Homeಕರೋನಾ ತಲ್ಲಣಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ

- Advertisement -
- Advertisement -

ಕೊರೊನಾ ಸಾಂಕ್ರಮಿಕ ವಿರುದ್ಧ ತುರ್ತು ಬಳಕೆಗಾಗಿ ಭಾರತೀಯ ಔಷಧೀಯ ನಿಯಂತ್ರಕ ಕೊವಿಶೀಲ್ಡ್‌, ಕೊವ್ಯಾಕ್ಸಿನ್‌ ಲಸಿಕೆಗಳಿಗೆ ಅನುಮತಿ ನೀಡಿದೆ. ಜೊತೆಗೆ ಇನ್ನೂ ಎರಡು ಲಸಿಕೆಗಳು ಅನುಮತಿಗಾಗಿ ಸರತಿಯಲ್ಲಿವೆ. ಆದರೆ ಅನುಮತಿ ಪಡೆದಿರುವ ಭಾರತ್‌ ಬಯೋಟೆಕ್‌ ತಯಾರಿಸುತ್ತಿರುವ ಕೊವ್ಯಾಕ್ಸಿನ್ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಲಸಿಕೆಯ ಮೂರನೇ ಹಂತದ ಪ್ರಯೋಗದ ವರದಿ ಇನ್ನೂ ಬಂದಿಲ್ಲ ಹಾಗಾಗಿ ಅದು ಸುರಕ್ಷಿತವಲ್ಲ ಎಂದು ಅವರ ಅನುಮಾನಕ್ಕೆ ಕಾರಣ. ಇದೀಗ ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ಕೊವ್ಯಾಕ್ಸಿನ್ ಕುರಿತು ಅಘಾತಕಾರಿ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾರೆ.

ಸಾಕೇತ್‌ ಗೋಖಲೆ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಕೊವ್ಯಾಕ್ಸಿನ್ ಕುರಿತ ಹಲವು ಮಾಹಿತಿಗಳನ್ನು ಸಾಕ್ಷಿ ಸಹಿತ ಬಿಚ್ಚಿಟ್ಟಿದ್ದಾರೆ. ಈ ಮಾಹಿತಿಯು ನಿಮ್ಮ ಜೀವಕ್ಕೆ ಸಂಬಂಧ ಪಟ್ಟಿದ್ದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

“ಭಾರತ್ ಬಯೋಟೆಕ್‌ನ ಹಂತ 1 ಮತ್ತು 2 ಕೊರೊನಾ ಲಸಿಕೆ ಪ್ರಯೋಗಗಳ ರಹಸ್ಯ” ಎಂದು ಅವರು ತಮ್ಮ ಬರಹವನ್ನು ಪ್ರಾರಂಭಿಸಿದ್ದಾರೆ. “ಭಾರತ್‌ ಬಯೋಟೆಕ್‌ನ ಪಾಲುದಾರನೂ ಆಗಿರುವ ಭಾರತದ ಕ್ಲಿನಿಕಲ್‌ ಟ್ರಯಲ್ಸ್‌ ರಿಜಿಸ್ಟರ್(CTR)ನ ಐಸಿಎಂಆರ್‌‌ನ ಒಂದು ಘಟಕದಲ್ಲಿ ಕೊವ್ಯಾಕ್ಸಿನ್‌ ಲಸಿಕೆಯ 1 ನೇ ಮತ್ತು 2 ನೇ ಹಂತದ ಪ್ರಯೋಗಗಳಿಗಾಗಿ ಭಾರತ್‌ ಬಯೋಟೆಕ್ ನೋಂದಣಿ ಮಾಡಿತ್ತು‌.

ಜುಲೈ 1, 2020 ಕ್ಕೆ 1 ನೇ ಹಂತದ ಪ್ರಯೋಗಗಳ ಮಾಹಿತಿಗಳನ್ನು ಭಾರತ್ ಬಯೋಟೆಕ್ ರಿಜಿಸ್ಟರ್‌ ಮಾಡಿತ್ತು. ಅದಕ್ಕಾಗಿ ಲಸಿಕೆಗಳ ಮಾದರಿ‌‌‌ಗಳನ್ನು ಪಡೆದುಕೊಳ್ಳಲು ಒಟ್ಟು 1125 ಜನರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂದಿರುವ ಅವರು, “ನೆನಪಿಡಿ, ಇದೇ ಸಮಯದಲ್ಲಿ ನರೇಂದ್ರ ಮೋದಿಯ ವರ್ಚಸ್ಸು ಹೆಚ್ಚಾಗಲೆಂದು ’ಲಸಿಕೆಯು ಸ್ವಾತಂತ್ರ್ಯ ದಿನದೊಳಗೆ ತಯಾರಾಗಬೇಕು’ ಎಂದು ಎಂಸಿಆರ್‌ ಆಘಾತಕಾರಿ ಪತ್ರ ರವಾನಿತ್ತು” ಎಂದು ಅವರು ನೆನಪಿಸಿದ್ದಾರೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

“ಲಸಿಕೆಯ 2 ನೇ ಹಂತದ ಮಾಹಿತಿಗಳನ್ನು ಸೆಪ್ಟೆಂಬರ್ 8, 2020 ರಲ್ಲಿ ರಿಜಿಸ್ಟರ್‌ ಮಾಡಲಾಗಿತ್ತು. ಇದು 1 ನೇ ಹಂತದ ಪ್ರಯೋಗ ರಿಜಿಸ್ಟರ್ ಮಾಡಿದ ಕೇವಲ 2 ತಿಂಗಳೊಳಗೆ ನಡೆದಿತ್ತು. ಅಂದರೆ, 1 ನೇ ಪ್ರಯೋಗ ಪೂರ್ಣಗೊಳ್ಳುವ ಮುನ್ನವೇ 2 ನೇ ಪ್ರಯೋಗವನ್ನು ಅನ್ನು ರಿಜಿಸ್ಟರ್ ಮಾಡಲಾಗಿತ್ತು. ಅದಲ್ಲದೆ 2 ನೇ ಪ್ರಯೋಗದಲ್ಲಿ ಕೇವಲ 124 ಸ್ವಯಂಸೇವಕರು ಮಾತ್ರ ಭಾಗವಹಿಸಿದ್ದರು” ಎಂದು ಸಾಕೇತ್‌ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

“ಜುಲೈ 2020 ರಲ್ಲಿ ರಿಜಿಸ್ಟರ್ ಮಾಡಲಾಗಿದ್ದ 1ನೇ ಹಂತದ ಪ್ರಯೋಗವು ಮಾರ್ಚ್‌ 2021 ರೊಳಗೆ ಪೂರ್ತಿಗೊಳ್ಳಬೇಕಿತ್ತು. 2 ನೇ ಹಂತದ ಪ್ರಯೋಗ ಸೆಪ್ಟೆಂಬರ್‌ 8, 2020 ರಲ್ಲಿ ರಿಜಿಸ್ಟರ್ ಮಾಡಿದ್ದು, ಇದರ ಪ್ರಯೋಗವು ಒಂದು ವರ್ಷ ಹಾಗೂ 3 ತಿಂಗಳು ಅಂದರೆ 2021 ರ ಡಿಸೆಂಬರ್‌‌ವರೆಗೆ ನಡೆಯಬೇಕಿತ್ತು. 3 ನೇ ಹಂತದ ಪ್ರಯೋಗ‌ ನವೆಂಬರ್‌ 9 2020 ರಂದು ರಿಜಿಸ್ಟರ್ ಮಾಡಲಾಗಿದ್ದು, ಇದರ ಪ್ರಯೋಗವನ್ನು 25,800 ಮಂದಿಯನ್ನು ಬಳಸಿ ನಡೆಸಲಾಗುವುದು ಎಂದು ಇದರಲ್ಲಿ ಉಲ್ಲೇಖಿಸಲಾಗಿತ್ತು” ಎಂದು ಅವರು ಹೇಳಿದ್ದಾರೆ.

ಮೂರನೇ ಹಂತದ ಪ್ರಯೋಗಕ್ಕೆ ಒಂದು ವರ್ಷವನ್ನು ನಿಗದಿಪಡಿಸಲಾಗಿತ್ತು. ಆದರೆ, ಮೊದಲ ಹಂತದ ಪ್ರಯೋಗಗಳು ಮುಗಿಯುವ ಮೊದಲೇ 2 ಮತ್ತು 3 ನೇ ಹಂತದ ಪ್ರಯೋಗಗಳನ್ನು ರಿಜಿಸ್ಟರ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಒಟ್ಟಾರೆಯಾಗಿ 1 ನೇ ಹಂತ ಮಾರ್ಚ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 2 ನೇ ಹಂತವು ಡಿಸೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 3 ನೇ ಹಂತವು ನವೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು” ಎಂದು ಅವರು ಸೂಚಿಸಿದ್ದಾರೆ. ಆದರೆ ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಗೆ ಭಾರತ ಸರಕಾರವು ಜನವರಿ 2021 ರಲ್ಲೇ ಅನುಮತಿ ನೀಡಿದೆ.

ಇದನ್ನೂ ಓದಿ: ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ತಮ್ಮ ಮಾಹಿತಿಯಲ್ಲಿ ಸಾಕೇತ್ ಗೋಖಲೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

  • ಭಾರತ್ ಬಯೋಟೆಕ್‍ನ ಸ್ವತಃ ರಿಜಿಸ್ಟ್ರೇಶನ್ ದಾಖಲೆಗಳಲ್ಲಿರುವಂತಹ 1 ನೇ ಪ್ರಯೋಗ ಪೂರ್ಣಗೊಳ್ಳುವಿಕೆಗೆ ಇನ್ನೂ 3 ತಿಂಗಳುಗಳಿರುವಾಗ ಯಾವ ಆಧಾರದಲ್ಲಿ ಲಸಿಕೆ ಅನುಮತಿ ನೀಡಲಾಗಿದೆ?
  • ಈ ಕಾರಣಕ್ಕಾಗಿಯೇ ಭಾರತ್ ಬಯೋಟೆಕ್‍ನ 1 ನೇ ಹಂತ ಮತ್ತು 2 ನೇ ಹಂತದ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ಮೋದಿ ಸರರ್ಕಾರ ಹಿಂಜರಿಯುತ್ತಿದೆಯೆ?
  • ಲಸಿಕೆಯ 1 ನೇ ಮತ್ತು 2 ನೇ ಹಂತದ ಸ್ವಯಂ ಸೇವಕರ ಸಂಖ್ಯೆ ಕೇವಲ 1249. 130 ಕೋಟಿಯಷ್ಟು ಜನಸಂಖ್ಯೆಯಿರುವ ಭಾರತದಲ್ಲಿ ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
  • ಪರಿಸ್ಥಿತಿ ಹೀಗಿರುವಾಗ ಈ ಲಸಿಕೆಯು 110% ಸುರಕ್ಷಿತ ಎಂದು ಹೇಗೆ ಹೇಳುತ್ತೀರಿ?
  • ಅಲ್ಲದೆ ರೂಪಾಂತರಿ ಕೊರೊನಾ ವೈರಸ್‌ ವಿರುದ್ಧ ಇದು ಕೆಲಸ ನಿರ್ವಹಿಸುತ್ತದೆ ಎಂದು ಯಾವ ಆಧಾರದಲ್ಲಿ ಹೇಳುತ್ತೀರಿ?
  • ಇದನ್ನೆಲ್ಲಾ ಸಾಬೀತುಪಡಿಸಲು 1 ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳು ಎಲ್ಲಿವೆ? ಎಂದು ಪ್ರಶ್ನಿಸಿದ್ದಾರೆ.

“ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಪ್ರಯೋಗಗಳ 1ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಬೇಕು. ಒಂದೂವರೆ ವರ್ಷದಲ್ಲಿ ಮಗಿಯಬೇಕಿದ್ದ ಪ್ರಯೋಗಗಳು ಕೇವಲ 5 ತಿಂಗಳಿನಲ್ಲಿ ಹೇಗೆ ಮುಗಿಯಿತು ಅನ್ನುವುದನ್ನು ವಿವರಿಸಬೇಕು. ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ” ಎಂದು ಅವರು ಮಾಹಿತಿ ಬಿಡುಗಡೆಗೆ ಮೋದಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಷ್ಟೇ ಅಲ್ಲದೆ ಸಾಖೇತ್‌ ಗೋಖಲೆ ತಾವು ಬರೆದ ಎಲ್ಲಾ ವಿಚಾರಗಳಿಗೂ ದಾಖಲೆಗಳನ್ನೂ ನೀಡಿದ್ದಾರೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...