Homeಮುಖಪುಟಅಧಿಕೃತ ದಾಖಲೆಗಳಲ್ಲಿ 'ಹೆಸರು-ಲಿಂಗ' ಬದಲಾಯಿಸಿದ ಐಆರ್‌ಎಸ್‌ ಅಧಿಕಾರಿ; ಹಣಕಾಸು ಸಚಿವಾಲಯದಿಂದ ಅನುಮತಿ

ಅಧಿಕೃತ ದಾಖಲೆಗಳಲ್ಲಿ ‘ಹೆಸರು-ಲಿಂಗ’ ಬದಲಾಯಿಸಿದ ಐಆರ್‌ಎಸ್‌ ಅಧಿಕಾರಿ; ಹಣಕಾಸು ಸಚಿವಾಲಯದಿಂದ ಅನುಮತಿ

- Advertisement -
- Advertisement -

ಐತಿಹಾಸಿಕ ನಿರ್ಧಾರವೊಂದರಲ್ಲಿ, ತನ್ನ ಎಲ್ಲ ಅಧಿಕೃತ ದಾಖಲೆಗಳಲ್ಲಿ ತನ್ನ ಹೆಸರು ಮತ್ತು ಲಿಂಗವನ್ನು ಬದಲಾಯಿಸಲು ಹಿರಿಯ ಭಾರತೀಯ ಕಂದಾಯ ಸೇವೆ (ಐಆರ್‌ಎಸ್‌) ಅಧಿಕಾರಿಯ ವಿನಂತಿಯನ್ನು ಹಣಕಾಸು ಸಚಿವಾಲಯವು ಅನುಮತಿಸಿದೆ. ಭಾರತೀಯ ನಾಗರಿಕ ಸೇವೆಗಳಲ್ಲೆ ಇದೊಂದು ಮೊದಲ ಪ್ರಕರಣವಾಗಿದೆ.

ಹೈದರಾಬಾದ್‌ನಲ್ಲಿರುವ ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ (ಸಿಇಎಸ್‌ಟಿಎಟಿ) ಮುಖ್ಯ ಆಯುಕ್ತರ (ಅಧಿಕೃತ ಪ್ರತಿನಿಧಿ) ಕಚೇರಿಯಲ್ಲಿ ಜಂಟಿ ಆಯುಕ್ತರಾಗಿ ನೇಮಕಗೊಂಡಿದ್ದ 35 ವರ್ಷದ ಎಂ ಅನುಸೂಯಾ ಅವರು ಈ ವಿನಂತಿಯನ್ನು ಮಾಡಿದ್ದಾರೆ. ಆಕೆ ತನ್ನ ಹೆಸರನ್ನು ಎಂ ಅನುಕತಿರ್ ಸೂರ್ಯ ಎಂದು ಬದಲಾಯಿಸಲು ನಿರ್ಧರಿಸಿದ್ದು, ಆಕೆ ತನ್ನ ಲಿಂಗವನ್ನು ಹೆಣ್ಣಿನಿಂದ ಗಂಡಿಗೆ ಬದಲಾಯಿಸುವಂತೆ ಮನವಿ ಮಾಡಿದ್ದರು.

“ಎಂ ಅನುಸೂಯಾ ಅವರ ಮನವಿಯನ್ನು ಪರಿಗಣಿಸಲಾಗಿದೆ. ಇನ್ನು ಮುಂದೆ, ಎಲ್ಲ ಅಧಿಕೃತ ದಾಖಲೆಗಳಲ್ಲಿ ಅಧಿಕಾರಿಯನ್ನು ಎಂ ಅನುಕತಿರ್ ಸೂರ್ಯ ಎಂದು ಗುರುತಿಸಲಾಗುತ್ತದೆ” ಎಂದು ಹಣಕಾಸು ಇಲಾಖೆ ತಿಳಿಸಿದೆ.

ಅನುಕತಿರ್ ಸೂರ್ಯ ಲಿಂಕ್ಡ್‌ಇನ್ ಪ್ರೊಫೈಲ್‌ನ ಪ್ರಕಾರ, ಅವರು ಡಿಸೆಂಬರ್ 2013 ರಲ್ಲಿ ಚೆನ್ನೈನಲ್ಲಿ ಸಹಾಯಕ ಆಯುಕ್ತರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 2018 ರಲ್ಲಿ ಡೆಪ್ಯೂಟಿ ಕಮಿಷನರ್ ಶ್ರೇಣಿಗೆ ಬಡ್ತಿ ಪಡೆದರು. ಅವರು ಕಳೆದ ವರ್ಷ ಹೈದರಾಬಾದ್‌ನಲ್ಲಿ ತಮ್ಮ ಪ್ರಸ್ತುತ ಪೋಸ್ಟಿಂಗ್‌ಗೆ ಸೇರಿದರು.

ಅವರು ಚೆನ್ನೈನ ಮದ್ರಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್‌ನಲ್ಲಿ ತಮ್ಮ ಬ್ಯಾಚುಲರ್ ಪದವಿಯನ್ನು ಪೂರ್ಣಗೊಳಿಸಿದರು. 2023 ರಲ್ಲಿ ಭೋಪಾಲ್‌ನ ನ್ಯಾಷನಲ್ ಲಾ ಇನ್‌ಸ್ಟಿಟ್ಯೂಟ್ ವಿಶ್ವವಿದ್ಯಾಲಯದಿಂದ ಸೈಬರ್ ಕಾನೂನು ಮತ್ತು ಸೈಬರ್ ಫೋರೆನ್ಸಿಕ್ಸ್‌ನಲ್ಲಿ ಪಿಜಿ ಡಿಪ್ಲೊಮಾವನ್ನು ಪೂರ್ಣಗೊಳಿಸಿದರು.

ಇದನ್ನೂ ಓದಿ; ಬಿಜೆಪಿ ದಲಿತ ವಿರೋಧಿ ಎಂದು ಹಲವರು ಎಚ್ಚರಿಸಿದ್ದರು..’; ಅಸಮಾಧಾನ ಹೊರಹಾಕಿದ ಜಿಗಜಿಣಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...