Homeಚಳವಳಿಪ್ರಭುತ್ವದೊಂದಿಗಿನ ಸಮರಕ್ಕೆ ಇನ್ನೊಂದು ಹೆಸರು ಇರೋಮ್ ಶರ್ಮಿಳಾ

ಪ್ರಭುತ್ವದೊಂದಿಗಿನ ಸಮರಕ್ಕೆ ಇನ್ನೊಂದು ಹೆಸರು ಇರೋಮ್ ಶರ್ಮಿಳಾ

ನಿರಂತರ 16 ವರ್ಷಗಳ ಉಪವಾಸ ಸತ್ಯಾಗ್ರಹದ ಮೂಲಕ ಇಡೀ ಪ್ರಪಂಚಕ್ಕೆ ಪರಿಚಿತರಾದವರು ಇರೋಮ್ ಶರ್ಮಿಳಾ.

- Advertisement -
- Advertisement -

| ಮುತ್ತುರಾಜು |

ನವೆಂಬರ್ 02, 2000ನೇ ಇಸವಿ. ಅಸ್ಸಾಂ ರಾಜ್ಯದ ಇಂಫಾಲ ಬಳಿ ಇರುವ ಮಾಲೋಮ್ ನಗರದಲ್ಲಿ 10 ಜನ ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿರುತ್ತಾರೆ. ಅಲ್ಲಿಗೆ ಏಕಾಏಕಿ ನುಗ್ಗಿದ ಅಸ್ಸಾಂ ರೈಫಲ್ಸ್ ಪೊಲೀಸರು ಗುಂಡಿನ ದಾಳಿ ನಡೆಸಿ 10 ಜನರನ್ನು ಕೊಂದು ಹಾಕುತ್ತಾರೆ. ಈ ಘೋರ ದುರಂತದ ವಿರುದ್ಧ ಅಸ್ಸಾಂ ಜನತೆ ಕಂಬನಿ ಮಿಡಿಯುತ್ತದೆ. ಆದರೆ 28 ವರ್ಷದ ಒಬ್ಬ ಹುಡುಗಿ ದಿಟ್ಟ ತೀರ್ಮಾನ ತೆಗೆದುಕೊಳ್ಳುತ್ತಾಳೆ. ಅದು ಆ ದಾಳಿಗೆ ನ್ಯಾಯಕ್ಕಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ. ಅಲ್ಲಿಂದ ಆರಂಭವಾದ ಆಕೆಯ ಉಪವಾಸ ಸತ್ಯಾಗ್ರಹ ಹೋರಾಟ 2016ರವರೆಗೆ ಅಂದರೆ ಸತತ 16 ವರ್ಷ ಮುಂದುವರೆಯುತ್ತದೆ ಎಂದು ಸ್ವತಃ ಆಕೆಯು ಸಹ ಊಹಿಸಿರಲಿಕ್ಕಿಲ್ಲ.

ಹೌದು ನಾವು ಮಾತಾನಾಡುತ್ತಿರುವುದು ಮೊನ್ನೆ ತಾನೇ ಇಬ್ಬರು ಮುದ್ದಾದ ಹೆಣ್ಣು ಮಕ್ಕಳಿಗೆ ಜನ್ಮ ನೀಡಿರುವ ಮಣಿಪುರದ ಉಕ್ಕಿನ ಮಹಿಳೆ ಎಂದು ಪ್ರಖ್ಯಾತವಾದ ಚಾನು ಇರೋಮ್ ಶರ್ಮಿಳಾರವರ ಬಗ್ಗೆ. ಸದ್ಯ ಬೆಂಗಳೂರಿನ ಮಲ್ಲೇಶ್ವರಂನ ಕ್ಲೌಡ್‍ನೈನ್ ಆಸ್ಪತ್ರೆಯಲ್ಲಿರುವ 46 ವರ್ಷದ ನಾಗರಿಕ ಹಕ್ಕುಗಳ ಕಾರ್ಯಕರ್ತೆ ಶರ್ಮಿಳಾರವರು, ಮೇ 12ರ ವಿಶ್ವ ತಾಯಂದಿರ ದಿನವೇ ಅವಳಿ ಮಕ್ಕಳಿಗೆ ಜನ್ಮನೀಡಿರುವುದು ಮತ್ತೊಂದು ವಿಶೇಷವಾಗಿದೆ. ಈ ಕುರಿತು ಎಲ್ಲಾ ಮಾಧ್ಯಮಗಳು ಸುಕೋಮಲವಾಗಿ ವರದಿ ಮಾಡುತ್ತಿವೆ. ಆದರೆ ಆಕೆಯ ಹೋರಾಟದ ಇತಿಹಾಸದತ್ತ ಕಣ್ಣು ಹಾಯಿಸಿದರೆ ಅಸಾಮಾನ್ಯ ತ್ಯಾಗ, ದಿಟ್ಟತನ, ನೋವು, ಕೆಚ್ಚು, ಹತಾಶೆ ಎಲ್ಲವೂ ದಿಗ್ಗನೇ ಎದ್ದು ನಿಲ್ಲುತ್ತವೆ.  ಶಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆಯ ವಿರುದ್ಧ ನಿರಂತರ 16 ವರ್ಷಗಳ ಉಪವಾಸ ಸತ್ಯಾಗ್ರಹದ ಮೂಲಕ ಇಡೀ ಪ್ರಪಂಚಕ್ಕೆ ಪರಿಚಿತರಾದವರು ಇರೋಮ್ ಶರ್ಮಿಳಾ. ಭಾರತದ 7 ಈಶಾನ್ಯ ರಾಜ್ಯಗಳು ಮತ್ತು ಜಮ್ಮು ಕಾಶ್ಮಿರ ರಾಜ್ಯದಲ್ಲಿ ಜಾರಿಯಲ್ಲಿರುವ 1958ರ ಶಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆಯು ಅಲ್ಲಿನ ಜನರ ಸ್ವಾತಂತ್ರ್ಯವನ್ನು ಸಂಪೂರ್ಣ ಕಿತ್ತುಕೊಂಡಿದೆ. ಇಲ್ಲಿ ಸೇನಾಪಡೆಗಳಿಗೆ ಅನುಮತಿಯಿಲ್ಲದೇ ಯಾರನ್ನಾದರೂ ವಿಚಾರಣೆ ಮಾಡುವು, ಬಂಧಿಸುವ ಅಧಿಕಾರವಿರುತ್ತದೆ. ಈ ವಿಚಾರವಾಗಿ ಸೇನಾಪಡೆಗಳ ವಿರುದ್ಧ ದೂರು ನೀಡುವ ಹಕ್ಕು ನಾಗರಿಕರಿಗಿರುವುದಿಲ್ಲ.

ಈ ಕಾಯ್ದೆಯು ದುರ್ಬಳಕೆಯಗುತ್ತಿದ್ದು ಇದರಿಂದ ಮುಗ್ಧಜನರ ಜೀವಹಾನಿಯಾಗುತ್ತಿದೆ ಎಂಬುದು ಶರ್ಮಿಳಾರವರ ಆರೋಪ. ಈ ಆರೋಪಕ್ಕೆ ಸಾವಿರಾರು ಸಾಕ್ಷಿಗಳು ಸಹ ಅವರ ಬಳಿ ಇವೆ. ಈ ಕಾಯ್ದೆಯ ವಿರುದ್ಧದ ಬಂಡಾಯದಲ್ಲಿ ಹಲವು ದಶಕಗಳಿಂದ 5000ಕ್ಕೂ ಹೆಚ್ಚು ಮಣಿಪುರದ ಜನ ಸಾವನಪ್ಪಿದ್ದಾರೆ. ಸೇನಾಪಡೆಗಳ ಮಿತಿಮೀರದ ದೌರ್ಜನ್ಯದಿಂದಾಗಿ ನೂರಾರು ಹೆಣ್ಣು ಮಕ್ಕಳು ಅತ್ಯಚಾರಕ್ಕೊಳಗಾಗಿದ್ದಾರೆ. ಹಾಗಾಗಿ ಆ ಕಾಯ್ದೆಯನ್ನು ವಾಪಸ್ ಪಡೆಯಬೇಕೆಂಬ ಏಕೈಕ ಬೇಡಿಕೆಯನ್ನಿಟ್ಟುಕೊಂಡು ಧೀರೋದಾತ್ತ ಹೋರಾಟ ನಡೆಸಿದವರು ಇರೋಮ್ ಶರ್ಮಿಳಾ.

ಇವರ ಹೋರಾಟವನ್ನು ಪ್ರಭುತ್ವ ಕ್ರೂರವಾಗಿ ಹತ್ತಿಕ್ಕಲು ಪ್ರಯತ್ನಿಸಿತು. ಉಪವಾಸ ಆರಂಭಿಸಿದ ಮೂರೇ ದಿವಸಕ್ಕೆ ಇವರ ಮೇಲೆ ಆತ್ಮಹತ್ಯೆಗೆ ಪ್ರಯತ್ನ ಎಂಬ ಕೇಸ್ ಜಡಿಯಿತು. ಶರ್ಮಿಳಾ ಜಗ್ಗಲಿಲ್ಲ. ನಂತರ ನ್ಯಾಯಾಂಗ ಬಂಧನ, ಜೈಲಿನಲ್ಲಿದ್ದಾಗಲೂ ಉಪವಾಸ ಮುಂದುವರೆಸಿದರು. ಕೊನೆಗೆ ಆಸ್ಪತ್ರೆಯಲ್ಲಿಟ್ಟು ಮೂಗಿನ ನಳಿಕೆ ಮೂಳಕ ಬಲವಂತವಾಗಿ ಆಹಾರ ನೀಡುವ ಪದ್ದತಿಯನ್ನು ಪೊಲೀಸರು ಅನುಸರಿಸಿದರು.

ಜಗತ್ತಿನಾದ್ಯಂತ ಇರೋಮ್ ಶರ್ಮಿಳಾರವರ ಹೋರಾಟಕ್ಕೆ ಬೆಂಬಲದ ಮಹಾಪೂರವೇ ಹರಿದುಬಂತು. ಇವರ ಹೋರಾಟಕ್ಕೆ ಸಹಮತ ಸೂಚಿಸಿ ದೇಶಾದ್ಯಂತ ಹೋರಾಟಗಳು ನಡೆದವು. ಆದರೆ ಕಿವುಡು, ಕುರುಡು ಸರ್ಕಾರ ಬಗ್ಗಲಿಲ್ಲ. ದಾಖಲೆಯ 16 ವರ್ಷಗಳ ಉಪವಾಸದ ನಂತರ ತಮ್ಮ ಹೋರಾಟದ ಮಾರ್ಗ ಬದಲಿಸಲು ಶರ್ಮಿಳಾ ನಿರ್ಧರಿಸಿದರು. ಅದರಂತೆ 2016ರ ಆಗಸ್ಟ್ 09 ರಂದು ಉಪವಾಸ ಸತ್ಯಾಗ್ರಹ ಕೊನೆಗೊಳಿಸಿ ಚುನಾವಣಾ ರಾಜಕೀಯದ ಮೂಲಕ ಹೋರಾಟ ಮುಂದುವರೆಸಲು ನಿರ್ಧರಿಸಿದರು.

ಪಕ್ಷ ಸೇರುವಂತೆ ಆಪ್ ಸೇರಿದಂತೆ ಹಲವು ಪಕ್ಷಗಳು ಆಹ್ವಾನಿಸಿದರು ಒಪ್ಪದೇ ಪೀಪಲ್ಸ್ ರೆಸೆರ್ಜೆನ್ಸ್ ಅಂಡ್ ಜಸ್ಟೀಸ್ ಅಲೆಯನ್ಸ್ ಎನ್ನುವ ಪಕ್ಷ ಸ್ಥಾಪಿಸಿದರು. 2017ರಲ್ಲಿ ಮಣಿಪುರದ ಸಿಎಂ ಆಗಿ ಅಲ್ಫಾ ಕಾಯ್ದೆಯನ್ನು ಕಿತ್ತೊಗೆಯುವ ಕನಸು ಕಂಡರು. ಅದರಂತೆ ಹಾಲಿ ಮುಖ್ಯಮಂತ್ರಿ ಒಕ್ರಮ್ ಇಬೋಬಿ ಸಿಂಗ್ ವಿರುದ್ಧ ತೋಬಲ್ ಕ್ಷೇತ್ರದಿಂದ ಕಣಕ್ಕಿಳಿದರು. ಆದರೆ ಚುನಾವಣಾ ಫಲಿತಾಂಶ ಮಾತ್ರ ಆಘಾತಕಾರಿಯಾಗಿತ್ತು. ಲಕ್ಷಾಂತರ ಜನ ಇರೋಮ್ ಶರ್ಮಿಳಾರವರ ಹೋರಾಟವನ್ನು ಬೆಂಬಲಿಸಿದ್ದರೂ ಅವರಿಗೆ ಬಿದ್ದಿದ್ದ ಓಟುಗಳು ಮಾತ್ರ ಕೇವಲ 90. ಇದು ಅವರಲ್ಲಿ ತೀವ್ರ ನಿರಾಶೆಯನ್ನುಂಟುಮಾಡಿತು. 

ಸೋತರು ಅವರು ಜನರನ್ನು ದೂಷಿಸಲಿಲ್ಲ. ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡರು. ನನ್ನ ಮನೋಭಾವ ಮತ್ತು ನನ್ನ ಅಂತರಂಗದ ಮಧ್ಯೆ ಎಲ್ಲೋ ಸಂಪರ್ಕ ತಪ್ಪಿಹೋಗಿದೆ. ರಾಜಕೀಯ ಕ್ಷೇತ್ರ ನನಗಾಗದು. ಆದ್ದರಿಂದ ರಾಜಕೀಯ ಕ್ಷೇತ್ರಕ್ಕೆ ವಿದಾಯ ಹೇಳುತ್ತೇನೆ ಎಂದರು. ಆದರೆ ಅವರೊಳಗಿದ್ದ ಕ್ರಾಂತಿಯ ಜ್ವಾಲೆ ಮಾತ್ರ ತಣ್ಣಗಾಯಿತು. ಚುನಾವಣಾ ರಾಜಕಾರಣದ ಮಿತಿಯು ಇದಕ್ಕೆ ಕಾರಣವಿರಬಹುದು. ಈ 16 ವರ್ಷಗಳ ಹೋರಾಟ ಯಾರಿಗಾಗಿ? ತನಗಾಗಿ ಮಾಡಿದ್ದು ಏನು ಎಂಬ ಪ್ರಶ್ನೆಗಳು ಬಹುಶಃ ಅವರ ಮನಸ್ಸಿನಲ್ಲಿ ಬಂದಿರಬೇಕು. 2017ರಲ್ಲಿ ತನ್ನ ಹೋರಾಟದ ಸಂಗಾತಿ, ಗೆಳೆಯ ಗೋವಾ ಮೂಲದ ಬ್ರಿಟಿಷ್ ಪ್ರಜೆ ಡೆಸ್ಮೆಂಡ್ ಕುಟಿನ್ಹೊರನ್ನು ವಿವಾಹವಾಗಿ ಕೊಡೈಕೆನೈಲ್‍ನಲ್ಲಿ ನೆಲೆಸಿದರು. ಈಗ ಆರೋಗ್ಯದ ಕಾರಣಕ್ಕೆ ಒಂದು ವರ್ಷದಿಂದ ಬೆಂಗಳೂರಿನಲ್ಲಿದ್ದ ಅವರು 2019ಕ್ಕೆ ಎರಡು ಮಕ್ಕಳ ಚೊಚ್ಚಲ ತಾಯಿಯಾಗಿದ್ದಾರೆ.

ಯಾವಾಗ ಜಾಗತೀಕರಣ ವಿಜೃಂಭಿಸಲು ಆರಂಭಿಸಿತ್ತೊ, ಯಾವಾಗ ಚಳವಳಿಗಳು ತನ್ನ ಶಕ್ತಿ ಕಳೆದುಕೊಳ್ಳುತ್ತಿದ್ದವೊ ಆಗ ಹೋರಾಟದ ಕಣಕ್ಕೆ ಧುಮುಕಿದ ಇರೋಮ್ ಶರ್ಮಿಳಾರವರ ಹೋರಾಟದ ಜೀವನ ಸಾಮಾಜಿಕ ಬದಲಾವಣೆ ಬಯಸುವ ಪ್ರತಿಯೊಬ್ಬ ವ್ಯಕ್ತಿಗಳು ಅಧ್ಯಯನ ಮಾಡಬೇಕಾದ ಸಂಗತಿಯಾಗಿದೆ. ಹೌದು ಇದು ಚಳವಳಿಗಳಿಗೆ ಸೂಕ್ತ ಕಾಲವಲ್ಲ. ಆದರೆ ಕಾಲ ಹೀಗೆಯೇ ಇರುವುದಿಲ್ಲವಲ್ಲ? ಮಣಿಪುರದ ಜನರ ಸಮಸ್ಯೆ ಬೆಂಗಳೂರಿನ ಬಹುಪಾಲು ಜನಕ್ಕೆ ಸಮಸ್ಯೆ ಅನ್ನಿಸಲೇ ಇಲ್ಲ. ಕಾಶ್ಮಿರದ ಜನರ ಸಮಸ್ಯೆ ಉತ್ತರ ಪ್ರದೇಶದ ಜನರಿಗೆ ಭಯೋತ್ಪಾದನೆಯಾಗಿಯೇ ಕಾಣಬಹುದು. ಹಾಗಾಗಿ ಇರೋಮ್ ಶರ್ಮಿಳಾರವರು ಚಳವಳಿ ಬಿಟ್ಟು ಸೆಟ್ಲ್ ಆದರು ಎಂಬ ಅಭಿಪ್ರಾಯಕ್ಕೆ ನಾವು ಬರುವುದು ಬೇಡ.

ಆಶಾವಾದದಿಂದ ಭವಿಷ್ಯವನ್ನು ಎದುರಿಸೋಣ. ಎಲ್ಲಾ ಚಳವಳಿಗಳಿಗೂ ತಕ್ಷಣದ ಪರಿಹಾರ ಸಿಗದಿದ್ದರೂ ಧೀರ್ಘಕಾಲೀನ ಶಾಶ್ವತ ಪರಿಹಾರಕ್ಕಾಗಿ ವಿನೂತನವಾಗಿ ಹೋರಾಟಕ್ಕಿಳಿಯೋಣ. ಸದ್ಯಕ್ಕೆ ಇರೋಮ್ ಶರ್ಮಿಳಾರವರಿಗೆ ಜನಿಸಿರುವ ಮೊದಲ ಮಗುವಿನ ಹೆಸರು ನಿಕ್ಸ್ ಶಾಕಿ (ಶರ್ಮಿಳಾರ ತಾಯಿ ಇರೋಮ್ ಶಾಕಿಯ ನೆನಪಿನಲ್ಲಿ) ಮತ್ತು ಎರಡನೇ ಮಗುವಿನ ಹೆಸರು ಅತುಮನ್ ತಾರ (ಬೌದ್ಧ ದೇವರ ನೆನಪಿನಲ್ಲಿ) ರಂತಹ ಮಕ್ಕಳ ಪೀಳಿಗೆಗೆಗಾದರು ಹಿಂಸೆ, ಅನ್ಯಾಯ, ಶೋಷಣೆಗಳು ಇಳಿಮುಖವಾಗುವ, ಶಾಂತಿ, ಪ್ರೀತಿ, ಸಾಮರಸ್ಯ, ಸಹೋದರತ್ವ, ಸಮಾನತೆ ಹೆಚ್ಚಾಗುವ ಸಮಾಜ ನಿರ್ಮಾಣವಾಗಲಿ ಎಂದು ಆಶಿಸೋಣ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....