Homeಮುಖಪುಟಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

ಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

- Advertisement -
- Advertisement -

ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚಲಾಗುವುದು ಎಂದು ಇರಾನ್‌ನ ಕಮಾಂಡರ್ ಹೇಳಿದ್ದು, ಅದು ಹೇಗೆ ಸಂಭವಿಸುತ್ತದೆ ಎಂಬುದನ್ನು ವಿವರಿಸಿಲ್ಲ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಇರಾನ್ ಇಸ್ರೇಲ್ ಹತ್ಯಾಕಾಂಡವನ್ನು ವಿರೋಧಿಸುತ್ತದೆ ಮತ್ತು ಗಾಝಾಕ್ಕೆ ಬೆಂಬಲವನ್ನು ಸೂಚಿಸುತ್ತದೆ.  ಗಾಝಾದಲ್ಲಿನ ಇಸ್ರೇಲ್‌ ನಡೆಸುವ ಅಪರಾಧಗಳಿಗೆ ಅಮೆರಿಕ ಬೆಂಬಲಿಸುತ್ತದೆ ಮತ್ತು ಸಾವಿರಾರು ಮಂದಿಯನ್ನು ಕಳೆದ ಒಂದು ವಾರದಿಂದ ಹತ್ಯೆ ಮಾಡಿದೆ. ಹೆಚ್ಚಿನ ಜನರನ್ನು ಮನೆಗಳಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್‌ ಹೇಳಿಕೊಂಡಿದೆ. ಶೀಘ್ರದಲ್ಲೇ ಮೆಡಿಟರೇನಿಯನ್ ಸಮುದ್ರದ ಜಿಬ್ರಾಲ್ಟರ್ ಮತ್ತು ಇತರ ಜಲಮಾರ್ಗಗಳನ್ನು ಮುಚ್ಚುತ್ತೇವೆ ಎಂದು ಗಾರ್ಡ್‌ಗಳ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ನಕ್ದಿ ಹೇಳಿದ್ದಾರೆ.

ಹೌತಿ ಗುಂಪು ಕಳೆದ ತಿಂಗಳು ಗಾಝಾದ ಮೇಲೆ ಇಸ್ರೇಲ್‌ನ ದಾಳಿಗೆ ಪ್ರತೀಕಾರವಾಗಿ ಕೆಂಪು ಸಮುದ್ರದ ಮೂಲಕ ತೆರಳುತ್ತಿದ್ದ ವ್ಯಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡಿದೆ. ಈ ದಾಳಿ ಕೆಲವು ಹಡಗುಗಳು ಮಾರ್ಗಗಳನ್ನು ಬದಲಾಯಿಸಲು ಕಾರಣವಾಯಿತು. ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ವಿರುದ್ಧ ದಾಳಿ ನಡೆಸುವಲ್ಲಿ ಇರಾನ್ ಹೆಚ್ಚು ತೊಡಗಿಸಿಕೊಂಡಿದೆ ಎಂದು ಅಮೆರಿಕ ಆರೋಪಿಸಿತ್ತು.

ಮೆಡಿಟರೇನಿಯನ್‌ನಿಂದ ಇರಾನ್‌ಗೆ ನೇರ ಪ್ರವೇಶ ಮಾರ್ಗವಿಲ್ಲ ಆದರೆ ಗಾರ್ಡ್‌ಗಳು ಅದನ್ನು ಹೇಗೆ ಮುಚ್ಚುವುದಾಗಿ ಬೆದರಿಸಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಆದರೂ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಯುದ್ಧ ಅಪರಾಧ ಮುಂದುವರಿಸಿದರೆ ಜಲಮಾರ್ಗಗಳ ಮುಚ್ಚುವುದಾಗಿ ಎಚ್ಚರಿಸಿದ್ದಾರೆ.

ಅಕ್ಟೋಬರ್‌ 7ರಂದು ಗಾಝಾದ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ ಈವರೆಗೆ ಇಸ್ರೇಲ್‌ ಸೇನೆ ಪ್ಯಾಲೆಸ್ತೀನ್‌ನ 20,000ಕ್ಕೂ ಅಧಿಕ ನಾಗರಿಕರನ್ನು ಹತ್ಯೆ ಮಾಡಿದೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳ ಹತ್ಯೆ ಹೆಚ್ಚಿನ ಸಂಖ್ಯೆಯಲ್ಲಿ ನಡೆದಿದೆ. ಸಾವನ್ನಪ್ಪಿದವರಲ್ಲಿ ಕನಿಷ್ಠ 8,000 ಮಕ್ಕಳು ಮತ್ತು 6,200 ಮಹಿಳೆಯರು ಸೇರಿದ್ದಾರೆ ಎಂದು ಗಾಝಾದ ಸರ್ಕಾರಿ ಮಾದ್ಯಮ ಕಚೇರಿ ತಿಳಿಸಿದೆ.

ವಿಶ್ವಸಂಸ್ಥೆ ಈ ಮೊದಲು ಹಲವು ಬಾರಿ ಗಾಝಾದಲ್ಲಿ ಕದನ ವಿರಾಮಕ್ಕೆ ನಿರ್ಣಯವನ್ನು ಮಂಡಿಸಿತ್ತು. ಇತ್ತೀಚೆಗೆ ವಿಟೊ ಅಧಿಕಾರ ಬಳಸಿ ಅಮೆರಿಕ ಕದನ ವಿರಾಮವನ್ನು ವಿರೋಧಿಸಿತ್ತು. ಆದರೆ ಯುಎನ್‌ ಮತ್ತೆ ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ಕುರಿತು ನಿರ್ಣಯವನ್ನು ಮಂಡಿಸಿದೆ. ಇದಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ.

ಕಳೆದ 2 ತಿಂಗಳಿನಿಂದ ಇಸ್ರೇಲ್‌, ಪ್ಯಾಲೆಸ್ತೀನ್‌ ಮೇಲೆ ನಡೆಸಿದ ನಿರಂತರ ಬಾಂಬ್‌ ದಾಳಿ ಗಾಝಾದಲ್ಲಿ ಯುದ್ಧ ಭೀಕರತೆಯ ಜೊತೆಗೆ ಮಾನವೀಯ ಬಿಕ್ಕಟ್ಟನ್ನು ಕೂಡ ಸೃಷ್ಟಿಸಿದೆ. ಗಾಝಾದ ರಫಾ ಕ್ರಾಸಿಂಗ್‌ನಲ್ಲಿ ಆಹಾರ, ನೀರಿಗಾಗಿ ಜನರು ಟ್ರಕ್‌ಗಳನ್ನು ತಡೆಯುತ್ತಿದ್ದರು. ಹಸಿವಿನಿಂದ ತತ್ತರಿಸಿದ ಜನರು ಪರಿಹಾರ ಸಾಮಾಗ್ರಿ ವಾಹನಗಳನ್ನು ತಡೆದು ಆಹಾರ ಕಸಿದು ತಿನ್ನುತ್ತಿರುವ ಮನಕಲಕುವ ದೃಶ್ಯಗಳು ಕಂಡು ಬಂದಿತ್ತು. ಗಾಝಾದ ನಿರಾಶ್ರಿತರ ಶಿಬಿರಗಳಲ್ಲಿ ಸಾಂಕ್ರಾಮಿಕ ರೋಗದಿಂದ ಜನರು ಬಳಲುತ್ತಿರವ ಬಗ್ಗೆಯೂ ವರದಿಯಾಗಿತ್ತು.

ಇದನ್ನು ಓದಿ: ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...