Homeಅಂತರಾಷ್ಟ್ರೀಯಇರಾನ್ ನಿಂದ ಭಾರತ ತೈಲ ತರಿಸಿಕೊಂಡರೆ ಅಮೇರಿಕಾಗೆ ಏನು ಕಷ್ಟ?

ಇರಾನ್ ನಿಂದ ಭಾರತ ತೈಲ ತರಿಸಿಕೊಂಡರೆ ಅಮೇರಿಕಾಗೆ ಏನು ಕಷ್ಟ?

- Advertisement -
- Advertisement -

 

| ಭರತ್ ಹೆಬ್ಬಾಳ |

ಕಳೆದ ಹಲವಾರು ವರ್ಷಗಳಿಂದ ಅಮೆರಿಕ ಮತ್ತು ಇರಾನ್‍ನ ಸಂಬಂಧಗಳು ಹದಗೆಡುತ್ತಲೇ ಇವೆ. ಇದನ್ನೇ ಮುಂದುವರೆಸಿ, ಏಪ್ರಿಲ್ 22ರಂದು ಅಮೆರಿಕ ದೇಶವು ಇರಾನಿನ ಮೇಲೆ ಸಂಪೂರ್ಣ ಆರ್ಥಿಕ ಸಮರವನ್ನೇ ಘೋಷಿಸಿದೆ. ‘ಇರಾನಿನಿಂದ ಇತರ ದೇಶಗಳಿಗೆ ರಫ್ತು ಆಗುವ ತೈಲದ ಪ್ರಮಾಣವನ್ನು ಸೊನ್ನೆಗೆ ಇಳಿಸುವುದೇ ಈ ನಿರ್ಧಾರದ ಉದ್ದೇಶ. ಅದರಿಂದ ಆ ದೇಶದ ಆದಾಯದ ಪ್ರಮುಖ ಮೂಲವನ್ನು ಇಲ್ಲವಾಗಿಸುವುದು’. ಈ ಹೇಳಿಕೆ ಬಂದಿದ್ದು ಅಮೇರಿಕದ ವೈಟ್‍ಹೌಸ್‍ನಿಂದ. ತೈಲವೇ ಇರಾನಿನ ಪ್ರಮುಖ ರಫ್ತು ಆಗಿದ್ದು, ಅಮೇರಿಕದಲ್ಲಿ ಟ್ರಂಪ್ ಆಡಳಿತ ಬಂದನಂತರ ಇರಾನ್ ದೇಶದ ಕತ್ತುಹಿಸುಕಿ ತನ್ನ ತಾಳಕ್ಕೆ ಕುಣಿಯುವಂತೆ ಎಲ್ಲಾ ರೀತಿಯ ಒತ್ತಡಗಳನ್ನು ಹಾಕುತ್ತಿದೆ. ಪ್ರಸ್ತುತ ಸಮಯದಲ್ಲಿ ಇರಾನ್ ಪ್ರತಿನಿತ್ಯ 10 ಲಕ್ಷ ಬ್ಯಾರೆಲ್ ತೈಲವನ್ನು ರಫ್ತು ಮಾಡುತ್ತಿದೆ. 2018ರ ನವೆಂಬರ್ 5ರಂದು ಮೊದಲ ಬಾರಿ ನಿರ್ಬಂಧನೆಗಳನ್ನು ಹೇರಲಾಗಿತ್ತು. ಆಗ ಅಮೆರಿಕ 8 ದೇಶಗಳಿಗೆ ತೈಲದ ಆಮದನ್ನು ನಿಲ್ಲಿಸಲು 6 ತಿಂಗಳ ಸಮಯಾವಕಾಶವನ್ನು ನೀಡಲಾಗಿತ್ತು. ಒಂದೇ ಬಾರಿ ಸಂಪೂರ್ಣ ನಿರ್ಬಂಧ ಹೇರಿದರೆ ಮಾರುಕಟ್ಟೆಗಳು ಅತಂತ್ರಗೊಳ್ಳುವವು ಎನ್ನುವ ಆತಂಕದ ಕಾರಣದಿಂದ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿತ್ತು. ನಿರ್ಬಂಧನೆಗಳಿಗಿರುವ ಈ ವಿನಾಯಿತಿಗಳು ಏಪ್ರಿಲ್ 30 ರಂದು ಕೊನೆಗೊಳ್ಳುತ್ತವೆ, ಮೇ 1ರಿಂದ ಎಲ್ಲ ಎಂಟೂ ದೇಶಗಳು ನಿರ್ಬಂಧನೆಗಳಿಗೆ ಬದ್ಧವಾಗಬೇಕಿದೆ.

ಚೈನಾ, ಭಾರತ, ಜಪಾನ್, ದಕ್ಷಿಣ ಕೋರಿಯಾ, ತೈವಾನ್, ಟರ್ಕಿ, ಇಟಲಿ ಮತ್ತು ಗ್ರೀಸ್ ಈ ನಿರ್ಬಂಧನೆಯಿಂದ 6 ತಿಂಗಳು ವಿನಾಯಿತಿ ಪಡೆದ ದೇಶಗಳು. ಜಪಾನ್, ದಕ್ಷಿಣ ಕೋರಿಯಾ ಮತ್ತು ತೈವಾನ್ ದೇಶಗಳು ಎರಡನೇ ಮಹಾಯುದ್ಧದ ನಂತರ ಅಮೇರಿಕವೇ ಈ ದೇಶಗಳ ರಕ್ಷಕ ದೇಶವಾಗಿರುವುದರಿಂದ ದಿಗ್ಬಂಧನೆಗಳಿಗೆ ಒಪ್ಪಿಕೊಳ್ಳುತ್ತವೆ. ಇಟಲಿ ಮತ್ತು ಗ್ರೀಸ್ ದೇಶಗಳು ಇರಾನ್‍ನಿಂದ ತುಂಬಾ ಕಡಿಮೆ ತೈಲ ಆಮದು ಮಾಡಿಕೊಳ್ಳುವುದರಿಂದ ಹೆಚ್ಚಿನ ವ್ಯತ್ಯಾಸ ಆಗುವುದಿಲ್ಲ. ಚೈನಾ ದೇಶ ಈ ದಿಗ್ಬಂಧನೆಗಳಿಗೆ ಬದ್ಧವಾಗುವುದೋ ಇಲ್ಲವೋ ಎನ್ನುವುದು ಸದ್ಯಕ್ಕೆ ನಡೆಯುತ್ತಿರುವ ಟ್ರೇಡ್ ವಾರ್ ಮೇಲೆ ಅವಲಂಬಿತವಾಗಿದೆ. ಭಾರತದ ಪೆಟ್ರೋಲಿಯಮ್ ಸಚಿವರು ಅಮೆರಿಕ ವಿಧಿಸಿದ ದಿಗ್ಬಂಧನೆಗಳಿಗೆ ಬದ್ಧರಿರುವುದಾಗಿ ಹೇಳಿಕೆ ನೀಡಿದ್ದರಾದರೂ ಅಂತಿಮ ನಿರ್ಣಯ ಹೊಸ ಸರಕಾರ ಬಂದ ನಂತರವೇ. ಇರಾನ್‍ನಿಂದ ದೊಡ್ಡ ಪ್ರಮಾಣದಲ್ಲಿ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವ ಒಂದು ದೇಶ ಟರ್ಕಿ. ಈಗ ಬೇರೆ ಮೂಲಗಳಿಂದ ಇಷ್ಟು ಕಡಿಮೆ ಸಮಯದಲ್ಲಿ ತೈಲ ಮತ್ತು ಅನಿಲವನ್ನು ಆಮದು ಮಾಡಿಕೊಳ್ಳಲು ಸಾಧ್ಯವಾಗದೇ ಇರಬಹುದಾಗಿ, ಅದರ ಪರಿಣಾಮಗಳನ್ನು ಎದುರಿಸಬೇಕಾಗುವುದು.

ಜಾಯಿಂಟ್ ಕಾಂಪ್ರೆಹೆನ್ಸಿವ್ ಪ್ಲಾನ್ ಆಫ್ ಆಕ್ಷನ್ (ಜೆಸಿಪಿಓಏ) ಎಂದು ಕರೆಯಲಾಗುವ ಬಹುಪಕ್ಷೀಯ ನ್ಯೂಕ್ಲಿಯರ್ ಒಪ್ಪಂದದಿಂದ ಮೇ 2018ರಲ್ಲಿ ಅಮೇರಿಕವು ಏಕಪಕ್ಷೀಯವಾಗಿ ಹಿಂತೆಗೆದು ಕೊಂಡಿತು, ಅಂದಿನಿಂದ ಈ ಬಿಕ್ಕಟ್ಟು ಉಲ್ಬಣಿಸುತ್ತಲೇ ಇದೆ. ಬರಾಕ್ ಒಬಾಮಾ ಆಡಳಿತದ ಕಾಲದಲ್ಲಿ(2015) ಇರಾನ್ ಮತ್ತು ಆರು ವಿಶ್ವಶಕ್ತಿಗಳ ಮಧ್ಯೆ ಜೆಸಿಪಿಓಏ ರಚಿಸಲಾಗಿತ್ತು. ಆ ಒಪ್ಪಂದದಲ್ಲಿ ಹಿಂಪಡೆಯಲಾದ ಏಕಪಕ್ಷೀಯ ದಿಗ್ಬಂಧನೆಗಳನ್ನು ಟ್ರಂಪ್ ಆಡಳಿತ ಮತ್ತೆ ವಿಧಿಸಿದೆ. ಇತ್ತೀಚಿಗೆ ಹಲವಾರು ಷರತ್ತುಗಳ ಅಡಿಯಲ್ಲಿ ಈ ಒಪ್ಪಂದವನ್ನು ಇನ್ನೊಂದು ಸುತ್ತು ಚರ್ಚಿಸುವ ಪ್ರಸ್ತಾಪ ಇಟ್ಟಿದೆ. ಸಿರಿಯಾದಲ್ಲಿ ಆಳ್ವಿಕೆ ಬದಲಾವಣೆಗಾಗಿ ಅಮೆರಿಕ ಮಾಡಿದ ಯತ್ನಗಳು, ವೆನೆಜುವೆಲಾದಲ್ಲೂ ಮಾಡಿದ ಪ್ರಯತ್ನ ಹಾಗೂ ಸದ್ಯಕ್ಕೆ ನಡೆಯುತ್ತಿರುವ ಯುದ್ಧಗಳ ಮಧ್ಯೆ ಇರಾನ್ ಅನ್ನು ಒಂದು ದುಷ್ಟ ಭಯೋತ್ಪಾದಕ ದೇಶವನ್ನಾಗಿ ಚಿತ್ರಿಸಲು ಅಮೆರಿಕ ಪ್ರಯತ್ನಿಸುತ್ತಿದೆ. ಇರಾನಿನ ಆಳ್ವಿಕೆಯು ನ್ಯೂಕ್ಲಿಯರ್ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುತ್ತಿದೆಯೆಂದೂ ಹಾಗೂ ಮಧ್ಯ ಪ್ರಾಚ್ಯ ದೇಶಗಳಲ್ಲಿ ಅಮೆರಿಕ ವಿರೋಧಿ ಭಾವನೆಗಳನ್ನು ಹರಡಿಸುವ ಪ್ರಯತ್ನ ಇರಾನ್ ಮಾಡುತ್ತಿದೆ ಎಂದು ಅಮೆರಿಕ ಚಿತ್ರಿಸುತ್ತಿದೆ. 2002ರಲ್ಲಿ ಪ್ರಾರಂಭಿಸಿದ ಇರಾಕ್‍ನ ಯುದ್ಧವನ್ನೂ ಇದೇ ರೀತಿಯಲ್ಲಿ ಪ್ರಾರಂಭಿಸಲಾಗಿತ್ತು. ಆಗಲೂ ಈಗಿರುವ ರಕ್ಷಣಾ ಸಲಹಾಕಾರರಾದ ಜಾನ್ ಬೋಲ್ಟನ್ ಅವರೇ ಸಲಹಾಕಾರರಾಗಿದ್ದರು.

ಈಗ ಅಮೇರಿಕವು ಮಾತುಕತೆಗಳಿಗೆ ಇಟ್ಟಿರುವ ಷರತ್ತುಗಳನ್ನು ‘ಸುಳ್ಳುಗಳ ಸರಮಾಲೆ, ಇರಾನ್ ದೇಶವನ್ನು ತನ್ನ ಮಂಡಿಯೂರಿಸುವ ಉದ್ದೇಶದಿಂದ ವಿಧಿಸಲಾಗಿದ್ದು’ ಎಂದು ಇರಾನ್‍ನ ಅಧ್ಯಕ್ಷ ಹಸನ್ ರೋಹಾನಿ ಹೇಳಿದರು. ‘ಈ ಮುಂಚೆ ಮಾಡಿದ ಒಪ್ಪಂದಗಳಿಂದ ಅಮೆರಿಕ ಹಿಂದಕ್ಕೆ ಹೋಗಿರುವಾಗ ಇನ್ನೊಂದು ಹೊಸ ಒಪ್ಪಂದಕ್ಕೆ ಇರಾನ್ ದೇಶ ಏಕೆ ಸೇರಬೇಕು’ ಎಂದು ಇರಾನ್‍ನ ವಿದೇಶಾಂಗ ಸಚಿವ ಕೇಳಿದರು. ಅವರು ಸ್ಪಷ್ಟವಾಗಿ ಹೇಳಿದ ಇನ್ನೊಂದು ವಿಷಯವೇನೆಂದರೆ, ‘ಟ್ರಂಪ್ ಯುದ್ಧವನ್ನು ಬಯಸುವುದಿಲ್ಲ ಎನ್ನುವ ನಂಬಿಕೆ ಇದೆ ಆದರೆ ಅವರ ಸಲಹಾಕಾರರೆ (ಬಿ-ಟೀಮ್) ಈ ಬಿಕ್ಕಟ್ಟಿಗೆ ಕಾರಣ’. ಇಲ್ಲಿ ಬಿ ಟೀಮ್ ಎಂದರೆ, ಇಸ್ರೇಲಿನ ಬಿಬಿ, ಸೌದಿಯ ಬಿನ್ ಸಲ್ಮಾನ್, ಯು.ಏ.ಈ.ಯ ಬಿನ್ ಖಾಲೆದ್ ಹಾಗೂ ಅಮೇರಿಕದ ಜಾನ್ ಬೋಲ್ಟನ್. ಇಂತಹ ಒತ್ತಡದ ತಂತ್ರಗಾರಿಕೆಯಿಂದ ಇರಾನ್ ದೇಶವನ್ನು ಮಂಡಿಯೂರುವ ಪರಿಸ್ಥಿತಿಗೆ ತರಲಾಗದು ಎಂತಲೂ ವಿದೇಶಾಂಗ ಸಚಿವ ಹೇಳಿದ್ದಾರೆ.

‘ಸ್ಟ್ರೇಟ್ ಆಫ್ ಹೊರ್ಮುಝ್’ ಎಂದು ಕರೆಯಲಾಗುವ ಪರ್ಷಿಯನ್ ಕೊಲ್ಲಿಯಿಂದಲೇ ವಿಶ್ವದ 35% ತೈಲ ಹಾದುಹೋಗಬೇಕಿದೆ. ಆ ಕೊಲ್ಲಿ ಇರಾನ್‍ನ ಜಲಭಾಗವನ್ನು ಹೊಂದಿದೆ. ಇರಾನಿನ ರೆವಲೂಷನರಿ ಗಾಡ್ರ್ಸ್ ಆ ಕೊಲ್ಲಿಯ ರಕ್ಷಣೆ ಮಾಡುತ್ತಾರೆ. ಏಪ್ರಿಲ್ 8 ರಂದು ಟ್ರಂಪ್ ಆಡಳಿತವು ಇರಾನಿಯನ್ ರೆವಲೂಷನರಿ ಗಾಡ್ರ್ಸ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿತು. ಅಮೆರಿಕವು ಈ ರೀತಿ ಬೇರೊಂದು ದೇಶದ ಸೈನ್ಯವನ್ನು ‘ಭಯೋತ್ಪಾದಕ ಗುಂಪು’ ಎಂದು ಅಧೀಕೃತವಾಗಿ ಘೋಷಿಸಿದ್ದು ಇದೇ ಮೊದಲು. ಇರಾನ್ ಅದಕ್ಕೆ ಪ್ರತಿಕ್ರಿಯೆಯಾಗಿ, ಅಮೆರಿಕ ದೇಶವನ್ನು ‘ಭಯೋತ್ಪಾದನೆಯ ಪ್ರಾಯೋಜಕ ದೇಶ’ ಎಂದು ಕರೆದು, ಆ ಭಾಗದಲ್ಲಿರುವ ಅಮೆರಿಕದ ಸೈನ್ಯಗಳನ್ನು ‘ಭಯೋತ್ಪಾದಕ ಗುಂಪು’ಗಳು ಎಂದು ಕರೆದಿದೆ.

ಐತಿಹಾಸಿಕವಾಗಿ, ಭಾರತ ಮತ್ತು ಇರಾನ್ ಒಳ್ಳೆಯ ಬಾಂಧವ್ಯಗಳನ್ನು ಹೊಂದಿವೆ. ಮನಮೋಹನ್ ಸಿಂಗ್ ಮತ್ತು ನರೇಂದ್ರ ಮೋದಿಯ ಆಳ್ವಿಕೆಯ ಕಾಲದಲ್ಲಿ ಇರಾನ್ ವಿರುದ್ಧ ದಿಗ್ಬಂಧನೆಗಳನ್ನು ಹೇರಿದ್ದಾಗ ಭಾರತವು ಇರಾನ್ ಜೊತೆಗೆ ನಿಂತು, ಆ ದೇಶಕ್ಕೆ ಸಹಾಯ ನೀಡಿದೆ. ಅಮೆರಿಕದ ಒತ್ತಡದ ಪರಿಸ್ಥಿತಿಯಲ್ಲಿ ಮುಂದೆ ಈ ಪ್ರಾದೇಶಿಕ ಸಂಬಂಧವನ್ನು ಗಟ್ಟಿಗೊಳಿಸುವುದೋ ಅಥವಾ ಅಮೆರಿಕಾದ ಒತ್ತಡಕ್ಕೆ ಮಣಿದು ಎರಡು ದೇಶಗಳ ಐತಿಹಾಸಿಕ ಸ್ನೇಹಕ್ಕೆ ದ್ರೋಹಬಗೆಯುವುದೇ ಎನ್ನುವುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...