Homeಮುಖಪುಟಅಧಿಕೃತ ದಾಖಲೆಗಳಲ್ಲಿ 'ಹೆಸರು-ಲಿಂಗ' ಬದಲಾಯಿಸಿದ ಐಆರ್‌ಎಸ್‌ ಅಧಿಕಾರಿ; ಹಣಕಾಸು ಸಚಿವಾಲಯದಿಂದ ಅನುಮತಿ

ಅಧಿಕೃತ ದಾಖಲೆಗಳಲ್ಲಿ ‘ಹೆಸರು-ಲಿಂಗ’ ಬದಲಾಯಿಸಿದ ಐಆರ್‌ಎಸ್‌ ಅಧಿಕಾರಿ; ಹಣಕಾಸು ಸಚಿವಾಲಯದಿಂದ ಅನುಮತಿ

- Advertisement -
- Advertisement -

ಐತಿಹಾಸಿಕ ನಿರ್ಧಾರವೊಂದರಲ್ಲಿ, ತನ್ನ ಎಲ್ಲ ಅಧಿಕೃತ ದಾಖಲೆಗಳಲ್ಲಿ ತನ್ನ ಹೆಸರು ಮತ್ತು ಲಿಂಗವನ್ನು ಬದಲಾಯಿಸಲು ಹಿರಿಯ ಭಾರತೀಯ ಕಂದಾಯ ಸೇವೆ (ಐಆರ್‌ಎಸ್‌) ಅಧಿಕಾರಿಯ ವಿನಂತಿಯನ್ನು ಹಣಕಾಸು ಸಚಿವಾಲಯವು ಅನುಮತಿಸಿದೆ. ಭಾರತೀಯ ನಾಗರಿಕ ಸೇವೆಗಳಲ್ಲೆ ಇದೊಂದು ಮೊದಲ ಪ್ರಕರಣವಾಗಿದೆ.

ಹೈದರಾಬಾದ್‌ನಲ್ಲಿರುವ ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ (ಸಿಇಎಸ್‌ಟಿಎಟಿ) ಮುಖ್ಯ ಆಯುಕ್ತರ (ಅಧಿಕೃತ ಪ್ರತಿನಿಧಿ) ಕಚೇರಿಯಲ್ಲಿ ಜಂಟಿ ಆಯುಕ್ತರಾಗಿ ನೇಮಕಗೊಂಡಿದ್ದ 35 ವರ್ಷದ ಎಂ ಅನುಸೂಯಾ ಅವರು ಈ ವಿನಂತಿಯನ್ನು ಮಾಡಿದ್ದಾರೆ. ಆಕೆ ತನ್ನ ಹೆಸರನ್ನು ಎಂ ಅನುಕತಿರ್ ಸೂರ್ಯ ಎಂದು ಬದಲಾಯಿಸಲು ನಿರ್ಧರಿಸಿದ್ದು, ಆಕೆ ತನ್ನ ಲಿಂಗವನ್ನು ಹೆಣ್ಣಿನಿಂದ ಗಂಡಿಗೆ ಬದಲಾಯಿಸುವಂತೆ ಮನವಿ ಮಾಡಿದ್ದರು.

“ಎಂ ಅನುಸೂಯಾ ಅವರ ಮನವಿಯನ್ನು ಪರಿಗಣಿಸಲಾಗಿದೆ. ಇನ್ನು ಮುಂದೆ, ಎಲ್ಲ ಅಧಿಕೃತ ದಾಖಲೆಗಳಲ್ಲಿ ಅಧಿಕಾರಿಯನ್ನು ಎಂ ಅನುಕತಿರ್ ಸೂರ್ಯ ಎಂದು ಗುರುತಿಸಲಾಗುತ್ತದೆ” ಎಂದು ಹಣಕಾಸು ಇಲಾಖೆ ತಿಳಿಸಿದೆ.

ಅನುಕತಿರ್ ಸೂರ್ಯ ಲಿಂಕ್ಡ್‌ಇನ್ ಪ್ರೊಫೈಲ್‌ನ ಪ್ರಕಾರ, ಅವರು ಡಿಸೆಂಬರ್ 2013 ರಲ್ಲಿ ಚೆನ್ನೈನಲ್ಲಿ ಸಹಾಯಕ ಆಯುಕ್ತರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 2018 ರಲ್ಲಿ ಡೆಪ್ಯೂಟಿ ಕಮಿಷನರ್ ಶ್ರೇಣಿಗೆ ಬಡ್ತಿ ಪಡೆದರು. ಅವರು ಕಳೆದ ವರ್ಷ ಹೈದರಾಬಾದ್‌ನಲ್ಲಿ ತಮ್ಮ ಪ್ರಸ್ತುತ ಪೋಸ್ಟಿಂಗ್‌ಗೆ ಸೇರಿದರು.

ಅವರು ಚೆನ್ನೈನ ಮದ್ರಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್‌ನಲ್ಲಿ ತಮ್ಮ ಬ್ಯಾಚುಲರ್ ಪದವಿಯನ್ನು ಪೂರ್ಣಗೊಳಿಸಿದರು. 2023 ರಲ್ಲಿ ಭೋಪಾಲ್‌ನ ನ್ಯಾಷನಲ್ ಲಾ ಇನ್‌ಸ್ಟಿಟ್ಯೂಟ್ ವಿಶ್ವವಿದ್ಯಾಲಯದಿಂದ ಸೈಬರ್ ಕಾನೂನು ಮತ್ತು ಸೈಬರ್ ಫೋರೆನ್ಸಿಕ್ಸ್‌ನಲ್ಲಿ ಪಿಜಿ ಡಿಪ್ಲೊಮಾವನ್ನು ಪೂರ್ಣಗೊಳಿಸಿದರು.

ಇದನ್ನೂ ಓದಿ; ಬಿಜೆಪಿ ದಲಿತ ವಿರೋಧಿ ಎಂದು ಹಲವರು ಎಚ್ಚರಿಸಿದ್ದರು..’; ಅಸಮಾಧಾನ ಹೊರಹಾಕಿದ ಜಿಗಜಿಣಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...