Homeಚಳವಳಿಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು...

ಇರೋಮ್ ಶರ್ಮಿಳಾರ ಉಪವಾಸ, Indian Army Rape us ಎಂಬ ಮಹಿಳೆಯರ ಬೆತ್ತಲೆ ಪ್ರತಿಭಟನೆ ಮತ್ತು ಕರಾಳ AFSPA ಕಾಯ್ದೆ

AFSPA ಕಾನೂನಿನಂತೆ ಅಲ್ಲಿನ ಸೇನಾಪಡೆಗಳಿಗೆ ಅನುಮತಿಯಿಲ್ಲದೇ ಯಾರನ್ನಾದರೂ ವಿಚಾರಣೆ ಮಾಡುವ, ಬಂಧಿಸುವ ಅಧಿಕಾರವಿದೆ. ಸೇನಾಪಡೆಗಳ ವಿರುದ್ಧ ದೂರು ನೀಡುವ ಹಕ್ಕು ನಾಗರಿಕರಿಗಿಲ್ಲ!

- Advertisement -
- Advertisement -

ನವೆಂಬರ್ 02, 2000ನೇ ಇಸವಿ. ಅಸ್ಸಾಂ ರಾಜ್ಯದ ಇಂಫಾಲ ಬಳಿ ಇರುವ ಮಾಲೋಮ್ ನಗರದಲ್ಲಿ 10 ಜನ ಬಸ್ ನಿಲ್ದಾಣದಲ್ಲಿ ಬಸ್‍ಗಾಗಿ ಕಾಯುತ್ತಿರುತ್ತಾರೆ. ಅಲ್ಲಿಗೆ ಏಕಾಏಕಿ ನುಗ್ಗಿದ ಅಸ್ಸಾಂ ರೈಫಲ್ಸ್ ನ ಸೈನಿಕರು ಗುಂಡಿನ ದಾಳಿ ನಡೆಸಿ 10 ಜನರನ್ನು ಕೊಂದು ಹಾಕುತ್ತಾರೆ. ಈ ಘೋರ ದುರಂತದ ವಿರುದ್ಧ ಅಸ್ಸಾಂ ಜನತೆ ಕಂಬನಿ ಮಿಡಿಯುತ್ತದೆ. ಆದರೆ 28 ವರ್ಷದ ಒಬ್ಬ ಯುವತಿಯೊಬ್ಬರು ದಿಟ್ಟ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅದೆಂದರೆ ಆ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯಕ್ಕಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ. ಅಲ್ಲಿಂದ ಆರಂಭವಾದ ಇರೋಮ್ ಶರ್ಮಿಳಾರವರ ಉಪವಾಸ ಸತ್ಯಾಗ್ರಹ ಹೋರಾಟ 2016ರವರೆಗೆ ಅಂದರೆ ಸತತ 16 ವರ್ಷ ಮುಂದುವರೆಯುತ್ತದೆ…

ಈಗ 21 ವರ್ಷಗಳ ನಂತರ ಅದೇ ಅಮಾನವೀಯ ದಾಳಿ ಪಕ್ಕದ ನ್ಯಾಗಲ್ಯಾಂಡ್‌ ರಾಜ್ಯದಲ್ಲಿ ಸಂಭವಿಸಿದೆ. ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆಯು ಗುಂಡಿನ ದಾಳಿ ನಡೆಸಿ 14 ಅಮಾಯಕ ನಾಗರೀಕರನ್ನು ಹತ್ಯೆಗೈದಿದೆ. ಘಟನೆಯಲ್ಲಿ ಓರ್ವ ಯೋಧನು ಪ್ರಾಣ ಕಳೆದುಕೊಳ್ಳಬೇಕಾಗಿದೆ. ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ನಡೆದ ನಾಗರಿಕರ ಹತ್ಯೆಗಳ ಹೊಣೆಗಾರಿಕೆಯನ್ನು ಸೇನೆ ಹೊರುತ್ತಿದೆ ಎಂದು ದಿಮಾಪುರ್ ಮೂಲದ 3 ಕಾರ್ಪ್ಸ್ ಹೇಳಿದೆ. ಈಘಟನೆಯ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಾಗಲ್ಯಾಂಡ್‌ನಲ್ಲಿ ಪ್ರತಿಭಟನೆ ತಾರಕಕ್ಕೇರಿದೆ.

ಈ 21 ವರ್ಷಗಳ ನಡುವೆ ಇಂತಹ ನೂರಾರು ಹತ್ಯಾಕಾಂಡಗಳು ನಡೆದಿವೆ. ಕೆಲವು ವರದಿಯಾದರೆ ಹಲವು ವರದಿಯಾಗದೆ ಹೂತುಹೋಗಿವೆ. ಮುಖ್ಯವಾಗಿ ಹುಳುಗಳ ರೀತಿಯಲ್ಲಿ ಮನುಷ್ಯರನ್ನು ಕೊಂದು ಹಾಕಲು ಸೇನೆಗೆ ಹೇಗೆ ಮನಸ್ಸು ಬರುತ್ತದೆ? ಅವರಿಗೆ ಶಿಕ್ಷೆಯ ಭಯವಿಲ್ಲವೇ? ಖಂಡಿತ ಇಲ್ಲ. ಏಕೆಂದರೆ ಅವರಿಗೆ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA’ದ ಬಲವಿದೆ. ಇಲ್ಲಿ ಸೇನಾಪಡೆಗಳಿಗೆ ಅನುಮತಿಯಿಲ್ಲದೇ ಯಾರನ್ನಾದರೂ ವಿಚಾರಣೆ ಮಾಡುವ, ಬಂಧಿಸುವ ಅಧಿಕಾರವಿರುತ್ತದೆ. ಈ ವಿಚಾರವಾಗಿ ಸೇನಾಪಡೆಗಳ ವಿರುದ್ಧ ದೂರು ನೀಡುವ ಹಕ್ಕು ನಾಗರಿಕರಿಗಿರುವುದಿಲ್ಲ!

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.

ಈ AFSPA ಕಾಯ್ದೆಯಿಂದಾಗಿ ಸೇನೆಯು ಪ್ರತಿನಿತ್ಯ ಅಮಾಯಕರನ್ನು ಹಿಂಸಿಸುತ್ತಿದೆ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದೆ. ಪ್ರಭುತ್ವದ ವಿರುದ್ಧ ಪ್ರತಿಭಟಿಸುವವರನ್ನು ಹತ್ಯೆಗೈಯ್ಯುತ್ತಿದೆ. ಸಾವಿರಾರು ನಿರಪರಾಧಿಗಳ ಮೇಲೆ ಪ್ರಕರಣಗಳು ದಾಖಲಾಗಿವೆ. ಸೇನೆಗೆ ಅಪರಿಮಿತ ಅಧಿಕಾರ ಸಿಕ್ಕಿರುವುದು ಅವರನ್ನು ಕುರುಡಾಗಿ ಮಾಡಿದೆ ಎಂದು ನೂರಾರು ಹೋರಾಟಗಳು ನಡೆದವು. 2004ರಲ್ಲಿ ಮಣಿಪುರದಲ್ಲಿ ತಂಗ್ಜಮ್ ಮನೋರಮಾ ಎಂಬ ಯುವತಿಯ ಮೇಲೆ ಅಸ್ಸಾಂ ರೈಫಲ್ಸ್ ಸೈನಿಕರು ಅತ್ಯಾಚಾರವೆಸಗಿ ಹತ್ಯೆ ಮಾಡಿದರು ಎಂಬ ಆರೋಪ ಕೇಳಿಬಂತು. ಆಗ ಆಕ್ರೋಶಗೊಂಡ 12 ಮಹಿಳೆಯರು ಸೇನೆಯ ಕಚೇರಿ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು. ಸೈನಿಕರೆ ಬನ್ನಿ ನಮ್ಮನ್ನು ಅತ್ಯಾಚಾರ ಮಾಡಿ, ನಮ್ಮನ್ನು ಕೊಲ್ಲಿ ಎಂದು ಕೂಗಿದರು. ಈ ಚಿತ್ರ ಇಡೀ ಪ್ರಪಂಚಾದಾದ್ಯಂತ ವ್ಯಾಪಕವಾಗಿ ಹರಡಿತ್ತಲ್ಲದೆ AFSPA ಕಾಯ್ದೆ ಭಾರತ ಈಶಾನ್ಯ ರಾಜ್ಯಗಳ ಜನರ ಮೇಲೆ ಮಾಡುತ್ತಿರುವ ಕ್ರೂರ ಗಾಯವನ್ನು ಪ್ರಪಂಚಕ್ಕೆ ಪರಿಚಯಿಸಿತು.

AFSPA ವಿರುದ್ಧ ನಡೆದ ನೂರಾರು ಹೋರಾಟಗಳನ್ನು ಪ್ರಭುತ್ವ ಕ್ರೂರವಾಗಿ ಹತ್ತಿಕ್ಕಲು ಪ್ರಯತ್ನಿಸಿತು. ಉಪವಾಸ ಆರಂಭಿಸಿದ್ದ ಇರೋಮ್ ಶರ್ಮಿಳಾರವರ ಮೇಲೆ ಮೂರೇ ದಿವಸಕ್ಕೆ ಇವರ ಮೇಲೆ ಆತ್ಮಹತ್ಯೆಗೆ ಪ್ರಯತ್ನ ಎಂಬ ಕೇಸ್ ಜಡಿಯಿತು. ಶರ್ಮಿಳಾ ಜಗ್ಗಲಿಲ್ಲ. ನಂತರ ನ್ಯಾಯಾಂಗ ಬಂಧನ, ಜೈಲಿನಲ್ಲಿದ್ದಾಗಲೂ ಉಪವಾಸ ಮುಂದುವರೆಸಿದರು. ಕೊನೆಗೆ ಆಸ್ಪತ್ರೆಯಲ್ಲಿಟ್ಟು ಮೂಗಿನ ನಳಿಕೆ ಮೂಳಕ ಬಲವಂತವಾಗಿ ಆಹಾರ ನೀಡುವ ಪದ್ದತಿಯನ್ನು ಪೊಲೀಸರು ಅನುಸರಿಸಿದರು.

ಜಗತ್ತಿನಾದ್ಯಂತ ಇರೋಮ್ ಶರ್ಮಿಳಾರವರ ಹೋರಾಟಕ್ಕೆ ಬೆಂಬಲದ ಮಹಾಪೂರವೇ ಹರಿದುಬಂತು. ಇವರ ಹೋರಾಟಕ್ಕೆ ಸಹಮತ ಸೂಚಿಸಿ ದೇಶಾದ್ಯಂತ ಹೋರಾಟಗಳು ನಡೆದವು. ಆದರೆ ಕಿವುಡು, ಕುರುಡು ಸರ್ಕಾರ ಬಗ್ಗಲಿಲ್ಲ. ದಾಖಲೆಯ 16 ವರ್ಷಗಳ ಉಪವಾಸದ ನಂತರ ತಮ್ಮ ಹೋರಾಟದ ಮಾರ್ಗ ಬದಲಿಸಲು ಶರ್ಮಿಳಾ ನಿರ್ಧರಿಸಿದರು. ಅದರಂತೆ 2016ರ ಆಗಸ್ಟ್ 09 ರಂದು ಉಪವಾಸ ಸತ್ಯಾಗ್ರಹ ಕೊನೆಗೊಳಿಸಿ ಚುನಾವಣಾ ರಾಜಕೀಯದ ಮೂಲಕ ಹೋರಾಟ ಮುಂದುವರೆಸಲು ನಿರ್ಧರಿಸಿದರು.

ಇಂದು ಅದೇ AFSPA ಕಾಯ್ದೆಗೆ 15 ಜನರು ಬಲಿಯಾಗಿದ್ದಾರೆ. ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿವೆ. ಈಶಾನ್ಯ ರಾಜ್ಯ ಸರ್ಕಾರಗಳಿಗೆ ಆ ಕಾಯ್ದೆಯ ಅಪಾಯಗಳು ಈಗ ಗೋಚರಿಸುತ್ತಿವೆ. ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು AFSPA ವಿಸ್ತರಣೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಕೂಡ AFSPA ರದ್ದಾಗಬೇಕೆಂದು ಒತ್ತಾಯಿಸಿದ್ದಾರೆ. ವಿಶೇ‍ಷವೆಂದರೆ ಈ ಇಬ್ಬರೂ ಸಹ ಬಿಜೆಪಿ ಮೈತ್ರಿ ಸರ್ಕಾರದವರಾಗಿದ್ದಾರೆ.

ಈಗಲಾದರೂ ಈ ವಿವಾದಾತ್ಮಕ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡು ಈಶಾನ್ಯ ರಾಜ್ಯಗಳಲ್ಲಿ ಜನರು ನೆಮ್ಮದಿ ಶಾಂತಿಯಿಂದ ಬದುಕುವಂತೆ ಮಾಡಬೇಕಿದೆ. ಇಲ್ಲದಿದ್ದರೆ ಪ್ರಭುತ್ವ ಮತ್ತು ನಾಗರೀಕರ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗುವುದರಲ್ಲಿ ಸಂಶಯವಿಲ್ಲ.


ಇದನ್ನೂ ಓದಿ; ನಾಗಾಲ್ಯಾಂಡ್ ಹತ್ಯಾಕಾಂಡ: ವಿಷಾದ ವ್ಯಕ್ತಪಡಿಸಿದ ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...