Homeಕರ್ನಾಟಕತುಮಕೂರು ನಗರಪಾಲಿಕೆ-ಸ್ಮಾರ್ಟಸಿಟಿ ಕಾಮಗಾರಿಯಲ್ಲಿ ಕೋಟ್ಯಂತರ ರೂ ಅವ್ಯವಹಾರ: ಸದಸ್ಯ ಕುಮಾರ್ ಆರೋಪ

ತುಮಕೂರು ನಗರಪಾಲಿಕೆ-ಸ್ಮಾರ್ಟಸಿಟಿ ಕಾಮಗಾರಿಯಲ್ಲಿ ಕೋಟ್ಯಂತರ ರೂ ಅವ್ಯವಹಾರ: ಸದಸ್ಯ ಕುಮಾರ್ ಆರೋಪ

- Advertisement -
- Advertisement -

ತುಮಕೂರು ಮಹಾನಗರ ಪಾಲಿಕೆ-ಸ್ಮಾರ್ಟ್ ಸಿಟಿ ಲಿಮಿಟೆಡ್ ಜಂಟಿಯಾಗಿ ನಡೆಸಿರುವ ಕಾಮಗಾರಿಗಳಲ್ಲಿ ಭಾರೀ ಪ್ರಮಾಣದಲ್ಲಿ ಅವ್ಯವಹಾರ ನಡೆದಿದ್ದು ಕೋಟ್ಯಂತರ ರೂಪಾಯಿಗಳನ್ನು ಕೊಳ್ಳೆಹೊಡೆಯಲಾಗಿದೆ ಎಂದು ಪಾಲಿಕೆ ಸದಸ್ಯ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಏಳು ವರ್ಷಗಳಲ್ಲಿ ಸುಮಾರು 49 ಕೋಟಿ ರೂಗಳಿಗೂ ಹೆಚ್ಚು ಮೊತ್ತದ ಅವ್ಯವಹಾರ ನಡೆದಿದೆ ಎಂದಿದ್ದಾರೆ. ಕಾಮಗಾರಿ ಗುತ್ತಿಗೆ ಪಡೆದಿರುವ ವೈಬ್ರೈಟ್ ವೈಪ್ಲೆಟ್ ಟೆಕ್ನಾಲಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಂತಹ ಕಂಪನಿಗೆ ಕಾಮಗಾರಿ ಗುತ್ತಿಗೆ ನೀಡಿದೆ ಇದು ಒಪ್ಪಂದದ ಉಲ್ಲಂಘನೆಯಾಗಿದೆ ಎಂದಿದ್ದಾರೆ.

ಪಾಲಿಕೆಯವರು ಹಣಕಾಸು ಅನುಮೋದನೆಗೆ ಯಾವುದೇ ಸಭೆ ಮಾಡಿಲ್ಲ ಎಂದು ಉತ್ತರ ನೀಡಿದ್ದಾರೆ. ಆದರೆ ಸಭೆ ನಡೆದಿದೆ. ಸಭೆಯಲ್ಲಿ 45 ಕೋಟಿ ರೂಪಾಯಿ ಹೆಚ್ಚುವರಿ ಅನುಮೋದನೆ ಪಡೆದಿರುವ ಬಗ್ಗೆ ಪ್ರಸ್ತಾಪವಾಗಿದೆ. ಇದೊಂದು ಹಗರಣ. ಇಷ್ಟೊಂದು ಪ್ರಮಾಣದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಪ್ರಗತಿ ವರದಿ ಪಡೆದುಕೊಂಡಿಲ್ಲ. ಇದು ಒಪ್ಪಂದದ ಸ್ಪಷ್ಟ ಉಲ್ಲಂಘನೆ ಮಾಡಿದಂತಾಗಿದೆ ಎಂದು ಆಪಾದಿಸಿದ್ದಾರೆ.

ಸರ್ಕಾರದ ಆದೇಶದ ಪ್ರಕಾರ 50 ಲಕ್ಷ ರೂಪಾಯಿಗೂ ಹೆಚ್ಚಿನ ಕಾಮಗಾರಿಗೆ ಅನುಮೋದನೆ ಪಡೆಯಬೇಕಾದರೆ ಟೆಂಡರ್ ಕರೆಯಬೇಕು. ಆದರೆ ಅಧಿಕಾರಿಗಳು ಈ ನಿಯಮಗಳನ್ನು ಅನುಸರಿಸಿಲ್ಲ. ಲೈಟ್ ಬಿಲ್ 85 ಲಕ್ಷ ರೂ ಬರುತ್ತದೆ. ಬೀದಿದೀಪ ನಿರ್ವಹಣೆಗೆ 24 ಲಕ್ಷ ರೂ ನಿಗದಿಪಡಿಸಿದೆ. ಒಟ್ಟಾರೆ 1.06 ಕೋಟಿ ರೂಪಾಯಿ ವೆಚ್ಚ ಬರುತ್ತದೆ. ಪಾಲಿಕೆ-ಸ್ಮಾರ್ಟ್ ಸಿಟಿ ಎಂಡಿ ಕೇಳಿದರೆ 1.44 ಕೋಟಿ ರೂಪಾಯಿ ವೆಚ್ಚವಾಗುತ್ತದೆ ಎಂದು ಹೇಳುತ್ತಾರೆ ಎಂದು ಕಿಡಿಕಾರಿದ್ದಾರೆ.

ಮಾಹಿತಿ ಹಕ್ಕಿನಡಿ ಪಡೆದಿರುವ ದಾಖಲೆಗಳಲ್ಲಿ ತಿಂಗಳಿಗೆ 1.66 ಕೋಟಿ ವೆಚ್ಚವಾಗುತ್ತದೆ ಎಂದು ಮಾಹಿತಿ  ನೀಡಲಾಗಿದೆ. ಅಂದರೆ 60 ಲಕ್ಷ ರೂಪಾಯಿ ಹೆಚ್ಚುವರಿ ಲೆಕ್ಕ ತೋರಿಸಲಾಗಿದೆ. ಈ ಹಣದಲ್ಲಿ ಶೇಕಡ 50 ರಷ್ಟು ಉಳಿತಾಯವನ್ನು ತೋರಿಸಬೇಕು. ಅದನ್ನು ತೋರಿಸಿಲ್ಲ. ತಿಂಗಳಿಗೆ 60 ಲಕ್ಷ ಹೆಚ್ಚುವರಿಯಾದರೆ ವಾರ್ಷಿಕ 7 ಕೋಟಿ ರೂಪಾಯಿ ಆಗುತ್ತದೆ. 7 ವರ್ಷಕ್ಕೆ 49 ಕೋಟಿ ರೂ ಹೆಚ್ಚುವರಿ ಹಣ ಖರ್ಚು ಮಾಡಿದ್ದು ಇದೊಂದು ದೊಡ್ಡ ಹಗರಣವಾಗಿದೆ ಎಂದು ದೂರಿದ್ದಾರೆ.

ಸ್ಟ್ರೀಟ್ ಲೈಟ್ ಕಂಟ್ರೋಲ್ ಸಿಸ್ಟಂ ಮಾಡಿದೆ. ಇದು ತುಮಕೂರು ನಗರದಲ್ಲಿ ಅಳವಡಿಸಿದೆ. ಇದಕ್ಕೆ ಇಷ್ಟೊಂದು ವೆಚ್ಚ ಮಾಡಿ ಹಣ ಲೂಟಿ ಮಾಡಲಾಗಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದರು.


ಇದನ್ನೂ ಓದಿ: ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...