Homeಕರೋನಾ ತಲ್ಲಣಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ

- Advertisement -
- Advertisement -

ಕೊರೊನಾ ಸಾಂಕ್ರಮಿಕ ವಿರುದ್ಧ ತುರ್ತು ಬಳಕೆಗಾಗಿ ಭಾರತೀಯ ಔಷಧೀಯ ನಿಯಂತ್ರಕ ಕೊವಿಶೀಲ್ಡ್‌, ಕೊವ್ಯಾಕ್ಸಿನ್‌ ಲಸಿಕೆಗಳಿಗೆ ಅನುಮತಿ ನೀಡಿದೆ. ಜೊತೆಗೆ ಇನ್ನೂ ಎರಡು ಲಸಿಕೆಗಳು ಅನುಮತಿಗಾಗಿ ಸರತಿಯಲ್ಲಿವೆ. ಆದರೆ ಅನುಮತಿ ಪಡೆದಿರುವ ಭಾರತ್‌ ಬಯೋಟೆಕ್‌ ತಯಾರಿಸುತ್ತಿರುವ ಕೊವ್ಯಾಕ್ಸಿನ್ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಲಸಿಕೆಯ ಮೂರನೇ ಹಂತದ ಪ್ರಯೋಗದ ವರದಿ ಇನ್ನೂ ಬಂದಿಲ್ಲ ಹಾಗಾಗಿ ಅದು ಸುರಕ್ಷಿತವಲ್ಲ ಎಂದು ಅವರ ಅನುಮಾನಕ್ಕೆ ಕಾರಣ. ಇದೀಗ ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ಕೊವ್ಯಾಕ್ಸಿನ್ ಕುರಿತು ಅಘಾತಕಾರಿ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾರೆ.

ಸಾಕೇತ್‌ ಗೋಖಲೆ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಕೊವ್ಯಾಕ್ಸಿನ್ ಕುರಿತ ಹಲವು ಮಾಹಿತಿಗಳನ್ನು ಸಾಕ್ಷಿ ಸಹಿತ ಬಿಚ್ಚಿಟ್ಟಿದ್ದಾರೆ. ಈ ಮಾಹಿತಿಯು ನಿಮ್ಮ ಜೀವಕ್ಕೆ ಸಂಬಂಧ ಪಟ್ಟಿದ್ದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

“ಭಾರತ್ ಬಯೋಟೆಕ್‌ನ ಹಂತ 1 ಮತ್ತು 2 ಕೊರೊನಾ ಲಸಿಕೆ ಪ್ರಯೋಗಗಳ ರಹಸ್ಯ” ಎಂದು ಅವರು ತಮ್ಮ ಬರಹವನ್ನು ಪ್ರಾರಂಭಿಸಿದ್ದಾರೆ. “ಭಾರತ್‌ ಬಯೋಟೆಕ್‌ನ ಪಾಲುದಾರನೂ ಆಗಿರುವ ಭಾರತದ ಕ್ಲಿನಿಕಲ್‌ ಟ್ರಯಲ್ಸ್‌ ರಿಜಿಸ್ಟರ್(CTR)ನ ಐಸಿಎಂಆರ್‌‌ನ ಒಂದು ಘಟಕದಲ್ಲಿ ಕೊವ್ಯಾಕ್ಸಿನ್‌ ಲಸಿಕೆಯ 1 ನೇ ಮತ್ತು 2 ನೇ ಹಂತದ ಪ್ರಯೋಗಗಳಿಗಾಗಿ ಭಾರತ್‌ ಬಯೋಟೆಕ್ ನೋಂದಣಿ ಮಾಡಿತ್ತು‌.

ಜುಲೈ 1, 2020 ಕ್ಕೆ 1 ನೇ ಹಂತದ ಪ್ರಯೋಗಗಳ ಮಾಹಿತಿಗಳನ್ನು ಭಾರತ್ ಬಯೋಟೆಕ್ ರಿಜಿಸ್ಟರ್‌ ಮಾಡಿತ್ತು. ಅದಕ್ಕಾಗಿ ಲಸಿಕೆಗಳ ಮಾದರಿ‌‌‌ಗಳನ್ನು ಪಡೆದುಕೊಳ್ಳಲು ಒಟ್ಟು 1125 ಜನರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂದಿರುವ ಅವರು, “ನೆನಪಿಡಿ, ಇದೇ ಸಮಯದಲ್ಲಿ ನರೇಂದ್ರ ಮೋದಿಯ ವರ್ಚಸ್ಸು ಹೆಚ್ಚಾಗಲೆಂದು ’ಲಸಿಕೆಯು ಸ್ವಾತಂತ್ರ್ಯ ದಿನದೊಳಗೆ ತಯಾರಾಗಬೇಕು’ ಎಂದು ಎಂಸಿಆರ್‌ ಆಘಾತಕಾರಿ ಪತ್ರ ರವಾನಿತ್ತು” ಎಂದು ಅವರು ನೆನಪಿಸಿದ್ದಾರೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

“ಲಸಿಕೆಯ 2 ನೇ ಹಂತದ ಮಾಹಿತಿಗಳನ್ನು ಸೆಪ್ಟೆಂಬರ್ 8, 2020 ರಲ್ಲಿ ರಿಜಿಸ್ಟರ್‌ ಮಾಡಲಾಗಿತ್ತು. ಇದು 1 ನೇ ಹಂತದ ಪ್ರಯೋಗ ರಿಜಿಸ್ಟರ್ ಮಾಡಿದ ಕೇವಲ 2 ತಿಂಗಳೊಳಗೆ ನಡೆದಿತ್ತು. ಅಂದರೆ, 1 ನೇ ಪ್ರಯೋಗ ಪೂರ್ಣಗೊಳ್ಳುವ ಮುನ್ನವೇ 2 ನೇ ಪ್ರಯೋಗವನ್ನು ಅನ್ನು ರಿಜಿಸ್ಟರ್ ಮಾಡಲಾಗಿತ್ತು. ಅದಲ್ಲದೆ 2 ನೇ ಪ್ರಯೋಗದಲ್ಲಿ ಕೇವಲ 124 ಸ್ವಯಂಸೇವಕರು ಮಾತ್ರ ಭಾಗವಹಿಸಿದ್ದರು” ಎಂದು ಸಾಕೇತ್‌ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

“ಜುಲೈ 2020 ರಲ್ಲಿ ರಿಜಿಸ್ಟರ್ ಮಾಡಲಾಗಿದ್ದ 1ನೇ ಹಂತದ ಪ್ರಯೋಗವು ಮಾರ್ಚ್‌ 2021 ರೊಳಗೆ ಪೂರ್ತಿಗೊಳ್ಳಬೇಕಿತ್ತು. 2 ನೇ ಹಂತದ ಪ್ರಯೋಗ ಸೆಪ್ಟೆಂಬರ್‌ 8, 2020 ರಲ್ಲಿ ರಿಜಿಸ್ಟರ್ ಮಾಡಿದ್ದು, ಇದರ ಪ್ರಯೋಗವು ಒಂದು ವರ್ಷ ಹಾಗೂ 3 ತಿಂಗಳು ಅಂದರೆ 2021 ರ ಡಿಸೆಂಬರ್‌‌ವರೆಗೆ ನಡೆಯಬೇಕಿತ್ತು. 3 ನೇ ಹಂತದ ಪ್ರಯೋಗ‌ ನವೆಂಬರ್‌ 9 2020 ರಂದು ರಿಜಿಸ್ಟರ್ ಮಾಡಲಾಗಿದ್ದು, ಇದರ ಪ್ರಯೋಗವನ್ನು 25,800 ಮಂದಿಯನ್ನು ಬಳಸಿ ನಡೆಸಲಾಗುವುದು ಎಂದು ಇದರಲ್ಲಿ ಉಲ್ಲೇಖಿಸಲಾಗಿತ್ತು” ಎಂದು ಅವರು ಹೇಳಿದ್ದಾರೆ.

ಮೂರನೇ ಹಂತದ ಪ್ರಯೋಗಕ್ಕೆ ಒಂದು ವರ್ಷವನ್ನು ನಿಗದಿಪಡಿಸಲಾಗಿತ್ತು. ಆದರೆ, ಮೊದಲ ಹಂತದ ಪ್ರಯೋಗಗಳು ಮುಗಿಯುವ ಮೊದಲೇ 2 ಮತ್ತು 3 ನೇ ಹಂತದ ಪ್ರಯೋಗಗಳನ್ನು ರಿಜಿಸ್ಟರ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಒಟ್ಟಾರೆಯಾಗಿ 1 ನೇ ಹಂತ ಮಾರ್ಚ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 2 ನೇ ಹಂತವು ಡಿಸೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 3 ನೇ ಹಂತವು ನವೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು” ಎಂದು ಅವರು ಸೂಚಿಸಿದ್ದಾರೆ. ಆದರೆ ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಗೆ ಭಾರತ ಸರಕಾರವು ಜನವರಿ 2021 ರಲ್ಲೇ ಅನುಮತಿ ನೀಡಿದೆ.

ಇದನ್ನೂ ಓದಿ: ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ತಮ್ಮ ಮಾಹಿತಿಯಲ್ಲಿ ಸಾಕೇತ್ ಗೋಖಲೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

  • ಭಾರತ್ ಬಯೋಟೆಕ್‍ನ ಸ್ವತಃ ರಿಜಿಸ್ಟ್ರೇಶನ್ ದಾಖಲೆಗಳಲ್ಲಿರುವಂತಹ 1 ನೇ ಪ್ರಯೋಗ ಪೂರ್ಣಗೊಳ್ಳುವಿಕೆಗೆ ಇನ್ನೂ 3 ತಿಂಗಳುಗಳಿರುವಾಗ ಯಾವ ಆಧಾರದಲ್ಲಿ ಲಸಿಕೆ ಅನುಮತಿ ನೀಡಲಾಗಿದೆ?
  • ಈ ಕಾರಣಕ್ಕಾಗಿಯೇ ಭಾರತ್ ಬಯೋಟೆಕ್‍ನ 1 ನೇ ಹಂತ ಮತ್ತು 2 ನೇ ಹಂತದ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ಮೋದಿ ಸರರ್ಕಾರ ಹಿಂಜರಿಯುತ್ತಿದೆಯೆ?
  • ಲಸಿಕೆಯ 1 ನೇ ಮತ್ತು 2 ನೇ ಹಂತದ ಸ್ವಯಂ ಸೇವಕರ ಸಂಖ್ಯೆ ಕೇವಲ 1249. 130 ಕೋಟಿಯಷ್ಟು ಜನಸಂಖ್ಯೆಯಿರುವ ಭಾರತದಲ್ಲಿ ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
  • ಪರಿಸ್ಥಿತಿ ಹೀಗಿರುವಾಗ ಈ ಲಸಿಕೆಯು 110% ಸುರಕ್ಷಿತ ಎಂದು ಹೇಗೆ ಹೇಳುತ್ತೀರಿ?
  • ಅಲ್ಲದೆ ರೂಪಾಂತರಿ ಕೊರೊನಾ ವೈರಸ್‌ ವಿರುದ್ಧ ಇದು ಕೆಲಸ ನಿರ್ವಹಿಸುತ್ತದೆ ಎಂದು ಯಾವ ಆಧಾರದಲ್ಲಿ ಹೇಳುತ್ತೀರಿ?
  • ಇದನ್ನೆಲ್ಲಾ ಸಾಬೀತುಪಡಿಸಲು 1 ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳು ಎಲ್ಲಿವೆ? ಎಂದು ಪ್ರಶ್ನಿಸಿದ್ದಾರೆ.

“ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಪ್ರಯೋಗಗಳ 1ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಬೇಕು. ಒಂದೂವರೆ ವರ್ಷದಲ್ಲಿ ಮಗಿಯಬೇಕಿದ್ದ ಪ್ರಯೋಗಗಳು ಕೇವಲ 5 ತಿಂಗಳಿನಲ್ಲಿ ಹೇಗೆ ಮುಗಿಯಿತು ಅನ್ನುವುದನ್ನು ವಿವರಿಸಬೇಕು. ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ” ಎಂದು ಅವರು ಮಾಹಿತಿ ಬಿಡುಗಡೆಗೆ ಮೋದಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಷ್ಟೇ ಅಲ್ಲದೆ ಸಾಖೇತ್‌ ಗೋಖಲೆ ತಾವು ಬರೆದ ಎಲ್ಲಾ ವಿಚಾರಗಳಿಗೂ ದಾಖಲೆಗಳನ್ನೂ ನೀಡಿದ್ದಾರೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...