Homeಚಳವಳಿಪ್ರಭುತ್ವದೊಂದಿಗಿನ ಸಮರಕ್ಕೆ ಇನ್ನೊಂದು ಹೆಸರು ಇರೋಮ್ ಶರ್ಮಿಳಾ

ಪ್ರಭುತ್ವದೊಂದಿಗಿನ ಸಮರಕ್ಕೆ ಇನ್ನೊಂದು ಹೆಸರು ಇರೋಮ್ ಶರ್ಮಿಳಾ

ನಿರಂತರ 16 ವರ್ಷಗಳ ಉಪವಾಸ ಸತ್ಯಾಗ್ರಹದ ಮೂಲಕ ಇಡೀ ಪ್ರಪಂಚಕ್ಕೆ ಪರಿಚಿತರಾದವರು ಇರೋಮ್ ಶರ್ಮಿಳಾ.

- Advertisement -
- Advertisement -

| ಮುತ್ತುರಾಜು |

ನವೆಂಬರ್ 02, 2000ನೇ ಇಸವಿ. ಅಸ್ಸಾಂ ರಾಜ್ಯದ ಇಂಫಾಲ ಬಳಿ ಇರುವ ಮಾಲೋಮ್ ನಗರದಲ್ಲಿ 10 ಜನ ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿರುತ್ತಾರೆ. ಅಲ್ಲಿಗೆ ಏಕಾಏಕಿ ನುಗ್ಗಿದ ಅಸ್ಸಾಂ ರೈಫಲ್ಸ್ ಪೊಲೀಸರು ಗುಂಡಿನ ದಾಳಿ ನಡೆಸಿ 10 ಜನರನ್ನು ಕೊಂದು ಹಾಕುತ್ತಾರೆ. ಈ ಘೋರ ದುರಂತದ ವಿರುದ್ಧ ಅಸ್ಸಾಂ ಜನತೆ ಕಂಬನಿ ಮಿಡಿಯುತ್ತದೆ. ಆದರೆ 28 ವರ್ಷದ ಒಬ್ಬ ಹುಡುಗಿ ದಿಟ್ಟ ತೀರ್ಮಾನ ತೆಗೆದುಕೊಳ್ಳುತ್ತಾಳೆ. ಅದು ಆ ದಾಳಿಗೆ ನ್ಯಾಯಕ್ಕಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ. ಅಲ್ಲಿಂದ ಆರಂಭವಾದ ಆಕೆಯ ಉಪವಾಸ ಸತ್ಯಾಗ್ರಹ ಹೋರಾಟ 2016ರವರೆಗೆ ಅಂದರೆ ಸತತ 16 ವರ್ಷ ಮುಂದುವರೆಯುತ್ತದೆ ಎಂದು ಸ್ವತಃ ಆಕೆಯು ಸಹ ಊಹಿಸಿರಲಿಕ್ಕಿಲ್ಲ.

ಹೌದು ನಾವು ಮಾತಾನಾಡುತ್ತಿರುವುದು ಮೊನ್ನೆ ತಾನೇ ಇಬ್ಬರು ಮುದ್ದಾದ ಹೆಣ್ಣು ಮಕ್ಕಳಿಗೆ ಜನ್ಮ ನೀಡಿರುವ ಮಣಿಪುರದ ಉಕ್ಕಿನ ಮಹಿಳೆ ಎಂದು ಪ್ರಖ್ಯಾತವಾದ ಚಾನು ಇರೋಮ್ ಶರ್ಮಿಳಾರವರ ಬಗ್ಗೆ. ಸದ್ಯ ಬೆಂಗಳೂರಿನ ಮಲ್ಲೇಶ್ವರಂನ ಕ್ಲೌಡ್‍ನೈನ್ ಆಸ್ಪತ್ರೆಯಲ್ಲಿರುವ 46 ವರ್ಷದ ನಾಗರಿಕ ಹಕ್ಕುಗಳ ಕಾರ್ಯಕರ್ತೆ ಶರ್ಮಿಳಾರವರು, ಮೇ 12ರ ವಿಶ್ವ ತಾಯಂದಿರ ದಿನವೇ ಅವಳಿ ಮಕ್ಕಳಿಗೆ ಜನ್ಮನೀಡಿರುವುದು ಮತ್ತೊಂದು ವಿಶೇಷವಾಗಿದೆ. ಈ ಕುರಿತು ಎಲ್ಲಾ ಮಾಧ್ಯಮಗಳು ಸುಕೋಮಲವಾಗಿ ವರದಿ ಮಾಡುತ್ತಿವೆ. ಆದರೆ ಆಕೆಯ ಹೋರಾಟದ ಇತಿಹಾಸದತ್ತ ಕಣ್ಣು ಹಾಯಿಸಿದರೆ ಅಸಾಮಾನ್ಯ ತ್ಯಾಗ, ದಿಟ್ಟತನ, ನೋವು, ಕೆಚ್ಚು, ಹತಾಶೆ ಎಲ್ಲವೂ ದಿಗ್ಗನೇ ಎದ್ದು ನಿಲ್ಲುತ್ತವೆ.  ಶಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆಯ ವಿರುದ್ಧ ನಿರಂತರ 16 ವರ್ಷಗಳ ಉಪವಾಸ ಸತ್ಯಾಗ್ರಹದ ಮೂಲಕ ಇಡೀ ಪ್ರಪಂಚಕ್ಕೆ ಪರಿಚಿತರಾದವರು ಇರೋಮ್ ಶರ್ಮಿಳಾ. ಭಾರತದ 7 ಈಶಾನ್ಯ ರಾಜ್ಯಗಳು ಮತ್ತು ಜಮ್ಮು ಕಾಶ್ಮಿರ ರಾಜ್ಯದಲ್ಲಿ ಜಾರಿಯಲ್ಲಿರುವ 1958ರ ಶಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆಯು ಅಲ್ಲಿನ ಜನರ ಸ್ವಾತಂತ್ರ್ಯವನ್ನು ಸಂಪೂರ್ಣ ಕಿತ್ತುಕೊಂಡಿದೆ. ಇಲ್ಲಿ ಸೇನಾಪಡೆಗಳಿಗೆ ಅನುಮತಿಯಿಲ್ಲದೇ ಯಾರನ್ನಾದರೂ ವಿಚಾರಣೆ ಮಾಡುವು, ಬಂಧಿಸುವ ಅಧಿಕಾರವಿರುತ್ತದೆ. ಈ ವಿಚಾರವಾಗಿ ಸೇನಾಪಡೆಗಳ ವಿರುದ್ಧ ದೂರು ನೀಡುವ ಹಕ್ಕು ನಾಗರಿಕರಿಗಿರುವುದಿಲ್ಲ.

ಈ ಕಾಯ್ದೆಯು ದುರ್ಬಳಕೆಯಗುತ್ತಿದ್ದು ಇದರಿಂದ ಮುಗ್ಧಜನರ ಜೀವಹಾನಿಯಾಗುತ್ತಿದೆ ಎಂಬುದು ಶರ್ಮಿಳಾರವರ ಆರೋಪ. ಈ ಆರೋಪಕ್ಕೆ ಸಾವಿರಾರು ಸಾಕ್ಷಿಗಳು ಸಹ ಅವರ ಬಳಿ ಇವೆ. ಈ ಕಾಯ್ದೆಯ ವಿರುದ್ಧದ ಬಂಡಾಯದಲ್ಲಿ ಹಲವು ದಶಕಗಳಿಂದ 5000ಕ್ಕೂ ಹೆಚ್ಚು ಮಣಿಪುರದ ಜನ ಸಾವನಪ್ಪಿದ್ದಾರೆ. ಸೇನಾಪಡೆಗಳ ಮಿತಿಮೀರದ ದೌರ್ಜನ್ಯದಿಂದಾಗಿ ನೂರಾರು ಹೆಣ್ಣು ಮಕ್ಕಳು ಅತ್ಯಚಾರಕ್ಕೊಳಗಾಗಿದ್ದಾರೆ. ಹಾಗಾಗಿ ಆ ಕಾಯ್ದೆಯನ್ನು ವಾಪಸ್ ಪಡೆಯಬೇಕೆಂಬ ಏಕೈಕ ಬೇಡಿಕೆಯನ್ನಿಟ್ಟುಕೊಂಡು ಧೀರೋದಾತ್ತ ಹೋರಾಟ ನಡೆಸಿದವರು ಇರೋಮ್ ಶರ್ಮಿಳಾ.

ಇವರ ಹೋರಾಟವನ್ನು ಪ್ರಭುತ್ವ ಕ್ರೂರವಾಗಿ ಹತ್ತಿಕ್ಕಲು ಪ್ರಯತ್ನಿಸಿತು. ಉಪವಾಸ ಆರಂಭಿಸಿದ ಮೂರೇ ದಿವಸಕ್ಕೆ ಇವರ ಮೇಲೆ ಆತ್ಮಹತ್ಯೆಗೆ ಪ್ರಯತ್ನ ಎಂಬ ಕೇಸ್ ಜಡಿಯಿತು. ಶರ್ಮಿಳಾ ಜಗ್ಗಲಿಲ್ಲ. ನಂತರ ನ್ಯಾಯಾಂಗ ಬಂಧನ, ಜೈಲಿನಲ್ಲಿದ್ದಾಗಲೂ ಉಪವಾಸ ಮುಂದುವರೆಸಿದರು. ಕೊನೆಗೆ ಆಸ್ಪತ್ರೆಯಲ್ಲಿಟ್ಟು ಮೂಗಿನ ನಳಿಕೆ ಮೂಳಕ ಬಲವಂತವಾಗಿ ಆಹಾರ ನೀಡುವ ಪದ್ದತಿಯನ್ನು ಪೊಲೀಸರು ಅನುಸರಿಸಿದರು.

ಜಗತ್ತಿನಾದ್ಯಂತ ಇರೋಮ್ ಶರ್ಮಿಳಾರವರ ಹೋರಾಟಕ್ಕೆ ಬೆಂಬಲದ ಮಹಾಪೂರವೇ ಹರಿದುಬಂತು. ಇವರ ಹೋರಾಟಕ್ಕೆ ಸಹಮತ ಸೂಚಿಸಿ ದೇಶಾದ್ಯಂತ ಹೋರಾಟಗಳು ನಡೆದವು. ಆದರೆ ಕಿವುಡು, ಕುರುಡು ಸರ್ಕಾರ ಬಗ್ಗಲಿಲ್ಲ. ದಾಖಲೆಯ 16 ವರ್ಷಗಳ ಉಪವಾಸದ ನಂತರ ತಮ್ಮ ಹೋರಾಟದ ಮಾರ್ಗ ಬದಲಿಸಲು ಶರ್ಮಿಳಾ ನಿರ್ಧರಿಸಿದರು. ಅದರಂತೆ 2016ರ ಆಗಸ್ಟ್ 09 ರಂದು ಉಪವಾಸ ಸತ್ಯಾಗ್ರಹ ಕೊನೆಗೊಳಿಸಿ ಚುನಾವಣಾ ರಾಜಕೀಯದ ಮೂಲಕ ಹೋರಾಟ ಮುಂದುವರೆಸಲು ನಿರ್ಧರಿಸಿದರು.

ಪಕ್ಷ ಸೇರುವಂತೆ ಆಪ್ ಸೇರಿದಂತೆ ಹಲವು ಪಕ್ಷಗಳು ಆಹ್ವಾನಿಸಿದರು ಒಪ್ಪದೇ ಪೀಪಲ್ಸ್ ರೆಸೆರ್ಜೆನ್ಸ್ ಅಂಡ್ ಜಸ್ಟೀಸ್ ಅಲೆಯನ್ಸ್ ಎನ್ನುವ ಪಕ್ಷ ಸ್ಥಾಪಿಸಿದರು. 2017ರಲ್ಲಿ ಮಣಿಪುರದ ಸಿಎಂ ಆಗಿ ಅಲ್ಫಾ ಕಾಯ್ದೆಯನ್ನು ಕಿತ್ತೊಗೆಯುವ ಕನಸು ಕಂಡರು. ಅದರಂತೆ ಹಾಲಿ ಮುಖ್ಯಮಂತ್ರಿ ಒಕ್ರಮ್ ಇಬೋಬಿ ಸಿಂಗ್ ವಿರುದ್ಧ ತೋಬಲ್ ಕ್ಷೇತ್ರದಿಂದ ಕಣಕ್ಕಿಳಿದರು. ಆದರೆ ಚುನಾವಣಾ ಫಲಿತಾಂಶ ಮಾತ್ರ ಆಘಾತಕಾರಿಯಾಗಿತ್ತು. ಲಕ್ಷಾಂತರ ಜನ ಇರೋಮ್ ಶರ್ಮಿಳಾರವರ ಹೋರಾಟವನ್ನು ಬೆಂಬಲಿಸಿದ್ದರೂ ಅವರಿಗೆ ಬಿದ್ದಿದ್ದ ಓಟುಗಳು ಮಾತ್ರ ಕೇವಲ 90. ಇದು ಅವರಲ್ಲಿ ತೀವ್ರ ನಿರಾಶೆಯನ್ನುಂಟುಮಾಡಿತು. 

ಸೋತರು ಅವರು ಜನರನ್ನು ದೂಷಿಸಲಿಲ್ಲ. ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡರು. ನನ್ನ ಮನೋಭಾವ ಮತ್ತು ನನ್ನ ಅಂತರಂಗದ ಮಧ್ಯೆ ಎಲ್ಲೋ ಸಂಪರ್ಕ ತಪ್ಪಿಹೋಗಿದೆ. ರಾಜಕೀಯ ಕ್ಷೇತ್ರ ನನಗಾಗದು. ಆದ್ದರಿಂದ ರಾಜಕೀಯ ಕ್ಷೇತ್ರಕ್ಕೆ ವಿದಾಯ ಹೇಳುತ್ತೇನೆ ಎಂದರು. ಆದರೆ ಅವರೊಳಗಿದ್ದ ಕ್ರಾಂತಿಯ ಜ್ವಾಲೆ ಮಾತ್ರ ತಣ್ಣಗಾಯಿತು. ಚುನಾವಣಾ ರಾಜಕಾರಣದ ಮಿತಿಯು ಇದಕ್ಕೆ ಕಾರಣವಿರಬಹುದು. ಈ 16 ವರ್ಷಗಳ ಹೋರಾಟ ಯಾರಿಗಾಗಿ? ತನಗಾಗಿ ಮಾಡಿದ್ದು ಏನು ಎಂಬ ಪ್ರಶ್ನೆಗಳು ಬಹುಶಃ ಅವರ ಮನಸ್ಸಿನಲ್ಲಿ ಬಂದಿರಬೇಕು. 2017ರಲ್ಲಿ ತನ್ನ ಹೋರಾಟದ ಸಂಗಾತಿ, ಗೆಳೆಯ ಗೋವಾ ಮೂಲದ ಬ್ರಿಟಿಷ್ ಪ್ರಜೆ ಡೆಸ್ಮೆಂಡ್ ಕುಟಿನ್ಹೊರನ್ನು ವಿವಾಹವಾಗಿ ಕೊಡೈಕೆನೈಲ್‍ನಲ್ಲಿ ನೆಲೆಸಿದರು. ಈಗ ಆರೋಗ್ಯದ ಕಾರಣಕ್ಕೆ ಒಂದು ವರ್ಷದಿಂದ ಬೆಂಗಳೂರಿನಲ್ಲಿದ್ದ ಅವರು 2019ಕ್ಕೆ ಎರಡು ಮಕ್ಕಳ ಚೊಚ್ಚಲ ತಾಯಿಯಾಗಿದ್ದಾರೆ.

ಯಾವಾಗ ಜಾಗತೀಕರಣ ವಿಜೃಂಭಿಸಲು ಆರಂಭಿಸಿತ್ತೊ, ಯಾವಾಗ ಚಳವಳಿಗಳು ತನ್ನ ಶಕ್ತಿ ಕಳೆದುಕೊಳ್ಳುತ್ತಿದ್ದವೊ ಆಗ ಹೋರಾಟದ ಕಣಕ್ಕೆ ಧುಮುಕಿದ ಇರೋಮ್ ಶರ್ಮಿಳಾರವರ ಹೋರಾಟದ ಜೀವನ ಸಾಮಾಜಿಕ ಬದಲಾವಣೆ ಬಯಸುವ ಪ್ರತಿಯೊಬ್ಬ ವ್ಯಕ್ತಿಗಳು ಅಧ್ಯಯನ ಮಾಡಬೇಕಾದ ಸಂಗತಿಯಾಗಿದೆ. ಹೌದು ಇದು ಚಳವಳಿಗಳಿಗೆ ಸೂಕ್ತ ಕಾಲವಲ್ಲ. ಆದರೆ ಕಾಲ ಹೀಗೆಯೇ ಇರುವುದಿಲ್ಲವಲ್ಲ? ಮಣಿಪುರದ ಜನರ ಸಮಸ್ಯೆ ಬೆಂಗಳೂರಿನ ಬಹುಪಾಲು ಜನಕ್ಕೆ ಸಮಸ್ಯೆ ಅನ್ನಿಸಲೇ ಇಲ್ಲ. ಕಾಶ್ಮಿರದ ಜನರ ಸಮಸ್ಯೆ ಉತ್ತರ ಪ್ರದೇಶದ ಜನರಿಗೆ ಭಯೋತ್ಪಾದನೆಯಾಗಿಯೇ ಕಾಣಬಹುದು. ಹಾಗಾಗಿ ಇರೋಮ್ ಶರ್ಮಿಳಾರವರು ಚಳವಳಿ ಬಿಟ್ಟು ಸೆಟ್ಲ್ ಆದರು ಎಂಬ ಅಭಿಪ್ರಾಯಕ್ಕೆ ನಾವು ಬರುವುದು ಬೇಡ.

ಆಶಾವಾದದಿಂದ ಭವಿಷ್ಯವನ್ನು ಎದುರಿಸೋಣ. ಎಲ್ಲಾ ಚಳವಳಿಗಳಿಗೂ ತಕ್ಷಣದ ಪರಿಹಾರ ಸಿಗದಿದ್ದರೂ ಧೀರ್ಘಕಾಲೀನ ಶಾಶ್ವತ ಪರಿಹಾರಕ್ಕಾಗಿ ವಿನೂತನವಾಗಿ ಹೋರಾಟಕ್ಕಿಳಿಯೋಣ. ಸದ್ಯಕ್ಕೆ ಇರೋಮ್ ಶರ್ಮಿಳಾರವರಿಗೆ ಜನಿಸಿರುವ ಮೊದಲ ಮಗುವಿನ ಹೆಸರು ನಿಕ್ಸ್ ಶಾಕಿ (ಶರ್ಮಿಳಾರ ತಾಯಿ ಇರೋಮ್ ಶಾಕಿಯ ನೆನಪಿನಲ್ಲಿ) ಮತ್ತು ಎರಡನೇ ಮಗುವಿನ ಹೆಸರು ಅತುಮನ್ ತಾರ (ಬೌದ್ಧ ದೇವರ ನೆನಪಿನಲ್ಲಿ) ರಂತಹ ಮಕ್ಕಳ ಪೀಳಿಗೆಗೆಗಾದರು ಹಿಂಸೆ, ಅನ್ಯಾಯ, ಶೋಷಣೆಗಳು ಇಳಿಮುಖವಾಗುವ, ಶಾಂತಿ, ಪ್ರೀತಿ, ಸಾಮರಸ್ಯ, ಸಹೋದರತ್ವ, ಸಮಾನತೆ ಹೆಚ್ಚಾಗುವ ಸಮಾಜ ನಿರ್ಮಾಣವಾಗಲಿ ಎಂದು ಆಶಿಸೋಣ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....