Homeಮುಖಪುಟಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

ಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

- Advertisement -
- Advertisement -

ಇರಾನಿನ ಕುಖ್ಯಾತ ‘ಮೊರಾಲಿಟಿ ಪೊಲೀಸರು’ ಟೆಹ್ರಾನ್‌ನಲ್ಲಿ ಬಂಧಿಸಿದ ನಂತರ ಕೋಮಾಕ್ಕೆ ಹೋದ ಯುವತಿ ಶುಕ್ರವಾರ ಕೊನೆಯುಸಿರೆಳೆದಿದ್ದಾಳೆ. ಸರ್ಕಾರಿ ಮಾಧ್ಯಮ ಹಾಗೂ ಮತ್ತು ಯುವತಿಯ ಕುಟುಂಬವು ಸಾವಿನ ಕುರಿತು ಮಾಹಿತಿ ನೀಡಿವೆ. ಯುವತಿಯ ಅನುಮಾನಾಸ್ಪದ ಸಾವಿಗೆ ಕಾರಣರಾದವರಿಗೆ ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

22 ವರ್ಷದ ಮಹ್ಸಾ ಅಮಿನಿ ತನ್ನ ಕುಟುಂಬದೊಂದಿಗೆ ಇರಾನ್ ರಾಜಧಾನಿಗೆ ಭೇಟಿ ನೀಡುತ್ತಿದ್ದರು. ಇಸ್ಲಾಮಿಕ್ ಗಣರಾಜ್ಯದಲ್ಲಿ ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೊಳಿಸುವ ಹೊಣೆಗಾರಿಕೆಯನ್ನು ಹೊತ್ತಿರುವ ಪೊಲೀಸ್ ಘಟಕವು ಅಮಿನಿ ಅವರನ್ನು ಮಂಗಳವಾರ ಬಂಧಿಸಿತು. ಸಾರ್ವಜನಿಕವಾಗಿ ಹೆಡ್‌ಸ್ಕ್ರಾಪ್‌ (ಹಿಜಾಬ್‌) ಧರಿಸಬೇಕೆಂದು ಕಡ್ಡಾಯ ಮಾಡಲಾಗಿದ್ದು, ಯುವತಿ ಧರಿಸಿರಲಿಲ್ಲ ಎಂದು ಆರೋಪಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದುರಾದೃಷ್ಟವಶಾತ್‌ ಯುವತಿ ಕೊನೆಯುಸಿರೆಳೆದಿದ್ದು, ಆಕೆಯ ಮೃತ ದೇಹವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಇರಾನಿನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಇರಾನ್ ವೈರ್ ವೆಬ್‌ಸೈಟ್ ಮತ್ತು ಶಾರ್ಗ್ ಪತ್ರಿಕೆ ಸೇರಿದಂತೆ ಪರ್ಷಿಯನ್ ಭಾಷೆಯ ಮಾಧ್ಯಮಗಳು ಯುವತಿಯ ಕುಟುಂಬದ ಹೇಳಿಕೆಯನ್ನು ವರದಿ ಮಾಡಿವೆ. ಈ ಹಿಂದೆ ಆರೋಗ್ಯವಾಗಿದ್ದ ಅಮಿನಿ ಅವರು ಬಂಧನದ ಕೆಲವೇ ಗಂಟೆಗಳ ಬಳಿಕ ಕೋಮಾಕ್ಕೆ ಹೋಗಿದ್ದಾರೆ. ನಂತರ ಆಸ್ಪತ್ರೆಗೆ ಸಾಗಿಸಲಾಗಿದೆ. ಈಗ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬ ದೂರಿದೆ.

ಆಕೆ ಪೊಲೀಸ್ ಠಾಣೆಗೆ ಹೋಗುವ ಮತ್ತು ಆಸ್ಪತ್ರೆಗೆ ತೆರಳುವ ನಡುವೆ ಏನಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇರಾನ್‌ನಲ್ಲಿ ಆಗುತ್ತಿರುವ ದೌರ್ಜನ್ಯಗಳ ಮೇಲ್ವಿಚಾರಣೆ ಮಾಡುವ ‘1500ಟವ್‌ಸಿರ್’ ಚಾನೆಲ್ ವರದಿ ಮಾಡಿದ್ದು, ಯುವತಿಯ ತಲೆಗೆ ಪೆಟ್ಟು ಬಿದ್ದಿದೆ ಎಂದು ಹೇಳಿದೆ.

ಯುವತಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ಹೊರಗೆ ಜನಸಂದಣಿ ಸೇರಿದ ಪೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಲಾಗಿದೆ. ಜಮಾಯಿಸಿದ ಜನರನ್ನು ಚದುರಿಸಲು ಪೊಲೀಸರು ಪ್ರಯತ್ನಿಸಿದ್ದಾರೆ. ಟೆಹ್ರಾನ್‌ನಲ್ಲಿ ಜನರು ಆಕ್ರೋಶ ಭರಿತರಾಗಿ, ಆಡಳಿತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.

“22 ವರ್ಷದ ಯುವತಿ ಮಹ್ಸಾ ಅಮಿನಿಯ ಅವರು ಪೊಲೀಸ್‌ ಕಸ್ಟಡಿಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿರುವ ಆರೋಪಗಳಿವೆ. ಈ ಕುರಿತು ತನಿಖೆಯಾಗಬೇಕು” ಎಂದು ಅಮ್ನೆಸ್ಟಿ ಇಂಟರ್ನ್ಯಾಷನಲ್ ಒತ್ತಾಯಿಸಿದೆ.

“ಬಲವಂತವಾಗಿ ಕಾನೂನುಗಳನ್ನು ಜಾರಿಗೊಳಿಸುವಾಗ ಟೆಹ್ರಾನ್‌ನಲ್ಲಿ ‘ಮೊರಲಿಟಿ ಪೊಲೀಸ್’ ಎಂದು ಕರೆಯಲ್ಪಡುವವರು ಯುವತಿಯನ್ನು ಮೂರು ದಿನಗಳ ಹಿಂದೆ ಬಂಧಿಸಿದ್ದರು. ಈ ಸಾವಿಗೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿರಿ: ಕಲಬುರಗಿ: ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ; ಹೋರಾಟಗಾರರ ಬಂಧನ

2015ರ ಪರಮಾಣು ಒಪ್ಪಂದವನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳಲ್ಲಿ ತೊಡಗಿರುವ ಇರಾನ್‌ನ ಯುಎಸ್ ರಾಯಭಾರಿ ರಾಬರ್ಟ್ ಮಾಲ್ಲಿ, “ಆಕೆಯ ಸಾವಿಗೆ ಕಾರಣರಾದವರು ಜವಾಬ್ದಾರರಾಗಿರಬೇಕು” ಎಂದು ಹೇಳಿದ್ದಾರೆ.

“ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸಿದ ಕಾರಣಕ್ಕೆ ಮಹಿಳೆಯರ ಮೇಲೆ ಆಗುವ ದೌರ್ಜನ್ಯಗಳನ್ನು ಇರಾನ್ ಕೊನೆಗೊಳಿಸಬೇಕು” ಎಂದು ಒತ್ತಾಯಿಸಲಾಗಿದೆ.

ಇರಾನ್‌ನ ಖ್ಯಾತ ವಕೀಲ ಸಯೀದ್ ದೆಹ್ಘನ್ ಅವರು ಟ್ವೀಟ್ ಮಾಡಿದ್ದು, ಅಮಿನಿಯ ಅವ ಸಾವನ್ನು ‘ಕೊಲೆ’ ಎಂದು ಬಣ್ಣಿಸಿದ್ದಾರೆ. ಆಕೆಯ ತಲೆಗೆ ಪೆಟ್ಟು ಬಿದ್ದಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...