Homeಅಂತರಾಷ್ಟ್ರೀಯಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

- Advertisement -
- Advertisement -

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಡಿಸೆಂಬರ್ 28ರಂದು ಪ್ರಾರಂಭವಾದ ಪ್ರತಿಭಟನೆಗಳು, ಆರಂಭದಲ್ಲಿ ಹೆಚ್ಚುತ್ತಿರುವ ಹಣದುಬ್ಬರದ ಬಗ್ಗೆ ಅಸಮಾಧಾನದ ಮೇಲೆ ಕೇಂದ್ರೀಕೃತವಾಗಿದ್ದವು. ನಂತರ 100ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನಾಕಾರರು ಧಾರ್ಮಿಕ ನಾಯಕರ ಆಡಳಿತವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ ಪರಿಣಾಮ, ಅದು ಆಡಳಿತ ವಿರೋಧಿ ದಂಗೆಯಾಗಿ ಪರಿರ್ವತನೆಯಾಗಿದೆ.

ಇರಾನ್‌ನ ಅಧಿಕಾರಿಗಳು ಅಮೆರಿಕ ಮತ್ತು ಇಸ್ರೇಲ್ ದೇಶದಲ್ಲಿ ಅಶಾಂತಿಯನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದ್ದಾರೆ. ಸರ್ಕಾರ ಗುರುವಾರ ಇಂಟರ್ನೆಟ್ ಮತ್ತು ದೂರವಾಣಿ ಸೇವೆಗಳನ್ನು ಕಡಿತಗೊಳಿಸಿದೆ. ಇದರಿಂದಾಗಿ ದೇಶಕ್ಕೆ ಹೊರಗಿನ ಪ್ರಪಂಚದಿಂದ ಸಂಪರ್ಕ ಕಡಿತಗೊಂಡಿದೆ.

ಪ್ರತಿಭಟನೆಗಳು ಪ್ರಾರಂಭಗೊಂಡು ಎರಡು ವಾರ ಪೂರ್ಣಗೊಳ್ಳುವಾಗ ದೇಶದಲ್ಲಿ ದೃಢಪಡಿಸಿದ ಸಾವಿನ ಸಂಖ್ಯೆ ಶನಿವಾರ 116ಕ್ಕೆ ತಲುಪಿದೆ ಎಂದು ಇರಾನ್‌ನ ಮಾನವ ಹಕ್ಕುಗಳ ಕಾರ್ಯಕರ್ತರು ತಿಳಿಸಿದ್ದಾರೆ. ಇಂಟರ್ನೆಟ್ ಸ್ಥಗಿತಗೊಳಿಸುವಿಕೆ ಮತ್ತು ತೀವ್ರ ಸಂವಹನ ಅಡಚಣೆಗಳು ‘ಮಾಹಿತಿಯನ್ನು ಪ್ರಸಾರ ಮಾಡುವ ಮತ್ತು ಘಟನೆಗಳನ್ನು ಸ್ವತಂತ್ರವಾಗಿ ಪರಿಶೀಲಿಸುವ ಸಾಮರ್ಥ್ಯವನ್ನು ಗಮನಾರ್ಹವಾಗಿ ಸೀಮಿತಗೊಳಿಸಿವೆ’ ಎಂದು ಹೇಳಿದ್ದಾರೆ.

ಪ್ರತಿಭಟನಾ ನಿರತ ಎಲ್ಲರನ್ನೂ ‘ದೇವರ ಶತ್ರು’ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಟಾರ್ನಿ ಜನರಲ್ ಮೊಹಮ್ಮದ್ ಮೊವಾಹೆದಿ ಆಝಾದ್ ಶನಿವಾರ ಎಚ್ಚರಿಸಿದ್ದಾರೆ. ಈ ಆರೋಪಕ್ಕೆ ಮರಣದಂಡನೆ ವಿಧಿಸಲಾಗುತ್ತದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಗಲಭೆಕೋರರಿಗೆ ಸಹಾಯ ಮಾಡುವ ವ್ಯಕ್ತಿಗಳು ಕೂಡ ಈ ಆರೋಪ ಎದುರಿಸಬೇಕಾಗುತ್ತದೆ ಎಂದು ಮೊವಾಹೆದಿ ಹೇಳಿದ್ದನ್ನು ಇರಾನ್ ಸರ್ಕಾರದ ದೂರದರ್ಶನ ಉಲ್ಲೇಖಿಸಿದೆ.

“ನಮ್ಮ ದೇಶದ ವಿರುದ್ಧ ದ್ರೋಹ ಮಾಡಿ, ಜನರಲ್ಲಿ ಭಯ ಹುಟ್ಟಿಸಿ, ಅಶಾಂತಿ ಸೃಷ್ಟಿಸಿ, ವಿದೇಶಿ ಶಕ್ತಿಗಳ ಆಳ್ವಿಕೆ ತರಲು ಯತ್ನಿಸುವ ಎಲ್ಲರ ವಿರುದ್ಧ ತ್ವರಿತವಾಗಿ, ಕಠಿಣವಾಗಿ ಕಾನೂನು ಕ್ರಮ ಕೈಗೊಳ್ಳಿ. ಆರೋಪಪತ್ರಗಳನ್ನು ತ್ವರಿತವಾಗಿ ದಾಖಲಿಸಿ, ಶೀಘ್ರ ವಿಚಾರಣೆ ನಡೆಸಿ, ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿ. ಯಾವುದೇ ದಯೆ, ಕ್ಷಮೆ, ಸಹನೆ ಇರಬಾರದು” ಎಂದು ಮೊವಾಹೆದಿ ಹೇಳಿದ್ದಾರೆ.

ಈ ನಡುವೆ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳು ರಾಜಧಾನಿ ತೆಹ್ರಾನ್ ಮತ್ತು ಉತ್ತರದಲ್ಲಿ ರಾಶ್ಟ್, ವಾಯುವ್ಯದಲ್ಲಿ ತಬ್ರಿಝ್ ಮತ್ತು ದಕ್ಷಿಣದಲ್ಲಿ ಶಿರಾಜ್ ಮತ್ತು ಕೆರ್ಮನ್‌ನಂತಹ ಹಲವಾರು ನಗರ ಕೇಂದ್ರಗಳಲ್ಲಿ ಹೊಸದಾಗಿ ಪ್ರತಿಭಟನೆಗಳು ಭುಗಿಲೆದ್ದಿರುವುದನ್ನು ತೋರಿಸಿವೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...