Homeಮುಖಪುಟಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

ಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

- Advertisement -
- Advertisement -

ಇರಾನಿನ ಕುಖ್ಯಾತ ‘ಮೊರಾಲಿಟಿ ಪೊಲೀಸರು’ ಟೆಹ್ರಾನ್‌ನಲ್ಲಿ ಬಂಧಿಸಿದ ನಂತರ ಕೋಮಾಕ್ಕೆ ಹೋದ ಯುವತಿ ಶುಕ್ರವಾರ ಕೊನೆಯುಸಿರೆಳೆದಿದ್ದಾಳೆ. ಸರ್ಕಾರಿ ಮಾಧ್ಯಮ ಹಾಗೂ ಮತ್ತು ಯುವತಿಯ ಕುಟುಂಬವು ಸಾವಿನ ಕುರಿತು ಮಾಹಿತಿ ನೀಡಿವೆ. ಯುವತಿಯ ಅನುಮಾನಾಸ್ಪದ ಸಾವಿಗೆ ಕಾರಣರಾದವರಿಗೆ ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

22 ವರ್ಷದ ಮಹ್ಸಾ ಅಮಿನಿ ತನ್ನ ಕುಟುಂಬದೊಂದಿಗೆ ಇರಾನ್ ರಾಜಧಾನಿಗೆ ಭೇಟಿ ನೀಡುತ್ತಿದ್ದರು. ಇಸ್ಲಾಮಿಕ್ ಗಣರಾಜ್ಯದಲ್ಲಿ ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೊಳಿಸುವ ಹೊಣೆಗಾರಿಕೆಯನ್ನು ಹೊತ್ತಿರುವ ಪೊಲೀಸ್ ಘಟಕವು ಅಮಿನಿ ಅವರನ್ನು ಮಂಗಳವಾರ ಬಂಧಿಸಿತು. ಸಾರ್ವಜನಿಕವಾಗಿ ಹೆಡ್‌ಸ್ಕ್ರಾಪ್‌ (ಹಿಜಾಬ್‌) ಧರಿಸಬೇಕೆಂದು ಕಡ್ಡಾಯ ಮಾಡಲಾಗಿದ್ದು, ಯುವತಿ ಧರಿಸಿರಲಿಲ್ಲ ಎಂದು ಆರೋಪಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದುರಾದೃಷ್ಟವಶಾತ್‌ ಯುವತಿ ಕೊನೆಯುಸಿರೆಳೆದಿದ್ದು, ಆಕೆಯ ಮೃತ ದೇಹವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಇರಾನಿನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಇರಾನ್ ವೈರ್ ವೆಬ್‌ಸೈಟ್ ಮತ್ತು ಶಾರ್ಗ್ ಪತ್ರಿಕೆ ಸೇರಿದಂತೆ ಪರ್ಷಿಯನ್ ಭಾಷೆಯ ಮಾಧ್ಯಮಗಳು ಯುವತಿಯ ಕುಟುಂಬದ ಹೇಳಿಕೆಯನ್ನು ವರದಿ ಮಾಡಿವೆ. ಈ ಹಿಂದೆ ಆರೋಗ್ಯವಾಗಿದ್ದ ಅಮಿನಿ ಅವರು ಬಂಧನದ ಕೆಲವೇ ಗಂಟೆಗಳ ಬಳಿಕ ಕೋಮಾಕ್ಕೆ ಹೋಗಿದ್ದಾರೆ. ನಂತರ ಆಸ್ಪತ್ರೆಗೆ ಸಾಗಿಸಲಾಗಿದೆ. ಈಗ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬ ದೂರಿದೆ.

ಆಕೆ ಪೊಲೀಸ್ ಠಾಣೆಗೆ ಹೋಗುವ ಮತ್ತು ಆಸ್ಪತ್ರೆಗೆ ತೆರಳುವ ನಡುವೆ ಏನಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇರಾನ್‌ನಲ್ಲಿ ಆಗುತ್ತಿರುವ ದೌರ್ಜನ್ಯಗಳ ಮೇಲ್ವಿಚಾರಣೆ ಮಾಡುವ ‘1500ಟವ್‌ಸಿರ್’ ಚಾನೆಲ್ ವರದಿ ಮಾಡಿದ್ದು, ಯುವತಿಯ ತಲೆಗೆ ಪೆಟ್ಟು ಬಿದ್ದಿದೆ ಎಂದು ಹೇಳಿದೆ.

ಯುವತಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ಹೊರಗೆ ಜನಸಂದಣಿ ಸೇರಿದ ಪೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಲಾಗಿದೆ. ಜಮಾಯಿಸಿದ ಜನರನ್ನು ಚದುರಿಸಲು ಪೊಲೀಸರು ಪ್ರಯತ್ನಿಸಿದ್ದಾರೆ. ಟೆಹ್ರಾನ್‌ನಲ್ಲಿ ಜನರು ಆಕ್ರೋಶ ಭರಿತರಾಗಿ, ಆಡಳಿತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.

“22 ವರ್ಷದ ಯುವತಿ ಮಹ್ಸಾ ಅಮಿನಿಯ ಅವರು ಪೊಲೀಸ್‌ ಕಸ್ಟಡಿಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿರುವ ಆರೋಪಗಳಿವೆ. ಈ ಕುರಿತು ತನಿಖೆಯಾಗಬೇಕು” ಎಂದು ಅಮ್ನೆಸ್ಟಿ ಇಂಟರ್ನ್ಯಾಷನಲ್ ಒತ್ತಾಯಿಸಿದೆ.

“ಬಲವಂತವಾಗಿ ಕಾನೂನುಗಳನ್ನು ಜಾರಿಗೊಳಿಸುವಾಗ ಟೆಹ್ರಾನ್‌ನಲ್ಲಿ ‘ಮೊರಲಿಟಿ ಪೊಲೀಸ್’ ಎಂದು ಕರೆಯಲ್ಪಡುವವರು ಯುವತಿಯನ್ನು ಮೂರು ದಿನಗಳ ಹಿಂದೆ ಬಂಧಿಸಿದ್ದರು. ಈ ಸಾವಿಗೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿರಿ: ಕಲಬುರಗಿ: ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ; ಹೋರಾಟಗಾರರ ಬಂಧನ

2015ರ ಪರಮಾಣು ಒಪ್ಪಂದವನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳಲ್ಲಿ ತೊಡಗಿರುವ ಇರಾನ್‌ನ ಯುಎಸ್ ರಾಯಭಾರಿ ರಾಬರ್ಟ್ ಮಾಲ್ಲಿ, “ಆಕೆಯ ಸಾವಿಗೆ ಕಾರಣರಾದವರು ಜವಾಬ್ದಾರರಾಗಿರಬೇಕು” ಎಂದು ಹೇಳಿದ್ದಾರೆ.

“ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸಿದ ಕಾರಣಕ್ಕೆ ಮಹಿಳೆಯರ ಮೇಲೆ ಆಗುವ ದೌರ್ಜನ್ಯಗಳನ್ನು ಇರಾನ್ ಕೊನೆಗೊಳಿಸಬೇಕು” ಎಂದು ಒತ್ತಾಯಿಸಲಾಗಿದೆ.

ಇರಾನ್‌ನ ಖ್ಯಾತ ವಕೀಲ ಸಯೀದ್ ದೆಹ್ಘನ್ ಅವರು ಟ್ವೀಟ್ ಮಾಡಿದ್ದು, ಅಮಿನಿಯ ಅವ ಸಾವನ್ನು ‘ಕೊಲೆ’ ಎಂದು ಬಣ್ಣಿಸಿದ್ದಾರೆ. ಆಕೆಯ ತಲೆಗೆ ಪೆಟ್ಟು ಬಿದ್ದಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...