Homeಅಂತರಾಷ್ಟ್ರೀಯದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

- Advertisement -
- Advertisement -

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ.

ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ “ಅಮೆರಿಕ ಇರಾನ್ ಮೇಲೆ ಸೇನಾ ದಾಳಿ ನಡೆಸಿದರೆ, ಅಮೆರಿಕದ ಸೈನ್ಯ ಮತ್ತು ಇಸ್ರೇಲ್ ಎರಡೂ ನಮ್ಮ ಕಾನೂನುಬದ್ಧ ಗುರಿಗಳಾಗುತ್ತವೆ” ಎಂದು ಎಚ್ಚರಿಸಿದ್ದಾರೆ.

ಸಂಸತ್ ಅಧ್ಯಕ್ಷರು ಈ ರೀತಿ ಹೇಳುತ್ತಿದ್ದಂತೆ, ಸಂಸದರು ಅಧ್ಯಕ್ಷರ ಪೀಠ ಏರಿ “ಅಮೆರಿಕಕ್ಕೆ ಮರಣ!” (Death to America!) ಎಂದು ಜೋರಾಗಿ ಕೂಗಿದ್ದಾರೆ.

“ಇರಾನ್‌ನ ಶಾಂತಿಯುತ ಪ್ರತಿಭಟನಾಕಾರರ ಹತ್ಯೆ ಮುಂದುವರಿದರೆ, ಅವರನ್ನು ರಕ್ಷಿಸಲು ಅಮೆರಿಕ ಮಧ್ಯ ಪ್ರವೇಶಿಸಲಿದೆ. ಹಿಂದೆಂದಿಗಿಂತಲೂ ಹೆಚ್ಚಾಗಿ ಇರಾನ್ ಸ್ವಾತಂತ್ರ್ಯ ಬಯಸುತ್ತಿದೆ. ಅದಕ್ಕೆ ಸಹಾಯ ಮಾಡಲು ಯುಎಸ್‌ ಸಿದ್ದವಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

ಪ್ರತಿಭಟನಾಕಾರರು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ ಮತ್ತು ಇಸ್ರೇಲ್‌) ಬೆಂಬಲಿಗರು ಎಂದು ಇರಾನ್ ಆರೋಪಿಸಿದೆ. ದೇಶದಲ್ಲಿ ಆಡಳಿತ ವಿರೋಧಿ ದಂಗೆ ಏಳಿಸಿದ್ದೇ ಅಮೆರಿಕ ಮತ್ತು ಇಸ್ರೇಲ್ ಎಂದು ಹೇಳಿದೆ. ಇದನ್ನು ಪುಷ್ಠೀಕರಿಸುವಂತೆ ಇರಾನ್‌ನ ಮಾಜಿ ದೊರೆಯ ಮಗ ರೆಝಾ ಪಹ್ಲವಿ ಇರಾನ್‌ನ ಆಂತರಿಕ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಟ್ರಂಪ್‌ಗೆ ಮನವಿ ಮಾಡಿದ್ದಾರೆ.

ಪ್ರತಿಭಟನಾಕಾರರು ಇರಾನ್‌ ಇಸ್ಲಾಮಿಕ್ ಗಣರಾಜ್ಯದ ಸರ್ವೋಚ್ಚ ನಾಯಕ ಅಯಾತೊಲ್ಲ ಖಮೇನಿಯನ್ನು ಪಟ್ಟದಿಂದ ಕೆಳಗಿಳಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ ಮತ್ತು ಪಹ್ಲವಿ ರಾಜಾಡಳಿತವನ್ನು ಬಯಸುತ್ತಿದ್ದಾರೆ. ಇವೆಲ್ಲವೂ ಅಮೆರಿಕ ಮತ್ತು ಇಸ್ರೇಲ್‌ನ ಕುತಂತ್ರ. ಪಹ್ಲವಿ ಟ್ರಂಪ್‌ನ ಸಾಕು ನಾಯಿ ಎಂದು ಇರಾನ್ ಹೇಳಿದೆ.

ಪ್ರತಿಭಟನಾಕಾರರನ್ನು ‘ದೇವರ ವಿರೋಧಿಗಳು’ ಎಂದು ಇರಾನ್‌ ಸರ್ಕಾರ ಘೋಷಣೆ ಮಾಡಿದ್ದು, ಅವರಿಗೆ ಮರಣದಂಡನೆ ವಿಧಿಸಲು ಸಿದ್ದತೆ ನಡೆಸಿದೆ. ಈಗಾಗಲೇ 116ರಕ್ಕೂ ಹೆಚ್ಚು ಪ್ರತಿಭಟನಾಕಾರರು ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ.

ಇರಾನ್ ಸರ್ಕಾರದ ಅಧೀನದ ದೂರದರ್ಶನ ಸಂಸತ್ತಿನ ಅಧಿವೇಶನವನ್ನು ನೇರ ಪ್ರಸಾರ ಮಾಡಿದೆ. ಅದರಲ್ಲಿ ಕಂಡಂತೆ ಈ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಂಸತ್ತಿನ ಹಾಲಿ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್, ಪ್ರತಿಭಟನೆಯ ಸಮಯದಲ್ಲಿ ಸರ್ಕಾರದ ಪರ ನಿಂತ ಪೊಲೀಸರು, ಇಸ್ಲಾಮಿಕ್ ಪ್ಯಾರಾಮಿಲಿಟರಿ ಪಡೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ (ಐಆರ್‌ಜಿಸಿ), ಅದರ ಸ್ವಯಂಸೇವಕ ತಂಡ ಬಸಿಜ್‌ಗೆ ಧನ್ಯವಾದ ಹೇಳಿದ್ದಾರೆ.

“ಪ್ರತಿಭಟನಾ ನಿರತ ಇರಾನಿನ ಜನರೇ, ನಾವು ನಿಮ್ಮನ್ನು ಬಂಧಿಸುತ್ತೇವೆ, ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಖಲೀಬಾಫ್ ಎಚ್ಚರಿಕೆ ನೀಡಿದ್ದಾರೆ. ಆಕ್ರಮಿತ ಪ್ರದೇಶ ಎಂದ ಇಸ್ರೇಲ್‌ ಅನ್ನು ಉಲ್ಲೇಖಿಸಿರುವ ಖಲೀಬಾಫ್, ಇಸ್ರೇಲ್ ಮತ್ತು ಅಮೆರಿಕ ಮಿಲಿಟರಿ ಮೇಲೆ ನೇರ ದಾಳಿ ನಡೆಸುವ ಬೆದರಿಕೆ ಹಾಕಿದ್ದಾರೆ.

“ಇರಾನ್ ಮೇಲೆ ದಾಳಿಗೆ ಮುಂದಾದರೆ, ಆಕ್ರಮಿತ ಪ್ರದೇಶ ಮತ್ತು ಅದರೊಳಗಿರುವ ಅಮೆರಿಕದ ಎಲ್ಲಾ ಸೇನಾ ನೆಲೆಗಳು ಮತ್ತು ಹಡಗುಗಳು ನಮ್ಮ ಕಾನೂನುಬದ್ದ ಗುರಿಯಾಗಲಿದೆ. ನಾವು ದಾಳಿ ನಡೆದ ಮೇಲೆ ಪ್ರತಿದಾಳಿ ನಡೆಸುವುದಿಲ್ಲ. ದಾಳಿಯ ಸಣ್ಣ ಸೂಚನೆ ಸಿಕ್ಕರೂ ಕಠಿಣವಾಗಿ ಪ್ರತಿಕ್ರಿಯಿಸುತ್ತೇವೆ ಎಂದಿದ್ದಾರೆ.

2025ರ ಜೂನ್‌ನಲ್ಲಿ ಇಸ್ರೇಲ್ ಜೊತೆಗಿನ 12 ದಿನಗಳ ಸಂಘರ್ಷದಲ್ಲಿ ತನ್ನ ವಾಯು ರಕ್ಷಣಾ ಪಡೆಗಳು ನಾಶವಾದ ನಂತರ, ದಾಳಿ ನಡೆಸುವುದರ ಬಗ್ಗೆ ಇರಾನ್ ಎಷ್ಟು ಗಂಭೀರವಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯುದ್ಧಕ್ಕೆ ಹೋಗುವ ಯಾವುದೇ ನಿರ್ಧಾರವು ಇರಾನ್‌ನ 86 ವರ್ಷದ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಮೇಲೆ ಅವಲಂಬಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...