Homeಮುಖಪುಟಇರಾನ್‌: ಯುವತಿಯ ಸಾವು ಹಚ್ಚಿದ ಕಿಡಿ; ಹಿಜಾಬ್ ವಿರುದ್ಧ ಭುಗಿಲೆದ್ದ ಆಕ್ರೋಶ

ಇರಾನ್‌: ಯುವತಿಯ ಸಾವು ಹಚ್ಚಿದ ಕಿಡಿ; ಹಿಜಾಬ್ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

22 ವರ್ಷದ ಯುವತಿ ಮಹ್ಸಾ ಅಮಿನಿ ಸಾವಿನ ನಂತರ ಇರಾನ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇರಾನ್ ಮಹಿಳೆಯರು ಸಾರ್ವಜನಿಕವಾಗಿ ತಮ್ಮ ಹಿಜಾಬ್‌ಗಳನ್ನು ತೆಗೆದು ಸುಟ್ಟು ಹಾಕುತ್ತಿದ್ದಾರೆ.

ಇರಾನಿನ ಕುಖ್ಯಾತ ‘ಮೊರಾಲಿಟಿ ಪೊಲೀಸರು’ ಟೆಹ್ರಾನ್‌ನಲ್ಲಿ ಬಂಧಿಸಿದ ನಂತರ ಕೋಮಾಕ್ಕೆ ಹೋದ ಯುವತಿ ಶುಕ್ರವಾರ ಕೊನೆಯುಸಿರೆಳೆದಿದ್ದಳು. ಸರ್ಕಾರಿ ಮಾಧ್ಯಮ ಹಾಗೂ ಮತ್ತು ಯುವತಿಯ ಕುಟುಂಬವು ಸಾವಿನ ಕುರಿತು ಮಾಹಿತಿ ನೀಡಿದವು. ಯುವತಿಯ ಅನುಮಾನಾಸ್ಪದ ಸಾವಿಗೆ ಕಾರಣರಾದವರಿಗೆ ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

22 ವರ್ಷದ ಮಹ್ಸಾ ಅಮಿನಿ ತನ್ನ ಕುಟುಂಬದೊಂದಿಗೆ ಇರಾನ್ ರಾಜಧಾನಿಗೆ ಭೇಟಿ ನೀಡುತ್ತಿದ್ದರು. ಇಸ್ಲಾಮಿಕ್ ಗಣರಾಜ್ಯದಲ್ಲಿ ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೊಳಿಸುವ ಹೊಣೆಗಾರಿಕೆಯನ್ನು ಹೊತ್ತಿರುವ ಪೊಲೀಸ್ ಘಟಕವು ಅಮಿನಿ ಅವರನ್ನು ಮಂಗಳವಾರ ಬಂಧಿಸಿತು. ಸಾರ್ವಜನಿಕವಾಗಿ ಹೆಡ್‌ಸ್ಕ್ರಾಪ್‌ (ಹಿಜಾಬ್‌) ಧರಿಸಬೇಕೆಂದು ಕಡ್ಡಾಯ ಮಾಡಲಾಗಿದ್ದು, ಯುವತಿ ಧರಿಸಿರಲಿಲ್ಲ ಎಂದು ದಾಳಿ ಮಾಡಲಾಗಿತ್ತು.

‘ಮೊರಲಿಟಿ ಪೊಲೀಸರು’ ಬಂಧಿಸಿದ ಬಳಿಕ ಯುವತಿ ಸಾವಿಗೀಡಾಗಿದ್ದು ಇರಾನ್‌ನಲ್ಲಿ ಹೋರಾಟದ ಕಿಡಿ ಹಚ್ಚಿದೆ.

ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೊಗಳು ವೈರಲ್‌ ಆಗುತ್ತಿವೆ. ಪ್ರತಿಭಟನೆಗಳ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಕೆಲವು ವೀಡಿಯೊಗಳಲ್ಲಿ, ಪ್ರತಿಭಟನಾಕಾರರನ್ನು ಚದುರಿಸಲು ಇರಾನ್ ಪಡೆಗಳು ಅಶ್ರುವಾಯು ಬಳಸುತ್ತಿರುವುದನ್ನು ಕಾಣಬಹುದು.

ಏಳು ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಹಿಜಾಬ್‌ ಧರಿಸಬೇಕೆಂಬ ಕಾನೂನಿನ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ. ಪ್ರತಿಭಟನೆಯ ಭಾಗವಾಗಿ ಸಾಂಕೇತಿಕವಾಗಿ ಕೆಲವು ಮಹಿಳಾ ಪ್ರತಿಭಟನಾಕಾರರು ತಮ್ಮ ಕೂದಲನ್ನು ಕತ್ತರಿಸಿ, ಹಿಜಾಬ್‌ಗಳನ್ನು ಸುಟ್ಟುಹಾಕಿದ್ದಾರೆ.

ಇರಾನಿನ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಮಾಸಿಹ್ ಅಲಿನೆಜಾದ್ ಅವರು ವೀಡಿಯೊಗಳನ್ನು ಟ್ವೀಟ್ ಮಾಡಿದ್ದಾರೆ.

“ಹಿಜಾಬ್ ಕಾರಣಕ್ಕೆ ಪೊಲೀಸರು ಮಹ್ಸಾ ಅಮಿನಿ ಅವರನ್ನು ಕೊಂದದ್ದನ್ನು ವಿರೋಧಿಸಿ ಇರಾನಿಯನ್ ಮಹಿಳೆಯರು ತಮ್ಮ ಕೂದಲನ್ನು ಕತ್ತರಿಸುವ ಮೂಲಕ ಮತ್ತು ಹಿಜಾಬ್ ಅನ್ನು ಸುಡುವ ಮೂಲಕ ಆಕ್ರೋಶವನ್ನು ಹೊರಹಾಕಿದ್ದಾರೆ. ನಾವು 7ನೇ ವಯಸ್ಸಿನ ನಂತರ ತಲೆಗೂದಲನ್ನು ಪ್ರದರ್ಶಿಸಿದರೆ ನಮಗೆ ಶಾಲೆಗೆ ಹೋಗಲು ಅಥವಾ ಉದ್ಯೋಗ ಪಡೆಯಲು ಅವಕಾಶವಿಲ್ಲ. ಈ ಲಿಂಗ ವರ್ಣಭೇದ ನೀತಿಯಿಂದ ನಾವು ಬೇಸತ್ತಿದ್ದೇವೆ” ಎಂದು ಮಹಿಳೆಯರು ಹೇಳಿದ್ದಾರೆ.

ಮಾಸಿಹ್ ಅಲಿನೆಜಾದ್ ಮಾಡಿರುವ ಮತ್ತೊಂದು ಟ್ವೀಟ್‌ನಲ್ಲಿ, “ಇದು ನಿಜವಾದ ಇರಾನ್. ಮಹ್ಸಾ ಅಮಿನಿಯ ಸಮಾಧಿ ಬಳಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಹಿಜಾಬ್ ಪೊಲೀಸರು 22 ವರ್ಷದ ಹುಡುಗಿಯನ್ನು ಕೊಂದರು ಮತ್ತು ಈಗ ಬಂದೂಕುಗಳನ್ನು ಬಳಸಿದ್ದಾರೆ” ಎಂದು ವಿಷಾದಿಸಿದ್ದಾರೆ.

ಇದನ್ನೂ ಓದಿರಿ: ಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

ತಮ್ಮ ಹಿಜಾಬ್‌ಗಳನ್ನು ತೆಗೆದ ಮಹಿಳೆಯರಿಗೆ ಇರಾನಿನ ಮೊರಾಲಿಟಿ ಪೊಲೀಸರಿಂದ ತೊಂದರೆಯಾಗುವ ರೀತಿಯಲ್ಲಿ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ಇಸ್ಲಾಮಿಕ್ ಕಾನೂನಿನ ಅಡಿಯಲ್ಲಿ ಮಹಿಳೆಯರ ಮೇಲೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಇರಾನಿನಲ್ಲಿ ಮಹಿಳೆಯರು ಕಡ್ಡಾಯವಾಗಿ ತಮ್ಮ ಕೂದಲನ್ನು ಮುಚ್ಚಿಕೊಳ್ಳಬೇಕಿದೆ. ಉದ್ದವಾದ, ಸಡಿಲವಾದ ಬಟ್ಟೆಗಳನ್ನು ಧರಿಸುವಂತಿಲ್ಲ. ಉಲ್ಲಂಘನೆ ಮಾಡಿದರೆ ಸಾರ್ವಜನಿಕ ಖಂಡನೆ, ದಂಡ ಅಥವಾ ಬಂಧನವನ್ನು ಎದುರಿಸಬೇಕಾಗುತ್ತದೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ ಹೋರಾಟಗಾರರು ಈ “ಅನೈತಿಕ ನಡವಳಿಕೆ”ಯ ವಿರುದ್ಧ ಸಿಡಿದೆದ್ದಿದ್ದಾರೆ. ಹಿಜಾಬ್ ಹೇರಿಕೆಯ ವಿರುದ್ಧ ಹೋರಾಟಕ್ಕಿಳಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಪಂಚದಲ್ಲಿ ಇರುವ ಎಲ್ಲಾ ಪ್ರಜ್ಞಾವಂತರೂ ಇರಾನಿನ ಮಹಿಳೆಯರ ಪರವಾಗಿ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...