Homeಮುಖಪುಟಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

ಗಾಝಾ ಮೇಲಿನ ಯುದ್ಧ ನಿಲ್ಲಿಸದಿದ್ದರೆ ಮೆಡಿಟರೇನಿಯನ್ ಸಮುದ್ರ ಮಾರ್ಗಗಳನ್ನು ಬಂದ್‌ ಮಾಡುತ್ತೇವೆ: ಇರಾನ್ ಎಚ್ಚರಿಕೆ

- Advertisement -
- Advertisement -

ಇಸ್ರೇಲ್‌ ಮತ್ತು ಅದರ ಮಿತ್ರರಾಷ್ಟ್ರ ಅಮೆರಿಕ ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಮಾಡುವುದನ್ನು ಮುಂದುವರೆಸಿದರೆ ಮೆಡಿಟರೇನಿಯನ್ ಸಮುದ್ರವನ್ನು ಮುಚ್ಚಲಾಗುವುದು ಎಂದು ಇರಾನ್‌ನ ಕಮಾಂಡರ್ ಹೇಳಿದ್ದು, ಅದು ಹೇಗೆ ಸಂಭವಿಸುತ್ತದೆ ಎಂಬುದನ್ನು ವಿವರಿಸಿಲ್ಲ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಇರಾನ್ ಇಸ್ರೇಲ್ ಹತ್ಯಾಕಾಂಡವನ್ನು ವಿರೋಧಿಸುತ್ತದೆ ಮತ್ತು ಗಾಝಾಕ್ಕೆ ಬೆಂಬಲವನ್ನು ಸೂಚಿಸುತ್ತದೆ.  ಗಾಝಾದಲ್ಲಿನ ಇಸ್ರೇಲ್‌ ನಡೆಸುವ ಅಪರಾಧಗಳಿಗೆ ಅಮೆರಿಕ ಬೆಂಬಲಿಸುತ್ತದೆ ಮತ್ತು ಸಾವಿರಾರು ಮಂದಿಯನ್ನು ಕಳೆದ ಒಂದು ವಾರದಿಂದ ಹತ್ಯೆ ಮಾಡಿದೆ. ಹೆಚ್ಚಿನ ಜನರನ್ನು ಮನೆಗಳಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್‌ ಹೇಳಿಕೊಂಡಿದೆ. ಶೀಘ್ರದಲ್ಲೇ ಮೆಡಿಟರೇನಿಯನ್ ಸಮುದ್ರದ ಜಿಬ್ರಾಲ್ಟರ್ ಮತ್ತು ಇತರ ಜಲಮಾರ್ಗಗಳನ್ನು ಮುಚ್ಚುತ್ತೇವೆ ಎಂದು ಗಾರ್ಡ್‌ಗಳ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ನಕ್ದಿ ಹೇಳಿದ್ದಾರೆ.

ಹೌತಿ ಗುಂಪು ಕಳೆದ ತಿಂಗಳು ಗಾಝಾದ ಮೇಲೆ ಇಸ್ರೇಲ್‌ನ ದಾಳಿಗೆ ಪ್ರತೀಕಾರವಾಗಿ ಕೆಂಪು ಸಮುದ್ರದ ಮೂಲಕ ತೆರಳುತ್ತಿದ್ದ ವ್ಯಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡಿದೆ. ಈ ದಾಳಿ ಕೆಲವು ಹಡಗುಗಳು ಮಾರ್ಗಗಳನ್ನು ಬದಲಾಯಿಸಲು ಕಾರಣವಾಯಿತು. ಕೆಂಪು ಸಮುದ್ರದಲ್ಲಿ ವಾಣಿಜ್ಯ ಹಡಗುಗಳ ವಿರುದ್ಧ ದಾಳಿ ನಡೆಸುವಲ್ಲಿ ಇರಾನ್ ಹೆಚ್ಚು ತೊಡಗಿಸಿಕೊಂಡಿದೆ ಎಂದು ಅಮೆರಿಕ ಆರೋಪಿಸಿತ್ತು.

ಮೆಡಿಟರೇನಿಯನ್‌ನಿಂದ ಇರಾನ್‌ಗೆ ನೇರ ಪ್ರವೇಶ ಮಾರ್ಗವಿಲ್ಲ ಆದರೆ ಗಾರ್ಡ್‌ಗಳು ಅದನ್ನು ಹೇಗೆ ಮುಚ್ಚುವುದಾಗಿ ಬೆದರಿಸಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಆದರೂ ಕಮಾಂಡರ್ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಯುದ್ಧ ಅಪರಾಧ ಮುಂದುವರಿಸಿದರೆ ಜಲಮಾರ್ಗಗಳ ಮುಚ್ಚುವುದಾಗಿ ಎಚ್ಚರಿಸಿದ್ದಾರೆ.

ಅಕ್ಟೋಬರ್‌ 7ರಂದು ಗಾಝಾದ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ ಈವರೆಗೆ ಇಸ್ರೇಲ್‌ ಸೇನೆ ಪ್ಯಾಲೆಸ್ತೀನ್‌ನ 20,000ಕ್ಕೂ ಅಧಿಕ ನಾಗರಿಕರನ್ನು ಹತ್ಯೆ ಮಾಡಿದೆ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳ ಹತ್ಯೆ ಹೆಚ್ಚಿನ ಸಂಖ್ಯೆಯಲ್ಲಿ ನಡೆದಿದೆ. ಸಾವನ್ನಪ್ಪಿದವರಲ್ಲಿ ಕನಿಷ್ಠ 8,000 ಮಕ್ಕಳು ಮತ್ತು 6,200 ಮಹಿಳೆಯರು ಸೇರಿದ್ದಾರೆ ಎಂದು ಗಾಝಾದ ಸರ್ಕಾರಿ ಮಾದ್ಯಮ ಕಚೇರಿ ತಿಳಿಸಿದೆ.

ವಿಶ್ವಸಂಸ್ಥೆ ಈ ಮೊದಲು ಹಲವು ಬಾರಿ ಗಾಝಾದಲ್ಲಿ ಕದನ ವಿರಾಮಕ್ಕೆ ನಿರ್ಣಯವನ್ನು ಮಂಡಿಸಿತ್ತು. ಇತ್ತೀಚೆಗೆ ವಿಟೊ ಅಧಿಕಾರ ಬಳಸಿ ಅಮೆರಿಕ ಕದನ ವಿರಾಮವನ್ನು ವಿರೋಧಿಸಿತ್ತು. ಆದರೆ ಯುಎನ್‌ ಮತ್ತೆ ಯುದ್ಧ ಪೀಡಿತ ಗಾಝಾಗೆ ದೊಡ್ಡ ಪ್ರಮಾಣದಲ್ಲಿ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ಕುರಿತು ನಿರ್ಣಯವನ್ನು ಮಂಡಿಸಿದೆ. ಇದಕ್ಕೆ ಹಲವು ರಾಷ್ಟ್ರಗಳು ಸಹಿ ಹಾಕಿವೆ.

ಕಳೆದ 2 ತಿಂಗಳಿನಿಂದ ಇಸ್ರೇಲ್‌, ಪ್ಯಾಲೆಸ್ತೀನ್‌ ಮೇಲೆ ನಡೆಸಿದ ನಿರಂತರ ಬಾಂಬ್‌ ದಾಳಿ ಗಾಝಾದಲ್ಲಿ ಯುದ್ಧ ಭೀಕರತೆಯ ಜೊತೆಗೆ ಮಾನವೀಯ ಬಿಕ್ಕಟ್ಟನ್ನು ಕೂಡ ಸೃಷ್ಟಿಸಿದೆ. ಗಾಝಾದ ರಫಾ ಕ್ರಾಸಿಂಗ್‌ನಲ್ಲಿ ಆಹಾರ, ನೀರಿಗಾಗಿ ಜನರು ಟ್ರಕ್‌ಗಳನ್ನು ತಡೆಯುತ್ತಿದ್ದರು. ಹಸಿವಿನಿಂದ ತತ್ತರಿಸಿದ ಜನರು ಪರಿಹಾರ ಸಾಮಾಗ್ರಿ ವಾಹನಗಳನ್ನು ತಡೆದು ಆಹಾರ ಕಸಿದು ತಿನ್ನುತ್ತಿರುವ ಮನಕಲಕುವ ದೃಶ್ಯಗಳು ಕಂಡು ಬಂದಿತ್ತು. ಗಾಝಾದ ನಿರಾಶ್ರಿತರ ಶಿಬಿರಗಳಲ್ಲಿ ಸಾಂಕ್ರಾಮಿಕ ರೋಗದಿಂದ ಜನರು ಬಳಲುತ್ತಿರವ ಬಗ್ಗೆಯೂ ವರದಿಯಾಗಿತ್ತು.

ಇದನ್ನು ಓದಿ: ಗಾಝಾಗೆ ಮಾನವೀಯ ನೆರವು ಮಾತ್ರ, ಕದನ ವಿರಾಮವಿಲ್ಲ: ಯುಎಸ್‌ಗೆ ಬೆದರಿತಾ ವಿಶ್ವಸಂಸ್ಥೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...