Homeಮುಖಪುಟಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

ಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

- Advertisement -
- Advertisement -

ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚಲಾಗುವುದು ಎಂದು ಇರಾನ್‌ನ ಕಮಾಂಡರ್ ಹೇಳಿದ್ದು, ಅದು ಹೇಗೆ ಸಂಭವಿಸುತ್ತದೆ ಎಂಬುದನ್ನು ವಿವರಿಸಿಲ್ಲ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಇರಾನ್ ಇಸ್ರೇಲ್ ಹತ್ಯಾಕಾಂಡವನ್ನು ವಿರೋಧಿಸುತ್ತದೆ ಮತ್ತು ಗಾಝಾಕ್ಕೆ ಬೆಂಬಲವನ್ನು ಸೂಚಿಸುತ್ತದೆ.  ಗಾಝಾದಲ್ಲಿನ ಇಸ್ರೇಲ್‌ ನಡೆಸುವ ಅಪರಾಧಗಳಿಗೆ ಅಮೆರಿಕ ಬೆಂಬಲಿಸುತ್ತದೆ ಮತ್ತು ಸಾವಿರಾರು ಮಂದಿಯನ್ನು ಕಳೆದ ಒಂದು ವಾರದಿಂದ ಹತ್ಯೆ ಮಾಡಿದೆ. ಹೆಚ್ಚಿನ ಜನರನ್ನು ಮನೆಗಳಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್‌ ಹೇಳಿಕೊಂಡಿದೆ. ಶೀಘ್ರದಲ್ಲೇ ಮೆಡಿಟರೇನಿಯನ್ ಸಮುದ್ರದ ಜಿಬ್ರಾಲ್ಟರ್ ಮತ್ತು ಇತರ ಜಲಮಾರ್ಗಗಳನ್ನು ಮುಚ್ಚುತ್ತೇವೆ ಎಂದು ಗಾರ್ಡ್‌ಗಳ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ನಕ್ದಿ ಹೇಳಿದ್ದಾರೆ.

ಹೌತಿ ಗುಂಪು ಕಳೆದ ತಿಂಗಳು ಗಾಝಾದ ಮೇಲೆ ಇಸ್ರೇಲ್‌ನ ದಾಳಿಗೆ ಪ್ರತೀಕಾರವಾಗಿ ಕೆಂಪು ಸಮುದ್ರದ ಮೂಲಕ ತೆರಳುತ್ತಿದ್ದ ವ್ಯಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡಿದೆ. ಈ ದಾಳಿ ಕೆಲವು ಹಡಗುಗಳು ಮಾರ್ಗಗಳನ್ನು ಬದಲಾಯಿಸಲು ಕಾರಣವಾಯಿತು. ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ವಿರುದ್ಧ ದಾಳಿ ನಡೆಸುವಲ್ಲಿ ಇರಾನ್ ಹೆಚ್ಚು ತೊಡಗಿಸಿಕೊಂಡಿದೆ ಎಂದು ಅಮೆರಿಕ ಆರೋಪಿಸಿತ್ತು.

ಮೆಡಿಟರೇನಿಯನ್‌ನಿಂದ ಇರಾನ್‌ಗೆ ನೇರ ಪ್ರವೇಶ ಮಾರ್ಗವಿಲ್ಲ ಆದರೆ ಗಾರ್ಡ್‌ಗಳು ಅದನ್ನು ಹೇಗೆ ಮುಚ್ಚುವುದಾಗಿ ಬೆದರಿಸಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಆದರೂ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಯುದ್ಧ ಅಪರಾಧ ಮುಂದುವರಿಸಿದರೆ ಜಲಮಾರ್ಗಗಳ ಮುಚ್ಚುವುದಾಗಿ ಎಚ್ಚರಿಸಿದ್ದಾರೆ.

ಅಕ್ಟೋಬರ್‌ 7ರಂದು ಗಾಝಾದ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ ಈವರೆಗೆ ಇಸ್ರೇಲ್‌ ಸೇನೆ ಪ್ಯಾಲೆಸ್ತೀನ್‌ನ 20,000ಕ್ಕೂ ಅಧಿಕ ನಾಗರಿಕರನ್ನು ಹತ್ಯೆ ಮಾಡಿದೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳ ಹತ್ಯೆ ಹೆಚ್ಚಿನ ಸಂಖ್ಯೆಯಲ್ಲಿ ನಡೆದಿದೆ. ಸಾವನ್ನಪ್ಪಿದವರಲ್ಲಿ ಕನಿಷ್ಠ 8,000 ಮಕ್ಕಳು ಮತ್ತು 6,200 ಮಹಿಳೆಯರು ಸೇರಿದ್ದಾರೆ ಎಂದು ಗಾಝಾದ ಸರ್ಕಾರಿ ಮಾದ್ಯಮ ಕಚೇರಿ ತಿಳಿಸಿದೆ.

ವಿಶ್ವಸಂಸ್ಥೆ ಈ ಮೊದಲು ಹಲವು ಬಾರಿ ಗಾಝಾದಲ್ಲಿ ಕದನ ವಿರಾಮಕ್ಕೆ ನಿರ್ಣಯವನ್ನು ಮಂಡಿಸಿತ್ತು. ಇತ್ತೀಚೆಗೆ ವಿಟೊ ಅಧಿಕಾರ ಬಳಸಿ ಅಮೆರಿಕ ಕದನ ವಿರಾಮವನ್ನು ವಿರೋಧಿಸಿತ್ತು. ಆದರೆ ಯುಎನ್‌ ಮತ್ತೆ ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ಕುರಿತು ನಿರ್ಣಯವನ್ನು ಮಂಡಿಸಿದೆ. ಇದಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ.

ಕಳೆದ 2 ತಿಂಗಳಿನಿಂದ ಇಸ್ರೇಲ್‌, ಪ್ಯಾಲೆಸ್ತೀನ್‌ ಮೇಲೆ ನಡೆಸಿದ ನಿರಂತರ ಬಾಂಬ್‌ ದಾಳಿ ಗಾಝಾದಲ್ಲಿ ಯುದ್ಧ ಭೀಕರತೆಯ ಜೊತೆಗೆ ಮಾನವೀಯ ಬಿಕ್ಕಟ್ಟನ್ನು ಕೂಡ ಸೃಷ್ಟಿಸಿದೆ. ಗಾಝಾದ ರಫಾ ಕ್ರಾಸಿಂಗ್‌ನಲ್ಲಿ ಆಹಾರ, ನೀರಿಗಾಗಿ ಜನರು ಟ್ರಕ್‌ಗಳನ್ನು ತಡೆಯುತ್ತಿದ್ದರು. ಹಸಿವಿನಿಂದ ತತ್ತರಿಸಿದ ಜನರು ಪರಿಹಾರ ಸಾಮಾಗ್ರಿ ವಾಹನಗಳನ್ನು ತಡೆದು ಆಹಾರ ಕಸಿದು ತಿನ್ನುತ್ತಿರುವ ಮನಕಲಕುವ ದೃಶ್ಯಗಳು ಕಂಡು ಬಂದಿತ್ತು. ಗಾಝಾದ ನಿರಾಶ್ರಿತರ ಶಿಬಿರಗಳಲ್ಲಿ ಸಾಂಕ್ರಾಮಿಕ ರೋಗದಿಂದ ಜನರು ಬಳಲುತ್ತಿರವ ಬಗ್ಗೆಯೂ ವರದಿಯಾಗಿತ್ತು.

ಇದನ್ನು ಓದಿ: ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...