Homeಮುಖಪುಟಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

ಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

- Advertisement -
- Advertisement -

ಇರಾನಿನ ಕುಖ್ಯಾತ ‘ಮೊರಾಲಿಟಿ ಪೊಲೀಸರು’ ಟೆಹ್ರಾನ್‌ನಲ್ಲಿ ಬಂಧಿಸಿದ ನಂತರ ಕೋಮಾಕ್ಕೆ ಹೋದ ಯುವತಿ ಶುಕ್ರವಾರ ಕೊನೆಯುಸಿರೆಳೆದಿದ್ದಾಳೆ. ಸರ್ಕಾರಿ ಮಾಧ್ಯಮ ಹಾಗೂ ಮತ್ತು ಯುವತಿಯ ಕುಟುಂಬವು ಸಾವಿನ ಕುರಿತು ಮಾಹಿತಿ ನೀಡಿವೆ. ಯುವತಿಯ ಅನುಮಾನಾಸ್ಪದ ಸಾವಿಗೆ ಕಾರಣರಾದವರಿಗೆ ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

22 ವರ್ಷದ ಮಹ್ಸಾ ಅಮಿನಿ ತನ್ನ ಕುಟುಂಬದೊಂದಿಗೆ ಇರಾನ್ ರಾಜಧಾನಿಗೆ ಭೇಟಿ ನೀಡುತ್ತಿದ್ದರು. ಇಸ್ಲಾಮಿಕ್ ಗಣರಾಜ್ಯದಲ್ಲಿ ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೊಳಿಸುವ ಹೊಣೆಗಾರಿಕೆಯನ್ನು ಹೊತ್ತಿರುವ ಪೊಲೀಸ್ ಘಟಕವು ಅಮಿನಿ ಅವರನ್ನು ಮಂಗಳವಾರ ಬಂಧಿಸಿತು. ಸಾರ್ವಜನಿಕವಾಗಿ ಹೆಡ್‌ಸ್ಕ್ರಾಪ್‌ (ಹಿಜಾಬ್‌) ಧರಿಸಬೇಕೆಂದು ಕಡ್ಡಾಯ ಮಾಡಲಾಗಿದ್ದು, ಯುವತಿ ಧರಿಸಿರಲಿಲ್ಲ ಎಂದು ಆರೋಪಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದುರಾದೃಷ್ಟವಶಾತ್‌ ಯುವತಿ ಕೊನೆಯುಸಿರೆಳೆದಿದ್ದು, ಆಕೆಯ ಮೃತ ದೇಹವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಇರಾನಿನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಇರಾನ್ ವೈರ್ ವೆಬ್‌ಸೈಟ್ ಮತ್ತು ಶಾರ್ಗ್ ಪತ್ರಿಕೆ ಸೇರಿದಂತೆ ಪರ್ಷಿಯನ್ ಭಾಷೆಯ ಮಾಧ್ಯಮಗಳು ಯುವತಿಯ ಕುಟುಂಬದ ಹೇಳಿಕೆಯನ್ನು ವರದಿ ಮಾಡಿವೆ. ಈ ಹಿಂದೆ ಆರೋಗ್ಯವಾಗಿದ್ದ ಅಮಿನಿ ಅವರು ಬಂಧನದ ಕೆಲವೇ ಗಂಟೆಗಳ ಬಳಿಕ ಕೋಮಾಕ್ಕೆ ಹೋಗಿದ್ದಾರೆ. ನಂತರ ಆಸ್ಪತ್ರೆಗೆ ಸಾಗಿಸಲಾಗಿದೆ. ಈಗ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬ ದೂರಿದೆ.

ಆಕೆ ಪೊಲೀಸ್ ಠಾಣೆಗೆ ಹೋಗುವ ಮತ್ತು ಆಸ್ಪತ್ರೆಗೆ ತೆರಳುವ ನಡುವೆ ಏನಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇರಾನ್‌ನಲ್ಲಿ ಆಗುತ್ತಿರುವ ದೌರ್ಜನ್ಯಗಳ ಮೇಲ್ವಿಚಾರಣೆ ಮಾಡುವ ‘1500ಟವ್‌ಸಿರ್’ ಚಾನೆಲ್ ವರದಿ ಮಾಡಿದ್ದು, ಯುವತಿಯ ತಲೆಗೆ ಪೆಟ್ಟು ಬಿದ್ದಿದೆ ಎಂದು ಹೇಳಿದೆ.

ಯುವತಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ಹೊರಗೆ ಜನಸಂದಣಿ ಸೇರಿದ ಪೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಲಾಗಿದೆ. ಜಮಾಯಿಸಿದ ಜನರನ್ನು ಚದುರಿಸಲು ಪೊಲೀಸರು ಪ್ರಯತ್ನಿಸಿದ್ದಾರೆ. ಟೆಹ್ರಾನ್‌ನಲ್ಲಿ ಜನರು ಆಕ್ರೋಶ ಭರಿತರಾಗಿ, ಆಡಳಿತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.

“22 ವರ್ಷದ ಯುವತಿ ಮಹ್ಸಾ ಅಮಿನಿಯ ಅವರು ಪೊಲೀಸ್‌ ಕಸ್ಟಡಿಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿರುವ ಆರೋಪಗಳಿವೆ. ಈ ಕುರಿತು ತನಿಖೆಯಾಗಬೇಕು” ಎಂದು ಅಮ್ನೆಸ್ಟಿ ಇಂಟರ್ನ್ಯಾಷನಲ್ ಒತ್ತಾಯಿಸಿದೆ.

“ಬಲವಂತವಾಗಿ ಕಾನೂನುಗಳನ್ನು ಜಾರಿಗೊಳಿಸುವಾಗ ಟೆಹ್ರಾನ್‌ನಲ್ಲಿ ‘ಮೊರಲಿಟಿ ಪೊಲೀಸ್’ ಎಂದು ಕರೆಯಲ್ಪಡುವವರು ಯುವತಿಯನ್ನು ಮೂರು ದಿನಗಳ ಹಿಂದೆ ಬಂಧಿಸಿದ್ದರು. ಈ ಸಾವಿಗೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿರಿ: ಕಲಬುರಗಿ: ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ; ಹೋರಾಟಗಾರರ ಬಂಧನ

2015ರ ಪರಮಾಣು ಒಪ್ಪಂದವನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳಲ್ಲಿ ತೊಡಗಿರುವ ಇರಾನ್‌ನ ಯುಎಸ್ ರಾಯಭಾರಿ ರಾಬರ್ಟ್ ಮಾಲ್ಲಿ, “ಆಕೆಯ ಸಾವಿಗೆ ಕಾರಣರಾದವರು ಜವಾಬ್ದಾರರಾಗಿರಬೇಕು” ಎಂದು ಹೇಳಿದ್ದಾರೆ.

“ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸಿದ ಕಾರಣಕ್ಕೆ ಮಹಿಳೆಯರ ಮೇಲೆ ಆಗುವ ದೌರ್ಜನ್ಯಗಳನ್ನು ಇರಾನ್ ಕೊನೆಗೊಳಿಸಬೇಕು” ಎಂದು ಒತ್ತಾಯಿಸಲಾಗಿದೆ.

ಇರಾನ್‌ನ ಖ್ಯಾತ ವಕೀಲ ಸಯೀದ್ ದೆಹ್ಘನ್ ಅವರು ಟ್ವೀಟ್ ಮಾಡಿದ್ದು, ಅಮಿನಿಯ ಅವ ಸಾವನ್ನು ‘ಕೊಲೆ’ ಎಂದು ಬಣ್ಣಿಸಿದ್ದಾರೆ. ಆಕೆಯ ತಲೆಗೆ ಪೆಟ್ಟು ಬಿದ್ದಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...