Homeಕರೋನಾ ತಲ್ಲಣಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ

- Advertisement -
- Advertisement -

ಕೊರೊನಾ ಸಾಂಕ್ರಮಿಕ ವಿರುದ್ಧ ತುರ್ತು ಬಳಕೆಗಾಗಿ ಭಾರತೀಯ ಔಷಧೀಯ ನಿಯಂತ್ರಕ ಕೊವಿಶೀಲ್ಡ್‌, ಕೊವ್ಯಾಕ್ಸಿನ್‌ ಲಸಿಕೆಗಳಿಗೆ ಅನುಮತಿ ನೀಡಿದೆ. ಜೊತೆಗೆ ಇನ್ನೂ ಎರಡು ಲಸಿಕೆಗಳು ಅನುಮತಿಗಾಗಿ ಸರತಿಯಲ್ಲಿವೆ. ಆದರೆ ಅನುಮತಿ ಪಡೆದಿರುವ ಭಾರತ್‌ ಬಯೋಟೆಕ್‌ ತಯಾರಿಸುತ್ತಿರುವ ಕೊವ್ಯಾಕ್ಸಿನ್ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಲಸಿಕೆಯ ಮೂರನೇ ಹಂತದ ಪ್ರಯೋಗದ ವರದಿ ಇನ್ನೂ ಬಂದಿಲ್ಲ ಹಾಗಾಗಿ ಅದು ಸುರಕ್ಷಿತವಲ್ಲ ಎಂದು ಅವರ ಅನುಮಾನಕ್ಕೆ ಕಾರಣ. ಇದೀಗ ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ಕೊವ್ಯಾಕ್ಸಿನ್ ಕುರಿತು ಅಘಾತಕಾರಿ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾರೆ.

ಸಾಕೇತ್‌ ಗೋಖಲೆ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಕೊವ್ಯಾಕ್ಸಿನ್ ಕುರಿತ ಹಲವು ಮಾಹಿತಿಗಳನ್ನು ಸಾಕ್ಷಿ ಸಹಿತ ಬಿಚ್ಚಿಟ್ಟಿದ್ದಾರೆ. ಈ ಮಾಹಿತಿಯು ನಿಮ್ಮ ಜೀವಕ್ಕೆ ಸಂಬಂಧ ಪಟ್ಟಿದ್ದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

“ಭಾರತ್ ಬಯೋಟೆಕ್‌ನ ಹಂತ 1 ಮತ್ತು 2 ಕೊರೊನಾ ಲಸಿಕೆ ಪ್ರಯೋಗಗಳ ರಹಸ್ಯ” ಎಂದು ಅವರು ತಮ್ಮ ಬರಹವನ್ನು ಪ್ರಾರಂಭಿಸಿದ್ದಾರೆ. “ಭಾರತ್‌ ಬಯೋಟೆಕ್‌ನ ಪಾಲುದಾರನೂ ಆಗಿರುವ ಭಾರತದ ಕ್ಲಿನಿಕಲ್‌ ಟ್ರಯಲ್ಸ್‌ ರಿಜಿಸ್ಟರ್(CTR)ನ ಐಸಿಎಂಆರ್‌‌ನ ಒಂದು ಘಟಕದಲ್ಲಿ ಕೊವ್ಯಾಕ್ಸಿನ್‌ ಲಸಿಕೆಯ 1 ನೇ ಮತ್ತು 2 ನೇ ಹಂತದ ಪ್ರಯೋಗಗಳಿಗಾಗಿ ಭಾರತ್‌ ಬಯೋಟೆಕ್ ನೋಂದಣಿ ಮಾಡಿತ್ತು‌.

ಜುಲೈ 1, 2020 ಕ್ಕೆ 1 ನೇ ಹಂತದ ಪ್ರಯೋಗಗಳ ಮಾಹಿತಿಗಳನ್ನು ಭಾರತ್ ಬಯೋಟೆಕ್ ರಿಜಿಸ್ಟರ್‌ ಮಾಡಿತ್ತು. ಅದಕ್ಕಾಗಿ ಲಸಿಕೆಗಳ ಮಾದರಿ‌‌‌ಗಳನ್ನು ಪಡೆದುಕೊಳ್ಳಲು ಒಟ್ಟು 1125 ಜನರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂದಿರುವ ಅವರು, “ನೆನಪಿಡಿ, ಇದೇ ಸಮಯದಲ್ಲಿ ನರೇಂದ್ರ ಮೋದಿಯ ವರ್ಚಸ್ಸು ಹೆಚ್ಚಾಗಲೆಂದು ’ಲಸಿಕೆಯು ಸ್ವಾತಂತ್ರ್ಯ ದಿನದೊಳಗೆ ತಯಾರಾಗಬೇಕು’ ಎಂದು ಎಂಸಿಆರ್‌ ಆಘಾತಕಾರಿ ಪತ್ರ ರವಾನಿತ್ತು” ಎಂದು ಅವರು ನೆನಪಿಸಿದ್ದಾರೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

“ಲಸಿಕೆಯ 2 ನೇ ಹಂತದ ಮಾಹಿತಿಗಳನ್ನು ಸೆಪ್ಟೆಂಬರ್ 8, 2020 ರಲ್ಲಿ ರಿಜಿಸ್ಟರ್‌ ಮಾಡಲಾಗಿತ್ತು. ಇದು 1 ನೇ ಹಂತದ ಪ್ರಯೋಗ ರಿಜಿಸ್ಟರ್ ಮಾಡಿದ ಕೇವಲ 2 ತಿಂಗಳೊಳಗೆ ನಡೆದಿತ್ತು. ಅಂದರೆ, 1 ನೇ ಪ್ರಯೋಗ ಪೂರ್ಣಗೊಳ್ಳುವ ಮುನ್ನವೇ 2 ನೇ ಪ್ರಯೋಗವನ್ನು ಅನ್ನು ರಿಜಿಸ್ಟರ್ ಮಾಡಲಾಗಿತ್ತು. ಅದಲ್ಲದೆ 2 ನೇ ಪ್ರಯೋಗದಲ್ಲಿ ಕೇವಲ 124 ಸ್ವಯಂಸೇವಕರು ಮಾತ್ರ ಭಾಗವಹಿಸಿದ್ದರು” ಎಂದು ಸಾಕೇತ್‌ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

“ಜುಲೈ 2020 ರಲ್ಲಿ ರಿಜಿಸ್ಟರ್ ಮಾಡಲಾಗಿದ್ದ 1ನೇ ಹಂತದ ಪ್ರಯೋಗವು ಮಾರ್ಚ್‌ 2021 ರೊಳಗೆ ಪೂರ್ತಿಗೊಳ್ಳಬೇಕಿತ್ತು. 2 ನೇ ಹಂತದ ಪ್ರಯೋಗ ಸೆಪ್ಟೆಂಬರ್‌ 8, 2020 ರಲ್ಲಿ ರಿಜಿಸ್ಟರ್ ಮಾಡಿದ್ದು, ಇದರ ಪ್ರಯೋಗವು ಒಂದು ವರ್ಷ ಹಾಗೂ 3 ತಿಂಗಳು ಅಂದರೆ 2021 ರ ಡಿಸೆಂಬರ್‌‌ವರೆಗೆ ನಡೆಯಬೇಕಿತ್ತು. 3 ನೇ ಹಂತದ ಪ್ರಯೋಗ‌ ನವೆಂಬರ್‌ 9 2020 ರಂದು ರಿಜಿಸ್ಟರ್ ಮಾಡಲಾಗಿದ್ದು, ಇದರ ಪ್ರಯೋಗವನ್ನು 25,800 ಮಂದಿಯನ್ನು ಬಳಸಿ ನಡೆಸಲಾಗುವುದು ಎಂದು ಇದರಲ್ಲಿ ಉಲ್ಲೇಖಿಸಲಾಗಿತ್ತು” ಎಂದು ಅವರು ಹೇಳಿದ್ದಾರೆ.

ಮೂರನೇ ಹಂತದ ಪ್ರಯೋಗಕ್ಕೆ ಒಂದು ವರ್ಷವನ್ನು ನಿಗದಿಪಡಿಸಲಾಗಿತ್ತು. ಆದರೆ, ಮೊದಲ ಹಂತದ ಪ್ರಯೋಗಗಳು ಮುಗಿಯುವ ಮೊದಲೇ 2 ಮತ್ತು 3 ನೇ ಹಂತದ ಪ್ರಯೋಗಗಳನ್ನು ರಿಜಿಸ್ಟರ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಒಟ್ಟಾರೆಯಾಗಿ 1 ನೇ ಹಂತ ಮಾರ್ಚ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 2 ನೇ ಹಂತವು ಡಿಸೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 3 ನೇ ಹಂತವು ನವೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು” ಎಂದು ಅವರು ಸೂಚಿಸಿದ್ದಾರೆ. ಆದರೆ ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಗೆ ಭಾರತ ಸರಕಾರವು ಜನವರಿ 2021 ರಲ್ಲೇ ಅನುಮತಿ ನೀಡಿದೆ.

ಇದನ್ನೂ ಓದಿ: ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ತಮ್ಮ ಮಾಹಿತಿಯಲ್ಲಿ ಸಾಕೇತ್ ಗೋಖಲೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

  • ಭಾರತ್ ಬಯೋಟೆಕ್‍ನ ಸ್ವತಃ ರಿಜಿಸ್ಟ್ರೇಶನ್ ದಾಖಲೆಗಳಲ್ಲಿರುವಂತಹ 1 ನೇ ಪ್ರಯೋಗ ಪೂರ್ಣಗೊಳ್ಳುವಿಕೆಗೆ ಇನ್ನೂ 3 ತಿಂಗಳುಗಳಿರುವಾಗ ಯಾವ ಆಧಾರದಲ್ಲಿ ಲಸಿಕೆ ಅನುಮತಿ ನೀಡಲಾಗಿದೆ?
  • ಈ ಕಾರಣಕ್ಕಾಗಿಯೇ ಭಾರತ್ ಬಯೋಟೆಕ್‍ನ 1 ನೇ ಹಂತ ಮತ್ತು 2 ನೇ ಹಂತದ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ಮೋದಿ ಸರರ್ಕಾರ ಹಿಂಜರಿಯುತ್ತಿದೆಯೆ?
  • ಲಸಿಕೆಯ 1 ನೇ ಮತ್ತು 2 ನೇ ಹಂತದ ಸ್ವಯಂ ಸೇವಕರ ಸಂಖ್ಯೆ ಕೇವಲ 1249. 130 ಕೋಟಿಯಷ್ಟು ಜನಸಂಖ್ಯೆಯಿರುವ ಭಾರತದಲ್ಲಿ ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
  • ಪರಿಸ್ಥಿತಿ ಹೀಗಿರುವಾಗ ಈ ಲಸಿಕೆಯು 110% ಸುರಕ್ಷಿತ ಎಂದು ಹೇಗೆ ಹೇಳುತ್ತೀರಿ?
  • ಅಲ್ಲದೆ ರೂಪಾಂತರಿ ಕೊರೊನಾ ವೈರಸ್‌ ವಿರುದ್ಧ ಇದು ಕೆಲಸ ನಿರ್ವಹಿಸುತ್ತದೆ ಎಂದು ಯಾವ ಆಧಾರದಲ್ಲಿ ಹೇಳುತ್ತೀರಿ?
  • ಇದನ್ನೆಲ್ಲಾ ಸಾಬೀತುಪಡಿಸಲು 1 ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳು ಎಲ್ಲಿವೆ? ಎಂದು ಪ್ರಶ್ನಿಸಿದ್ದಾರೆ.

“ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಪ್ರಯೋಗಗಳ 1ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಬೇಕು. ಒಂದೂವರೆ ವರ್ಷದಲ್ಲಿ ಮಗಿಯಬೇಕಿದ್ದ ಪ್ರಯೋಗಗಳು ಕೇವಲ 5 ತಿಂಗಳಿನಲ್ಲಿ ಹೇಗೆ ಮುಗಿಯಿತು ಅನ್ನುವುದನ್ನು ವಿವರಿಸಬೇಕು. ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ” ಎಂದು ಅವರು ಮಾಹಿತಿ ಬಿಡುಗಡೆಗೆ ಮೋದಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಷ್ಟೇ ಅಲ್ಲದೆ ಸಾಖೇತ್‌ ಗೋಖಲೆ ತಾವು ಬರೆದ ಎಲ್ಲಾ ವಿಚಾರಗಳಿಗೂ ದಾಖಲೆಗಳನ್ನೂ ನೀಡಿದ್ದಾರೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...