Homeಅಂತರಾಷ್ಟ್ರೀಯದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

- Advertisement -
- Advertisement -

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ.

ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ “ಅಮೆರಿಕ ಇರಾನ್ ಮೇಲೆ ಸೇನಾ ದಾಳಿ ನಡೆಸಿದರೆ, ಅಮೆರಿಕದ ಸೈನ್ಯ ಮತ್ತು ಇಸ್ರೇಲ್ ಎರಡೂ ನಮ್ಮ ಕಾನೂನುಬದ್ಧ ಗುರಿಗಳಾಗುತ್ತವೆ” ಎಂದು ಎಚ್ಚರಿಸಿದ್ದಾರೆ.

ಸಂಸತ್ ಅಧ್ಯಕ್ಷರು ಈ ರೀತಿ ಹೇಳುತ್ತಿದ್ದಂತೆ, ಸಂಸದರು ಅಧ್ಯಕ್ಷರ ಪೀಠ ಏರಿ “ಅಮೆರಿಕಕ್ಕೆ ಮರಣ!” (Death to America!) ಎಂದು ಜೋರಾಗಿ ಕೂಗಿದ್ದಾರೆ.

“ಇರಾನ್‌ನ ಶಾಂತಿಯುತ ಪ್ರತಿಭಟನಾಕಾರರ ಹತ್ಯೆ ಮುಂದುವರಿದರೆ, ಅವರನ್ನು ರಕ್ಷಿಸಲು ಅಮೆರಿಕ ಮಧ್ಯ ಪ್ರವೇಶಿಸಲಿದೆ. ಹಿಂದೆಂದಿಗಿಂತಲೂ ಹೆಚ್ಚಾಗಿ ಇರಾನ್ ಸ್ವಾತಂತ್ರ್ಯ ಬಯಸುತ್ತಿದೆ. ಅದಕ್ಕೆ ಸಹಾಯ ಮಾಡಲು ಯುಎಸ್‌ ಸಿದ್ದವಾಗಿದೆ” ಎಂದು ಟ್ರಂಪ್ ಹೇಳಿದ್ದಾರೆ.

ಪ್ರತಿಭಟನಾಕಾರರು ವಿದೇಶಿ ಶಕ್ತಿಗಳ (ವಿಶೇಷವಾಗಿ ಅಮೆರಿಕ ಮತ್ತು ಇಸ್ರೇಲ್‌) ಬೆಂಬಲಿಗರು ಎಂದು ಇರಾನ್ ಆರೋಪಿಸಿದೆ. ದೇಶದಲ್ಲಿ ಆಡಳಿತ ವಿರೋಧಿ ದಂಗೆ ಏಳಿಸಿದ್ದೇ ಅಮೆರಿಕ ಮತ್ತು ಇಸ್ರೇಲ್ ಎಂದು ಹೇಳಿದೆ. ಇದನ್ನು ಪುಷ್ಠೀಕರಿಸುವಂತೆ ಇರಾನ್‌ನ ಮಾಜಿ ದೊರೆಯ ಮಗ ರೆಝಾ ಪಹ್ಲವಿ ಇರಾನ್‌ನ ಆಂತರಿಕ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಟ್ರಂಪ್‌ಗೆ ಮನವಿ ಮಾಡಿದ್ದಾರೆ.

ಪ್ರತಿಭಟನಾಕಾರರು ಇರಾನ್‌ ಇಸ್ಲಾಮಿಕ್ ಗಣರಾಜ್ಯದ ಸರ್ವೋಚ್ಚ ನಾಯಕ ಅಯಾತೊಲ್ಲ ಖಮೇನಿಯನ್ನು ಪಟ್ಟದಿಂದ ಕೆಳಗಿಳಿಸುವ ಘೋಷಣೆಗಳನ್ನು ಕೂಗುತ್ತಿದ್ದಾರೆ ಮತ್ತು ಪಹ್ಲವಿ ರಾಜಾಡಳಿತವನ್ನು ಬಯಸುತ್ತಿದ್ದಾರೆ. ಇವೆಲ್ಲವೂ ಅಮೆರಿಕ ಮತ್ತು ಇಸ್ರೇಲ್‌ನ ಕುತಂತ್ರ. ಪಹ್ಲವಿ ಟ್ರಂಪ್‌ನ ಸಾಕು ನಾಯಿ ಎಂದು ಇರಾನ್ ಹೇಳಿದೆ.

ಪ್ರತಿಭಟನಾಕಾರರನ್ನು ‘ದೇವರ ವಿರೋಧಿಗಳು’ ಎಂದು ಇರಾನ್‌ ಸರ್ಕಾರ ಘೋಷಣೆ ಮಾಡಿದ್ದು, ಅವರಿಗೆ ಮರಣದಂಡನೆ ವಿಧಿಸಲು ಸಿದ್ದತೆ ನಡೆಸಿದೆ. ಈಗಾಗಲೇ 116ರಕ್ಕೂ ಹೆಚ್ಚು ಪ್ರತಿಭಟನಾಕಾರರು ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ.

ಇರಾನ್ ಸರ್ಕಾರದ ಅಧೀನದ ದೂರದರ್ಶನ ಸಂಸತ್ತಿನ ಅಧಿವೇಶನವನ್ನು ನೇರ ಪ್ರಸಾರ ಮಾಡಿದೆ. ಅದರಲ್ಲಿ ಕಂಡಂತೆ ಈ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಂಸತ್ತಿನ ಹಾಲಿ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್, ಪ್ರತಿಭಟನೆಯ ಸಮಯದಲ್ಲಿ ಸರ್ಕಾರದ ಪರ ನಿಂತ ಪೊಲೀಸರು, ಇಸ್ಲಾಮಿಕ್ ಪ್ಯಾರಾಮಿಲಿಟರಿ ಪಡೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ (ಐಆರ್‌ಜಿಸಿ), ಅದರ ಸ್ವಯಂಸೇವಕ ತಂಡ ಬಸಿಜ್‌ಗೆ ಧನ್ಯವಾದ ಹೇಳಿದ್ದಾರೆ.

“ಪ್ರತಿಭಟನಾ ನಿರತ ಇರಾನಿನ ಜನರೇ, ನಾವು ನಿಮ್ಮನ್ನು ಬಂಧಿಸುತ್ತೇವೆ, ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಖಲೀಬಾಫ್ ಎಚ್ಚರಿಕೆ ನೀಡಿದ್ದಾರೆ. ಆಕ್ರಮಿತ ಪ್ರದೇಶ ಎಂದ ಇಸ್ರೇಲ್‌ ಅನ್ನು ಉಲ್ಲೇಖಿಸಿರುವ ಖಲೀಬಾಫ್, ಇಸ್ರೇಲ್ ಮತ್ತು ಅಮೆರಿಕ ಮಿಲಿಟರಿ ಮೇಲೆ ನೇರ ದಾಳಿ ನಡೆಸುವ ಬೆದರಿಕೆ ಹಾಕಿದ್ದಾರೆ.

“ಇರಾನ್ ಮೇಲೆ ದಾಳಿಗೆ ಮುಂದಾದರೆ, ಆಕ್ರಮಿತ ಪ್ರದೇಶ ಮತ್ತು ಅದರೊಳಗಿರುವ ಅಮೆರಿಕದ ಎಲ್ಲಾ ಸೇನಾ ನೆಲೆಗಳು ಮತ್ತು ಹಡಗುಗಳು ನಮ್ಮ ಕಾನೂನುಬದ್ದ ಗುರಿಯಾಗಲಿದೆ. ನಾವು ದಾಳಿ ನಡೆದ ಮೇಲೆ ಪ್ರತಿದಾಳಿ ನಡೆಸುವುದಿಲ್ಲ. ದಾಳಿಯ ಸಣ್ಣ ಸೂಚನೆ ಸಿಕ್ಕರೂ ಕಠಿಣವಾಗಿ ಪ್ರತಿಕ್ರಿಯಿಸುತ್ತೇವೆ ಎಂದಿದ್ದಾರೆ.

2025ರ ಜೂನ್‌ನಲ್ಲಿ ಇಸ್ರೇಲ್ ಜೊತೆಗಿನ 12 ದಿನಗಳ ಸಂಘರ್ಷದಲ್ಲಿ ತನ್ನ ವಾಯು ರಕ್ಷಣಾ ಪಡೆಗಳು ನಾಶವಾದ ನಂತರ, ದಾಳಿ ನಡೆಸುವುದರ ಬಗ್ಗೆ ಇರಾನ್ ಎಷ್ಟು ಗಂಭೀರವಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯುದ್ಧಕ್ಕೆ ಹೋಗುವ ಯಾವುದೇ ನಿರ್ಧಾರವು ಇರಾನ್‌ನ 86 ವರ್ಷದ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಮೇಲೆ ಅವಲಂಬಿತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...