Homeಚಳವಳಿಪ್ರಭುತ್ವದೊಂದಿಗಿನ ಸಮರಕ್ಕೆ ಇನ್ನೊಂದು ಹೆಸರು ಇರೋಮ್ ಶರ್ಮಿಳಾ

ಪ್ರಭುತ್ವದೊಂದಿಗಿನ ಸಮರಕ್ಕೆ ಇನ್ನೊಂದು ಹೆಸರು ಇರೋಮ್ ಶರ್ಮಿಳಾ

ನಿರಂತರ 16 ವರ್ಷಗಳ ಉಪವಾಸ ಸತ್ಯಾಗ್ರಹದ ಮೂಲಕ ಇಡೀ ಪ್ರಪಂಚಕ್ಕೆ ಪರಿಚಿತರಾದವರು ಇರೋಮ್ ಶರ್ಮಿಳಾ.

- Advertisement -
- Advertisement -

| ಮುತ್ತುರಾಜು |

ನವೆಂಬರ್ 02, 2000ನೇ ಇಸವಿ. ಅಸ್ಸಾಂ ರಾಜ್ಯದ ಇಂಫಾಲ ಬಳಿ ಇರುವ ಮಾಲೋಮ್ ನಗರದಲ್ಲಿ 10 ಜನ ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿರುತ್ತಾರೆ. ಅಲ್ಲಿಗೆ ಏಕಾಏಕಿ ನುಗ್ಗಿದ ಅಸ್ಸಾಂ ರೈಫಲ್ಸ್ ಪೊಲೀಸರು ಗುಂಡಿನ ದಾಳಿ ನಡೆಸಿ 10 ಜನರನ್ನು ಕೊಂದು ಹಾಕುತ್ತಾರೆ. ಈ ಘೋರ ದುರಂತದ ವಿರುದ್ಧ ಅಸ್ಸಾಂ ಜನತೆ ಕಂಬನಿ ಮಿಡಿಯುತ್ತದೆ. ಆದರೆ 28 ವರ್ಷದ ಒಬ್ಬ ಹುಡುಗಿ ದಿಟ್ಟ ತೀರ್ಮಾನ ತೆಗೆದುಕೊಳ್ಳುತ್ತಾಳೆ. ಅದು ಆ ದಾಳಿಗೆ ನ್ಯಾಯಕ್ಕಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ. ಅಲ್ಲಿಂದ ಆರಂಭವಾದ ಆಕೆಯ ಉಪವಾಸ ಸತ್ಯಾಗ್ರಹ ಹೋರಾಟ 2016ರವರೆಗೆ ಅಂದರೆ ಸತತ 16 ವರ್ಷ ಮುಂದುವರೆಯುತ್ತದೆ ಎಂದು ಸ್ವತಃ ಆಕೆಯು ಸಹ ಊಹಿಸಿರಲಿಕ್ಕಿಲ್ಲ.

ಹೌದು ನಾವು ಮಾತಾನಾಡುತ್ತಿರುವುದು ಮೊನ್ನೆ ತಾನೇ ಇಬ್ಬರು ಮುದ್ದಾದ ಹೆಣ್ಣು ಮಕ್ಕಳಿಗೆ ಜನ್ಮ ನೀಡಿರುವ ಮಣಿಪುರದ ಉಕ್ಕಿನ ಮಹಿಳೆ ಎಂದು ಪ್ರಖ್ಯಾತವಾದ ಚಾನು ಇರೋಮ್ ಶರ್ಮಿಳಾರವರ ಬಗ್ಗೆ. ಸದ್ಯ ಬೆಂಗಳೂರಿನ ಮಲ್ಲೇಶ್ವರಂನ ಕ್ಲೌಡ್‍ನೈನ್ ಆಸ್ಪತ್ರೆಯಲ್ಲಿರುವ 46 ವರ್ಷದ ನಾಗರಿಕ ಹಕ್ಕುಗಳ ಕಾರ್ಯಕರ್ತೆ ಶರ್ಮಿಳಾರವರು, ಮೇ 12ರ ವಿಶ್ವ ತಾಯಂದಿರ ದಿನವೇ ಅವಳಿ ಮಕ್ಕಳಿಗೆ ಜನ್ಮನೀಡಿರುವುದು ಮತ್ತೊಂದು ವಿಶೇಷವಾಗಿದೆ. ಈ ಕುರಿತು ಎಲ್ಲಾ ಮಾಧ್ಯಮಗಳು ಸುಕೋಮಲವಾಗಿ ವರದಿ ಮಾಡುತ್ತಿವೆ. ಆದರೆ ಆಕೆಯ ಹೋರಾಟದ ಇತಿಹಾಸದತ್ತ ಕಣ್ಣು ಹಾಯಿಸಿದರೆ ಅಸಾಮಾನ್ಯ ತ್ಯಾಗ, ದಿಟ್ಟತನ, ನೋವು, ಕೆಚ್ಚು, ಹತಾಶೆ ಎಲ್ಲವೂ ದಿಗ್ಗನೇ ಎದ್ದು ನಿಲ್ಲುತ್ತವೆ.  ಶಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆಯ ವಿರುದ್ಧ ನಿರಂತರ 16 ವರ್ಷಗಳ ಉಪವಾಸ ಸತ್ಯಾಗ್ರಹದ ಮೂಲಕ ಇಡೀ ಪ್ರಪಂಚಕ್ಕೆ ಪರಿಚಿತರಾದವರು ಇರೋಮ್ ಶರ್ಮಿಳಾ. ಭಾರತದ 7 ಈಶಾನ್ಯ ರಾಜ್ಯಗಳು ಮತ್ತು ಜಮ್ಮು ಕಾಶ್ಮಿರ ರಾಜ್ಯದಲ್ಲಿ ಜಾರಿಯಲ್ಲಿರುವ 1958ರ ಶಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆಯು ಅಲ್ಲಿನ ಜನರ ಸ್ವಾತಂತ್ರ್ಯವನ್ನು ಸಂಪೂರ್ಣ ಕಿತ್ತುಕೊಂಡಿದೆ. ಇಲ್ಲಿ ಸೇನಾಪಡೆಗಳಿಗೆ ಅನುಮತಿಯಿಲ್ಲದೇ ಯಾರನ್ನಾದರೂ ವಿಚಾರಣೆ ಮಾಡುವು, ಬಂಧಿಸುವ ಅಧಿಕಾರವಿರುತ್ತದೆ. ಈ ವಿಚಾರವಾಗಿ ಸೇನಾಪಡೆಗಳ ವಿರುದ್ಧ ದೂರು ನೀಡುವ ಹಕ್ಕು ನಾಗರಿಕರಿಗಿರುವುದಿಲ್ಲ.

ಈ ಕಾಯ್ದೆಯು ದುರ್ಬಳಕೆಯಗುತ್ತಿದ್ದು ಇದರಿಂದ ಮುಗ್ಧಜನರ ಜೀವಹಾನಿಯಾಗುತ್ತಿದೆ ಎಂಬುದು ಶರ್ಮಿಳಾರವರ ಆರೋಪ. ಈ ಆರೋಪಕ್ಕೆ ಸಾವಿರಾರು ಸಾಕ್ಷಿಗಳು ಸಹ ಅವರ ಬಳಿ ಇವೆ. ಈ ಕಾಯ್ದೆಯ ವಿರುದ್ಧದ ಬಂಡಾಯದಲ್ಲಿ ಹಲವು ದಶಕಗಳಿಂದ 5000ಕ್ಕೂ ಹೆಚ್ಚು ಮಣಿಪುರದ ಜನ ಸಾವನಪ್ಪಿದ್ದಾರೆ. ಸೇನಾಪಡೆಗಳ ಮಿತಿಮೀರದ ದೌರ್ಜನ್ಯದಿಂದಾಗಿ ನೂರಾರು ಹೆಣ್ಣು ಮಕ್ಕಳು ಅತ್ಯಚಾರಕ್ಕೊಳಗಾಗಿದ್ದಾರೆ. ಹಾಗಾಗಿ ಆ ಕಾಯ್ದೆಯನ್ನು ವಾಪಸ್ ಪಡೆಯಬೇಕೆಂಬ ಏಕೈಕ ಬೇಡಿಕೆಯನ್ನಿಟ್ಟುಕೊಂಡು ಧೀರೋದಾತ್ತ ಹೋರಾಟ ನಡೆಸಿದವರು ಇರೋಮ್ ಶರ್ಮಿಳಾ.

ಇವರ ಹೋರಾಟವನ್ನು ಪ್ರಭುತ್ವ ಕ್ರೂರವಾಗಿ ಹತ್ತಿಕ್ಕಲು ಪ್ರಯತ್ನಿಸಿತು. ಉಪವಾಸ ಆರಂಭಿಸಿದ ಮೂರೇ ದಿವಸಕ್ಕೆ ಇವರ ಮೇಲೆ ಆತ್ಮಹತ್ಯೆಗೆ ಪ್ರಯತ್ನ ಎಂಬ ಕೇಸ್ ಜಡಿಯಿತು. ಶರ್ಮಿಳಾ ಜಗ್ಗಲಿಲ್ಲ. ನಂತರ ನ್ಯಾಯಾಂಗ ಬಂಧನ, ಜೈಲಿನಲ್ಲಿದ್ದಾಗಲೂ ಉಪವಾಸ ಮುಂದುವರೆಸಿದರು. ಕೊನೆಗೆ ಆಸ್ಪತ್ರೆಯಲ್ಲಿಟ್ಟು ಮೂಗಿನ ನಳಿಕೆ ಮೂಳಕ ಬಲವಂತವಾಗಿ ಆಹಾರ ನೀಡುವ ಪದ್ದತಿಯನ್ನು ಪೊಲೀಸರು ಅನುಸರಿಸಿದರು.

ಜಗತ್ತಿನಾದ್ಯಂತ ಇರೋಮ್ ಶರ್ಮಿಳಾರವರ ಹೋರಾಟಕ್ಕೆ ಬೆಂಬಲದ ಮಹಾಪೂರವೇ ಹರಿದುಬಂತು. ಇವರ ಹೋರಾಟಕ್ಕೆ ಸಹಮತ ಸೂಚಿಸಿ ದೇಶಾದ್ಯಂತ ಹೋರಾಟಗಳು ನಡೆದವು. ಆದರೆ ಕಿವುಡು, ಕುರುಡು ಸರ್ಕಾರ ಬಗ್ಗಲಿಲ್ಲ. ದಾಖಲೆಯ 16 ವರ್ಷಗಳ ಉಪವಾಸದ ನಂತರ ತಮ್ಮ ಹೋರಾಟದ ಮಾರ್ಗ ಬದಲಿಸಲು ಶರ್ಮಿಳಾ ನಿರ್ಧರಿಸಿದರು. ಅದರಂತೆ 2016ರ ಆಗಸ್ಟ್ 09 ರಂದು ಉಪವಾಸ ಸತ್ಯಾಗ್ರಹ ಕೊನೆಗೊಳಿಸಿ ಚುನಾವಣಾ ರಾಜಕೀಯದ ಮೂಲಕ ಹೋರಾಟ ಮುಂದುವರೆಸಲು ನಿರ್ಧರಿಸಿದರು.

ಪಕ್ಷ ಸೇರುವಂತೆ ಆಪ್ ಸೇರಿದಂತೆ ಹಲವು ಪಕ್ಷಗಳು ಆಹ್ವಾನಿಸಿದರು ಒಪ್ಪದೇ ಪೀಪಲ್ಸ್ ರೆಸೆರ್ಜೆನ್ಸ್ ಅಂಡ್ ಜಸ್ಟೀಸ್ ಅಲೆಯನ್ಸ್ ಎನ್ನುವ ಪಕ್ಷ ಸ್ಥಾಪಿಸಿದರು. 2017ರಲ್ಲಿ ಮಣಿಪುರದ ಸಿಎಂ ಆಗಿ ಅಲ್ಫಾ ಕಾಯ್ದೆಯನ್ನು ಕಿತ್ತೊಗೆಯುವ ಕನಸು ಕಂಡರು. ಅದರಂತೆ ಹಾಲಿ ಮುಖ್ಯಮಂತ್ರಿ ಒಕ್ರಮ್ ಇಬೋಬಿ ಸಿಂಗ್ ವಿರುದ್ಧ ತೋಬಲ್ ಕ್ಷೇತ್ರದಿಂದ ಕಣಕ್ಕಿಳಿದರು. ಆದರೆ ಚುನಾವಣಾ ಫಲಿತಾಂಶ ಮಾತ್ರ ಆಘಾತಕಾರಿಯಾಗಿತ್ತು. ಲಕ್ಷಾಂತರ ಜನ ಇರೋಮ್ ಶರ್ಮಿಳಾರವರ ಹೋರಾಟವನ್ನು ಬೆಂಬಲಿಸಿದ್ದರೂ ಅವರಿಗೆ ಬಿದ್ದಿದ್ದ ಓಟುಗಳು ಮಾತ್ರ ಕೇವಲ 90. ಇದು ಅವರಲ್ಲಿ ತೀವ್ರ ನಿರಾಶೆಯನ್ನುಂಟುಮಾಡಿತು. 

ಸೋತರು ಅವರು ಜನರನ್ನು ದೂಷಿಸಲಿಲ್ಲ. ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡರು. ನನ್ನ ಮನೋಭಾವ ಮತ್ತು ನನ್ನ ಅಂತರಂಗದ ಮಧ್ಯೆ ಎಲ್ಲೋ ಸಂಪರ್ಕ ತಪ್ಪಿಹೋಗಿದೆ. ರಾಜಕೀಯ ಕ್ಷೇತ್ರ ನನಗಾಗದು. ಆದ್ದರಿಂದ ರಾಜಕೀಯ ಕ್ಷೇತ್ರಕ್ಕೆ ವಿದಾಯ ಹೇಳುತ್ತೇನೆ ಎಂದರು. ಆದರೆ ಅವರೊಳಗಿದ್ದ ಕ್ರಾಂತಿಯ ಜ್ವಾಲೆ ಮಾತ್ರ ತಣ್ಣಗಾಯಿತು. ಚುನಾವಣಾ ರಾಜಕಾರಣದ ಮಿತಿಯು ಇದಕ್ಕೆ ಕಾರಣವಿರಬಹುದು. ಈ 16 ವರ್ಷಗಳ ಹೋರಾಟ ಯಾರಿಗಾಗಿ? ತನಗಾಗಿ ಮಾಡಿದ್ದು ಏನು ಎಂಬ ಪ್ರಶ್ನೆಗಳು ಬಹುಶಃ ಅವರ ಮನಸ್ಸಿನಲ್ಲಿ ಬಂದಿರಬೇಕು. 2017ರಲ್ಲಿ ತನ್ನ ಹೋರಾಟದ ಸಂಗಾತಿ, ಗೆಳೆಯ ಗೋವಾ ಮೂಲದ ಬ್ರಿಟಿಷ್ ಪ್ರಜೆ ಡೆಸ್ಮೆಂಡ್ ಕುಟಿನ್ಹೊರನ್ನು ವಿವಾಹವಾಗಿ ಕೊಡೈಕೆನೈಲ್‍ನಲ್ಲಿ ನೆಲೆಸಿದರು. ಈಗ ಆರೋಗ್ಯದ ಕಾರಣಕ್ಕೆ ಒಂದು ವರ್ಷದಿಂದ ಬೆಂಗಳೂರಿನಲ್ಲಿದ್ದ ಅವರು 2019ಕ್ಕೆ ಎರಡು ಮಕ್ಕಳ ಚೊಚ್ಚಲ ತಾಯಿಯಾಗಿದ್ದಾರೆ.

ಯಾವಾಗ ಜಾಗತೀಕರಣ ವಿಜೃಂಭಿಸಲು ಆರಂಭಿಸಿತ್ತೊ, ಯಾವಾಗ ಚಳವಳಿಗಳು ತನ್ನ ಶಕ್ತಿ ಕಳೆದುಕೊಳ್ಳುತ್ತಿದ್ದವೊ ಆಗ ಹೋರಾಟದ ಕಣಕ್ಕೆ ಧುಮುಕಿದ ಇರೋಮ್ ಶರ್ಮಿಳಾರವರ ಹೋರಾಟದ ಜೀವನ ಸಾಮಾಜಿಕ ಬದಲಾವಣೆ ಬಯಸುವ ಪ್ರತಿಯೊಬ್ಬ ವ್ಯಕ್ತಿಗಳು ಅಧ್ಯಯನ ಮಾಡಬೇಕಾದ ಸಂಗತಿಯಾಗಿದೆ. ಹೌದು ಇದು ಚಳವಳಿಗಳಿಗೆ ಸೂಕ್ತ ಕಾಲವಲ್ಲ. ಆದರೆ ಕಾಲ ಹೀಗೆಯೇ ಇರುವುದಿಲ್ಲವಲ್ಲ? ಮಣಿಪುರದ ಜನರ ಸಮಸ್ಯೆ ಬೆಂಗಳೂರಿನ ಬಹುಪಾಲು ಜನಕ್ಕೆ ಸಮಸ್ಯೆ ಅನ್ನಿಸಲೇ ಇಲ್ಲ. ಕಾಶ್ಮಿರದ ಜನರ ಸಮಸ್ಯೆ ಉತ್ತರ ಪ್ರದೇಶದ ಜನರಿಗೆ ಭಯೋತ್ಪಾದನೆಯಾಗಿಯೇ ಕಾಣಬಹುದು. ಹಾಗಾಗಿ ಇರೋಮ್ ಶರ್ಮಿಳಾರವರು ಚಳವಳಿ ಬಿಟ್ಟು ಸೆಟ್ಲ್ ಆದರು ಎಂಬ ಅಭಿಪ್ರಾಯಕ್ಕೆ ನಾವು ಬರುವುದು ಬೇಡ.

ಆಶಾವಾದದಿಂದ ಭವಿಷ್ಯವನ್ನು ಎದುರಿಸೋಣ. ಎಲ್ಲಾ ಚಳವಳಿಗಳಿಗೂ ತಕ್ಷಣದ ಪರಿಹಾರ ಸಿಗದಿದ್ದರೂ ಧೀರ್ಘಕಾಲೀನ ಶಾಶ್ವತ ಪರಿಹಾರಕ್ಕಾಗಿ ವಿನೂತನವಾಗಿ ಹೋರಾಟಕ್ಕಿಳಿಯೋಣ. ಸದ್ಯಕ್ಕೆ ಇರೋಮ್ ಶರ್ಮಿಳಾರವರಿಗೆ ಜನಿಸಿರುವ ಮೊದಲ ಮಗುವಿನ ಹೆಸರು ನಿಕ್ಸ್ ಶಾಕಿ (ಶರ್ಮಿಳಾರ ತಾಯಿ ಇರೋಮ್ ಶಾಕಿಯ ನೆನಪಿನಲ್ಲಿ) ಮತ್ತು ಎರಡನೇ ಮಗುವಿನ ಹೆಸರು ಅತುಮನ್ ತಾರ (ಬೌದ್ಧ ದೇವರ ನೆನಪಿನಲ್ಲಿ) ರಂತಹ ಮಕ್ಕಳ ಪೀಳಿಗೆಗೆಗಾದರು ಹಿಂಸೆ, ಅನ್ಯಾಯ, ಶೋಷಣೆಗಳು ಇಳಿಮುಖವಾಗುವ, ಶಾಂತಿ, ಪ್ರೀತಿ, ಸಾಮರಸ್ಯ, ಸಹೋದರತ್ವ, ಸಮಾನತೆ ಹೆಚ್ಚಾಗುವ ಸಮಾಜ ನಿರ್ಮಾಣವಾಗಲಿ ಎಂದು ಆಶಿಸೋಣ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...