Homeಮುಖಪುಟಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

ಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

- Advertisement -
- Advertisement -

ಇರಾನಿನ ಕುಖ್ಯಾತ ‘ಮೊರಾಲಿಟಿ ಪೊಲೀಸರು’ ಟೆಹ್ರಾನ್‌ನಲ್ಲಿ ಬಂಧಿಸಿದ ನಂತರ ಕೋಮಾಕ್ಕೆ ಹೋದ ಯುವತಿ ಶುಕ್ರವಾರ ಕೊನೆಯುಸಿರೆಳೆದಿದ್ದಾಳೆ. ಸರ್ಕಾರಿ ಮಾಧ್ಯಮ ಹಾಗೂ ಮತ್ತು ಯುವತಿಯ ಕುಟುಂಬವು ಸಾವಿನ ಕುರಿತು ಮಾಹಿತಿ ನೀಡಿವೆ. ಯುವತಿಯ ಅನುಮಾನಾಸ್ಪದ ಸಾವಿಗೆ ಕಾರಣರಾದವರಿಗೆ ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

22 ವರ್ಷದ ಮಹ್ಸಾ ಅಮಿನಿ ತನ್ನ ಕುಟುಂಬದೊಂದಿಗೆ ಇರಾನ್ ರಾಜಧಾನಿಗೆ ಭೇಟಿ ನೀಡುತ್ತಿದ್ದರು. ಇಸ್ಲಾಮಿಕ್ ಗಣರಾಜ್ಯದಲ್ಲಿ ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೊಳಿಸುವ ಹೊಣೆಗಾರಿಕೆಯನ್ನು ಹೊತ್ತಿರುವ ಪೊಲೀಸ್ ಘಟಕವು ಅಮಿನಿ ಅವರನ್ನು ಮಂಗಳವಾರ ಬಂಧಿಸಿತು. ಸಾರ್ವಜನಿಕವಾಗಿ ಹೆಡ್‌ಸ್ಕ್ರಾಪ್‌ (ಹಿಜಾಬ್‌) ಧರಿಸಬೇಕೆಂದು ಕಡ್ಡಾಯ ಮಾಡಲಾಗಿದ್ದು, ಯುವತಿ ಧರಿಸಿರಲಿಲ್ಲ ಎಂದು ಆರೋಪಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದುರಾದೃಷ್ಟವಶಾತ್‌ ಯುವತಿ ಕೊನೆಯುಸಿರೆಳೆದಿದ್ದು, ಆಕೆಯ ಮೃತ ದೇಹವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಇರಾನಿನ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಇರಾನ್ ವೈರ್ ವೆಬ್‌ಸೈಟ್ ಮತ್ತು ಶಾರ್ಗ್ ಪತ್ರಿಕೆ ಸೇರಿದಂತೆ ಪರ್ಷಿಯನ್ ಭಾಷೆಯ ಮಾಧ್ಯಮಗಳು ಯುವತಿಯ ಕುಟುಂಬದ ಹೇಳಿಕೆಯನ್ನು ವರದಿ ಮಾಡಿವೆ. ಈ ಹಿಂದೆ ಆರೋಗ್ಯವಾಗಿದ್ದ ಅಮಿನಿ ಅವರು ಬಂಧನದ ಕೆಲವೇ ಗಂಟೆಗಳ ಬಳಿಕ ಕೋಮಾಕ್ಕೆ ಹೋಗಿದ್ದಾರೆ. ನಂತರ ಆಸ್ಪತ್ರೆಗೆ ಸಾಗಿಸಲಾಗಿದೆ. ಈಗ ಅವರು ಸಾವನ್ನಪ್ಪಿದ್ದಾರೆ ಎಂದು ಕುಟುಂಬ ದೂರಿದೆ.

ಆಕೆ ಪೊಲೀಸ್ ಠಾಣೆಗೆ ಹೋಗುವ ಮತ್ತು ಆಸ್ಪತ್ರೆಗೆ ತೆರಳುವ ನಡುವೆ ಏನಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇರಾನ್‌ನಲ್ಲಿ ಆಗುತ್ತಿರುವ ದೌರ್ಜನ್ಯಗಳ ಮೇಲ್ವಿಚಾರಣೆ ಮಾಡುವ ‘1500ಟವ್‌ಸಿರ್’ ಚಾನೆಲ್ ವರದಿ ಮಾಡಿದ್ದು, ಯುವತಿಯ ತಲೆಗೆ ಪೆಟ್ಟು ಬಿದ್ದಿದೆ ಎಂದು ಹೇಳಿದೆ.

ಯುವತಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ಹೊರಗೆ ಜನಸಂದಣಿ ಸೇರಿದ ಪೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಲಾಗಿದೆ. ಜಮಾಯಿಸಿದ ಜನರನ್ನು ಚದುರಿಸಲು ಪೊಲೀಸರು ಪ್ರಯತ್ನಿಸಿದ್ದಾರೆ. ಟೆಹ್ರಾನ್‌ನಲ್ಲಿ ಜನರು ಆಕ್ರೋಶ ಭರಿತರಾಗಿ, ಆಡಳಿತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.

“22 ವರ್ಷದ ಯುವತಿ ಮಹ್ಸಾ ಅಮಿನಿಯ ಅವರು ಪೊಲೀಸ್‌ ಕಸ್ಟಡಿಯಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿರುವ ಆರೋಪಗಳಿವೆ. ಈ ಕುರಿತು ತನಿಖೆಯಾಗಬೇಕು” ಎಂದು ಅಮ್ನೆಸ್ಟಿ ಇಂಟರ್ನ್ಯಾಷನಲ್ ಒತ್ತಾಯಿಸಿದೆ.

“ಬಲವಂತವಾಗಿ ಕಾನೂನುಗಳನ್ನು ಜಾರಿಗೊಳಿಸುವಾಗ ಟೆಹ್ರಾನ್‌ನಲ್ಲಿ ‘ಮೊರಲಿಟಿ ಪೊಲೀಸ್’ ಎಂದು ಕರೆಯಲ್ಪಡುವವರು ಯುವತಿಯನ್ನು ಮೂರು ದಿನಗಳ ಹಿಂದೆ ಬಂಧಿಸಿದ್ದರು. ಈ ಸಾವಿಗೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿರಿ: ಕಲಬುರಗಿ: ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ; ಹೋರಾಟಗಾರರ ಬಂಧನ

2015ರ ಪರಮಾಣು ಒಪ್ಪಂದವನ್ನು ಪುನರುಜ್ಜೀವನಗೊಳಿಸುವ ಪ್ರಯತ್ನಗಳಲ್ಲಿ ತೊಡಗಿರುವ ಇರಾನ್‌ನ ಯುಎಸ್ ರಾಯಭಾರಿ ರಾಬರ್ಟ್ ಮಾಲ್ಲಿ, “ಆಕೆಯ ಸಾವಿಗೆ ಕಾರಣರಾದವರು ಜವಾಬ್ದಾರರಾಗಿರಬೇಕು” ಎಂದು ಹೇಳಿದ್ದಾರೆ.

“ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸಿದ ಕಾರಣಕ್ಕೆ ಮಹಿಳೆಯರ ಮೇಲೆ ಆಗುವ ದೌರ್ಜನ್ಯಗಳನ್ನು ಇರಾನ್ ಕೊನೆಗೊಳಿಸಬೇಕು” ಎಂದು ಒತ್ತಾಯಿಸಲಾಗಿದೆ.

ಇರಾನ್‌ನ ಖ್ಯಾತ ವಕೀಲ ಸಯೀದ್ ದೆಹ್ಘನ್ ಅವರು ಟ್ವೀಟ್ ಮಾಡಿದ್ದು, ಅಮಿನಿಯ ಅವ ಸಾವನ್ನು ‘ಕೊಲೆ’ ಎಂದು ಬಣ್ಣಿಸಿದ್ದಾರೆ. ಆಕೆಯ ತಲೆಗೆ ಪೆಟ್ಟು ಬಿದ್ದಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...