Homeಚಳವಳಿಪ್ರಭುತ್ವದೊಂದಿಗಿನ ಸಮರಕ್ಕೆ ಇನ್ನೊಂದು ಹೆಸರು ಇರೋಮ್ ಶರ್ಮಿಳಾ

ಪ್ರಭುತ್ವದೊಂದಿಗಿನ ಸಮರಕ್ಕೆ ಇನ್ನೊಂದು ಹೆಸರು ಇರೋಮ್ ಶರ್ಮಿಳಾ

ನಿರಂತರ 16 ವರ್ಷಗಳ ಉಪವಾಸ ಸತ್ಯಾಗ್ರಹದ ಮೂಲಕ ಇಡೀ ಪ್ರಪಂಚಕ್ಕೆ ಪರಿಚಿತರಾದವರು ಇರೋಮ್ ಶರ್ಮಿಳಾ.

- Advertisement -
- Advertisement -

| ಮುತ್ತುರಾಜು |

ನವೆಂಬರ್ 02, 2000ನೇ ಇಸವಿ. ಅಸ್ಸಾಂ ರಾಜ್ಯದ ಇಂಫಾಲ ಬಳಿ ಇರುವ ಮಾಲೋಮ್ ನಗರದಲ್ಲಿ 10 ಜನ ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿರುತ್ತಾರೆ. ಅಲ್ಲಿಗೆ ಏಕಾಏಕಿ ನುಗ್ಗಿದ ಅಸ್ಸಾಂ ರೈಫಲ್ಸ್ ಪೊಲೀಸರು ಗುಂಡಿನ ದಾಳಿ ನಡೆಸಿ 10 ಜನರನ್ನು ಕೊಂದು ಹಾಕುತ್ತಾರೆ. ಈ ಘೋರ ದುರಂತದ ವಿರುದ್ಧ ಅಸ್ಸಾಂ ಜನತೆ ಕಂಬನಿ ಮಿಡಿಯುತ್ತದೆ. ಆದರೆ 28 ವರ್ಷದ ಒಬ್ಬ ಹುಡುಗಿ ದಿಟ್ಟ ತೀರ್ಮಾನ ತೆಗೆದುಕೊಳ್ಳುತ್ತಾಳೆ. ಅದು ಆ ದಾಳಿಗೆ ನ್ಯಾಯಕ್ಕಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ. ಅಲ್ಲಿಂದ ಆರಂಭವಾದ ಆಕೆಯ ಉಪವಾಸ ಸತ್ಯಾಗ್ರಹ ಹೋರಾಟ 2016ರವರೆಗೆ ಅಂದರೆ ಸತತ 16 ವರ್ಷ ಮುಂದುವರೆಯುತ್ತದೆ ಎಂದು ಸ್ವತಃ ಆಕೆಯು ಸಹ ಊಹಿಸಿರಲಿಕ್ಕಿಲ್ಲ.

ಹೌದು ನಾವು ಮಾತಾನಾಡುತ್ತಿರುವುದು ಮೊನ್ನೆ ತಾನೇ ಇಬ್ಬರು ಮುದ್ದಾದ ಹೆಣ್ಣು ಮಕ್ಕಳಿಗೆ ಜನ್ಮ ನೀಡಿರುವ ಮಣಿಪುರದ ಉಕ್ಕಿನ ಮಹಿಳೆ ಎಂದು ಪ್ರಖ್ಯಾತವಾದ ಚಾನು ಇರೋಮ್ ಶರ್ಮಿಳಾರವರ ಬಗ್ಗೆ. ಸದ್ಯ ಬೆಂಗಳೂರಿನ ಮಲ್ಲೇಶ್ವರಂನ ಕ್ಲೌಡ್‍ನೈನ್ ಆಸ್ಪತ್ರೆಯಲ್ಲಿರುವ 46 ವರ್ಷದ ನಾಗರಿಕ ಹಕ್ಕುಗಳ ಕಾರ್ಯಕರ್ತೆ ಶರ್ಮಿಳಾರವರು, ಮೇ 12ರ ವಿಶ್ವ ತಾಯಂದಿರ ದಿನವೇ ಅವಳಿ ಮಕ್ಕಳಿಗೆ ಜನ್ಮನೀಡಿರುವುದು ಮತ್ತೊಂದು ವಿಶೇಷವಾಗಿದೆ. ಈ ಕುರಿತು ಎಲ್ಲಾ ಮಾಧ್ಯಮಗಳು ಸುಕೋಮಲವಾಗಿ ವರದಿ ಮಾಡುತ್ತಿವೆ. ಆದರೆ ಆಕೆಯ ಹೋರಾಟದ ಇತಿಹಾಸದತ್ತ ಕಣ್ಣು ಹಾಯಿಸಿದರೆ ಅಸಾಮಾನ್ಯ ತ್ಯಾಗ, ದಿಟ್ಟತನ, ನೋವು, ಕೆಚ್ಚು, ಹತಾಶೆ ಎಲ್ಲವೂ ದಿಗ್ಗನೇ ಎದ್ದು ನಿಲ್ಲುತ್ತವೆ.  ಶಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆಯ ವಿರುದ್ಧ ನಿರಂತರ 16 ವರ್ಷಗಳ ಉಪವಾಸ ಸತ್ಯಾಗ್ರಹದ ಮೂಲಕ ಇಡೀ ಪ್ರಪಂಚಕ್ಕೆ ಪರಿಚಿತರಾದವರು ಇರೋಮ್ ಶರ್ಮಿಳಾ. ಭಾರತದ 7 ಈಶಾನ್ಯ ರಾಜ್ಯಗಳು ಮತ್ತು ಜಮ್ಮು ಕಾಶ್ಮಿರ ರಾಜ್ಯದಲ್ಲಿ ಜಾರಿಯಲ್ಲಿರುವ 1958ರ ಶಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆಯು ಅಲ್ಲಿನ ಜನರ ಸ್ವಾತಂತ್ರ್ಯವನ್ನು ಸಂಪೂರ್ಣ ಕಿತ್ತುಕೊಂಡಿದೆ. ಇಲ್ಲಿ ಸೇನಾಪಡೆಗಳಿಗೆ ಅನುಮತಿಯಿಲ್ಲದೇ ಯಾರನ್ನಾದರೂ ವಿಚಾರಣೆ ಮಾಡುವು, ಬಂಧಿಸುವ ಅಧಿಕಾರವಿರುತ್ತದೆ. ಈ ವಿಚಾರವಾಗಿ ಸೇನಾಪಡೆಗಳ ವಿರುದ್ಧ ದೂರು ನೀಡುವ ಹಕ್ಕು ನಾಗರಿಕರಿಗಿರುವುದಿಲ್ಲ.

ಈ ಕಾಯ್ದೆಯು ದುರ್ಬಳಕೆಯಗುತ್ತಿದ್ದು ಇದರಿಂದ ಮುಗ್ಧಜನರ ಜೀವಹಾನಿಯಾಗುತ್ತಿದೆ ಎಂಬುದು ಶರ್ಮಿಳಾರವರ ಆರೋಪ. ಈ ಆರೋಪಕ್ಕೆ ಸಾವಿರಾರು ಸಾಕ್ಷಿಗಳು ಸಹ ಅವರ ಬಳಿ ಇವೆ. ಈ ಕಾಯ್ದೆಯ ವಿರುದ್ಧದ ಬಂಡಾಯದಲ್ಲಿ ಹಲವು ದಶಕಗಳಿಂದ 5000ಕ್ಕೂ ಹೆಚ್ಚು ಮಣಿಪುರದ ಜನ ಸಾವನಪ್ಪಿದ್ದಾರೆ. ಸೇನಾಪಡೆಗಳ ಮಿತಿಮೀರದ ದೌರ್ಜನ್ಯದಿಂದಾಗಿ ನೂರಾರು ಹೆಣ್ಣು ಮಕ್ಕಳು ಅತ್ಯಚಾರಕ್ಕೊಳಗಾಗಿದ್ದಾರೆ. ಹಾಗಾಗಿ ಆ ಕಾಯ್ದೆಯನ್ನು ವಾಪಸ್ ಪಡೆಯಬೇಕೆಂಬ ಏಕೈಕ ಬೇಡಿಕೆಯನ್ನಿಟ್ಟುಕೊಂಡು ಧೀರೋದಾತ್ತ ಹೋರಾಟ ನಡೆಸಿದವರು ಇರೋಮ್ ಶರ್ಮಿಳಾ.

ಇವರ ಹೋರಾಟವನ್ನು ಪ್ರಭುತ್ವ ಕ್ರೂರವಾಗಿ ಹತ್ತಿಕ್ಕಲು ಪ್ರಯತ್ನಿಸಿತು. ಉಪವಾಸ ಆರಂಭಿಸಿದ ಮೂರೇ ದಿವಸಕ್ಕೆ ಇವರ ಮೇಲೆ ಆತ್ಮಹತ್ಯೆಗೆ ಪ್ರಯತ್ನ ಎಂಬ ಕೇಸ್ ಜಡಿಯಿತು. ಶರ್ಮಿಳಾ ಜಗ್ಗಲಿಲ್ಲ. ನಂತರ ನ್ಯಾಯಾಂಗ ಬಂಧನ, ಜೈಲಿನಲ್ಲಿದ್ದಾಗಲೂ ಉಪವಾಸ ಮುಂದುವರೆಸಿದರು. ಕೊನೆಗೆ ಆಸ್ಪತ್ರೆಯಲ್ಲಿಟ್ಟು ಮೂಗಿನ ನಳಿಕೆ ಮೂಳಕ ಬಲವಂತವಾಗಿ ಆಹಾರ ನೀಡುವ ಪದ್ದತಿಯನ್ನು ಪೊಲೀಸರು ಅನುಸರಿಸಿದರು.

ಜಗತ್ತಿನಾದ್ಯಂತ ಇರೋಮ್ ಶರ್ಮಿಳಾರವರ ಹೋರಾಟಕ್ಕೆ ಬೆಂಬಲದ ಮಹಾಪೂರವೇ ಹರಿದುಬಂತು. ಇವರ ಹೋರಾಟಕ್ಕೆ ಸಹಮತ ಸೂಚಿಸಿ ದೇಶಾದ್ಯಂತ ಹೋರಾಟಗಳು ನಡೆದವು. ಆದರೆ ಕಿವುಡು, ಕುರುಡು ಸರ್ಕಾರ ಬಗ್ಗಲಿಲ್ಲ. ದಾಖಲೆಯ 16 ವರ್ಷಗಳ ಉಪವಾಸದ ನಂತರ ತಮ್ಮ ಹೋರಾಟದ ಮಾರ್ಗ ಬದಲಿಸಲು ಶರ್ಮಿಳಾ ನಿರ್ಧರಿಸಿದರು. ಅದರಂತೆ 2016ರ ಆಗಸ್ಟ್ 09 ರಂದು ಉಪವಾಸ ಸತ್ಯಾಗ್ರಹ ಕೊನೆಗೊಳಿಸಿ ಚುನಾವಣಾ ರಾಜಕೀಯದ ಮೂಲಕ ಹೋರಾಟ ಮುಂದುವರೆಸಲು ನಿರ್ಧರಿಸಿದರು.

ಪಕ್ಷ ಸೇರುವಂತೆ ಆಪ್ ಸೇರಿದಂತೆ ಹಲವು ಪಕ್ಷಗಳು ಆಹ್ವಾನಿಸಿದರು ಒಪ್ಪದೇ ಪೀಪಲ್ಸ್ ರೆಸೆರ್ಜೆನ್ಸ್ ಅಂಡ್ ಜಸ್ಟೀಸ್ ಅಲೆಯನ್ಸ್ ಎನ್ನುವ ಪಕ್ಷ ಸ್ಥಾಪಿಸಿದರು. 2017ರಲ್ಲಿ ಮಣಿಪುರದ ಸಿಎಂ ಆಗಿ ಅಲ್ಫಾ ಕಾಯ್ದೆಯನ್ನು ಕಿತ್ತೊಗೆಯುವ ಕನಸು ಕಂಡರು. ಅದರಂತೆ ಹಾಲಿ ಮುಖ್ಯಮಂತ್ರಿ ಒಕ್ರಮ್ ಇಬೋಬಿ ಸಿಂಗ್ ವಿರುದ್ಧ ತೋಬಲ್ ಕ್ಷೇತ್ರದಿಂದ ಕಣಕ್ಕಿಳಿದರು. ಆದರೆ ಚುನಾವಣಾ ಫಲಿತಾಂಶ ಮಾತ್ರ ಆಘಾತಕಾರಿಯಾಗಿತ್ತು. ಲಕ್ಷಾಂತರ ಜನ ಇರೋಮ್ ಶರ್ಮಿಳಾರವರ ಹೋರಾಟವನ್ನು ಬೆಂಬಲಿಸಿದ್ದರೂ ಅವರಿಗೆ ಬಿದ್ದಿದ್ದ ಓಟುಗಳು ಮಾತ್ರ ಕೇವಲ 90. ಇದು ಅವರಲ್ಲಿ ತೀವ್ರ ನಿರಾಶೆಯನ್ನುಂಟುಮಾಡಿತು. 

ಸೋತರು ಅವರು ಜನರನ್ನು ದೂಷಿಸಲಿಲ್ಲ. ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡರು. ನನ್ನ ಮನೋಭಾವ ಮತ್ತು ನನ್ನ ಅಂತರಂಗದ ಮಧ್ಯೆ ಎಲ್ಲೋ ಸಂಪರ್ಕ ತಪ್ಪಿಹೋಗಿದೆ. ರಾಜಕೀಯ ಕ್ಷೇತ್ರ ನನಗಾಗದು. ಆದ್ದರಿಂದ ರಾಜಕೀಯ ಕ್ಷೇತ್ರಕ್ಕೆ ವಿದಾಯ ಹೇಳುತ್ತೇನೆ ಎಂದರು. ಆದರೆ ಅವರೊಳಗಿದ್ದ ಕ್ರಾಂತಿಯ ಜ್ವಾಲೆ ಮಾತ್ರ ತಣ್ಣಗಾಯಿತು. ಚುನಾವಣಾ ರಾಜಕಾರಣದ ಮಿತಿಯು ಇದಕ್ಕೆ ಕಾರಣವಿರಬಹುದು. ಈ 16 ವರ್ಷಗಳ ಹೋರಾಟ ಯಾರಿಗಾಗಿ? ತನಗಾಗಿ ಮಾಡಿದ್ದು ಏನು ಎಂಬ ಪ್ರಶ್ನೆಗಳು ಬಹುಶಃ ಅವರ ಮನಸ್ಸಿನಲ್ಲಿ ಬಂದಿರಬೇಕು. 2017ರಲ್ಲಿ ತನ್ನ ಹೋರಾಟದ ಸಂಗಾತಿ, ಗೆಳೆಯ ಗೋವಾ ಮೂಲದ ಬ್ರಿಟಿಷ್ ಪ್ರಜೆ ಡೆಸ್ಮೆಂಡ್ ಕುಟಿನ್ಹೊರನ್ನು ವಿವಾಹವಾಗಿ ಕೊಡೈಕೆನೈಲ್‍ನಲ್ಲಿ ನೆಲೆಸಿದರು. ಈಗ ಆರೋಗ್ಯದ ಕಾರಣಕ್ಕೆ ಒಂದು ವರ್ಷದಿಂದ ಬೆಂಗಳೂರಿನಲ್ಲಿದ್ದ ಅವರು 2019ಕ್ಕೆ ಎರಡು ಮಕ್ಕಳ ಚೊಚ್ಚಲ ತಾಯಿಯಾಗಿದ್ದಾರೆ.

ಯಾವಾಗ ಜಾಗತೀಕರಣ ವಿಜೃಂಭಿಸಲು ಆರಂಭಿಸಿತ್ತೊ, ಯಾವಾಗ ಚಳವಳಿಗಳು ತನ್ನ ಶಕ್ತಿ ಕಳೆದುಕೊಳ್ಳುತ್ತಿದ್ದವೊ ಆಗ ಹೋರಾಟದ ಕಣಕ್ಕೆ ಧುಮುಕಿದ ಇರೋಮ್ ಶರ್ಮಿಳಾರವರ ಹೋರಾಟದ ಜೀವನ ಸಾಮಾಜಿಕ ಬದಲಾವಣೆ ಬಯಸುವ ಪ್ರತಿಯೊಬ್ಬ ವ್ಯಕ್ತಿಗಳು ಅಧ್ಯಯನ ಮಾಡಬೇಕಾದ ಸಂಗತಿಯಾಗಿದೆ. ಹೌದು ಇದು ಚಳವಳಿಗಳಿಗೆ ಸೂಕ್ತ ಕಾಲವಲ್ಲ. ಆದರೆ ಕಾಲ ಹೀಗೆಯೇ ಇರುವುದಿಲ್ಲವಲ್ಲ? ಮಣಿಪುರದ ಜನರ ಸಮಸ್ಯೆ ಬೆಂಗಳೂರಿನ ಬಹುಪಾಲು ಜನಕ್ಕೆ ಸಮಸ್ಯೆ ಅನ್ನಿಸಲೇ ಇಲ್ಲ. ಕಾಶ್ಮಿರದ ಜನರ ಸಮಸ್ಯೆ ಉತ್ತರ ಪ್ರದೇಶದ ಜನರಿಗೆ ಭಯೋತ್ಪಾದನೆಯಾಗಿಯೇ ಕಾಣಬಹುದು. ಹಾಗಾಗಿ ಇರೋಮ್ ಶರ್ಮಿಳಾರವರು ಚಳವಳಿ ಬಿಟ್ಟು ಸೆಟ್ಲ್ ಆದರು ಎಂಬ ಅಭಿಪ್ರಾಯಕ್ಕೆ ನಾವು ಬರುವುದು ಬೇಡ.

ಆಶಾವಾದದಿಂದ ಭವಿಷ್ಯವನ್ನು ಎದುರಿಸೋಣ. ಎಲ್ಲಾ ಚಳವಳಿಗಳಿಗೂ ತಕ್ಷಣದ ಪರಿಹಾರ ಸಿಗದಿದ್ದರೂ ಧೀರ್ಘಕಾಲೀನ ಶಾಶ್ವತ ಪರಿಹಾರಕ್ಕಾಗಿ ವಿನೂತನವಾಗಿ ಹೋರಾಟಕ್ಕಿಳಿಯೋಣ. ಸದ್ಯಕ್ಕೆ ಇರೋಮ್ ಶರ್ಮಿಳಾರವರಿಗೆ ಜನಿಸಿರುವ ಮೊದಲ ಮಗುವಿನ ಹೆಸರು ನಿಕ್ಸ್ ಶಾಕಿ (ಶರ್ಮಿಳಾರ ತಾಯಿ ಇರೋಮ್ ಶಾಕಿಯ ನೆನಪಿನಲ್ಲಿ) ಮತ್ತು ಎರಡನೇ ಮಗುವಿನ ಹೆಸರು ಅತುಮನ್ ತಾರ (ಬೌದ್ಧ ದೇವರ ನೆನಪಿನಲ್ಲಿ) ರಂತಹ ಮಕ್ಕಳ ಪೀಳಿಗೆಗೆಗಾದರು ಹಿಂಸೆ, ಅನ್ಯಾಯ, ಶೋಷಣೆಗಳು ಇಳಿಮುಖವಾಗುವ, ಶಾಂತಿ, ಪ್ರೀತಿ, ಸಾಮರಸ್ಯ, ಸಹೋದರತ್ವ, ಸಮಾನತೆ ಹೆಚ್ಚಾಗುವ ಸಮಾಜ ನಿರ್ಮಾಣವಾಗಲಿ ಎಂದು ಆಶಿಸೋಣ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...