Homeಅಂತರಾಷ್ಟ್ರೀಯಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

- Advertisement -
- Advertisement -

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಡಿಸೆಂಬರ್ 28ರಂದು ಪ್ರಾರಂಭವಾದ ಪ್ರತಿಭಟನೆಗಳು, ಆರಂಭದಲ್ಲಿ ಹೆಚ್ಚುತ್ತಿರುವ ಹಣದುಬ್ಬರದ ಬಗ್ಗೆ ಅಸಮಾಧಾನದ ಮೇಲೆ ಕೇಂದ್ರೀಕೃತವಾಗಿದ್ದವು. ನಂತರ 100ಕ್ಕೂ ಹೆಚ್ಚು ನಗರಗಳಲ್ಲಿ ಪ್ರತಿಭಟನಾಕಾರರು ಧಾರ್ಮಿಕ ನಾಯಕರ ಆಡಳಿತವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದ ಪರಿಣಾಮ, ಅದು ಆಡಳಿತ ವಿರೋಧಿ ದಂಗೆಯಾಗಿ ಪರಿರ್ವತನೆಯಾಗಿದೆ.

ಇರಾನ್‌ನ ಅಧಿಕಾರಿಗಳು ಅಮೆರಿಕ ಮತ್ತು ಇಸ್ರೇಲ್ ದೇಶದಲ್ಲಿ ಅಶಾಂತಿಯನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದ್ದಾರೆ. ಸರ್ಕಾರ ಗುರುವಾರ ಇಂಟರ್ನೆಟ್ ಮತ್ತು ದೂರವಾಣಿ ಸೇವೆಗಳನ್ನು ಕಡಿತಗೊಳಿಸಿದೆ. ಇದರಿಂದಾಗಿ ದೇಶಕ್ಕೆ ಹೊರಗಿನ ಪ್ರಪಂಚದಿಂದ ಸಂಪರ್ಕ ಕಡಿತಗೊಂಡಿದೆ.

ಪ್ರತಿಭಟನೆಗಳು ಪ್ರಾರಂಭಗೊಂಡು ಎರಡು ವಾರ ಪೂರ್ಣಗೊಳ್ಳುವಾಗ ದೇಶದಲ್ಲಿ ದೃಢಪಡಿಸಿದ ಸಾವಿನ ಸಂಖ್ಯೆ ಶನಿವಾರ 116ಕ್ಕೆ ತಲುಪಿದೆ ಎಂದು ಇರಾನ್‌ನ ಮಾನವ ಹಕ್ಕುಗಳ ಕಾರ್ಯಕರ್ತರು ತಿಳಿಸಿದ್ದಾರೆ. ಇಂಟರ್ನೆಟ್ ಸ್ಥಗಿತಗೊಳಿಸುವಿಕೆ ಮತ್ತು ತೀವ್ರ ಸಂವಹನ ಅಡಚಣೆಗಳು ‘ಮಾಹಿತಿಯನ್ನು ಪ್ರಸಾರ ಮಾಡುವ ಮತ್ತು ಘಟನೆಗಳನ್ನು ಸ್ವತಂತ್ರವಾಗಿ ಪರಿಶೀಲಿಸುವ ಸಾಮರ್ಥ್ಯವನ್ನು ಗಮನಾರ್ಹವಾಗಿ ಸೀಮಿತಗೊಳಿಸಿವೆ’ ಎಂದು ಹೇಳಿದ್ದಾರೆ.

ಪ್ರತಿಭಟನಾ ನಿರತ ಎಲ್ಲರನ್ನೂ ‘ದೇವರ ಶತ್ರು’ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಟಾರ್ನಿ ಜನರಲ್ ಮೊಹಮ್ಮದ್ ಮೊವಾಹೆದಿ ಆಝಾದ್ ಶನಿವಾರ ಎಚ್ಚರಿಸಿದ್ದಾರೆ. ಈ ಆರೋಪಕ್ಕೆ ಮರಣದಂಡನೆ ವಿಧಿಸಲಾಗುತ್ತದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ. ಗಲಭೆಕೋರರಿಗೆ ಸಹಾಯ ಮಾಡುವ ವ್ಯಕ್ತಿಗಳು ಕೂಡ ಈ ಆರೋಪ ಎದುರಿಸಬೇಕಾಗುತ್ತದೆ ಎಂದು ಮೊವಾಹೆದಿ ಹೇಳಿದ್ದನ್ನು ಇರಾನ್ ಸರ್ಕಾರದ ದೂರದರ್ಶನ ಉಲ್ಲೇಖಿಸಿದೆ.

“ನಮ್ಮ ದೇಶದ ವಿರುದ್ಧ ದ್ರೋಹ ಮಾಡಿ, ಜನರಲ್ಲಿ ಭಯ ಹುಟ್ಟಿಸಿ, ಅಶಾಂತಿ ಸೃಷ್ಟಿಸಿ, ವಿದೇಶಿ ಶಕ್ತಿಗಳ ಆಳ್ವಿಕೆ ತರಲು ಯತ್ನಿಸುವ ಎಲ್ಲರ ವಿರುದ್ಧ ತ್ವರಿತವಾಗಿ, ಕಠಿಣವಾಗಿ ಕಾನೂನು ಕ್ರಮ ಕೈಗೊಳ್ಳಿ. ಆರೋಪಪತ್ರಗಳನ್ನು ತ್ವರಿತವಾಗಿ ದಾಖಲಿಸಿ, ಶೀಘ್ರ ವಿಚಾರಣೆ ನಡೆಸಿ, ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿ. ಯಾವುದೇ ದಯೆ, ಕ್ಷಮೆ, ಸಹನೆ ಇರಬಾರದು” ಎಂದು ಮೊವಾಹೆದಿ ಹೇಳಿದ್ದಾರೆ.

ಈ ನಡುವೆ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳು ರಾಜಧಾನಿ ತೆಹ್ರಾನ್ ಮತ್ತು ಉತ್ತರದಲ್ಲಿ ರಾಶ್ಟ್, ವಾಯುವ್ಯದಲ್ಲಿ ತಬ್ರಿಝ್ ಮತ್ತು ದಕ್ಷಿಣದಲ್ಲಿ ಶಿರಾಜ್ ಮತ್ತು ಕೆರ್ಮನ್‌ನಂತಹ ಹಲವಾರು ನಗರ ಕೇಂದ್ರಗಳಲ್ಲಿ ಹೊಸದಾಗಿ ಪ್ರತಿಭಟನೆಗಳು ಭುಗಿಲೆದ್ದಿರುವುದನ್ನು ತೋರಿಸಿವೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...