Homeಮುಖಪುಟಇರಾನ್‌: ಯುವತಿಯ ಸಾವು ಹಚ್ಚಿದ ಕಿಡಿ; ಹಿಜಾಬ್ ವಿರುದ್ಧ ಭುಗಿಲೆದ್ದ ಆಕ್ರೋಶ

ಇರಾನ್‌: ಯುವತಿಯ ಸಾವು ಹಚ್ಚಿದ ಕಿಡಿ; ಹಿಜಾಬ್ ವಿರುದ್ಧ ಭುಗಿಲೆದ್ದ ಆಕ್ರೋಶ

- Advertisement -
- Advertisement -

22 ವರ್ಷದ ಯುವತಿ ಮಹ್ಸಾ ಅಮಿನಿ ಸಾವಿನ ನಂತರ ಇರಾನ್‌ನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇರಾನ್ ಮಹಿಳೆಯರು ಸಾರ್ವಜನಿಕವಾಗಿ ತಮ್ಮ ಹಿಜಾಬ್‌ಗಳನ್ನು ತೆಗೆದು ಸುಟ್ಟು ಹಾಕುತ್ತಿದ್ದಾರೆ.

ಇರಾನಿನ ಕುಖ್ಯಾತ ‘ಮೊರಾಲಿಟಿ ಪೊಲೀಸರು’ ಟೆಹ್ರಾನ್‌ನಲ್ಲಿ ಬಂಧಿಸಿದ ನಂತರ ಕೋಮಾಕ್ಕೆ ಹೋದ ಯುವತಿ ಶುಕ್ರವಾರ ಕೊನೆಯುಸಿರೆಳೆದಿದ್ದಳು. ಸರ್ಕಾರಿ ಮಾಧ್ಯಮ ಹಾಗೂ ಮತ್ತು ಯುವತಿಯ ಕುಟುಂಬವು ಸಾವಿನ ಕುರಿತು ಮಾಹಿತಿ ನೀಡಿದವು. ಯುವತಿಯ ಅನುಮಾನಾಸ್ಪದ ಸಾವಿಗೆ ಕಾರಣರಾದವರಿಗೆ ಶಿಕ್ಷೆ ವಿಧಿಸಬೇಕು ಎಂದು ಹೋರಾಟಗಾರರು ಆಗ್ರಹಿಸುತ್ತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

22 ವರ್ಷದ ಮಹ್ಸಾ ಅಮಿನಿ ತನ್ನ ಕುಟುಂಬದೊಂದಿಗೆ ಇರಾನ್ ರಾಜಧಾನಿಗೆ ಭೇಟಿ ನೀಡುತ್ತಿದ್ದರು. ಇಸ್ಲಾಮಿಕ್ ಗಣರಾಜ್ಯದಲ್ಲಿ ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೊಳಿಸುವ ಹೊಣೆಗಾರಿಕೆಯನ್ನು ಹೊತ್ತಿರುವ ಪೊಲೀಸ್ ಘಟಕವು ಅಮಿನಿ ಅವರನ್ನು ಮಂಗಳವಾರ ಬಂಧಿಸಿತು. ಸಾರ್ವಜನಿಕವಾಗಿ ಹೆಡ್‌ಸ್ಕ್ರಾಪ್‌ (ಹಿಜಾಬ್‌) ಧರಿಸಬೇಕೆಂದು ಕಡ್ಡಾಯ ಮಾಡಲಾಗಿದ್ದು, ಯುವತಿ ಧರಿಸಿರಲಿಲ್ಲ ಎಂದು ದಾಳಿ ಮಾಡಲಾಗಿತ್ತು.

‘ಮೊರಲಿಟಿ ಪೊಲೀಸರು’ ಬಂಧಿಸಿದ ಬಳಿಕ ಯುವತಿ ಸಾವಿಗೀಡಾಗಿದ್ದು ಇರಾನ್‌ನಲ್ಲಿ ಹೋರಾಟದ ಕಿಡಿ ಹಚ್ಚಿದೆ.

ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೊಗಳು ವೈರಲ್‌ ಆಗುತ್ತಿವೆ. ಪ್ರತಿಭಟನೆಗಳ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ. ಕೆಲವು ವೀಡಿಯೊಗಳಲ್ಲಿ, ಪ್ರತಿಭಟನಾಕಾರರನ್ನು ಚದುರಿಸಲು ಇರಾನ್ ಪಡೆಗಳು ಅಶ್ರುವಾಯು ಬಳಸುತ್ತಿರುವುದನ್ನು ಕಾಣಬಹುದು.

ಏಳು ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಹಿಜಾಬ್‌ ಧರಿಸಬೇಕೆಂಬ ಕಾನೂನಿನ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ. ಪ್ರತಿಭಟನೆಯ ಭಾಗವಾಗಿ ಸಾಂಕೇತಿಕವಾಗಿ ಕೆಲವು ಮಹಿಳಾ ಪ್ರತಿಭಟನಾಕಾರರು ತಮ್ಮ ಕೂದಲನ್ನು ಕತ್ತರಿಸಿ, ಹಿಜಾಬ್‌ಗಳನ್ನು ಸುಟ್ಟುಹಾಕಿದ್ದಾರೆ.

ಇರಾನಿನ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಮಾಸಿಹ್ ಅಲಿನೆಜಾದ್ ಅವರು ವೀಡಿಯೊಗಳನ್ನು ಟ್ವೀಟ್ ಮಾಡಿದ್ದಾರೆ.

“ಹಿಜಾಬ್ ಕಾರಣಕ್ಕೆ ಪೊಲೀಸರು ಮಹ್ಸಾ ಅಮಿನಿ ಅವರನ್ನು ಕೊಂದದ್ದನ್ನು ವಿರೋಧಿಸಿ ಇರಾನಿಯನ್ ಮಹಿಳೆಯರು ತಮ್ಮ ಕೂದಲನ್ನು ಕತ್ತರಿಸುವ ಮೂಲಕ ಮತ್ತು ಹಿಜಾಬ್ ಅನ್ನು ಸುಡುವ ಮೂಲಕ ಆಕ್ರೋಶವನ್ನು ಹೊರಹಾಕಿದ್ದಾರೆ. ನಾವು 7ನೇ ವಯಸ್ಸಿನ ನಂತರ ತಲೆಗೂದಲನ್ನು ಪ್ರದರ್ಶಿಸಿದರೆ ನಮಗೆ ಶಾಲೆಗೆ ಹೋಗಲು ಅಥವಾ ಉದ್ಯೋಗ ಪಡೆಯಲು ಅವಕಾಶವಿಲ್ಲ. ಈ ಲಿಂಗ ವರ್ಣಭೇದ ನೀತಿಯಿಂದ ನಾವು ಬೇಸತ್ತಿದ್ದೇವೆ” ಎಂದು ಮಹಿಳೆಯರು ಹೇಳಿದ್ದಾರೆ.

ಮಾಸಿಹ್ ಅಲಿನೆಜಾದ್ ಮಾಡಿರುವ ಮತ್ತೊಂದು ಟ್ವೀಟ್‌ನಲ್ಲಿ, “ಇದು ನಿಜವಾದ ಇರಾನ್. ಮಹ್ಸಾ ಅಮಿನಿಯ ಸಮಾಧಿ ಬಳಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಹಿಜಾಬ್ ಪೊಲೀಸರು 22 ವರ್ಷದ ಹುಡುಗಿಯನ್ನು ಕೊಂದರು ಮತ್ತು ಈಗ ಬಂದೂಕುಗಳನ್ನು ಬಳಸಿದ್ದಾರೆ” ಎಂದು ವಿಷಾದಿಸಿದ್ದಾರೆ.

ಇದನ್ನೂ ಓದಿರಿ: ಇರಾನ್‌: ಹಿಜಾಬ್ ಧರಿಸಲಿಲ್ಲವೆಂದು ಬಂಧನಕ್ಕೊಳಗಾದ ಯುವತಿ ಅನುಮಾನಾಸ್ಪದವಾಗಿ ನಿಧನ; ಜನಾಕ್ರೋಶ

ತಮ್ಮ ಹಿಜಾಬ್‌ಗಳನ್ನು ತೆಗೆದ ಮಹಿಳೆಯರಿಗೆ ಇರಾನಿನ ಮೊರಾಲಿಟಿ ಪೊಲೀಸರಿಂದ ತೊಂದರೆಯಾಗುವ ರೀತಿಯಲ್ಲಿ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳು ಬಂದಿವೆ.

ಇಸ್ಲಾಮಿಕ್ ಕಾನೂನಿನ ಅಡಿಯಲ್ಲಿ ಮಹಿಳೆಯರ ಮೇಲೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಇರಾನಿನಲ್ಲಿ ಮಹಿಳೆಯರು ಕಡ್ಡಾಯವಾಗಿ ತಮ್ಮ ಕೂದಲನ್ನು ಮುಚ್ಚಿಕೊಳ್ಳಬೇಕಿದೆ. ಉದ್ದವಾದ, ಸಡಿಲವಾದ ಬಟ್ಟೆಗಳನ್ನು ಧರಿಸುವಂತಿಲ್ಲ. ಉಲ್ಲಂಘನೆ ಮಾಡಿದರೆ ಸಾರ್ವಜನಿಕ ಖಂಡನೆ, ದಂಡ ಅಥವಾ ಬಂಧನವನ್ನು ಎದುರಿಸಬೇಕಾಗುತ್ತದೆ. ಆದರೆ ಇತ್ತೀಚಿನ ತಿಂಗಳುಗಳಲ್ಲಿ ಹೋರಾಟಗಾರರು ಈ “ಅನೈತಿಕ ನಡವಳಿಕೆ”ಯ ವಿರುದ್ಧ ಸಿಡಿದೆದ್ದಿದ್ದಾರೆ. ಹಿಜಾಬ್ ಹೇರಿಕೆಯ ವಿರುದ್ಧ ಹೋರಾಟಕ್ಕಿಳಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಪಂಚದಲ್ಲಿ ಇರುವ ಎಲ್ಲಾ ಪ್ರಜ್ಞಾವಂತರೂ ಇರಾನಿನ ಮಹಿಳೆಯರ ಪರವಾಗಿ ದನಿ ಎತ್ತಬೇಕು.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...