Homeಕರ್ನಾಟಕಕಬ್ಬಿಣದ ಅದಿರಿನ ಮೇಲಿನ 'ಅರಣ್ಯ ಉತ್ಪನ್ನ' ಟ್ಯಾಗ್ ತೆಗೆದುಹಾಕುವ ಬಗ್ಗೆ ರಾಜ್ಯ ಸರ್ಕಾರ ಪ್ರಸ್ತಾಪ -...

ಕಬ್ಬಿಣದ ಅದಿರಿನ ಮೇಲಿನ ‘ಅರಣ್ಯ ಉತ್ಪನ್ನ’ ಟ್ಯಾಗ್ ತೆಗೆದುಹಾಕುವ ಬಗ್ಗೆ ರಾಜ್ಯ ಸರ್ಕಾರ ಪ್ರಸ್ತಾಪ – ವಿರೋಧ

- Advertisement -
- Advertisement -

ಕಬ್ಬಿಣದ ಅದಿರಿಗೆ ನೀಡಲಾಗಿರುವ ಅರಣ್ಯ ಉತ್ಪನ್ನ ಎಂಬ ವರ್ಗೀಕರಣದ ಟ್ಯಾಗ್ ಅನ್ನು ತೆಗೆದುಹಾಕುವ ಬಗ್ಗೆ ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದು, ಈ ಬಗ್ಗೆ ಬಗ್ಗೆ ವನ್ಯಜೀವಿ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಅಂತಹ ಕ್ರಮವು ಕಾನೂನುಬದ್ಧವಾಗಿ ಅನೂರ್ಜಿತವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಕಬ್ಬಿಣದ ಅದಿರಿನ

ಖನಿಜಗಳು ಮತ್ತು ಗಣಿ ಮತ್ತು ಕ್ವಾರಿಗಳ ಎಲ್ಲಾ ಉತ್ಪನ್ನಗಳು ಅರಣ್ಯ ಉತ್ಪನ್ನಗಳ ಅಡಿಯಲ್ಲಿ ಬರುತ್ತವೆ ಎಂದು ‘ಭಾರತೀಯ ಅರಣ್ಯ ಕಾಯಿದೆ-1927’ ಹೇಳುತ್ತದೆ. ಇದನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಈ ಟ್ಯಾಗ್ ಅನ್ನು ತಿದ್ದುಪಡಿ ಮಾಡಲು ರಾಜ್ಯಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ತಜ್ಞರು ಪ್ರತಿಪಾದಿಸಿದ್ದಾರೆ. ಕಬ್ಬಿಣದ ಅದಿರಿನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಷ್ಟೆ ಅಲ್ಲದೆ, ವನ್ಯಜೀವಿ ಪ್ರದೇಶಗಳಿಗೆ ಒಳಪಡದ ಪ್ರದೇಶಗಳಲ್ಲಿ 24/7 ಗಣಿಗಾರಿಕೆಯನ್ನು ಪ್ರಸ್ತಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಎರಡೂ ಪ್ರಸ್ತಾವನೆಗಳನ್ನು ನವೆಂಬರ್ 14 ರಂದು ಸಚಿವ ಸಂಪುಟದ ಮುಂದೆ ಇಡಲಾಗಿದೆ ಎಂದು ವರದಿಯಾಗಿದೆ.

ಖನಿಜಗಳು ಮತ್ತು ಗಣಿ ಮತ್ತು ಕ್ವಾರಿಗಳ ಎಲ್ಲಾ ಉತ್ಪನ್ನಗಳು ಅರಣ್ಯ ಉತ್ಪನ್ನಗಳಾಗಿವೆ ಎಂಬ ವ್ಯಾಖ್ಯಾನವನ್ನು ಒಳಗೊಂಡಿರುವ ಭಾರತೀಯ ಅರಣ್ಯ ಕಾಯಿದೆದೆ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ವೈಲ್ಡ್‌ಲೈಫ್‌ ಫಸ್ಟ್ ಮತ್ತು ವನ್ಯಜೀವಿ ರಾಷ್ಟ್ರೀಯ ಮಂಡಳಿಯ ಮಾಜಿ ಸದಸ್ಯ ಪ್ರವೀಣ್ ಭಾರ್ಗವ್ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ.

“ರಾಜ್ಯ ಸರ್ಕಾರ ಅರಣ್ಯ ಕಾಯಿದೆಗೆ ತಿದ್ದುಪಡಿ ಮಾಡಿದರೂ, ಅದು ಚಾಲ್ತಿಯಲ್ಲಿರುವ ಕೇಂದ್ರದ ಕಾಯ್ದೆಗೆ ಹೊಂದಿಕೆಯಾಗುವುದಿಲ್ಲ. ರಾಜ್ಯ ಸರ್ಕರದ ಅಂತಹ ಯಾವುದೇ ಪ್ರಯತ್ನವನ್ನು ನಿಷ್ಪರಿಣಾಮಕಾರಿಯಾಗಿದೆ. ಅರಣ್ಯ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಸರ್ಕಾರವು ಈ ಪ್ರಯತ್ನವನ್ನು ಕೈಬಿಡಲು ನಾವು ಸಲಹೆ ನೀಡುತ್ತೇವೆ. ಇದು ಸಮರ್ಥನೀಯವಲ್ಲ, ಮಾತ್ರವಲ್ಲದೆ 48-ಎ ವಿಧಿಯ ಅಡಿಯಲ್ಲಿ ಸಾಂವಿಧಾನಿಕ ಆದೇಶವನ್ನು ಉಲ್ಲಂಘಿಸುತ್ತದೆ” ಎಂದು ಭಾರ್ಗವ್ ಹೇಳಿದ್ದಾರೆ.

ರಾಜ್ಯದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರು ಎಂಬ ನಾಲ್ಕು ಗಣಿ ಸಮೃದ್ಧ ಜಿಲ್ಲೆಗಳಿದ್ದು, ಇಲ್ಲಿ ನಿರಂತರ ಗಣಿಗಾರಿಕೆ ನಡೆಸುವ ಉದ್ದೇಶದಿಂದ ಸರ್ಕಾರ ಮಾಡಿರುವ ಮತ್ತೊಂದು ಪ್ರಸ್ತಾಪದ ಬಗ್ಗೆ ಕೂಡಾ ಗಣಿಗಾರಿಕೆ ತಜ್ಞರು ಕೂಡ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಗಣಿ ಸುರಕ್ಷತಾ ಮಾರ್ಗಸೂಚಿಗಳ ಅಡಿಯಲ್ಲಿ ಸಮಯಕ್ಕೆ ಸಂಬಂಧಿಸಿದಂತೆ ಕೆಲವು ನಿಯಮಗಳಿವೆ ಎಂದು ಬಳ್ಳಾರಿಯ ಗಣಿಗಾರಿಕೆ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಗ್ರಾಮಸ್ಥರು; ಜಾತಿ ನಿಂದನೆ ಪ್ರಕರಣ ದಾಖಲು

ಯುಪಿ: ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಗ್ರಾಮಸ್ಥರು; ಜಾತಿ ನಿಂದನೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...