Homeಅಂತರಾಷ್ಟ್ರೀಯಇರಾನ್ ನಿಂದ ಭಾರತ ತೈಲ ತರಿಸಿಕೊಂಡರೆ ಅಮೇರಿಕಾಗೆ ಏನು ಕಷ್ಟ?

ಇರಾನ್ ನಿಂದ ಭಾರತ ತೈಲ ತರಿಸಿಕೊಂಡರೆ ಅಮೇರಿಕಾಗೆ ಏನು ಕಷ್ಟ?

- Advertisement -
- Advertisement -

 

| ಭರತ್ ಹೆಬ್ಬಾಳ |

ಕಳೆದ ಹಲವಾರು ವರ್ಷಗಳಿಂದ ಅಮೆರಿಕ ಮತ್ತು ಇರಾನ್‍ನ ಸಂಬಂಧಗಳು ಹದಗೆಡುತ್ತಲೇ ಇವೆ. ಇದನ್ನೇ ಮುಂದುವರೆಸಿ, ಏಪ್ರಿಲ್ 22ರಂದು ಅಮೆರಿಕ ದೇಶವು ಇರಾನಿನ ಮೇಲೆ ಸಂಪೂರ್ಣ ಆರ್ಥಿಕ ಸಮರವನ್ನೇ ಘೋಷಿಸಿದೆ. ‘ಇರಾನಿನಿಂದ ಇತರ ದೇಶಗಳಿಗೆ ರಫ್ತು ಆಗುವ ತೈಲದ ಪ್ರಮಾಣವನ್ನು ಸೊನ್ನೆಗೆ ಇಳಿಸುವುದೇ ಈ ನಿರ್ಧಾರದ ಉದ್ದೇಶ. ಅದರಿಂದ ಆ ದೇಶದ ಆದಾಯದ ಪ್ರಮುಖ ಮೂಲವನ್ನು ಇಲ್ಲವಾಗಿಸುವುದು’. ಈ ಹೇಳಿಕೆ ಬಂದಿದ್ದು ಅಮೇರಿಕದ ವೈಟ್‍ಹೌಸ್‍ನಿಂದ. ತೈಲವೇ ಇರಾನಿನ ಪ್ರಮುಖ ರಫ್ತು ಆಗಿದ್ದು, ಅಮೇರಿಕದಲ್ಲಿ ಟ್ರಂಪ್ ಆಡಳಿತ ಬಂದನಂತರ ಇರಾನ್ ದೇಶದ ಕತ್ತುಹಿಸುಕಿ ತನ್ನ ತಾಳಕ್ಕೆ ಕುಣಿಯುವಂತೆ ಎಲ್ಲಾ ರೀತಿಯ ಒತ್ತಡಗಳನ್ನು ಹಾಕುತ್ತಿದೆ. ಪ್ರಸ್ತುತ ಸಮಯದಲ್ಲಿ ಇರಾನ್ ಪ್ರತಿನಿತ್ಯ 10 ಲಕ್ಷ ಬ್ಯಾರೆಲ್ ತೈಲವನ್ನು ರಫ್ತು ಮಾಡುತ್ತಿದೆ. 2018ರ ನವೆಂಬರ್ 5ರಂದು ಮೊದಲ ಬಾರಿ ನಿರ್ಬಂಧನೆಗಳನ್ನು ಹೇರಲಾಗಿತ್ತು. ಆಗ ಅಮೆರಿಕ 8 ದೇಶಗಳಿಗೆ ತೈಲದ ಆಮದನ್ನು ನಿಲ್ಲಿಸಲು 6 ತಿಂಗಳ ಸಮಯಾವಕಾಶವನ್ನು ನೀಡಲಾಗಿತ್ತು. ಒಂದೇ ಬಾರಿ ಸಂಪೂರ್ಣ ನಿರ್ಬಂಧ ಹೇರಿದರೆ ಮಾರುಕಟ್ಟೆಗಳು ಅತಂತ್ರಗೊಳ್ಳುವವು ಎನ್ನುವ ಆತಂಕದ ಕಾರಣದಿಂದ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿತ್ತು. ನಿರ್ಬಂಧನೆಗಳಿಗಿರುವ ಈ ವಿನಾಯಿತಿಗಳು ಏಪ್ರಿಲ್ 30 ರಂದು ಕೊನೆಗೊಳ್ಳುತ್ತವೆ, ಮೇ 1ರಿಂದ ಎಲ್ಲ ಎಂಟೂ ದೇಶಗಳು ನಿರ್ಬಂಧನೆಗಳಿಗೆ ಬದ್ಧವಾಗಬೇಕಿದೆ.

ಚೈನಾ, ಭಾರತ, ಜಪಾನ್, ದಕ್ಷಿಣ ಕೋರಿಯಾ, ತೈವಾನ್, ಟರ್ಕಿ, ಇಟಲಿ ಮತ್ತು ಗ್ರೀಸ್ ಈ ನಿರ್ಬಂಧನೆಯಿಂದ 6 ತಿಂಗಳು ವಿನಾಯಿತಿ ಪಡೆದ ದೇಶಗಳು. ಜಪಾನ್, ದಕ್ಷಿಣ ಕೋರಿಯಾ ಮತ್ತು ತೈವಾನ್ ದೇಶಗಳು ಎರಡನೇ ಮಹಾಯುದ್ಧದ ನಂತರ ಅಮೇರಿಕವೇ ಈ ದೇಶಗಳ ರಕ್ಷಕ ದೇಶವಾಗಿರುವುದರಿಂದ ದಿಗ್ಬಂಧನೆಗಳಿಗೆ ಒಪ್ಪಿಕೊಳ್ಳುತ್ತವೆ. ಇಟಲಿ ಮತ್ತು ಗ್ರೀಸ್ ದೇಶಗಳು ಇರಾನ್‍ನಿಂದ ತುಂಬಾ ಕಡಿಮೆ ತೈಲ ಆಮದು ಮಾಡಿಕೊಳ್ಳುವುದರಿಂದ ಹೆಚ್ಚಿನ ವ್ಯತ್ಯಾಸ ಆಗುವುದಿಲ್ಲ. ಚೈನಾ ದೇಶ ಈ ದಿಗ್ಬಂಧನೆಗಳಿಗೆ ಬದ್ಧವಾಗುವುದೋ ಇಲ್ಲವೋ ಎನ್ನುವುದು ಸದ್ಯಕ್ಕೆ ನಡೆಯುತ್ತಿರುವ ಟ್ರೇಡ್ ವಾರ್ ಮೇಲೆ ಅವಲಂಬಿತವಾಗಿದೆ. ಭಾರತದ ಪೆಟ್ರೋಲಿಯಮ್ ಸಚಿವರು ಅಮೆರಿಕ ವಿಧಿಸಿದ ದಿಗ್ಬಂಧನೆಗಳಿಗೆ ಬದ್ಧರಿರುವುದಾಗಿ ಹೇಳಿಕೆ ನೀಡಿದ್ದರಾದರೂ ಅಂತಿಮ ನಿರ್ಣಯ ಹೊಸ ಸರಕಾರ ಬಂದ ನಂತರವೇ. ಇರಾನ್‍ನಿಂದ ದೊಡ್ಡ ಪ್ರಮಾಣದಲ್ಲಿ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವ ಒಂದು ದೇಶ ಟರ್ಕಿ. ಈಗ ಬೇರೆ ಮೂಲಗಳಿಂದ ಇಷ್ಟು ಕಡಿಮೆ ಸಮಯದಲ್ಲಿ ತೈಲ ಮತ್ತು ಅನಿಲವನ್ನು ಆಮದು ಮಾಡಿಕೊಳ್ಳಲು ಸಾಧ್ಯವಾಗದೇ ಇರಬಹುದಾಗಿ, ಅದರ ಪರಿಣಾಮಗಳನ್ನು ಎದುರಿಸಬೇಕಾಗುವುದು.

ಜಾಯಿಂಟ್ ಕಾಂಪ್ರೆಹೆನ್ಸಿವ್ ಪ್ಲಾನ್ ಆಫ್ ಆಕ್ಷನ್ (ಜೆಸಿಪಿಓಏ) ಎಂದು ಕರೆಯಲಾಗುವ ಬಹುಪಕ್ಷೀಯ ನ್ಯೂಕ್ಲಿಯರ್ ಒಪ್ಪಂದದಿಂದ ಮೇ 2018ರಲ್ಲಿ ಅಮೇರಿಕವು ಏಕಪಕ್ಷೀಯವಾಗಿ ಹಿಂತೆಗೆದು ಕೊಂಡಿತು, ಅಂದಿನಿಂದ ಈ ಬಿಕ್ಕಟ್ಟು ಉಲ್ಬಣಿಸುತ್ತಲೇ ಇದೆ. ಬರಾಕ್ ಒಬಾಮಾ ಆಡಳಿತದ ಕಾಲದಲ್ಲಿ(2015) ಇರಾನ್ ಮತ್ತು ಆರು ವಿಶ್ವಶಕ್ತಿಗಳ ಮಧ್ಯೆ ಜೆಸಿಪಿಓಏ ರಚಿಸಲಾಗಿತ್ತು. ಆ ಒಪ್ಪಂದದಲ್ಲಿ ಹಿಂಪಡೆಯಲಾದ ಏಕಪಕ್ಷೀಯ ದಿಗ್ಬಂಧನೆಗಳನ್ನು ಟ್ರಂಪ್ ಆಡಳಿತ ಮತ್ತೆ ವಿಧಿಸಿದೆ. ಇತ್ತೀಚಿಗೆ ಹಲವಾರು ಷರತ್ತುಗಳ ಅಡಿಯಲ್ಲಿ ಈ ಒಪ್ಪಂದವನ್ನು ಇನ್ನೊಂದು ಸುತ್ತು ಚರ್ಚಿಸುವ ಪ್ರಸ್ತಾಪ ಇಟ್ಟಿದೆ. ಸಿರಿಯಾದಲ್ಲಿ ಆಳ್ವಿಕೆ ಬದಲಾವಣೆಗಾಗಿ ಅಮೆರಿಕ ಮಾಡಿದ ಯತ್ನಗಳು, ವೆನೆಜುವೆಲಾದಲ್ಲೂ ಮಾಡಿದ ಪ್ರಯತ್ನ ಹಾಗೂ ಸದ್ಯಕ್ಕೆ ನಡೆಯುತ್ತಿರುವ ಯುದ್ಧಗಳ ಮಧ್ಯೆ ಇರಾನ್ ಅನ್ನು ಒಂದು ದುಷ್ಟ ಭಯೋತ್ಪಾದಕ ದೇಶವನ್ನಾಗಿ ಚಿತ್ರಿಸಲು ಅಮೆರಿಕ ಪ್ರಯತ್ನಿಸುತ್ತಿದೆ. ಇರಾನಿನ ಆಳ್ವಿಕೆಯು ನ್ಯೂಕ್ಲಿಯರ್ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುತ್ತಿದೆಯೆಂದೂ ಹಾಗೂ ಮಧ್ಯ ಪ್ರಾಚ್ಯ ದೇಶಗಳಲ್ಲಿ ಅಮೆರಿಕ ವಿರೋಧಿ ಭಾವನೆಗಳನ್ನು ಹರಡಿಸುವ ಪ್ರಯತ್ನ ಇರಾನ್ ಮಾಡುತ್ತಿದೆ ಎಂದು ಅಮೆರಿಕ ಚಿತ್ರಿಸುತ್ತಿದೆ. 2002ರಲ್ಲಿ ಪ್ರಾರಂಭಿಸಿದ ಇರಾಕ್‍ನ ಯುದ್ಧವನ್ನೂ ಇದೇ ರೀತಿಯಲ್ಲಿ ಪ್ರಾರಂಭಿಸಲಾಗಿತ್ತು. ಆಗಲೂ ಈಗಿರುವ ರಕ್ಷಣಾ ಸಲಹಾಕಾರರಾದ ಜಾನ್ ಬೋಲ್ಟನ್ ಅವರೇ ಸಲಹಾಕಾರರಾಗಿದ್ದರು.

ಈಗ ಅಮೇರಿಕವು ಮಾತುಕತೆಗಳಿಗೆ ಇಟ್ಟಿರುವ ಷರತ್ತುಗಳನ್ನು ‘ಸುಳ್ಳುಗಳ ಸರಮಾಲೆ, ಇರಾನ್ ದೇಶವನ್ನು ತನ್ನ ಮಂಡಿಯೂರಿಸುವ ಉದ್ದೇಶದಿಂದ ವಿಧಿಸಲಾಗಿದ್ದು’ ಎಂದು ಇರಾನ್‍ನ ಅಧ್ಯಕ್ಷ ಹಸನ್ ರೋಹಾನಿ ಹೇಳಿದರು. ‘ಈ ಮುಂಚೆ ಮಾಡಿದ ಒಪ್ಪಂದಗಳಿಂದ ಅಮೆರಿಕ ಹಿಂದಕ್ಕೆ ಹೋಗಿರುವಾಗ ಇನ್ನೊಂದು ಹೊಸ ಒಪ್ಪಂದಕ್ಕೆ ಇರಾನ್ ದೇಶ ಏಕೆ ಸೇರಬೇಕು’ ಎಂದು ಇರಾನ್‍ನ ವಿದೇಶಾಂಗ ಸಚಿವ ಕೇಳಿದರು. ಅವರು ಸ್ಪಷ್ಟವಾಗಿ ಹೇಳಿದ ಇನ್ನೊಂದು ವಿಷಯವೇನೆಂದರೆ, ‘ಟ್ರಂಪ್ ಯುದ್ಧವನ್ನು ಬಯಸುವುದಿಲ್ಲ ಎನ್ನುವ ನಂಬಿಕೆ ಇದೆ ಆದರೆ ಅವರ ಸಲಹಾಕಾರರೆ (ಬಿ-ಟೀಮ್) ಈ ಬಿಕ್ಕಟ್ಟಿಗೆ ಕಾರಣ’. ಇಲ್ಲಿ ಬಿ ಟೀಮ್ ಎಂದರೆ, ಇಸ್ರೇಲಿನ ಬಿಬಿ, ಸೌದಿಯ ಬಿನ್ ಸಲ್ಮಾನ್, ಯು.ಏ.ಈ.ಯ ಬಿನ್ ಖಾಲೆದ್ ಹಾಗೂ ಅಮೇರಿಕದ ಜಾನ್ ಬೋಲ್ಟನ್. ಇಂತಹ ಒತ್ತಡದ ತಂತ್ರಗಾರಿಕೆಯಿಂದ ಇರಾನ್ ದೇಶವನ್ನು ಮಂಡಿಯೂರುವ ಪರಿಸ್ಥಿತಿಗೆ ತರಲಾಗದು ಎಂತಲೂ ವಿದೇಶಾಂಗ ಸಚಿವ ಹೇಳಿದ್ದಾರೆ.

‘ಸ್ಟ್ರೇಟ್ ಆಫ್ ಹೊರ್ಮುಝ್’ ಎಂದು ಕರೆಯಲಾಗುವ ಪರ್ಷಿಯನ್ ಕೊಲ್ಲಿಯಿಂದಲೇ ವಿಶ್ವದ 35% ತೈಲ ಹಾದುಹೋಗಬೇಕಿದೆ. ಆ ಕೊಲ್ಲಿ ಇರಾನ್‍ನ ಜಲಭಾಗವನ್ನು ಹೊಂದಿದೆ. ಇರಾನಿನ ರೆವಲೂಷನರಿ ಗಾಡ್ರ್ಸ್ ಆ ಕೊಲ್ಲಿಯ ರಕ್ಷಣೆ ಮಾಡುತ್ತಾರೆ. ಏಪ್ರಿಲ್ 8 ರಂದು ಟ್ರಂಪ್ ಆಡಳಿತವು ಇರಾನಿಯನ್ ರೆವಲೂಷನರಿ ಗಾಡ್ರ್ಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿತು. ಅಮೆರಿಕವು ಈ ರೀತಿ ಬೇರೊಂದು ದೇಶದ ಸೈನ್ಯವನ್ನು ‘ಭಯೋತ್ಪಾದಕ ಗುಂಪು’ ಎಂದು ಅಧೀಕೃತವಾಗಿ ಘೋಷಿಸಿದ್ದು ಇದೇ ಮೊದಲು. ಇರಾನ್ ಅದಕ್ಕೆ ಪ್ರತಿಕ್ರಿಯೆಯಾಗಿ, ಅಮೆರಿಕ ದೇಶವನ್ನು ‘ಭಯೋತ್ಪಾದನೆಯ ಪ್ರಾಯೋಜಕ ದೇಶ’ ಎಂದು ಕರೆದು, ಆ ಭಾಗದಲ್ಲಿರುವ ಅಮೆರಿಕದ ಸೈನ್ಯಗಳನ್ನು ‘ಭಯೋತ್ಪಾದಕ ಗುಂಪು’ಗಳು ಎಂದು ಕರೆದಿದೆ.

ಐತಿಹಾಸಿಕವಾಗಿ, ಭಾರತ ಮತ್ತು ಇರಾನ್ ಒಳ್ಳೆಯ ಬಾಂಧವ್ಯಗಳನ್ನು ಹೊಂದಿವೆ. ಮನಮೋಹನ್ ಸಿಂಗ್ ಮತ್ತು ನರೇಂದ್ರ ಮೋದಿಯ ಆಳ್ವಿಕೆಯ ಕಾಲದಲ್ಲಿ ಇರಾನ್ ವಿರುದ್ಧ ದಿಗ್ಬಂಧನೆಗಳನ್ನು ಹೇರಿದ್ದಾಗ ಭಾರತವು ಇರಾನ್ ಜೊತೆಗೆ ನಿಂತು, ಆ ದೇಶಕ್ಕೆ ಸಹಾಯ ನೀಡಿದೆ. ಅಮೆರಿಕದ ಒತ್ತಡದ ಪರಿಸ್ಥಿತಿಯಲ್ಲಿ ಮುಂದೆ ಈ ಪ್ರಾದೇಶಿಕ ಸಂಬಂಧವನ್ನು ಗಟ್ಟಿಗೊಳಿಸುವುದೋ ಅಥವಾ ಅಮೆರಿಕಾದ ಒತ್ತಡಕ್ಕೆ ಮಣಿದು ಎರಡು ದೇಶಗಳ ಐತಿಹಾಸಿಕ ಸ್ನೇಹಕ್ಕೆ ದ್ರೋಹಬಗೆಯುವುದೇ ಎನ್ನುವುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...