Homeಕರೋನಾ ತಲ್ಲಣಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ

- Advertisement -
- Advertisement -

ಕೊರೊನಾ ಸಾಂಕ್ರಮಿಕ ವಿರುದ್ಧ ತುರ್ತು ಬಳಕೆಗಾಗಿ ಭಾರತೀಯ ಔಷಧೀಯ ನಿಯಂತ್ರಕ ಕೊವಿಶೀಲ್ಡ್‌, ಕೊವ್ಯಾಕ್ಸಿನ್‌ ಲಸಿಕೆಗಳಿಗೆ ಅನುಮತಿ ನೀಡಿದೆ. ಜೊತೆಗೆ ಇನ್ನೂ ಎರಡು ಲಸಿಕೆಗಳು ಅನುಮತಿಗಾಗಿ ಸರತಿಯಲ್ಲಿವೆ. ಆದರೆ ಅನುಮತಿ ಪಡೆದಿರುವ ಭಾರತ್‌ ಬಯೋಟೆಕ್‌ ತಯಾರಿಸುತ್ತಿರುವ ಕೊವ್ಯಾಕ್ಸಿನ್ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಲಸಿಕೆಯ ಮೂರನೇ ಹಂತದ ಪ್ರಯೋಗದ ವರದಿ ಇನ್ನೂ ಬಂದಿಲ್ಲ ಹಾಗಾಗಿ ಅದು ಸುರಕ್ಷಿತವಲ್ಲ ಎಂದು ಅವರ ಅನುಮಾನಕ್ಕೆ ಕಾರಣ. ಇದೀಗ ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ಕೊವ್ಯಾಕ್ಸಿನ್ ಕುರಿತು ಅಘಾತಕಾರಿ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾರೆ.

ಸಾಕೇತ್‌ ಗೋಖಲೆ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಕೊವ್ಯಾಕ್ಸಿನ್ ಕುರಿತ ಹಲವು ಮಾಹಿತಿಗಳನ್ನು ಸಾಕ್ಷಿ ಸಹಿತ ಬಿಚ್ಚಿಟ್ಟಿದ್ದಾರೆ. ಈ ಮಾಹಿತಿಯು ನಿಮ್ಮ ಜೀವಕ್ಕೆ ಸಂಬಂಧ ಪಟ್ಟಿದ್ದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

“ಭಾರತ್ ಬಯೋಟೆಕ್‌ನ ಹಂತ 1 ಮತ್ತು 2 ಕೊರೊನಾ ಲಸಿಕೆ ಪ್ರಯೋಗಗಳ ರಹಸ್ಯ” ಎಂದು ಅವರು ತಮ್ಮ ಬರಹವನ್ನು ಪ್ರಾರಂಭಿಸಿದ್ದಾರೆ. “ಭಾರತ್‌ ಬಯೋಟೆಕ್‌ನ ಪಾಲುದಾರನೂ ಆಗಿರುವ ಭಾರತದ ಕ್ಲಿನಿಕಲ್‌ ಟ್ರಯಲ್ಸ್‌ ರಿಜಿಸ್ಟರ್(CTR)ನ ಐಸಿಎಂಆರ್‌‌ನ ಒಂದು ಘಟಕದಲ್ಲಿ ಕೊವ್ಯಾಕ್ಸಿನ್‌ ಲಸಿಕೆಯ 1 ನೇ ಮತ್ತು 2 ನೇ ಹಂತದ ಪ್ರಯೋಗಗಳಿಗಾಗಿ ಭಾರತ್‌ ಬಯೋಟೆಕ್ ನೋಂದಣಿ ಮಾಡಿತ್ತು‌.

ಜುಲೈ 1, 2020 ಕ್ಕೆ 1 ನೇ ಹಂತದ ಪ್ರಯೋಗಗಳ ಮಾಹಿತಿಗಳನ್ನು ಭಾರತ್ ಬಯೋಟೆಕ್ ರಿಜಿಸ್ಟರ್‌ ಮಾಡಿತ್ತು. ಅದಕ್ಕಾಗಿ ಲಸಿಕೆಗಳ ಮಾದರಿ‌‌‌ಗಳನ್ನು ಪಡೆದುಕೊಳ್ಳಲು ಒಟ್ಟು 1125 ಜನರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು ಎಂದಿರುವ ಅವರು, “ನೆನಪಿಡಿ, ಇದೇ ಸಮಯದಲ್ಲಿ ನರೇಂದ್ರ ಮೋದಿಯ ವರ್ಚಸ್ಸು ಹೆಚ್ಚಾಗಲೆಂದು ’ಲಸಿಕೆಯು ಸ್ವಾತಂತ್ರ್ಯ ದಿನದೊಳಗೆ ತಯಾರಾಗಬೇಕು’ ಎಂದು ಎಂಸಿಆರ್‌ ಆಘಾತಕಾರಿ ಪತ್ರ ರವಾನಿತ್ತು” ಎಂದು ಅವರು ನೆನಪಿಸಿದ್ದಾರೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

“ಲಸಿಕೆಯ 2 ನೇ ಹಂತದ ಮಾಹಿತಿಗಳನ್ನು ಸೆಪ್ಟೆಂಬರ್ 8, 2020 ರಲ್ಲಿ ರಿಜಿಸ್ಟರ್‌ ಮಾಡಲಾಗಿತ್ತು. ಇದು 1 ನೇ ಹಂತದ ಪ್ರಯೋಗ ರಿಜಿಸ್ಟರ್ ಮಾಡಿದ ಕೇವಲ 2 ತಿಂಗಳೊಳಗೆ ನಡೆದಿತ್ತು. ಅಂದರೆ, 1 ನೇ ಪ್ರಯೋಗ ಪೂರ್ಣಗೊಳ್ಳುವ ಮುನ್ನವೇ 2 ನೇ ಪ್ರಯೋಗವನ್ನು ಅನ್ನು ರಿಜಿಸ್ಟರ್ ಮಾಡಲಾಗಿತ್ತು. ಅದಲ್ಲದೆ 2 ನೇ ಪ್ರಯೋಗದಲ್ಲಿ ಕೇವಲ 124 ಸ್ವಯಂಸೇವಕರು ಮಾತ್ರ ಭಾಗವಹಿಸಿದ್ದರು” ಎಂದು ಸಾಕೇತ್‌ ಹೇಳಿದ್ದಾರೆ.

ಇದನ್ನೂ ಓದಿ: ಲಸಿಕೆ ಸಂಭ್ರಮದ ಮಧ್ಯೆ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮರೆಯದಿರಿ: ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ

“ಜುಲೈ 2020 ರಲ್ಲಿ ರಿಜಿಸ್ಟರ್ ಮಾಡಲಾಗಿದ್ದ 1ನೇ ಹಂತದ ಪ್ರಯೋಗವು ಮಾರ್ಚ್‌ 2021 ರೊಳಗೆ ಪೂರ್ತಿಗೊಳ್ಳಬೇಕಿತ್ತು. 2 ನೇ ಹಂತದ ಪ್ರಯೋಗ ಸೆಪ್ಟೆಂಬರ್‌ 8, 2020 ರಲ್ಲಿ ರಿಜಿಸ್ಟರ್ ಮಾಡಿದ್ದು, ಇದರ ಪ್ರಯೋಗವು ಒಂದು ವರ್ಷ ಹಾಗೂ 3 ತಿಂಗಳು ಅಂದರೆ 2021 ರ ಡಿಸೆಂಬರ್‌‌ವರೆಗೆ ನಡೆಯಬೇಕಿತ್ತು. 3 ನೇ ಹಂತದ ಪ್ರಯೋಗ‌ ನವೆಂಬರ್‌ 9 2020 ರಂದು ರಿಜಿಸ್ಟರ್ ಮಾಡಲಾಗಿದ್ದು, ಇದರ ಪ್ರಯೋಗವನ್ನು 25,800 ಮಂದಿಯನ್ನು ಬಳಸಿ ನಡೆಸಲಾಗುವುದು ಎಂದು ಇದರಲ್ಲಿ ಉಲ್ಲೇಖಿಸಲಾಗಿತ್ತು” ಎಂದು ಅವರು ಹೇಳಿದ್ದಾರೆ.

ಮೂರನೇ ಹಂತದ ಪ್ರಯೋಗಕ್ಕೆ ಒಂದು ವರ್ಷವನ್ನು ನಿಗದಿಪಡಿಸಲಾಗಿತ್ತು. ಆದರೆ, ಮೊದಲ ಹಂತದ ಪ್ರಯೋಗಗಳು ಮುಗಿಯುವ ಮೊದಲೇ 2 ಮತ್ತು 3 ನೇ ಹಂತದ ಪ್ರಯೋಗಗಳನ್ನು ರಿಜಿಸ್ಟರ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಒಟ್ಟಾರೆಯಾಗಿ 1 ನೇ ಹಂತ ಮಾರ್ಚ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 2 ನೇ ಹಂತವು ಡಿಸೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು. 3 ನೇ ಹಂತವು ನವೆಂಬರ್ 2021 ರೊಳಗೆ ಪೂರ್ಣಗೊಳ್ಳಬೇಕಿತ್ತು” ಎಂದು ಅವರು ಸೂಚಿಸಿದ್ದಾರೆ. ಆದರೆ ಭಾರತ್ ಬಯೋಟೆಕ್‍ನ ಕೊವ್ಯಾಕ್ಸಿನ್ ಲಸಿಕೆಗೆ ಭಾರತ ಸರಕಾರವು ಜನವರಿ 2021 ರಲ್ಲೇ ಅನುಮತಿ ನೀಡಿದೆ.

ಇದನ್ನೂ ಓದಿ: ಕೋವಿಡ್ ಲಸಿಕೆ ಮೂರನೇ ಹಂತದ ಪರಿಣಾಮಕಾರಿತ್ವದ ಡೇಟಾ ಮಿಸ್ಸಿಂಗ್!: ವಿಜ್ಞಾನಿಗಳ ಕಳವಳ

ತಮ್ಮ ಮಾಹಿತಿಯಲ್ಲಿ ಸಾಕೇತ್ ಗೋಖಲೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

  • ಭಾರತ್ ಬಯೋಟೆಕ್‍ನ ಸ್ವತಃ ರಿಜಿಸ್ಟ್ರೇಶನ್ ದಾಖಲೆಗಳಲ್ಲಿರುವಂತಹ 1 ನೇ ಪ್ರಯೋಗ ಪೂರ್ಣಗೊಳ್ಳುವಿಕೆಗೆ ಇನ್ನೂ 3 ತಿಂಗಳುಗಳಿರುವಾಗ ಯಾವ ಆಧಾರದಲ್ಲಿ ಲಸಿಕೆ ಅನುಮತಿ ನೀಡಲಾಗಿದೆ?
  • ಈ ಕಾರಣಕ್ಕಾಗಿಯೇ ಭಾರತ್ ಬಯೋಟೆಕ್‍ನ 1 ನೇ ಹಂತ ಮತ್ತು 2 ನೇ ಹಂತದ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲು ಮೋದಿ ಸರರ್ಕಾರ ಹಿಂಜರಿಯುತ್ತಿದೆಯೆ?
  • ಲಸಿಕೆಯ 1 ನೇ ಮತ್ತು 2 ನೇ ಹಂತದ ಸ್ವಯಂ ಸೇವಕರ ಸಂಖ್ಯೆ ಕೇವಲ 1249. 130 ಕೋಟಿಯಷ್ಟು ಜನಸಂಖ್ಯೆಯಿರುವ ಭಾರತದಲ್ಲಿ ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ?
  • ಪರಿಸ್ಥಿತಿ ಹೀಗಿರುವಾಗ ಈ ಲಸಿಕೆಯು 110% ಸುರಕ್ಷಿತ ಎಂದು ಹೇಗೆ ಹೇಳುತ್ತೀರಿ?
  • ಅಲ್ಲದೆ ರೂಪಾಂತರಿ ಕೊರೊನಾ ವೈರಸ್‌ ವಿರುದ್ಧ ಇದು ಕೆಲಸ ನಿರ್ವಹಿಸುತ್ತದೆ ಎಂದು ಯಾವ ಆಧಾರದಲ್ಲಿ ಹೇಳುತ್ತೀರಿ?
  • ಇದನ್ನೆಲ್ಲಾ ಸಾಬೀತುಪಡಿಸಲು 1 ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳು ಎಲ್ಲಿವೆ? ಎಂದು ಪ್ರಶ್ನಿಸಿದ್ದಾರೆ.

“ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಪ್ರಯೋಗಗಳ 1ನೇ ಹಾಗೂ 2 ನೇ ಹಂತದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಬೇಕು. ಒಂದೂವರೆ ವರ್ಷದಲ್ಲಿ ಮಗಿಯಬೇಕಿದ್ದ ಪ್ರಯೋಗಗಳು ಕೇವಲ 5 ತಿಂಗಳಿನಲ್ಲಿ ಹೇಗೆ ಮುಗಿಯಿತು ಅನ್ನುವುದನ್ನು ವಿವರಿಸಬೇಕು. ಮಾಹಿತಿಗಳನ್ನು ಬಹಿರಂಗಪಡಿಸುವಲ್ಲಿ ತೋರುತ್ತಿರುವ ಹಿಂಜರಿಕೆಯು ಬಹಳ ದೊಡ್ಡ ಅಪಾಯವನ್ನು ಸೂಚಿಸುತ್ತಿದೆ” ಎಂದು ಅವರು ಮಾಹಿತಿ ಬಿಡುಗಡೆಗೆ ಮೋದಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಷ್ಟೇ ಅಲ್ಲದೆ ಸಾಖೇತ್‌ ಗೋಖಲೆ ತಾವು ಬರೆದ ಎಲ್ಲಾ ವಿಚಾರಗಳಿಗೂ ದಾಖಲೆಗಳನ್ನೂ ನೀಡಿದ್ದಾರೆ.

ಇದನ್ನೂ ಓದಿ: ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...