Homeಕರ್ನಾಟಕಜಾನಪದ ವಿವಿ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕದಲ್ಲಿ ಅಕ್ರಮ; ಅರ್ಧರಾತ್ರಿಯಲ್ಲಿ ನಡೆದಿತ್ತು ಸಂದರ್ಶನ?

ಜಾನಪದ ವಿವಿ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕದಲ್ಲಿ ಅಕ್ರಮ; ಅರ್ಧರಾತ್ರಿಯಲ್ಲಿ ನಡೆದಿತ್ತು ಸಂದರ್ಶನ?

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಅಕ್ರಮವಾಗಿ ನೇಮಕಾತಿ ನಡೆದಿರುವ ಗುರುತರ ಆರೋಪ ಕೇಳಿಬಂದಿದೆ

- Advertisement -
- Advertisement -

ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯವು ನಿಯಮಾವಳಿ ಮೀರಿ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ತರಾತುರಿಯಲ್ಲಿ ನೇಮಕಾತಿ ನಡೆದಿದ್ದು ಅಕ್ರಮದ ಕಮಟು ವಾಸನೆ ಬೀರಿದೆ.

ಈ ಕುರಿತು ನೊಂದ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದರೆ, ಮಾಜಿ ಎಂಎಲ್‌ಸಿ, ಕಾಂಗ್ರೆಸ್ ವಕ್ತಾರ ರಮೇಶ್‌ ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ಸರ್ವಾಂಗೀಣ ಹಿತರಕ್ಷಣಾ ಟ್ರಸ್ಟ್‌ ಅಧ್ಯಕ್ಷರಾದ ಬಸವರಾಜ ಶಿ.ಗೊಬ್ಬಿ ಅವರು ವಿವಿಯ ಕುಲಸಚಿವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಮೇಶ್‌ ಬಾಬು ಅವರು ತಮ್ಮ ಪತ್ರದಲ್ಲಿ, “ಇತರೆ ವಿಶ್ವವಿದ್ಯಾಲಯಗಳ ರೀತಿಯಲ್ಲಿ ಜಾನಪದ ವಿಶ್ವವಿದ್ಯಾಲಯವು ತನ್ನ ಮೂಲ ಸೆಲೆಯನ್ನು ಕಳೆದುಕೊಂಡು ವ್ಯಾಪಾರಿ ವಿಶ್ವವಿದ್ಯಾಲಯವಾಗಿ ಪರಿವರ್ತನೆಯಾದರೆ ಈ ವಿಶ್ವವಿದ್ಯಾಲಯದ ಸ್ಥಾಪನೆಯ ಮೂಲ ಉದ್ದೇಶವೇ ವಿಫಲವಾಗುತ್ತದೆ. ಕರ್ನಾಟಕದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆದಿದ್ದು, ಈ ದಿನ ಪೂರ್ಣ ಪ್ರಮಾಣದ ಮಂತ್ರಿ ಮಂಡಲ ರಚನೆಯಾಗಿದೆ. ಕರ್ನಾಟಕದಲ್ಲಿ, ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಸಚಿವರಿಗೆ ಖಾತೆ ಹಂಚಿಕೆ ಆಗುವ ಮೊದಲೇ ದುರುದ್ದೇಶಪೂರಿತವಾಗಿ ಜಾನಪದ ವಿಶ್ವವಿದ್ಯಾಲಯದಲ್ಲಿ ರಾತೋರಾತ್ರಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ನಿಯಮಾವಳನ್ನು ಮೀರಿ ಕ್ರಮವಾಗಿ ನೇಮಕ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

“ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಿದ್ದ ಸಂದರ್ಭದಲ್ಲಿ ಸಹಾಯಕ ಪ್ರಾಧ್ಯಾಪಕರು, ಬೋಧಕ ಸಿಬ್ಬಂದಿ, ಬೋಧಕೇತರ ಸಿಬ್ಬಂದಿಗೆ ಆತುರ ಆತುರವಾಗಿ ಅರ್ಹತಾ ಪರೀಕ್ಷೆಗಳನ್ನು ನಡೆಸಲಾಗಿದೆ. ತದನಂತರ ರಾಜ್ಯದಲ್ಲಿ ಜವಾಬ್ದಾರಿಯುತ ಚುನಾಯಿತ ಸರ್ಕಾರ ಇಲ್ಲದ ಸಂದರ್ಭದಲ್ಲಿ ಸ್ವಜನ ಪಕ್ಷಪಾತದ ಕಾರಣಕ್ಕಾಗಿ ಮತ್ತು ನೇಮಕಾತಿಗಳಲ್ಲಿ ಹಣದ ವ್ಯವಹಾರವನ್ನು ನಡೆಸುವ ಕಾರಣಕ್ಕಾಗಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆದು ನೇಮಕಾತಿಗೆ ಚಾಲನೆ ನೀಡಲಾಗಿದೆ. ಅರ್ಧ ರಾತ್ರಿಯಲ್ಲಿ ಆಭ್ಯರ್ಥಿಗಳ ಸಂದರ್ಶನ ನಡೆಸಿ ಕಾನೂನುಬಾಹಿರವಾಗಿ ಗೊತ್ತುವಳಿಗಳನ್ನು ಮಾಡುವುದರ ಮೂಲಕ ಅನೇಕ ಅನುಮಾನಗಳಿಗೆ ಅವಕಾಶ ನೀಡಲಾಗಿದೆ” ಎಂದಿದ್ದಾರೆ.

“ಕಲ್ಯಾಣ ಕರ್ನಾಟಕದ 371ಜೆ ಅಡಿಯಲ್ಲೂ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ತೆಗೆದು ನೇಮಕಾತಿಯ ಪ್ರಕ್ರಿಯೆಗಳನ್ನು ನಡೆಸಲಾಗಿರುತ್ತದೆ. ಒಟ್ಟಾರೆ ಜಾನಪದ ವಿಶ್ವವಿದ್ಯಾಲಯದ ಅರ್ಧರಾತ್ರಿಯ ನೇಮಕಾತಿ ಪ್ರಕರಣಗಳು ಹಲವಾರು ಪ್ರಶ್ನೆಗಳಿಗೆ ಅವಕಾಶ ನೀಡಿರುವುದರ ಜೊತೆಗೆ ಅಕ್ರಮದ ವಾಸನೆಯನ್ನು ತೆರೆದಿಟ್ಟಿದೆ. ರಾಜ್ಯದ ಜನಪದ ಕಲೆಯ ಪ್ರತಿಬಿಂಬವಾದ ಜಾನಪದ ವಿಶ್ವವಿದ್ಯಾಲಯದಲ್ಲಿ ಇಂತಹ ಆಶ್ರಮಗಳಿಗೆ ಅವಕಾಶವನ್ನು ನೀಡುವುದರ ಮೂಲಕ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವ ಮತ್ತು ಇತರೆ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಸೂಕ್ತವಾದ ತನಿಖೆಯ ಹೊರತು ಅಕ್ರಮವನ್ನು ಬಯಲಿಗೆಳೆಯಲು ಸಾಧ್ಯವಿಲ್ಲ” ಎಂದು ವಿವರಿಸಿದ್ದಾರೆ.

“ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ 2018 ರಲ್ಲಿ ಸದರಿ ವಿಶ್ವವಿದ್ಯಾಲಯದಿಂದ ನೇಮಕಾತಿಗಾಗಿ ಅರ್ಜಿಗಳನ್ನು ಕರೆಯಲಾಗಿತ್ತು. ಕಳೆದ ಐದು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆಯನ್ನು ಚಾಲನೆಯಲ್ಲಿ ಇಟ್ಟಿದ್ದ ಜಾನಪದ ವಿಶ್ವವಿದ್ಯಾಲಯವು, ಚುನಾವಣೆ ನಂತರ ಆತುರ ಆತುರವಾಗಿ ಅಭ್ಯರ್ಥಿಗಳನ್ನು ರಾತ್ರೋರಾತ್ರಿ ಸಂದರ್ಶನಕ್ಕೆ ಕರೆದು, ನೇಮಕಾತಿ ಪ್ರಕ್ರಿಯೆಗೆ ಚಾಲನೆ ಕೊಟ್ಟು ಅಕ್ರಮ ಅವಕಾಶ ನೀಡಿದೆ. ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಈ ಅಕ್ರಮ ತಡೆಯುವ ಪ್ರಯತ್ನವನ್ನು ಮಾಡಿಲ್ಲ. ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವ ಮತ್ತು ಇತರೆ ಅಧಿಕಾರಿಗಳು ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಮತ್ತು ರಾಜ್ಯ ಸರ್ಕಾರವನ್ನು ಕತ್ತಲಲ್ಲಿ ಇಟ್ಟು ಅಕ್ರಮಕ್ಕೆ ಮುಂದಾಗಿರುತ್ತಾರೆ. ಸದರಿ ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್‌ ಬೊಮ್ಮಾಯಿರವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತಿದ್ದು, ವಿಶ್ವವಿದ್ಯಾಲಯದ ನಡೆ ರಾಜಕೀಯ ಹಸ್ತಕ್ಷೇಪದ ಕರಿ ನೆರಳಿನಿಂದಲೂ ಕೂಡಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ಕೂಡಲೇ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಬೇಕು. ಈ ವಿಶ್ವವಿದ್ಯಾಲಯದ ಕಾನೂನು ಬಾಹಿರ ನಡೆಯನ್ನು ವಿಶೇಷ ತನಿಖಾ ಸಂಸ್ಥೆಯ ಮೂಲಕ ತನಿಖೆಗೆ ಒಳಪಡಿಸಬೇಕು” ಎಂದು ಕೋರಿದ್ದಾರೆ.

ಬಸವರಾಜ ಶಿ.ಗೊಬ್ಬಿ ಅವರು ಕುಲಸಚಿವರಿಗೆ ಬರೆದಿರುವ ಪತ್ರದಲ್ಲಿ, “ತರಾತುರಿಯಲ್ಲಿ ನಡೆಯುತ್ತಿರುವ ಕಾಯಂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯ ಸಂದರ್ಶನದಲ್ಲಿ ಸಂದರ್ಶನಕ್ಕೆ ಕೇವಲ ಹತ್ತು ತಾಸುಗಳ ಮುಂಚೆ ಅಭ್ಯರ್ಥಿಗಳನ್ನು ಕರೆದಿರುವುದರಿಂದ ಕೆಲವು ಅಭ್ಯರ್ಥಿಗಳ ಸಂದರ್ಶನದಿಂದ ವಂಚಿತರಾಗುತ್ತಿದ್ದಾರೆ. ಸಂದರ್ಶನಕ್ಕೆ ಹಾಜರಾಗಿರುವ ಕೆಲವು ಅಭ್ಯರ್ಥಿಗಳ ಮೇಲೆ ಎಫ್.ಐ.ಆರ್, ಕೊರ್ಟ್‌‌ನಲ್ಲಿ ಕೇಸು, ಸುಳ್ಳು ಜಾತಿ ಪ್ರಮಾಣ ಪತ್ರ, ಕೃತಿ ಚೌರ್ಯ, ಪಿ.ಎಚ್.ಡಿ.ಗಳ ಬಗ್ಗೆ ಕೇಸ್‌ಗಳು, ಮಾಧ್ಯಮಗಳಲ್ಲಿ ಇವರ ಕುರಿತು ಅಕ್ರಮಗಳ ಕುರಿತು ಪ್ರಕಟಣೆ, ಪಿ.ಎಚ್.ಡಿ. ಪುಸ್ತಕದಲ್ಲಿಯೇ ಭಾಗ ಮಾಡಿ 3 ಪುಸ್ತಕ ಮಾಡಿದ ಆರೋಪಗಳಿವೆ. ಎಂ.ಬಿ.ಎ. ಅಭ್ಯರ್ಥಿಯೋರ್ವರ ಪದವಿ, ಸ್ನಾತಕೋತ್ತರ ಪದವಿ ಒಂದಕ್ಕೊಂದು ಸಂಬಂಧವೇ ಇರುವುದಿಲ್ಲ. ಪುಸ್ತಕ ಹಾಗೂ ಇವರ ಲೇಖನಗಳು ಸಂಪೂರ್ಣ ಕಟ್‌ ಆ್ಯಂಡ್ ಪೇಸ್ಟ್‌‌ ಆಗಿದ್ದು ಇದನ್ನು ಪರಿಶೀಲಿಸದೇ ಸಂದರ್ಶನ ನಡೆಸಬಾರದು. ಲೈಂಗಿಕ ಹಗರಣ ಹಾಗೂ ಅಧಿಕಾರಯೋರ್ವ ಅದೇ ಅಧಿಕಾರದ ಸ್ಥಾನದಲ್ಲಿದ್ದುಕೊಂಡು ಅದೇ ಹುದ್ದೆಗೆ ಸಂದರ್ಶನಕ್ಕೆ ಹಾಜರಾಗುತ್ತಿದ್ದಾರೆ. ಹೀಗೆ ಅನೇಕ ಹಗರಣಗಳು ನೀವು ಆಯ್ಕೆ ಮಾಡುತ್ತಿರುವ ಅಭ್ಯರ್ಥಿಗಳಲ್ಲಿದ್ದು ಇವರ ಸಂಪೂರ್ಣ ದಾಖಲೆಗಳನ್ನು ಕುಲಂಕಷವಾಗಿ ಪರಿಶೀಲಿಸಬೇಕು. ನೇಮಕಾತಿಯ ವೇಗ ನೋಡಿದರೆ ಇಲ್ಲಿ ಅಕ್ರಮಗಳು ನಡೆದಿರುವ ಅನುಮಾನವಿದೆ, ಕೂಡಲೆ ಈಗ ನಡೆಯುತ್ತಿರುವ ಸಂದರ್ಶನವನ್ನು ಮುಂದೂಡಿ ಅಭ್ಯರ್ಥಿಗಳ ಎಲ್ಲ ದಾಖಲೆಗಳನ್ನು ನುರಿತವರಿಂದ ಪರಿಶೀಲಿಸಿ ಮತ್ತೊಂದು ದಿನ ಸಂದರ್ಶನವನ್ನು ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿರಿ: ವಂದೇ ಮಾತರಂ, ರಾಷ್ಟ್ರಗೀತೆ ಸಂಬಂಧ ಘರ್ಷಣೆ; ಮೀರತ್‌ನ ಇಬ್ಬರು ಬಿಜೆಪಿ ಕೌನ್ಸಿಲರ್‌ ಅರೆಸ್ಟ್

ನೊಂದ ಆಕಾಂಕ್ಷಿಯೊಬ್ಬರು ಅಳಲು ತೋಡಿಕೊಂಡಿದ್ದು, “ಜಾನಪದ ವಿಶ್ವವಿದ್ಯಾಲಯ 2017- 18ನೇ ಸಾಲಿನಲ್ಲಿ ಬೋಧಕ, ಬೋಧಕೇತರ ಹುದ್ದೆಗಳಿಗೆ ಅರ್ಜಿಯನ್ನು ಕರೆದಿತ್ತು. ನಾನು ಜಾನಪದ ಸಾಹಿತ್ಯ, ಜನಪದ ಕಲೆ ವಿಷಯಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದೆ. ಸಹಾಯಕ ಸಂಶೋಧನಾ ಅಧಿಕಾರಿ ಬೋಧಕೇತರ ಹುದ್ದೆಗೂ ಅರ್ಜಿ ಹಾಕಿದ್ದೆ. ನಾನು ಜಾನಪದದಲ್ಲಿ ಎಂ.ಎ, ಪಿಎಚ್‌ಡಿ, ಸ್ಲೆಟ್‌ ಮಾಡಿಕೊಂಡಿರುವೆ. ಕನ್ನಡ ಎಂ.ಎ, ನೆಟ್‌, ಸ್ಲೆಟ್‌ ಆಗಿದೆ. 30ಕ್ಕಿಂತಲೂ ಹೆಚ್ಚು ಐಎಸ್‌ಬಿಎನ್‌ ಲೇಖನಗಳು ಇವೆ. ಪುಸ್ತಕ ಇದೆ. ಆದರೂ ಸಹಾಯಕ ಪ್ರಾಧ್ಯಾಪಕ ಅರ್ಹತೆಯ ಪಟ್ಟಿಯಲ್ಲಿ ನನ್ನ ಹೆಸರನ್ನು ಕೈ ಬಿಡಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಕುರಿತು ಅಲ್ಲಿನ ಕುಲಸಚಿವರಾಗಿರುವ ಸಿಟಿ ಗುರುಪ್ರಸಾದ್ ಅವರಿಗೆ ವಾಟ್ಸಾಪ್ ಮೆಸೇಜ್‌ನಲ್ಲಿ ನ್ಯಾಯ ಕೇಳಿದಕ್ಕೆ ತೇಲಿಕೆ ಉತ್ತರ ನೀಡಿದ್ದಾರೆ. ನಿಮ್ಮದು ಎಪಿಐ ಸ್ಕೋರ್‌ ಕಡಿಮೆ ಇದೆ ಎಂದು ಹೇಳುತ್ತಿದ್ದಾರೆ. ನಾನು ಸಂದರ್ಶನಕ್ಕೆ ಅರ್ಹನಿದ್ದೇನೆ. ನನ್ನದು ಎಪಿಐ ಕಡಿಮೆ ಇದ್ದರೆ ನನ್ನನ್ನು ಅರ್ಹತೆಯ ಪಟ್ಟಿಯಲ್ಲಿ ಹೇಗೆ ಸೇರಿಸಿದಿರಿ ಎಂದು ಕೇಳಿದ್ದಕ್ಕೆ, ಹಾಗೂ ಇತರರ ಎಪಿಐ ಸ್ಕೋರ್‌ಗಳನ್ನು ಅಂತರ್ಜಾಲದಲ್ಲಿ ಬಹಿರಂಗಪಡಿಸಿ ಎಂದಿದ್ದಕ್ಕೆ ಅವರು ಪ್ರತಿಕ್ರಿಯಿಸಿಲ್ಲ. ನನ್ನ ಪ್ರಶ್ನೆಗೆ ಉತ್ತರಿಸಲು ಅವರ ಹತ್ತಿರ ಉತ್ತರ ಇಲ್ಲ” ಎಂದಿದ್ದಾರೆ.

“ನನ್ನ ತರಹ ಅನೇಕ ವಿದ್ಯಾರ್ಥಿಗಳಿಗೆ ಜಾನಪದ ವಿವಿಯಿಂದ ಮೋಸವಾಗಿದೆ. ಪ್ರಾಧ್ಯಾಪಕ ಹುದ್ದೆಯ ಪರೀಕ್ಷೆ ಮುಗಿದ ಮೇಲೆ ಎರಡು ದಿನಕ್ಕೆ ವಿದ್ಯಾರ್ಥಿಗಳಿಗೆ ಕರೆಯ ಪತ್ರ ಹೋಗಿದೆ. ಮತ ಎಣಿಕೆಯ ದಿನ ಪರೀಕ್ಷೆ ಮಾಡಿದ್ದಾರೆ. ಬಸ್‌ಗಳ ಕೊರತೆಯಿಂದ ಅನೇಕ ಜನ ಪರೀಕ್ಷೆ ಬರೆಯಲು ಹೋಗಲು ಆಗಿಲ್ಲ. ಪರೀಕ್ಷೆಯ ದಿನವೇ ಕೆಲವರಿಗೆ ಪತ್ರ ಹೋಗಿದೆ. 300, 400 ಮೈಲಿಗಳಿಂದ ಅವರು ಅವತ್ತೇ ಹೋಗಿ ಹೇಗೆ ಪರಿಕ್ಷೆ ಬರೆಯಲು ಸಾಧ್ಯ? ಪರೀಕ್ಷೆಯ ಮೂರು ದಿನದ ಹಿಂದೆ ವೆಬ್‌ಸೈಟ್‌ನಲ್ಲಿ ಸಿಲಬಸ್‌ ಪ್ರಕಟಿಸಲಾಗಿದೆ. ಜಾನಪದ ವಿಶ್ವವಿದ್ಯಾಲಯ ನಡೆಸಿದ ಯಾವುದೇ ಪರೀಕ್ಷೆಯ ಯಾವುದೇ ದಿನಾಂಕವನ್ನು ವಿವಿಯ ಜಾಲತಾಣದಲ್ಲಿ ಪ್ರಕಟಿಸಿಲ್ಲ. ಜಾನಪದ ವಿವಿಯ ಈ ನಡೆ ಸಂಪೂರ್ಣ ಅವೈಜ್ಞಾನಿಕವಾಗಿದೆ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...