Homeಕರೋನಾ ತಲ್ಲಣಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ

- Advertisement -
- Advertisement -

ಕೊರೊನಾ ಸಾಂಕ್ರಮಿಕ ವಿರುದ್ಧ ತುರ್ತು ಬಳಕೆಗಾಗಿ ಭಾರತೀಯ ಔಷಧೀಯ ನಿಯಂತ್ರಕ ಕೊವಿಶೀಲ್ಡ್‌, ಕೊವ್ಯಾಕ್ಸಿನ್‌ ಲಸಿಕೆಗಳಿಗೆ ಅನುಮತಿ ನೀಡಿದೆ. ಜೊತೆಗೆ ಇನ್ನೂ ಎರಡು ಲಸಿಕೆಗಳು ಅನುಮತಿಗಾಗಿ ಸರತಿಯಲ್ಲಿವೆ. ಆದರೆ ಅನುಮತಿ ಪಡೆದಿರುವ ಭಾರತ್‌ ಬಯೋಟೆಕ್‌ ತಯಾರಿಸುತ್ತಿರುವ ಕೊವ್ಯಾಕ್ಸಿನ್ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಲಸಿಕೆಯ ಮೂರನೇ ಹಂತದ ಪ್ರಯೋಗದ ವರದಿ ಇನ್ನೂ ಬಂದಿಲ್ಲ ಹಾಗಾಗಿ ಅದು ಸುರಕ್ಷಿತವಲ್ಲ ಎಂದು ಅವರ ಅನುಮಾನಕ್ಕೆ ಕಾರಣ. ಇದೀಗ ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ಕೊವ್ಯಾಕ್ಸಿನ್ ಕುರಿತು ಅಘಾತಕಾರಿ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾರೆ.

ಸಾಕೇತ್‌ ಗೋಖಲೆ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಕೊವ್ಯಾಕ್ಸಿನ್ ಕುರಿತ ಹಲವು ಮಾಹಿತಿಗಳನ್ನು ಸಾಕ್ಷಿ ಸಹಿತ ಬಿಚ್ಚಿಟ್ಟಿದ್ದಾರೆ. ಈ ಮಾಹಿತಿಯು ನಿಮ್ಮ ಜೀವಕ್ಕೆ ಸಂಬಂಧ ಪಟ್ಟಿದ್ದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

“ಭಾರತ್ ಬಯೋಟೆಕ್‌ನ ಹಂತ 1 ಮತ್ತು 2 ಕೊರೊನಾ ಲಸಿಕೆ ಪ್ರಯೋಗಗಳ ರಹಸ್ಯ” ಎಂದು ಅವರು ತಮ್ಮ ಬರಹವನ್ನು ಪ್ರಾರಂಭಿಸಿದ್ದಾರೆ. “ಭಾರತ್‌ ಬಯೋಟೆಕ್‌ನ ಪಾಲುದಾರನೂ ಆಗಿರುವ ಭಾರತದ ಕ್ಲಿನಿಕಲ್‌ ಟ್ರಯಲ್ಸ್‌ ರಿಜಿಸ್ಟರ್(CTR)ನ ಐಸಿಎಂಆರ್‌‌ನ ಒಂದು ಘಟಕದಲ್ಲಿ ಕೊವ್ಯಾಕ್ಸಿನ್‌ ಲಸಿಕೆಯ 1 ನೇ ಮತ್ತು 2 ನೇ ಹಂತದ ಪ್ರಯೋಗಗಳಿಗಾಗಿ ಭಾರತ್‌ ಬಯೋಟೆಕ್ ನೋಂದಣಿ ಮಾಡಿತ್ತು‌.

ಜುಲೈ 1, 2020 ಕ್ಕೆ 1 ನೇ ಹಂತದ ಪ್ರಯೋಗಗಳ ಮಾಹಿತಿಗಳನ್ನು ಭಾರತ್ ಬಯೋಟೆಕ್ ರಿಜಿಸ್ಟರ್‌ ಮಾಡಿತ್ತು. ಅದಕ್ಕಾಗಿ ಲಸಿಕೆಗಳ ಮಾದರಿ‌‌‌ಗಳನ್ನು ಪಡೆದುಕೊಳ್ಳಲು ಒಟ್ಟು 1125 ಜನರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂದಿರುವ ಅವರು, “ನೆನಪಿಡಿ, ಇದೇ ಸಮಯದಲ್ಲಿ ನರೇಂದ್ರ ಮೋದಿಯ ವರ್ಚಸ್ಸು ಹೆಚ್ಚಾಗಲೆಂದು ’ಲಸಿಕೆಯು ಸ್ವಾತಂತ್ರ್ಯ ದಿನದೊಳಗೆ ತಯಾರಾಗಬೇಕು’ ಎಂದು ಎಂಸಿಆರ್‌ ಆಘಾತಕಾರಿ ಪತ್ರ ರವಾನಿತ್ತು” ಎಂದು ಅವರು ನೆನಪಿಸಿದ್ದಾರೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

“ಲಸಿಕೆಯ 2 ನೇ ಹಂತದ ಮಾಹಿತಿಗಳನ್ನು ಸೆಪ್ಟೆಂಬರ್ 8, 2020 ರಲ್ಲಿ ರಿಜಿಸ್ಟರ್‌ ಮಾಡಲಾಗಿತ್ತು. ಇದು 1 ನೇ ಹಂತದ ಪ್ರಯೋಗ ರಿಜಿಸ್ಟರ್ ಮಾಡಿದ ಕೇವಲ 2 ತಿಂಗಳೊಳಗೆ ನಡೆದಿತ್ತು. ಅಂದರೆ, 1 ನೇ ಪ್ರಯೋಗ ಪೂರ್ಣಗೊಳ್ಳುವ ಮುನ್ನವೇ 2 ನೇ ಪ್ರಯೋಗವನ್ನು ಅನ್ನು ರಿಜಿಸ್ಟರ್ ಮಾಡಲಾಗಿತ್ತು. ಅದಲ್ಲದೆ 2 ನೇ ಪ್ರಯೋಗದಲ್ಲಿ ಕೇವಲ 124 ಸ್ವಯಂಸೇವಕರು ಮಾತ್ರ ಭಾಗವಹಿಸಿದ್ದರು” ಎಂದು ಸಾಕೇತ್‌ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

“ಜುಲೈ 2020 ರಲ್ಲಿ ರಿಜಿಸ್ಟರ್ ಮಾಡಲಾಗಿದ್ದ 1ನೇ ಹಂತದ ಪ್ರಯೋಗವು ಮಾರ್ಚ್‌ 2021 ರೊಳಗೆ ಪೂರ್ತಿಗೊಳ್ಳಬೇಕಿತ್ತು. 2 ನೇ ಹಂತದ ಪ್ರಯೋಗ ಸೆಪ್ಟೆಂಬರ್‌ 8, 2020 ರಲ್ಲಿ ರಿಜಿಸ್ಟರ್ ಮಾಡಿದ್ದು, ಇದರ ಪ್ರಯೋಗವು ಒಂದು ವರ್ಷ ಹಾಗೂ 3 ತಿಂಗಳು ಅಂದರೆ 2021 ರ ಡಿಸೆಂಬರ್‌‌ವರೆಗೆ ನಡೆಯಬೇಕಿತ್ತು. 3 ನೇ ಹಂತದ ಪ್ರಯೋಗ‌ ನವೆಂಬರ್‌ 9 2020 ರಂದು ರಿಜಿಸ್ಟರ್ ಮಾಡಲಾಗಿದ್ದು, ಇದರ ಪ್ರಯೋಗವನ್ನು 25,800 ಮಂದಿಯನ್ನು ಬಳಸಿ ನಡೆಸಲಾಗುವುದು ಎಂದು ಇದರಲ್ಲಿ ಉಲ್ಲೇಖಿಸಲಾಗಿತ್ತು” ಎಂದು ಅವರು ಹೇಳಿದ್ದಾರೆ.

ಮೂರನೇ ಹಂತದ ಪ್ರಯೋಗಕ್ಕೆ ಒಂದು ವರ್ಷವನ್ನು ನಿಗದಿಪಡಿಸಲಾಗಿತ್ತು. ಆದರೆ, ಮೊದಲ ಹಂತದ ಪ್ರಯೋಗಗಳು ಮುಗಿಯುವ ಮೊದಲೇ 2 ಮತ್ತು 3 ನೇ ಹಂತದ ಪ್ರಯೋಗಗಳನ್ನು ರಿಜಿಸ್ಟರ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಒಟ್ಟಾರೆಯಾಗಿ 1 ನೇ ಹಂತ ಮಾರ್ಚ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 2 ನೇ ಹಂತವು ಡಿಸೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 3 ನೇ ಹಂತವು ನವೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು” ಎಂದು ಅವರು ಸೂಚಿಸಿದ್ದಾರೆ. ಆದರೆ ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಗೆ ಭಾರತ ಸರಕಾರವು ಜನವರಿ 2021 ರಲ್ಲೇ ಅನುಮತಿ ನೀಡಿದೆ.

ಇದನ್ನೂ ಓದಿ: ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ತಮ್ಮ ಮಾಹಿತಿಯಲ್ಲಿ ಸಾಕೇತ್ ಗೋಖಲೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

  • ಭಾರತ್ ಬಯೋಟೆಕ್‍ನ ಸ್ವತಃ ರಿಜಿಸ್ಟ್ರೇಶನ್ ದಾಖಲೆಗಳಲ್ಲಿರುವಂತಹ 1 ನೇ ಪ್ರಯೋಗ ಪೂರ್ಣಗೊಳ್ಳುವಿಕೆಗೆ ಇನ್ನೂ 3 ತಿಂಗಳುಗಳಿರುವಾಗ ಯಾವ ಆಧಾರದಲ್ಲಿ ಲಸಿಕೆ ಅನುಮತಿ ನೀಡಲಾಗಿದೆ?
  • ಈ ಕಾರಣಕ್ಕಾಗಿಯೇ ಭಾರತ್ ಬಯೋಟೆಕ್‍ನ 1 ನೇ ಹಂತ ಮತ್ತು 2 ನೇ ಹಂತದ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ಮೋದಿ ಸರರ್ಕಾರ ಹಿಂಜರಿಯುತ್ತಿದೆಯೆ?
  • ಲಸಿಕೆಯ 1 ನೇ ಮತ್ತು 2 ನೇ ಹಂತದ ಸ್ವಯಂ ಸೇವಕರ ಸಂಖ್ಯೆ ಕೇವಲ 1249. 130 ಕೋಟಿಯಷ್ಟು ಜನಸಂಖ್ಯೆಯಿರುವ ಭಾರತದಲ್ಲಿ ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
  • ಪರಿಸ್ಥಿತಿ ಹೀಗಿರುವಾಗ ಈ ಲಸಿಕೆಯು 110% ಸುರಕ್ಷಿತ ಎಂದು ಹೇಗೆ ಹೇಳುತ್ತೀರಿ?
  • ಅಲ್ಲದೆ ರೂಪಾಂತರಿ ಕೊರೊನಾ ವೈರಸ್‌ ವಿರುದ್ಧ ಇದು ಕೆಲಸ ನಿರ್ವಹಿಸುತ್ತದೆ ಎಂದು ಯಾವ ಆಧಾರದಲ್ಲಿ ಹೇಳುತ್ತೀರಿ?
  • ಇದನ್ನೆಲ್ಲಾ ಸಾಬೀತುಪಡಿಸಲು 1 ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳು ಎಲ್ಲಿವೆ? ಎಂದು ಪ್ರಶ್ನಿಸಿದ್ದಾರೆ.

“ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಪ್ರಯೋಗಗಳ 1ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಬೇಕು. ಒಂದೂವರೆ ವರ್ಷದಲ್ಲಿ ಮಗಿಯಬೇಕಿದ್ದ ಪ್ರಯೋಗಗಳು ಕೇವಲ 5 ತಿಂಗಳಿನಲ್ಲಿ ಹೇಗೆ ಮುಗಿಯಿತು ಅನ್ನುವುದನ್ನು ವಿವರಿಸಬೇಕು. ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ” ಎಂದು ಅವರು ಮಾಹಿತಿ ಬಿಡುಗಡೆಗೆ ಮೋದಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಷ್ಟೇ ಅಲ್ಲದೆ ಸಾಖೇತ್‌ ಗೋಖಲೆ ತಾವು ಬರೆದ ಎಲ್ಲಾ ವಿಚಾರಗಳಿಗೂ ದಾಖಲೆಗಳನ್ನೂ ನೀಡಿದ್ದಾರೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...