Homeಮುಖಪುಟದಲಿತ ರೈತರಿಗೆ ಇಡಿ ಸಮನ್ಸ್‌ ಪ್ರಕರಣ: ನಿರ್ಮಲಾ ಸೀತಾರಾಮನ್‌ ವಜಾಗೆ ಆಗ್ರಹಿಸಿ ಪತ್ರ ಬರೆದಿದ್ದ IRS...

ದಲಿತ ರೈತರಿಗೆ ಇಡಿ ಸಮನ್ಸ್‌ ಪ್ರಕರಣ: ನಿರ್ಮಲಾ ಸೀತಾರಾಮನ್‌ ವಜಾಗೆ ಆಗ್ರಹಿಸಿ ಪತ್ರ ಬರೆದಿದ್ದ IRS ಅಧಿಕಾರಿ ಅಮಾನತು

- Advertisement -
- Advertisement -

ತಮಿಳುನಾಡಿನ ಇಬ್ಬರು ದಲಿತ ರೈತರಿಗೆ ಇಡಿ ಸಮನ್ಸ್‌ ನೀಡಿದ್ದಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಜಾಗೊಳಿಸುವಂತೆ ರಾಷ್ಟ್ರಪತಿಗೆ ಪತ್ರ ಬರೆದಿದ್ದ ತಮಿಳುನಾಡಿನ ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿಯನ್ನು ನಿವೃತ್ತಿಗೆ ಒಂದು ದಿನ ಮೊದಲು ಕೇಂದ್ರ ಹಣಕಾಸು ಸಚಿವಾಲಯ ಅಮಾನತುಗೊಳಿಸಿದೆ.

ಮಂಗಳವಾರ ಹೊರಡಿಸಿದ ನೋಟಿಸ್‌ನಲ್ಲಿ, ಸಚಿವಾಲಯವು ಜಿಎಸ್‌ಟಿ ಮತ್ತು ಸೆಂಟ್ರಲ್ ಎಕ್ಸೈಸ್, ಚೆನ್ನೈ (ಉತ್ತರ) ಉಪ ಆಯುಕ್ತ ಬಿ ಬಾಲಮುರುಗನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಮತ್ತು ಸಕ್ಷಮ ಪ್ರಾಧಿಕಾರದ ಅನುಮತಿಯನ್ನು ಪಡೆಯದೆ ಪ್ರಧಾನ ಕಚೇರಿಯಿಂದ ಹೊರಹೋಗದಂತೆ ಕೇಳಿಕೊಂಡಿದೆ.

ಬಾಲಮುರುಗನ್ ಅವರ ಅಮಾನತಿಗೆ ಯಾವುದೇ ಕಾರಣವನ್ನು ನೋಟಿಸ್ ಉಲ್ಲೇಖಿಸಿಲ್ಲವಾದರೂ, ಅವರು  ನಿವೃತ್ತರಾಗುವ ಎರಡು ದಿನಗಳ ಮೊದಲು ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಬಾಲಮುರುಗನ್ ಅವರು ಜೀವನಾಧಾರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಿರ್ಮಲಾ ಸೀತಾರಾಮನ್ ಅವರನ್ನು ವಜಾಗೊಳಿಸುವಂತೆ ಕೋರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದ ನಾಲ್ಕು ವಾರಗಳ ನಂತರ ಅಮಾನತು ಆದೇಶ ಹೊರಬಿದ್ದಿದೆ.

2020ರಲ್ಲಿ ತನ್ನ ಸಹೋದ್ಯೋಗಿಗಳು ಹಿಂದಿಯನ್ನು ಹೇರತ್ತಿದ್ದಾರೆ ಎಂದು ಆರೋಪಿಸಿ ಸುದ್ದಿಯಾಗಿದ್ದ ಬಾಲಮುರುಗನ್, ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಾವಿನ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದರು.

ಬಿಜೆಪಿ ನಾಯಕನ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ್ದ ದಲಿತ ರೈತರಿಗೆ ಇಡಿ ನೊಟೀಸ್‌ ನೀಡಿರುವುದು ಜಾರಿ ನಿರ್ದೇಶನಾಲಯವು ಹೇಗೆ ಬಿಜೆಪಿಯ ವಿಸ್ತೃತ ಅಂಗವಾಗಿದೆ ಎಂಬುದನ್ನು ತೋರಿಸುತ್ತದೆ. ವಾಸ್ತವವಾಗಿ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅಧಿಕಾರ ವಹಿಸಿಕೊಂಡ ನಂತರ ಜಾರಿ ನಿರ್ದೇಶನಾಲಯವನ್ನು ಬಿಜೆಪಿ ನೀತಿ ಜಾರಿ ನಿರ್ದೇಶನಾಲಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಅವರು ಆರೋಪಿಸಿದ್ದರು.

ಚೆನ್ನೈನಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಉಪ ಆಯುಕ್ತ ಹುದ್ದೆಯಲ್ಲಿದ್ದ ಬಾಲಮುರುಗನ್, ನಿರ್ಮಲಾ ಅವರು ಈಡಿಯನ್ನು ಯಶಸ್ವಿಯಾಗಿ ಬಿಜೆಪಿ ನೀತಿ ಜಾರಿ ನಿರ್ದೇಶನಾಲಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಹೇಳಿದ್ದರು. ನಿರ್ಮಲಾ ಸೀತಾರಾಮನ್‌ ಭಾರತದ ಹಣಕಾಸು ಸಚಿವರಾಗಲು ಅನರ್ಹರು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

ಈ ಕುರಿತು ಮಾತನಾಡಿದ್ದ ಬಾಲಮುರುಗನ್,  ರಾಷ್ಟ್ರಪತಿಗಳಿಗೆ ಪತ್ರ ಕಳುಹಿಸಿರುವುದನ್ನು ದೃಢಪಡಿಸಿದ್ದರು ಮತ್ತು ತಾವು ಕೃಷಿ ಕುಟುಂಬಕ್ಕೆ ಸೇರಿದವರಾಗಿದ್ದು, ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳುವ ಕಷ್ಟಗಳನ್ನು ತಿಳಿದಿದ್ದೇವೆ. ಇಡಿ ಅಧಿಕಾರಿ ಅಂಕಿತ್ ತಿವಾರಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿರುವುದು ವೈಯಕ್ತಿಕ ವಿಚಾರ. ರೈತರಿಗೆ ಸಮನ್ಸ್ ಕಳುಹಿಸುವುದು ವೈಯಕ್ತಿಕ ಕಾರ್ಯವಲ್ಲ. ಒಂದು ಸಂಸ್ಥೆಯನ್ನು ಭ್ರಷ್ಟಗೊಳಿಸಲಾಗುತ್ತಿದೆ. ಇಡಿ ಸಂಸ್ಥೆಗೆ ಹಾನಿಯಾಗಿದೆ ಮತ್ತು ಅದಕ್ಕಾಗಿಯೇ ನಾನು ಕೇಂದ್ರ ಹಣಕಾಸು ಸಚಿವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿದ್ದೇನೆ. ಈ ಪತ್ರ ಬರೆಯುವುದರಿಂದ ಆಗುವ ದುಷ್ಪರಿಣಾಮಗಳು ನನಗೆ ಗೊತ್ತು, ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಅದನ್ನು ಎದುರಿಸಲು ನಾನು ಸಿದ್ಧ ಎಂದು ಹೇಳಿದ್ದರು.

ಹಿನ್ನೆಲೆ:

ಸೇಲಂ ಜಿಲ್ಲೆಯ ಬಿಜೆಪಿ ನಾಯಕ ಗುಣಶೇಖರ್ ವಿರುದ್ದ ಜಮೀನು ಕಬಳಿಕೆ ಯತ್ನದ ವಿರುದ್ಧ ದೂರು ನೀಡಿದ್ದ ಅತ್ತೂರಿನ ದಲಿತ ಸಮುದಾಯದ ರೈತರಾದ ಕನ್ನೈಯನ್ ಮತ್ತು ಅವರ ಸಹೋದರ ಕೃಷ್ಣನ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿತ್ತು.

ಬರೀ 1,000 ಮಾಸಿಕ ಪಿಂಚಣಿಯಲ್ಲಿ ಜೀವನ ಸಾಗಿಸುವ ದಲಿತ ರೈತರನ್ನು ಇಡಿ ಹಿಂಬಾಲಿಸಿದೆ. ಈ ರೈತರು ಬಿಜೆಪಿಯ ಸೇಲಂ ಪೂರ್ವ ಜಿಲ್ಲಾ ಕಾರ್ಯದರ್ಶಿ ಗುಣಶೇಖರ್ ವಿರುದ್ಧ ಭೂಕಬಳಿಕೆ ಯತ್ನದ ಆರೋಪ ಮಾಡಿದ್ದರು. ಇದೇ ಕಾರಣಕ್ಕೆ ಸಮನ್ಸ್‌ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಬಗ್ಗೆ ಮಾತನಾಡಿದ ಕನ್ನಿಯನ್ ಮತ್ತು ಕೃಷ್ಣನ್ ಪರ ವಕೀಲರಾದ ಪರ್ವಿನಾ, ಸಮನ್ಸ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು ಉಲ್ಲೇಖಿಸಲಾಗಿಲ್ಲ. ಇಬ್ಬರು ಸಹೋದರರಿಗೆ ಪ್ರಕರಣ ಏನೆಂದು ತಿಳಿದಿಲ್ಲ. ಸಮನ್ಸ್‌ನಲ್ಲಿ ಸರಿಯಾದ ದಾಖಲೆಗಳೊಂದಿಗೆ ‘ಇಡಿ’ ಮುಂದೆ ಹಾಜರಾಗುವಂತೆ ಕೇಳುವುದನ್ನು ಹೊರತುಪಡಿಸಿ ಏನನ್ನೂ ಉಲ್ಲೇಖಿಸಲಾಗಿಲ್ಲ. ಭೂ ಕಬಳಿಕೆ ಆರೋಪಕ್ಕೆ ಪ್ರತಿಯಾಗಿ ಈ ಬೆಳವಣಿಗೆ ನಡೆದಿದೆ ಎಂದು ಹೇಳಿದ್ದರು. ಇದಲ್ಲದೆ ಇಡಿ ಸಮನ್ಸ್‌ನಲ್ಲಿ ರೈತರ ಜಾತಿಯನ್ನು ‘ಹಿಂದೂ ಪಲ್ಲರ್‌ಸ್’ ಎಂದು ಉಲ್ಲೇಖಿಸಿತ್ತು. ಇದು ವ್ಯಾಪಕವಾದ ಆಕ್ರೋಶಕ್ಕೆ ಕಾರಣವಾಗಿತ್ತು.

ಬಾಲಮುರಗನ್ ಅವರ ಪತ್ನಿ ದಲಿತ ಪ್ರವೀಣಾ ಇಬ್ಬರು ರೈತರನ್ನು ಪ್ರತಿನಿಧಿಸುವ ವಕೀಲರಾಗಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಬಾಲಮುರುಗನ್ ಅವರು, ಈ ಘಟನೆಯು ಜಾರಿ ನಿರ್ದೇಶನಾಲಯವು ಬಿಜೆಪಿಯ ವಿಸ್ತೃತ ಅಂಗವಾಗಿದೆ ಎಂಬುದನ್ನು ತೋರಿಸುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿ: ಇವಿಎಂ ತಯಾರಿಸುವ BEL ಬೋರ್ಡ್‌ಗೆ ಬಿಜೆಪಿ ನಾಯಕರ ನಾಮನಿರ್ದೇಶನ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...