Homeಮುಖಪುಟಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

ಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

- Advertisement -
- Advertisement -

ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚಲಾಗುವುದು ಎಂದು ಇರಾನ್‌ನ ಕಮಾಂಡರ್ ಹೇಳಿದ್ದು, ಅದು ಹೇಗೆ ಸಂಭವಿಸುತ್ತದೆ ಎಂಬುದನ್ನು ವಿವರಿಸಿಲ್ಲ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಇರಾನ್ ಇಸ್ರೇಲ್ ಹತ್ಯಾಕಾಂಡವನ್ನು ವಿರೋಧಿಸುತ್ತದೆ ಮತ್ತು ಗಾಝಾಕ್ಕೆ ಬೆಂಬಲವನ್ನು ಸೂಚಿಸುತ್ತದೆ.  ಗಾಝಾದಲ್ಲಿನ ಇಸ್ರೇಲ್‌ ನಡೆಸುವ ಅಪರಾಧಗಳಿಗೆ ಅಮೆರಿಕ ಬೆಂಬಲಿಸುತ್ತದೆ ಮತ್ತು ಸಾವಿರಾರು ಮಂದಿಯನ್ನು ಕಳೆದ ಒಂದು ವಾರದಿಂದ ಹತ್ಯೆ ಮಾಡಿದೆ. ಹೆಚ್ಚಿನ ಜನರನ್ನು ಮನೆಗಳಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್‌ ಹೇಳಿಕೊಂಡಿದೆ. ಶೀಘ್ರದಲ್ಲೇ ಮೆಡಿಟರೇನಿಯನ್ ಸಮುದ್ರದ ಜಿಬ್ರಾಲ್ಟರ್ ಮತ್ತು ಇತರ ಜಲಮಾರ್ಗಗಳನ್ನು ಮುಚ್ಚುತ್ತೇವೆ ಎಂದು ಗಾರ್ಡ್‌ಗಳ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ನಕ್ದಿ ಹೇಳಿದ್ದಾರೆ.

ಹೌತಿ ಗುಂಪು ಕಳೆದ ತಿಂಗಳು ಗಾಝಾದ ಮೇಲೆ ಇಸ್ರೇಲ್‌ನ ದಾಳಿಗೆ ಪ್ರತೀಕಾರವಾಗಿ ಕೆಂಪು ಸಮುದ್ರದ ಮೂಲಕ ತೆರಳುತ್ತಿದ್ದ ವ್ಯಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡಿದೆ. ಈ ದಾಳಿ ಕೆಲವು ಹಡಗುಗಳು ಮಾರ್ಗಗಳನ್ನು ಬದಲಾಯಿಸಲು ಕಾರಣವಾಯಿತು. ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ವಿರುದ್ಧ ದಾಳಿ ನಡೆಸುವಲ್ಲಿ ಇರಾನ್ ಹೆಚ್ಚು ತೊಡಗಿಸಿಕೊಂಡಿದೆ ಎಂದು ಅಮೆರಿಕ ಆರೋಪಿಸಿತ್ತು.

ಮೆಡಿಟರೇನಿಯನ್‌ನಿಂದ ಇರಾನ್‌ಗೆ ನೇರ ಪ್ರವೇಶ ಮಾರ್ಗವಿಲ್ಲ ಆದರೆ ಗಾರ್ಡ್‌ಗಳು ಅದನ್ನು ಹೇಗೆ ಮುಚ್ಚುವುದಾಗಿ ಬೆದರಿಸಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಆದರೂ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಯುದ್ಧ ಅಪರಾಧ ಮುಂದುವರಿಸಿದರೆ ಜಲಮಾರ್ಗಗಳ ಮುಚ್ಚುವುದಾಗಿ ಎಚ್ಚರಿಸಿದ್ದಾರೆ.

ಅಕ್ಟೋಬರ್‌ 7ರಂದು ಗಾಝಾದ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ ಈವರೆಗೆ ಇಸ್ರೇಲ್‌ ಸೇನೆ ಪ್ಯಾಲೆಸ್ತೀನ್‌ನ 20,000ಕ್ಕೂ ಅಧಿಕ ನಾಗರಿಕರನ್ನು ಹತ್ಯೆ ಮಾಡಿದೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳ ಹತ್ಯೆ ಹೆಚ್ಚಿನ ಸಂಖ್ಯೆಯಲ್ಲಿ ನಡೆದಿದೆ. ಸಾವನ್ನಪ್ಪಿದವರಲ್ಲಿ ಕನಿಷ್ಠ 8,000 ಮಕ್ಕಳು ಮತ್ತು 6,200 ಮಹಿಳೆಯರು ಸೇರಿದ್ದಾರೆ ಎಂದು ಗಾಝಾದ ಸರ್ಕಾರಿ ಮಾದ್ಯಮ ಕಚೇರಿ ತಿಳಿಸಿದೆ.

ವಿಶ್ವಸಂಸ್ಥೆ ಈ ಮೊದಲು ಹಲವು ಬಾರಿ ಗಾಝಾದಲ್ಲಿ ಕದನ ವಿರಾಮಕ್ಕೆ ನಿರ್ಣಯವನ್ನು ಮಂಡಿಸಿತ್ತು. ಇತ್ತೀಚೆಗೆ ವಿಟೊ ಅಧಿಕಾರ ಬಳಸಿ ಅಮೆರಿಕ ಕದನ ವಿರಾಮವನ್ನು ವಿರೋಧಿಸಿತ್ತು. ಆದರೆ ಯುಎನ್‌ ಮತ್ತೆ ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ಕುರಿತು ನಿರ್ಣಯವನ್ನು ಮಂಡಿಸಿದೆ. ಇದಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ.

ಕಳೆದ 2 ತಿಂಗಳಿನಿಂದ ಇಸ್ರೇಲ್‌, ಪ್ಯಾಲೆಸ್ತೀನ್‌ ಮೇಲೆ ನಡೆಸಿದ ನಿರಂತರ ಬಾಂಬ್‌ ದಾಳಿ ಗಾಝಾದಲ್ಲಿ ಯುದ್ಧ ಭೀಕರತೆಯ ಜೊತೆಗೆ ಮಾನವೀಯ ಬಿಕ್ಕಟ್ಟನ್ನು ಕೂಡ ಸೃಷ್ಟಿಸಿದೆ. ಗಾಝಾದ ರಫಾ ಕ್ರಾಸಿಂಗ್‌ನಲ್ಲಿ ಆಹಾರ, ನೀರಿಗಾಗಿ ಜನರು ಟ್ರಕ್‌ಗಳನ್ನು ತಡೆಯುತ್ತಿದ್ದರು. ಹಸಿವಿನಿಂದ ತತ್ತರಿಸಿದ ಜನರು ಪರಿಹಾರ ಸಾಮಾಗ್ರಿ ವಾಹನಗಳನ್ನು ತಡೆದು ಆಹಾರ ಕಸಿದು ತಿನ್ನುತ್ತಿರುವ ಮನಕಲಕುವ ದೃಶ್ಯಗಳು ಕಂಡು ಬಂದಿತ್ತು. ಗಾಝಾದ ನಿರಾಶ್ರಿತರ ಶಿಬಿರಗಳಲ್ಲಿ ಸಾಂಕ್ರಾಮಿಕ ರೋಗದಿಂದ ಜನರು ಬಳಲುತ್ತಿರವ ಬಗ್ಗೆಯೂ ವರದಿಯಾಗಿತ್ತು.

ಇದನ್ನು ಓದಿ: ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...