Homeಮುಖಪುಟಯಾವುದೇ ಧರ್ಮದ ಸಂಗಾತಿಯ ಆಯ್ಕೆ ವಯಸ್ಕರ ಹಕ್ಕು: ಅಲಹಾಬಾದ್ ಹೈಕೋರ್ಟ್

ಯಾವುದೇ ಧರ್ಮದ ಸಂಗಾತಿಯ ಆಯ್ಕೆ ವಯಸ್ಕರ ಹಕ್ಕು: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

“ವಯಸ್ಕರು ತಮ್ಮ ಧರ್ಮದ ಹೊರತಾಗಿಯೂ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿದ್ದಾರೆ” ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ದಂಪತಿಯ ಪೋಷಕರು ಕೂಡ ಅವರ ಸಂಬಂಧವನ್ನು ವಿರೋಧಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಗೋರಖ್‌ಪುರದ ಅಂತರ್ ಧರ್ಮೀಯ ದಂಪತಿಯಾದ ಶಿಫಾ ಹಸನ್ ಮತ್ತು ಆಕೆಯ ಹಿಂದೂ ಸಂಗಾತಿ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಹೇಳಿಕೊಂಡು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಆಲಿಸಿದ ಅಲಹಾಬಾದ್ ಹೈಕೋರ್ಟ್, ದಂಪತಿಗಳಿಗೆ ಕಿರುಕುಳದ ವಿರುದ್ಧ ರಕ್ಷಣೆ ನೀಡಿದೆ.

ನ್ಯಾಯಮೂರ್ತಿ ಮನೋಜ್ ಕುಮಾರ್ ಗುಪ್ತಾ ಮತ್ತು ನ್ಯಾಯಮೂರ್ತಿ ದೀಪಕ್ ವರ್ಮಾ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, ಇಬ್ಬರು ವಯಸ್ಕರು ತಾವು ನಂಬಿರುವ ನಂಬಿಕೆ ಮತ್ತು ಧರ್ಮದ ಹೊರತಾಗಿಯೂ ತಮ್ಮ ವೈವಾಹಿಕ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

“ಪ್ರಸ್ತುತ ಅರ್ಜಿದಾರರು ಪರಸ್ಪರ ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ ಇಬ್ಬರು ವ್ಯಕ್ತಿಗಳ ಜಂಟಿ ಅರ್ಜಿ ಇದಾಗಿರುವುದರಿಂದ, ಅವರ ಪೋಷಕರು ಸೇರಿದಂತೆ ಯಾರೂ ಕೂಡ ಅವರ ಸಂಬಂಧವನ್ನು ವಿರೋಧಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.

ಅರ್ಜಿದಾರರು ತಮ್ಮ ಜಂಟಿ ಅರ್ಜಿಯಲ್ಲಿ, ತಾವು ಪರಸ್ಪರ ಪ್ರೀತಿಸುತ್ತಿದ್ದೇವೆ ಮತ್ತು ತಮ್ಮ ಸ್ವಂತ ಇಚ್ಛೆಯಂತೆ ಒಟ್ಟಿಗೆ ವಾಸಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಆದರೂ, ಅವರ ಸಂಬಂಧವನ್ನು ಕುಟುಂಬದ ಕೆಲವು ಸದಸ್ಯರು ಒಪ್ಪಿಕೊಳ್ಳುತ್ತಿರಲಿಲ್ಲ ಮತ್ತು ಅವರ ಶಾಂತಿಯುತ ಜೀವನಕ್ಕೆ ತೊಂದರೆಯಾಗುತ್ತಿದೆ ಎಂದಿದ್ದಾರೆ.

ಎಲ್ಲ ಕಡೆಯ ಸುದೀರ್ಘ ವಾದವನ್ನು ಆಲಿಸಿದ ನಂತರ, ದಂಪತಿಗೆ ರಕ್ಷಣೆ ನೀಡಿದ ನ್ಯಾಯಾಲಯವು, ಅವರ ಸಂಬಂಧವನ್ನು ಆಕ್ಷೇಪಿಸುವ ಹಕ್ಕನ್ನು ಅವರ ಹೆತ್ತವರೂ ಹೊಂದಿಲ್ಲ ಎಂದು ಹೇಳಿದೆ.

ಯುವತಿಯ ತಂದೆಯಿಂದ ಅಥವಾ ಬೇರೆ ಯಾವುದೇ ವ್ಯಕ್ತಿಯಿಂದ ದಂಪತಿಗೆ ಯಾವುದೇ ಕಿರುಕುಳ ಉಂಟಾಗದಂತೆ ನೋಡಿಕೊಳ್ಳುವಂತೆ ಗೋರಖ್‌ಪುರ ಪೊಲೀಸ್ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.


ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...