Homeಚಳವಳಿಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು...

ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA ಕಾಯ್ದೆ

AFSPA ಕಾನೂನಿನಂತೆ ಅಲ್ಲಿನ ಸೇನಾಪಡೆಗಳಿಗೆ ಅನುಮತಿಯಿಲ್ಲದೇ ಯಾರನ್ನಾದರೂ ವಿಚಾರಣೆ ಮಾಡುವ, ಬಂಧಿಸುವ ಅಧಿಕಾರವಿದೆ. ಸೇನಾಪಡೆಗಳ ವಿರುದ್ಧ ದೂರು ನೀಡುವ ಹಕ್ಕು ನಾಗರಿಕರಿಗಿಲ್ಲ!

- Advertisement -
- Advertisement -

ನವೆಂಬರ್ 02, 2000ನೇ ಇಸವಿ. ಅಸ್ಸಾಂ ರಾಜ್ಯದ ಇಂಫಾಲ ಬಳಿ ಇರುವ ಮಾಲೋಮ್ ನಗರದಲ್ಲಿ 10 ಜನ ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿರುತ್ತಾರೆ. ಅಲ್ಲಿಗೆ ಏಕಾಏಕಿ ನುಗ್ಗಿದ ಅಸ್ಸಾಂ ರೈಫಲ್ಸ್ ನ ಸೈನಿಕರು ಗುಂಡಿನ ದಾಳಿ ನಡೆಸಿ 10 ಜನರನ್ನು ಕೊಂದು ಹಾಕುತ್ತಾರೆ. ಈ ಘೋರ ದುರಂತದ ವಿರುದ್ಧ ಅಸ್ಸಾಂ ಜನತೆ ಕಂಬನಿ ಮಿಡಿಯುತ್ತದೆ. ಆದರೆ 28 ವರ್ಷದ ಒಬ್ಬ ಯುವತಿಯೊಬ್ಬರು ದಿಟ್ಟ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅದೆಂದರೆ ಆ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯಕ್ಕಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ. ಅಲ್ಲಿಂದ ಆರಂಭವಾದ ಇರೋಮ್ ಶರ್ಮಿಳಾರವರ ಉಪವಾಸ ಸತ್ಯಾಗ್ರಹ ಹೋರಾಟ 2016ರವರೆಗೆ ಅಂದರೆ ಸತತ 16 ವರ್ಷ ಮುಂದುವರೆಯುತ್ತದೆ…

ಈಗ 21 ವರ್ಷಗಳ ನಂತರ ಅದೇ ಅಮಾನವೀಯ ದಾಳಿ ಪಕ್ಕದ ನ್ಯಾಗಲ್ಯಾಂಡ್‌ ರಾಜ್ಯದಲ್ಲಿ ಸಂಭವಿಸಿದೆ. ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆಯು ಗುಂಡಿನ ದಾಳಿ ನಡೆಸಿ 14 ಅಮಾಯಕ ನಾಗರೀಕರನ್ನು ಹತ್ಯೆಗೈದಿದೆ. ಘಟನೆಯಲ್ಲಿ ಓರ್ವ ಯೋಧನು ಪ್ರಾಣ ಕಳೆದುಕೊಳ್ಳಬೇಕಾಗಿದೆ. ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ನಡೆದ ನಾಗರಿಕರ ಹತ್ಯೆಗಳ ಹೊಣೆಗಾರಿಕೆಯನ್ನು ಸೇನೆ ಹೊರುತ್ತಿದೆ ಎಂದು ದಿಮಾಪುರ್ ಮೂಲದ 3 ಕಾರ್ಪ್ಸ್ ಹೇಳಿದೆ. ಈಘಟನೆಯ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಾಗಲ್ಯಾಂಡ್‌ನಲ್ಲಿ ಪ್ರತಿಭಟನೆ ತಾರಕಕ್ಕೇರಿದೆ.

ಈ 21 ವರ್ಷಗಳ ನಡುವೆ ಇಂತಹ ನೂರಾರು ಹತ್ಯಾಕಾಂಡಗಳು ನಡೆದಿವೆ. ಕೆಲವು ವರದಿಯಾದರೆ ಹಲವು ವರದಿಯಾಗದೆ ಹೂತುಹೋಗಿವೆ. ಮುಖ್ಯವಾಗಿ ಹುಳುಗಳ ರೀತಿಯಲ್ಲಿ ಮನುಷ್ಯರನ್ನು ಕೊಂದು ಹಾಕಲು ಸೇನೆಗೆ ಹೇಗೆ ಮನಸ್ಸು ಬರುತ್ತದೆ? ಅವರಿಗೆ ಶಿಕ್ಷೆಯ ಭಯವಿಲ್ಲವೇ? ಖಂಡಿತ ಇಲ್ಲ. ಏಕೆಂದರೆ ಅವರಿಗೆ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA’ದ ಬಲವಿದೆ. ಇಲ್ಲಿ ಸೇನಾಪಡೆಗಳಿಗೆ ಅನುಮತಿಯಿಲ್ಲದೇ ಯಾರನ್ನಾದರೂ ವಿಚಾರಣೆ ಮಾಡುವ, ಬಂಧಿಸುವ ಅಧಿಕಾರವಿರುತ್ತದೆ. ಈ ವಿಚಾರವಾಗಿ ಸೇನಾಪಡೆಗಳ ವಿರುದ್ಧ ದೂರು ನೀಡುವ ಹಕ್ಕು ನಾಗರಿಕರಿಗಿರುವುದಿಲ್ಲ!

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.

ಈ AFSPA ಕಾಯ್ದೆಯಿಂದಾಗಿ ಸೇನೆಯು ಪ್ರತಿನಿತ್ಯ ಅಮಾಯಕರನ್ನು ಹಿಂಸಿಸುತ್ತಿದೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದೆ. ಪ್ರಭುತ್ವದ ವಿರುದ್ಧ ಪ್ರತಿಭಟಿಸುವವರನ್ನು ಹತ್ಯೆಗೈಯ್ಯುತ್ತಿದೆ. ಸಾವಿರಾರು ನಿರಪರಾಧಿಗಳ ಮೇಲೆ ಪ್ರಕರಣಗಳು ದಾಖಲಾಗಿವೆ. ಸೇನೆಗೆ ಅಪರಿಮಿತ ಅಧಿಕಾರ ಸಿಕ್ಕಿರುವುದು ಅವರನ್ನು ಕುರುಡಾಗಿ ಮಾಡಿದೆ ಎಂದು ನೂರಾರು ಹೋರಾಟಗಳು ನಡೆದವು. 2004ರಲ್ಲಿ ಮಣಿಪುರದಲ್ಲಿ ತಂಗ್ಜಮ್ ಮನೋರಮಾ ಎಂಬ ಯುವತಿಯ ಮೇಲೆ ಅಸ್ಸಾಂ ರೈಫಲ್ಸ್ ಸೈನಿಕರು ಅತ್ಯಾಚಾರವೆಸಗಿ ಹತ್ಯೆ ಮಾಡಿದರು ಎಂಬ ಆರೋಪ ಕೇಳಿಬಂತು. ಆಗ ಆಕ್ರೋಶಗೊಂಡ 12 ಮಹಿಳೆಯರು ಸೇನೆಯ ಕಚೇರಿ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು. ಸೈನಿಕರೆ ಬನ್ನಿ ನಮ್ಮನ್ನು ಅತ್ಯಾಚಾರ ಮಾಡಿ, ನಮ್ಮನ್ನು ಕೊಲ್ಲಿ ಎಂದು ಕೂಗಿದರು. ಈ ಚಿತ್ರ ಇಡೀ ಪ್ರಪಂಚಾದಾದ್ಯಂತ ವ್ಯಾಪಕವಾಗಿ ಹರಡಿತ್ತಲ್ಲದೆ AFSPA ಕಾಯ್ದೆ ಭಾರತ ಈಶಾನ್ಯ ರಾಜ್ಯಗಳ ಜನರ ಮೇಲೆ ಮಾಡುತ್ತಿರುವ ಕ್ರೂರ ಗಾಯವನ್ನು ಪ್ರಪಂಚಕ್ಕೆ ಪರಿಚಯಿಸಿತು.

AFSPA ವಿರುದ್ಧ ನಡೆದ ನೂರಾರು ಹೋರಾಟಗಳನ್ನು ಪ್ರಭುತ್ವ ಕ್ರೂರವಾಗಿ ಹತ್ತಿಕ್ಕಲು ಪ್ರಯತ್ನಿಸಿತು. ಉಪವಾಸ ಆರಂಭಿಸಿದ್ದ ಇರೋಮ್ ಶರ್ಮಿಳಾರವರ ಮೇಲೆ ಮೂರೇ ದಿವಸಕ್ಕೆ ಇವರ ಮೇಲೆ ಆತ್ಮಹತ್ಯೆಗೆ ಪ್ರಯತ್ನ ಎಂಬ ಕೇಸ್ ಜಡಿಯಿತು. ಶರ್ಮಿಳಾ ಜಗ್ಗಲಿಲ್ಲ. ನಂತರ ನ್ಯಾಯಾಂಗ ಬಂಧನ, ಜೈಲಿನಲ್ಲಿದ್ದಾಗಲೂ ಉಪವಾಸ ಮುಂದುವರೆಸಿದರು. ಕೊನೆಗೆ ಆಸ್ಪತ್ರೆಯಲ್ಲಿಟ್ಟು ಮೂಗಿನ ನಳಿಕೆ ಮೂಳಕ ಬಲವಂತವಾಗಿ ಆಹಾರ ನೀಡುವ ಪದ್ದತಿಯನ್ನು ಪೊಲೀಸರು ಅನುಸರಿಸಿದರು.

ಜಗತ್ತಿನಾದ್ಯಂತ ಇರೋಮ್ ಶರ್ಮಿಳಾರವರ ಹೋರಾಟಕ್ಕೆ ಬೆಂಬಲದ ಮಹಾಪೂರವೇ ಹರಿದುಬಂತು. ಇವರ ಹೋರಾಟಕ್ಕೆ ಸಹಮತ ಸೂಚಿಸಿ ದೇಶಾದ್ಯಂತ ಹೋರಾಟಗಳು ನಡೆದವು. ಆದರೆ ಕಿವುಡು, ಕುರುಡು ಸರ್ಕಾರ ಬಗ್ಗಲಿಲ್ಲ. ದಾಖಲೆಯ 16 ವರ್ಷಗಳ ಉಪವಾಸದ ನಂತರ ತಮ್ಮ ಹೋರಾಟದ ಮಾರ್ಗ ಬದಲಿಸಲು ಶರ್ಮಿಳಾ ನಿರ್ಧರಿಸಿದರು. ಅದರಂತೆ 2016ರ ಆಗಸ್ಟ್ 09 ರಂದು ಉಪವಾಸ ಸತ್ಯಾಗ್ರಹ ಕೊನೆಗೊಳಿಸಿ ಚುನಾವಣಾ ರಾಜಕೀಯದ ಮೂಲಕ ಹೋರಾಟ ಮುಂದುವರೆಸಲು ನಿರ್ಧರಿಸಿದರು.

ಇಂದು ಅದೇ AFSPA ಕಾಯ್ದೆಗೆ 15 ಜನರು ಬಲಿಯಾಗಿದ್ದಾರೆ. ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ. ಈಶಾನ್ಯ ರಾಜ್ಯ ಸರ್ಕಾರಗಳಿಗೆ ಆ ಕಾಯ್ದೆಯ ಅಪಾಯಗಳು ಈಗ ಗೋಚರಿಸುತ್ತಿವೆ. ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು AFSPA ವಿಸ್ತರಣೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಕೂಡ AFSPA ರದ್ದಾಗಬೇಕೆಂದು ಒತ್ತಾಯಿಸಿದ್ದಾರೆ. ವಿಶೇ‍ಷವೆಂದರೆ ಈ ಇಬ್ಬರೂ ಸಹ ಬಿಜೆಪಿ ಮೈತ್ರಿ ಸರ್ಕಾರದವರಾಗಿದ್ದಾರೆ.

ಈಗಲಾದರೂ ಈ ವಿವಾದಾತ್ಮಕ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡು ಈಶಾನ್ಯ ರಾಜ್ಯಗಳಲ್ಲಿ ಜನರು ನೆಮ್ಮದಿ ಶಾಂತಿಯಿಂದ ಬದುಕುವಂತೆ ಮಾಡಬೇಕಿದೆ. ಇಲ್ಲದಿದ್ದರೆ ಪ್ರಭುತ್ವ ಮತ್ತು ನಾಗರೀಕರ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗುವುದರಲ್ಲಿ ಸಂಶಯವಿಲ್ಲ.


ಇದನ್ನೂ ಓದಿ; ನಾಗಾಲ್ಯಾಂಡ್ ಹತ್ಯಾಕಾಂಡ: ವಿಷಾದ ವ್ಯಕ್ತಪಡಿಸಿದ ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...