Homeಕರೋನಾ ತಲ್ಲಣಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ

- Advertisement -
- Advertisement -

ಕೊರೊನಾ ಸಾಂಕ್ರಮಿಕ ವಿರುದ್ಧ ತುರ್ತು ಬಳಕೆಗಾಗಿ ಭಾರತೀಯ ಔಷಧೀಯ ನಿಯಂತ್ರಕ ಕೊವಿಶೀಲ್ಡ್‌, ಕೊವ್ಯಾಕ್ಸಿನ್‌ ಲಸಿಕೆಗಳಿಗೆ ಅನುಮತಿ ನೀಡಿದೆ. ಜೊತೆಗೆ ಇನ್ನೂ ಎರಡು ಲಸಿಕೆಗಳು ಅನುಮತಿಗಾಗಿ ಸರತಿಯಲ್ಲಿವೆ. ಆದರೆ ಅನುಮತಿ ಪಡೆದಿರುವ ಭಾರತ್‌ ಬಯೋಟೆಕ್‌ ತಯಾರಿಸುತ್ತಿರುವ ಕೊವ್ಯಾಕ್ಸಿನ್ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಲಸಿಕೆಯ ಮೂರನೇ ಹಂತದ ಪ್ರಯೋಗದ ವರದಿ ಇನ್ನೂ ಬಂದಿಲ್ಲ ಹಾಗಾಗಿ ಅದು ಸುರಕ್ಷಿತವಲ್ಲ ಎಂದು ಅವರ ಅನುಮಾನಕ್ಕೆ ಕಾರಣ. ಇದೀಗ ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ಕೊವ್ಯಾಕ್ಸಿನ್ ಕುರಿತು ಅಘಾತಕಾರಿ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾರೆ.

ಸಾಕೇತ್‌ ಗೋಖಲೆ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಕೊವ್ಯಾಕ್ಸಿನ್ ಕುರಿತ ಹಲವು ಮಾಹಿತಿಗಳನ್ನು ಸಾಕ್ಷಿ ಸಹಿತ ಬಿಚ್ಚಿಟ್ಟಿದ್ದಾರೆ. ಈ ಮಾಹಿತಿಯು ನಿಮ್ಮ ಜೀವಕ್ಕೆ ಸಂಬಂಧ ಪಟ್ಟಿದ್ದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

“ಭಾರತ್ ಬಯೋಟೆಕ್‌ನ ಹಂತ 1 ಮತ್ತು 2 ಕೊರೊನಾ ಲಸಿಕೆ ಪ್ರಯೋಗಗಳ ರಹಸ್ಯ” ಎಂದು ಅವರು ತಮ್ಮ ಬರಹವನ್ನು ಪ್ರಾರಂಭಿಸಿದ್ದಾರೆ. “ಭಾರತ್‌ ಬಯೋಟೆಕ್‌ನ ಪಾಲುದಾರನೂ ಆಗಿರುವ ಭಾರತದ ಕ್ಲಿನಿಕಲ್‌ ಟ್ರಯಲ್ಸ್‌ ರಿಜಿಸ್ಟರ್(CTR)ನ ಐಸಿಎಂಆರ್‌‌ನ ಒಂದು ಘಟಕದಲ್ಲಿ ಕೊವ್ಯಾಕ್ಸಿನ್‌ ಲಸಿಕೆಯ 1 ನೇ ಮತ್ತು 2 ನೇ ಹಂತದ ಪ್ರಯೋಗಗಳಿಗಾಗಿ ಭಾರತ್‌ ಬಯೋಟೆಕ್ ನೋಂದಣಿ ಮಾಡಿತ್ತು‌.

ಜುಲೈ 1, 2020 ಕ್ಕೆ 1 ನೇ ಹಂತದ ಪ್ರಯೋಗಗಳ ಮಾಹಿತಿಗಳನ್ನು ಭಾರತ್ ಬಯೋಟೆಕ್ ರಿಜಿಸ್ಟರ್‌ ಮಾಡಿತ್ತು. ಅದಕ್ಕಾಗಿ ಲಸಿಕೆಗಳ ಮಾದರಿ‌‌‌ಗಳನ್ನು ಪಡೆದುಕೊಳ್ಳಲು ಒಟ್ಟು 1125 ಜನರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂದಿರುವ ಅವರು, “ನೆನಪಿಡಿ, ಇದೇ ಸಮಯದಲ್ಲಿ ನರೇಂದ್ರ ಮೋದಿಯ ವರ್ಚಸ್ಸು ಹೆಚ್ಚಾಗಲೆಂದು ’ಲಸಿಕೆಯು ಸ್ವಾತಂತ್ರ್ಯ ದಿನದೊಳಗೆ ತಯಾರಾಗಬೇಕು’ ಎಂದು ಎಂಸಿಆರ್‌ ಆಘಾತಕಾರಿ ಪತ್ರ ರವಾನಿತ್ತು” ಎಂದು ಅವರು ನೆನಪಿಸಿದ್ದಾರೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

“ಲಸಿಕೆಯ 2 ನೇ ಹಂತದ ಮಾಹಿತಿಗಳನ್ನು ಸೆಪ್ಟೆಂಬರ್ 8, 2020 ರಲ್ಲಿ ರಿಜಿಸ್ಟರ್‌ ಮಾಡಲಾಗಿತ್ತು. ಇದು 1 ನೇ ಹಂತದ ಪ್ರಯೋಗ ರಿಜಿಸ್ಟರ್ ಮಾಡಿದ ಕೇವಲ 2 ತಿಂಗಳೊಳಗೆ ನಡೆದಿತ್ತು. ಅಂದರೆ, 1 ನೇ ಪ್ರಯೋಗ ಪೂರ್ಣಗೊಳ್ಳುವ ಮುನ್ನವೇ 2 ನೇ ಪ್ರಯೋಗವನ್ನು ಅನ್ನು ರಿಜಿಸ್ಟರ್ ಮಾಡಲಾಗಿತ್ತು. ಅದಲ್ಲದೆ 2 ನೇ ಪ್ರಯೋಗದಲ್ಲಿ ಕೇವಲ 124 ಸ್ವಯಂಸೇವಕರು ಮಾತ್ರ ಭಾಗವಹಿಸಿದ್ದರು” ಎಂದು ಸಾಕೇತ್‌ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

“ಜುಲೈ 2020 ರಲ್ಲಿ ರಿಜಿಸ್ಟರ್ ಮಾಡಲಾಗಿದ್ದ 1ನೇ ಹಂತದ ಪ್ರಯೋಗವು ಮಾರ್ಚ್‌ 2021 ರೊಳಗೆ ಪೂರ್ತಿಗೊಳ್ಳಬೇಕಿತ್ತು. 2 ನೇ ಹಂತದ ಪ್ರಯೋಗ ಸೆಪ್ಟೆಂಬರ್‌ 8, 2020 ರಲ್ಲಿ ರಿಜಿಸ್ಟರ್ ಮಾಡಿದ್ದು, ಇದರ ಪ್ರಯೋಗವು ಒಂದು ವರ್ಷ ಹಾಗೂ 3 ತಿಂಗಳು ಅಂದರೆ 2021 ರ ಡಿಸೆಂಬರ್‌‌ವರೆಗೆ ನಡೆಯಬೇಕಿತ್ತು. 3 ನೇ ಹಂತದ ಪ್ರಯೋಗ‌ ನವೆಂಬರ್‌ 9 2020 ರಂದು ರಿಜಿಸ್ಟರ್ ಮಾಡಲಾಗಿದ್ದು, ಇದರ ಪ್ರಯೋಗವನ್ನು 25,800 ಮಂದಿಯನ್ನು ಬಳಸಿ ನಡೆಸಲಾಗುವುದು ಎಂದು ಇದರಲ್ಲಿ ಉಲ್ಲೇಖಿಸಲಾಗಿತ್ತು” ಎಂದು ಅವರು ಹೇಳಿದ್ದಾರೆ.

ಮೂರನೇ ಹಂತದ ಪ್ರಯೋಗಕ್ಕೆ ಒಂದು ವರ್ಷವನ್ನು ನಿಗದಿಪಡಿಸಲಾಗಿತ್ತು. ಆದರೆ, ಮೊದಲ ಹಂತದ ಪ್ರಯೋಗಗಳು ಮುಗಿಯುವ ಮೊದಲೇ 2 ಮತ್ತು 3 ನೇ ಹಂತದ ಪ್ರಯೋಗಗಳನ್ನು ರಿಜಿಸ್ಟರ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಒಟ್ಟಾರೆಯಾಗಿ 1 ನೇ ಹಂತ ಮಾರ್ಚ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 2 ನೇ ಹಂತವು ಡಿಸೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 3 ನೇ ಹಂತವು ನವೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು” ಎಂದು ಅವರು ಸೂಚಿಸಿದ್ದಾರೆ. ಆದರೆ ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಗೆ ಭಾರತ ಸರಕಾರವು ಜನವರಿ 2021 ರಲ್ಲೇ ಅನುಮತಿ ನೀಡಿದೆ.

ಇದನ್ನೂ ಓದಿ: ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ತಮ್ಮ ಮಾಹಿತಿಯಲ್ಲಿ ಸಾಕೇತ್ ಗೋಖಲೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

  • ಭಾರತ್ ಬಯೋಟೆಕ್‍ನ ಸ್ವತಃ ರಿಜಿಸ್ಟ್ರೇಶನ್ ದಾಖಲೆಗಳಲ್ಲಿರುವಂತಹ 1 ನೇ ಪ್ರಯೋಗ ಪೂರ್ಣಗೊಳ್ಳುವಿಕೆಗೆ ಇನ್ನೂ 3 ತಿಂಗಳುಗಳಿರುವಾಗ ಯಾವ ಆಧಾರದಲ್ಲಿ ಲಸಿಕೆ ಅನುಮತಿ ನೀಡಲಾಗಿದೆ?
  • ಈ ಕಾರಣಕ್ಕಾಗಿಯೇ ಭಾರತ್ ಬಯೋಟೆಕ್‍ನ 1 ನೇ ಹಂತ ಮತ್ತು 2 ನೇ ಹಂತದ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ಮೋದಿ ಸರರ್ಕಾರ ಹಿಂಜರಿಯುತ್ತಿದೆಯೆ?
  • ಲಸಿಕೆಯ 1 ನೇ ಮತ್ತು 2 ನೇ ಹಂತದ ಸ್ವಯಂ ಸೇವಕರ ಸಂಖ್ಯೆ ಕೇವಲ 1249. 130 ಕೋಟಿಯಷ್ಟು ಜನಸಂಖ್ಯೆಯಿರುವ ಭಾರತದಲ್ಲಿ ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
  • ಪರಿಸ್ಥಿತಿ ಹೀಗಿರುವಾಗ ಈ ಲಸಿಕೆಯು 110% ಸುರಕ್ಷಿತ ಎಂದು ಹೇಗೆ ಹೇಳುತ್ತೀರಿ?
  • ಅಲ್ಲದೆ ರೂಪಾಂತರಿ ಕೊರೊನಾ ವೈರಸ್‌ ವಿರುದ್ಧ ಇದು ಕೆಲಸ ನಿರ್ವಹಿಸುತ್ತದೆ ಎಂದು ಯಾವ ಆಧಾರದಲ್ಲಿ ಹೇಳುತ್ತೀರಿ?
  • ಇದನ್ನೆಲ್ಲಾ ಸಾಬೀತುಪಡಿಸಲು 1 ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳು ಎಲ್ಲಿವೆ? ಎಂದು ಪ್ರಶ್ನಿಸಿದ್ದಾರೆ.

“ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಪ್ರಯೋಗಗಳ 1ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಬೇಕು. ಒಂದೂವರೆ ವರ್ಷದಲ್ಲಿ ಮಗಿಯಬೇಕಿದ್ದ ಪ್ರಯೋಗಗಳು ಕೇವಲ 5 ತಿಂಗಳಿನಲ್ಲಿ ಹೇಗೆ ಮುಗಿಯಿತು ಅನ್ನುವುದನ್ನು ವಿವರಿಸಬೇಕು. ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ” ಎಂದು ಅವರು ಮಾಹಿತಿ ಬಿಡುಗಡೆಗೆ ಮೋದಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಷ್ಟೇ ಅಲ್ಲದೆ ಸಾಖೇತ್‌ ಗೋಖಲೆ ತಾವು ಬರೆದ ಎಲ್ಲಾ ವಿಚಾರಗಳಿಗೂ ದಾಖಲೆಗಳನ್ನೂ ನೀಡಿದ್ದಾರೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....