಇಸ್ರೇಲ್ ಸೈನ್ಯವು “ದಾಳಿಯನ್ನು ಮುಂದುವರಿಸುತ್ತಿದೆ” ಎಂದು ಹೇಳಿದ್ದರು.

ಇರಾನ್‌ನ ಇಸ್ಫಹಾನ್‌ನಲ್ಲಿರುವ ಪರಮಾಣು ಕೇಂದ್ರಗಳನ್ನು ಸೇನೆ ಗುರಿಯಾಗಿಸಿಕೊಂಡಿದ್ದು, ಕಾರ್ಯಾಚರಣೆ “ಇನ್ನೂ ಮುಂದುವರೆದಿದೆ” ಎಂದು ಡೆಫ್ರಿನ್ ಹೇಳಿದ್ದರು. ಅದಕ್ಕೂ ಮೊದಲು, ಇಸ್ರೇಲ್ ಇರಾನ್‌ನಲ್ಲಿರುವ ನಟಾಂಜ್ ಪರಮಾಣು ಪುಷ್ಟೀಕರಣ ತಾಣದ ಮೇಲೆಯೂ ದಾಳಿ ಮಾಡಿದೆ.

ಶನಿವಾರ ಮುಂಜಾನೆ ಇರಾನ್‌ನ ರಾಜಧಾನಿ ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಿಂದ ಬೆಂಕಿ ಮತ್ತು ಭಾರೀ ಹೊಗೆ ಹೊರಹೊಮ್ಮಿತು ಎಂದು AFP ಪತ್ರಕರ್ತರೊಬ್ಬರು ಹೇಳಿದ್ದು, ಸ್ಥಳೀಯ ಮಾಧ್ಯಮಗಳು ಕೂಡಾ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಖಚಿತಪಡಿಸಿವೆ. ಇರಾನ್ ತನ್ನ ವಾಯು ರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಿದೆ ಮತ್ತು ರಾಜಧಾನಿಯಾದ್ಯಂತ ಸ್ಫೋಟಗಳ ಶಬ್ದ ಕೇಳಿಬರುತ್ತಿದೆ ಎಂದು ಹೇಳಿತ್ತು.

ಇಸ್ರೇಲ್ ನಡೆಸಿದ ಈ ದಾಳಿಯನ್ನು ವಿರೋಧಿಸಿ  ತಮ್ಮ ದೇಶದ ಮಿಲಿಟರಿ ಪ್ರತಿಕ್ರಿಯೆಯನ್ನು ನಿರೀಕ್ಷಿಸಿ ನೂರಾರು ಜನರು ರಾತ್ರಿಯಿಡೀ ಇರಾನ್‌ನ ರಾಜಧಾನಿ ಟೆಹ್ರಾನ್‌ನ ಬೀದಿಗಳಿಗೆ ಇಳಿದು ರಾಷ್ಟ್ರೀಯ ಧ್ವಜಗಳನ್ನು ಬೀಸುತ್ತಾ ಮತ್ತು ಇಸ್ರೇಲ್ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.

ಇರಾನ್‌ನಿಂದ ಡಜನ್ಗಟ್ಟಲೆ ಕ್ಷಿಪಣಿಗಳನ್ನು ಹಾರಿಸಲಾಗಿದೆ ಎಂದು ಇಸ್ರೇಲಿ ಮಿಲಿಟರಿ ಹೇಳಿದ್ದು, ಕೆಲವು ಕ್ಷಿಪಣಿಗಳನ್ನು ತಡೆಹಿಡಿಯಲಾಗಿದೆ ಎಂದು ಅದು ತಿಳಿಸಿದೆ. ಪ್ಯಾಲೆಸ್ತೀನ್ ಆಕ್ರಮಿತ ಇಸ್ರೇಲ್‌ನ ರಾಜಧಾನಿ ಟೆಲ್ ಅವೀವ್‌ನ ಡೌನ್‌ಟೌನ್‌ನಲ್ಲಿರುವ ಗಗನಚುಂಬಿ ಕಟ್ಟಡಗಳ ಮೇಲೆ ಹೊಗೆ ಬರುತ್ತಿದೆ ಎಂದು ಎಎಫ್‌ಪಿ ಪತ್ರಕರ್ತರೊಬ್ಬರು ವರದಿ ಮಾಡಿದ್ದಾರೆ.

ಇರಾನಿನ ಕ್ಷಿಪಣಿ ದಾಳಿಯ ನಂತರ ತನ್ನ ರಕ್ಷಣಾ ತಂಡಗಳು ಪ್ರತಿಕ್ರಿಯಿಸುತ್ತಿವೆ ಎಂದು ಇಸ್ರೇಲ್‌ನ ಅಗ್ನಿಶಾಮಕ ಸೇವೆ ತಿಳಿಸಿದೆ. ಈ ತಂಡಗಳು ಎತ್ತರದ ಕಟ್ಟಡದಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಕೆಲಸವೂ ಮಾಡುತ್ತಿದೆ ಎಂದು ಅದು ತಿಳಿಸಿದೆ.

ಅಮೆರಿಕ ಮತ್ತು ಇತರ ಪಾಶ್ಚಿಮಾತ್ಯ ಸರ್ಕಾರಗಳು ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಸಂಗ್ರಹಿಸುತ್ತಿದೆ ಎಂದು ಪದೇ ಪದೇ ಆರೋಪಿಸಿದ್ದು, ಆದರೆ ಇರಾನ್ ಅದನ್ನು ನಿರಂತರವಾಗಿ ನಿರಾಕರಿಸುತ್ತಲೆ ಬಂದಿದೆ. ಈ ನಡುವೆ, ಇರಾನ್ ತನ್ನ ಪರಮಾಣು ಕಾರ್ಯಕ್ರಮದಲ್ಲಿ “ಹಿಂದಿರುಗಿಸಲಾಗದ ಹಂತ”ವನ್ನು ತಲುಪುತ್ತಿದೆ ಎಂದು ಇಸ್ರೇಲ್ ಗುಪ್ತಚರ ಇಲಾಖೆ ತೀರ್ಮಾನಿಸಿದೆ ಎಂದು ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿದ್ದಾರೆ. ಇರಾನ್‌ ಪ್ರತಿಕಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆಗಳು 7%ಕ್ಕಿಂತ ಹೆಚ್ಚು ಏರಿಕೆ

ಇಸ್ರೇಲ್-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆಗಳು 7%ಕ್ಕಿಂತ ಹೆಚ್ಚು ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...