Homeಮುಖಪುಟಯಾವುದೇ ಧರ್ಮದ ಸಂಗಾತಿಯ ಆಯ್ಕೆ ವಯಸ್ಕರ ಹಕ್ಕು: ಅಲಹಾಬಾದ್ ಹೈಕೋರ್ಟ್

ಯಾವುದೇ ಧರ್ಮದ ಸಂಗಾತಿಯ ಆಯ್ಕೆ ವಯಸ್ಕರ ಹಕ್ಕು: ಅಲಹಾಬಾದ್ ಹೈಕೋರ್ಟ್

- Advertisement -
- Advertisement -

“ವಯಸ್ಕರು ತಮ್ಮ ಧರ್ಮದ ಹೊರತಾಗಿಯೂ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿದ್ದಾರೆ” ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ದಂಪತಿಯ ಪೋಷಕರು ಕೂಡ ಅವರ ಸಂಬಂಧವನ್ನು ವಿರೋಧಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಗೋರಖ್‌ಪುರದ ಅಂತರ್ ಧರ್ಮೀಯ ದಂಪತಿಯಾದ ಶಿಫಾ ಹಸನ್ ಮತ್ತು ಆಕೆಯ ಹಿಂದೂ ಸಂಗಾತಿ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಹೇಳಿಕೊಂಡು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಆಲಿಸಿದ ಅಲಹಾಬಾದ್ ಹೈಕೋರ್ಟ್, ದಂಪತಿಗಳಿಗೆ ಕಿರುಕುಳದ ವಿರುದ್ಧ ರಕ್ಷಣೆ ನೀಡಿದೆ.

ನ್ಯಾಯಮೂರ್ತಿ ಮನೋಜ್ ಕುಮಾರ್ ಗುಪ್ತಾ ಮತ್ತು ನ್ಯಾಯಮೂರ್ತಿ ದೀಪಕ್ ವರ್ಮಾ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, ಇಬ್ಬರು ವಯಸ್ಕರು ತಾವು ನಂಬಿರುವ ನಂಬಿಕೆ ಮತ್ತು ಧರ್ಮದ ಹೊರತಾಗಿಯೂ ತಮ್ಮ ವೈವಾಹಿಕ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ‘ಹಸ್ತಕ್ಷೇಪ ಮಾಡುವ ಹಕ್ಕು ಯಾರಿಗೂ ಇಲ್ಲ’: ಅಂತರ್‌ಧರ್ಮೀಯ ಮದುವೆ ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್

“ಪ್ರಸ್ತುತ ಅರ್ಜಿದಾರರು ಪರಸ್ಪರ ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ ಇಬ್ಬರು ವ್ಯಕ್ತಿಗಳ ಜಂಟಿ ಅರ್ಜಿ ಇದಾಗಿರುವುದರಿಂದ, ಅವರ ಪೋಷಕರು ಸೇರಿದಂತೆ ಯಾರೂ ಕೂಡ ಅವರ ಸಂಬಂಧವನ್ನು ವಿರೋಧಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.

ಅರ್ಜಿದಾರರು ತಮ್ಮ ಜಂಟಿ ಅರ್ಜಿಯಲ್ಲಿ, ತಾವು ಪರಸ್ಪರ ಪ್ರೀತಿಸುತ್ತಿದ್ದೇವೆ ಮತ್ತು ತಮ್ಮ ಸ್ವಂತ ಇಚ್ಛೆಯಂತೆ ಒಟ್ಟಿಗೆ ವಾಸಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಆದರೂ, ಅವರ ಸಂಬಂಧವನ್ನು ಕುಟುಂಬದ ಕೆಲವು ಸದಸ್ಯರು ಒಪ್ಪಿಕೊಳ್ಳುತ್ತಿರಲಿಲ್ಲ ಮತ್ತು ಅವರ ಶಾಂತಿಯುತ ಜೀವನಕ್ಕೆ ತೊಂದರೆಯಾಗುತ್ತಿದೆ ಎಂದಿದ್ದಾರೆ.

ಎಲ್ಲ ಕಡೆಯ ಸುದೀರ್ಘ ವಾದವನ್ನು ಆಲಿಸಿದ ನಂತರ, ದಂಪತಿಗೆ ರಕ್ಷಣೆ ನೀಡಿದ ನ್ಯಾಯಾಲಯವು, ಅವರ ಸಂಬಂಧವನ್ನು ಆಕ್ಷೇಪಿಸುವ ಹಕ್ಕನ್ನು ಅವರ ಹೆತ್ತವರೂ ಹೊಂದಿಲ್ಲ ಎಂದು ಹೇಳಿದೆ.

ಯುವತಿಯ ತಂದೆಯಿಂದ ಅಥವಾ ಬೇರೆ ಯಾವುದೇ ವ್ಯಕ್ತಿಯಿಂದ ದಂಪತಿಗೆ ಯಾವುದೇ ಕಿರುಕುಳ ಉಂಟಾಗದಂತೆ ನೋಡಿಕೊಳ್ಳುವಂತೆ ಗೋರಖ್‌ಪುರ ಪೊಲೀಸ್ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.


ಇದನ್ನೂ ಓದಿ: ಸಲಿಂಗ ದಂಪತಿಗೆ ರಕ್ಷಣೆ ನೀಡಿ: ಪೊಲೀಸರಿಗೆ ಅಲಹಾಬಾದ್ ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...