Homeಅಂತರಾಷ್ಟ್ರೀಯಹೆಲಿಕಾಪ್ಟರ್‌ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು: ಮಾಹಿತಿ ಬಹಿರಂಗಗೊಳಿಸಿದ ಅಧಿಕಾರಿಗಳು

ಹೆಲಿಕಾಪ್ಟರ್‌ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು: ಮಾಹಿತಿ ಬಹಿರಂಗಗೊಳಿಸಿದ ಅಧಿಕಾರಿಗಳು

- Advertisement -
- Advertisement -

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಇದ್ದ ಹೆಲಿಕಾಪ್ಟರ್‌ ನಿನ್ನೆ ಪತನವಾಗಿತ್ತು. ಆದರೆ ಹೆಲಿಕಾಪ್ಟರ್‌ನಲ್ಲಿದ್ದವರ ಸ್ಥಿತಿ ಏನಾಗಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ದುರಂತದಲ್ಲಿ ಮೃತಪಟ್ಟಿರುವ ಆಘಾತಕಾರಿ ಸುದ್ದಿಯನ್ನು ಇರಾನ್‌ನ ಅಧಿಕಾರಿಗಳು ಬಹಿರಂಗಗೊಳಿಸಿದ್ದಾರೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಅಧಿಕಾರಿಗಳು ಪರ್ವತ ಭೂಪ್ರದೇಶದ ಹಿಮಾವೃತ ವಾತಾವರಣದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಸೋಮವಾರ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಅವಶೇಷಗಳನ್ನು ಪತ್ತೆ ಮಾಡಿದ ನಂತರ ತಿಳಿಸಿದ್ದಾರೆ.

ಇರಾನ್‌ನ ಮೆಹರ್ ಸುದ್ದಿ ಸಂಸ್ಥೆ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಸಾವನ್ನು ದೃಢಪಡಿಸಿದೆ. ಇರಾನ್ ಅಧ್ಯಕ್ಷ ಮತ್ತು ವಿದೇಶಾಂಗ ಸಚಿವರನ್ನು ಹೊತ್ತ ಹೆಲಿಕಾಪ್ಟರ್‌ನ ಎಲ್ಲಾ ಪ್ರಯಾಣಿಕರು ಹುತಾತ್ಮರಾಗಿದ್ದಾರೆ ಎಂದು ವರದಿ ಮಾಡಿದೆ.

ಭಾನುವಾರ ನಡೆದ ಅಪಘಾತದಲ್ಲಿ ರೈಸಿ ಮತ್ತು ವಿದೇಶಾಂಗ ಸಚಿವ ಹೊಸೈನ್ ಅಮಿರಾಬ್ದೊಲ್ಲಾಹಿಯಾನ್ ಅವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ಇರಾನ್ ಅಧಿಕಾರಿಯೊಬ್ಬರು ನಿನ್ನೆ ರಾಯಿಟರ್ಸ್‌ಗೆ ತಿಳಿಸಿದ್ದರು. ವಿಮಾನವು ಪರ್ವತದ ಶಿಖರಕ್ಕೆ ಅಪ್ಪಳಿಸಿದೆ ಎಂದು  ಚಿತ್ರಗಳು ತೋರಿಸಿವೆ ಎಂದು ಸ್ಟೇಟ್ ಟಿವಿ ವರದಿ ಮಾಡಿತ್ತು. ಆದರೆ ಅಪಘಾತದ ಕಾರಣದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿರಲಿಲ್ಲ.

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಇರಾನ್‌ನ ತಬ್ರೀಝ್‌ ನಗರದಲ್ಲಿ ಆಝರ್‌ಬೈಜಾನ್‌ನ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಜೊತೆಗೂಡಿ ಖಿಝ್‌ ಖಲಾಸಿ ಅಣೆಕಟ್ಟನ್ನು ಎರಡೂ ದೇಶಗಳು ಹಂಚಿರುವ ಗಡಿ ಸ್ಥಳದಲ್ಲಿ ಉದ್ಘಾಟಿಸಿ ವಾಪಸಾಗುತ್ತಿರುವಾಗ ಈ ಘಟನೆ ಸಂಭವಿಸಿದೆ. ಹಾರಾಟ ಆರಂಭಿಸಿದ ಸುಮಾರು 30 ನಿಮಿಷಗಳಲ್ಲಿ ಹೆಲಿಕಾಪ್ಟರ್‌ ಸಂಪರ್ಕ ಕಳೆದುಕೊಂಡಿತ್ತು. ಇರಾನ್‌ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ನಾಪತ್ತೆಯಾಗಿದೆ ಎಂಬ ಸುದ್ದಿ ಬೆನ್ನಲ್ಲಿ 60ಕ್ಕೂ ಹೆಚ್ಚು ರಕ್ಷಣಾ ತಂಡಗಳು ಕೆಟ್ಟ ಹವಾಮಾನ ಪರಿಸ್ಥಿತಿಗಳ ನಡುವೆ ಶೋಧ ನಡೆಸಿದ್ದವು.

ರೈಸಿ ಅವರಿದ್ದ ಹೆಲಿಕಾಪಟ್ಟರ್‌ನೊಂದಿಗೆ ಪ್ರಯಾಣಿಸಿದ್ದ ಇತರ ಎರಡು ಬೆಂಗಾವಲು ಹೆಲಿಕಾಪ್ಟರ್‌ಗಳು  ಸುರಕ್ಷಿತವಾಗಿ ಹಿಂತಿರುಗಿವೆ. ಬೆಂಗಾವಲು ಹೆಲಿಕಾಪ್ಟರ್‌ಗಳಲ್ಲಿ ಇಂಧನ ಸಚಿವ ಅಲಿ ಅಕ್ಬರ್ ಮೆಹ್ರಾಬಿಯಾನ್ ಹಾಗೂ ವಸತಿ ಹಾಗೂ ಸಾರಿಗೆ ಸಚಿವ ಮೆಹ್ರದಾದ್ ಬಾಝ್ಪ್ರಾಶ್ ಇದ್ದು, ಅವರು ಸುರಕ್ಷಿತವಾಗಿ ಮರಳಿದ್ದರು.

ಇದನ್ನು ಓದಿ: ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...