Homeಮುಖಪುಟಅಧಿಕೃತ ದಾಖಲೆಗಳಲ್ಲಿ 'ಹೆಸರು-ಲಿಂಗ' ಬದಲಾಯಿಸಿದ ಐಆರ್‌ಎಸ್‌ ಅಧಿಕಾರಿ; ಹಣಕಾಸು ಸಚಿವಾಲಯದಿಂದ ಅನುಮತಿ

ಅಧಿಕೃತ ದಾಖಲೆಗಳಲ್ಲಿ ‘ಹೆಸರು-ಲಿಂಗ’ ಬದಲಾಯಿಸಿದ ಐಆರ್‌ಎಸ್‌ ಅಧಿಕಾರಿ; ಹಣಕಾಸು ಸಚಿವಾಲಯದಿಂದ ಅನುಮತಿ

- Advertisement -
- Advertisement -

ಐತಿಹಾಸಿಕ ನಿರ್ಧಾರವೊಂದರಲ್ಲಿ, ತನ್ನ ಎಲ್ಲ ಅಧಿಕೃತ ದಾಖಲೆಗಳಲ್ಲಿ ತನ್ನ ಹೆಸರು ಮತ್ತು ಲಿಂಗವನ್ನು ಬದಲಾಯಿಸಲು ಹಿರಿಯ ಭಾರತೀಯ ಕಂದಾಯ ಸೇವೆ (ಐಆರ್‌ಎಸ್‌) ಅಧಿಕಾರಿಯ ವಿನಂತಿಯನ್ನು ಹಣಕಾಸು ಸಚಿವಾಲಯವು ಅನುಮತಿಸಿದೆ. ಭಾರತೀಯ ನಾಗರಿಕ ಸೇವೆಗಳಲ್ಲೆ ಇದೊಂದು ಮೊದಲ ಪ್ರಕರಣವಾಗಿದೆ.

ಹೈದರಾಬಾದ್‌ನಲ್ಲಿರುವ ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ (ಸಿಇಎಸ್‌ಟಿಎಟಿ) ಮುಖ್ಯ ಆಯುಕ್ತರ (ಅಧಿಕೃತ ಪ್ರತಿನಿಧಿ) ಕಚೇರಿಯಲ್ಲಿ ಜಂಟಿ ಆಯುಕ್ತರಾಗಿ ನೇಮಕಗೊಂಡಿದ್ದ 35 ವರ್ಷದ ಎಂ ಅನುಸೂಯಾ ಅವರು ಈ ವಿನಂತಿಯನ್ನು ಮಾಡಿದ್ದಾರೆ. ಆಕೆ ತನ್ನ ಹೆಸರನ್ನು ಎಂ ಅನುಕತಿರ್ ಸೂರ್ಯ ಎಂದು ಬದಲಾಯಿಸಲು ನಿರ್ಧರಿಸಿದ್ದು, ಆಕೆ ತನ್ನ ಲಿಂಗವನ್ನು ಹೆಣ್ಣಿನಿಂದ ಗಂಡಿಗೆ ಬದಲಾಯಿಸುವಂತೆ ಮನವಿ ಮಾಡಿದ್ದರು.

“ಎಂ ಅನುಸೂಯಾ ಅವರ ಮನವಿಯನ್ನು ಪರಿಗಣಿಸಲಾಗಿದೆ. ಇನ್ನು ಮುಂದೆ, ಎಲ್ಲ ಅಧಿಕೃತ ದಾಖಲೆಗಳಲ್ಲಿ ಅಧಿಕಾರಿಯನ್ನು ಎಂ ಅನುಕತಿರ್ ಸೂರ್ಯ ಎಂದು ಗುರುತಿಸಲಾಗುತ್ತದೆ” ಎಂದು ಹಣಕಾಸು ಇಲಾಖೆ ತಿಳಿಸಿದೆ.

ಅನುಕತಿರ್ ಸೂರ್ಯ ಲಿಂಕ್ಡ್‌ಇನ್ ಪ್ರೊಫೈಲ್‌ನ ಪ್ರಕಾರ, ಅವರು ಡಿಸೆಂಬರ್ 2013 ರಲ್ಲಿ ಚೆನ್ನೈನಲ್ಲಿ ಸಹಾಯಕ ಆಯುಕ್ತರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. 2018 ರಲ್ಲಿ ಡೆಪ್ಯೂಟಿ ಕಮಿಷನರ್ ಶ್ರೇಣಿಗೆ ಬಡ್ತಿ ಪಡೆದರು. ಅವರು ಕಳೆದ ವರ್ಷ ಹೈದರಾಬಾದ್‌ನಲ್ಲಿ ತಮ್ಮ ಪ್ರಸ್ತುತ ಪೋಸ್ಟಿಂಗ್‌ಗೆ ಸೇರಿದರು.

ಅವರು ಚೆನ್ನೈನ ಮದ್ರಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್‌ನಲ್ಲಿ ತಮ್ಮ ಬ್ಯಾಚುಲರ್ ಪದವಿಯನ್ನು ಪೂರ್ಣಗೊಳಿಸಿದರು. 2023 ರಲ್ಲಿ ಭೋಪಾಲ್‌ನ ನ್ಯಾಷನಲ್ ಲಾ ಇನ್‌ಸ್ಟಿಟ್ಯೂಟ್ ವಿಶ್ವವಿದ್ಯಾಲಯದಿಂದ ಸೈಬರ್ ಕಾನೂನು ಮತ್ತು ಸೈಬರ್ ಫೋರೆನ್ಸಿಕ್ಸ್‌ನಲ್ಲಿ ಪಿಜಿ ಡಿಪ್ಲೊಮಾವನ್ನು ಪೂರ್ಣಗೊಳಿಸಿದರು.

ಇದನ್ನೂ ಓದಿ; ಬಿಜೆಪಿ ದಲಿತ ವಿರೋಧಿ ಎಂದು ಹಲವರು ಎಚ್ಚರಿಸಿದ್ದರು..’; ಅಸಮಾಧಾನ ಹೊರಹಾಕಿದ ಜಿಗಜಿಣಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...