Homeಮುಖಪುಟಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

ಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

- Advertisement -
- Advertisement -

ಈಸ್ಟರ್‌‌ ದಿನದ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುವ ಬೆಳವಣಿಗೆ ಬೆಳಕಿಗೆ ಬಂದಿದೆ. ಅಮೆಜಾ಼ನ್‌ ಸ್ಪೆಷಲ್ ಗಿಫ್ಟ್‌ ಹೆಸರಲ್ಲಿ ವಾಟ್ಸ್‌ಆಪ್‌ನಲ್ಲಿ ಬರುತ್ತಿರುವ ಮೋಸದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಇರುವುದೇ ಇದಕ್ಕೆ ಉತ್ತರ.

ಹೌದು. ಯಾವುದಾದರೂ ಹಬ್ಬ, ಆಚರಣೆಗಳು ಬಂದಾಗ ಈ ರೀತಿಯ ಲಿಂಕ್‌ಗಳು ವಾಟ್ಸ್‌ಅಪ್‌ನಲ್ಲಿ ಬರುತ್ತವೆ. ಅವುಗಳನ್ನು ಕ್ಲಿಕ್ ಮಾಡಿದರೆ ಅಪಾಯ ಕಾದಿರುತ್ತದೆ. ನಮ್ಮ ಬ್ಯಾಂಕ್ ವಿವರಗಳೂ ಸೋರಿಯಾಗುವ ಸಾಧ್ಯತೆ ಇರುತ್ತದೆ.

ಕಳೆದ ಪ್ರೇಮಿಗಳ ದಿನದ ಸಂದರ್ಭದಲ್ಲಿ ಇಂಥದ್ದೇ  ಲಿಂಕ್ ಹರಿದಾಡಿತ್ತು. ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಭಾಗವಾಗಿ ಉಚಿತ ಉಡುಗೊರೆಯನ್ನು ಗೆಲ್ಲುವ ಅವಕಾಶ ಎಂದು ನಕಲಿ ಲಿಂಕ್‌ ಹರಿದಾಡಿತ್ತು. ಈ ಕುರಿತು ‘ದಿ ಕ್ವಿಂಟ್’ ಜಾಲತಾಣ ವಿಶೇಷ ವರದಿ ಮಾಡಿತ್ತು.

ಈ ಲಿಂಕ್‌ಗಳನ್ನು ನೀವು ಪ್ರವೇಶಿಸಿದರೆ, ಇಲ್ಲಿನ ಸೂಚನೆಗಳನ್ನು ಅನುಸರಿಸಿದರೆ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಮೂರನೇ ವ್ಯಕ್ತಿ ಕದಿಯಬಹುದು ಅಥವಾ ಮಾಲ್‌ವೇರ್‌ (ವೈರಸ್‌ ಸಾಫ್ಟ್‌ವೇರ್) ನಿಮ್ಮ ಮೊಬೈಲ್ ಪ್ರವೇಶಿಸಬಹುದು ಎಂದು CyberPeace Foundation ಮತ್ತು Autobot Infosec ಸಂಸ್ಥೆಗಳು ಎಚ್ಚರಿಸಿದ್ದವು. ಈಗ ಈಸ್ಟರ್‌‌ ದಿನದ ನೆಪದಲ್ಲಿ ಮತ್ತದೇ ಲಿಂಕ್‌ ಹರಿದಾಡುತ್ತಿದೆ.

“ಒಬ್ಬ ಬಳಕೆದಾರನು ಈ ಬಲೆಗೆ ಸಿಲುಕಿದರೆ, ಅದು ಮೈಕ್ರೊಫೋನ್, ಕ್ಯಾಮೆರಾ, ಪಠ್ಯ ಸಂದೇಶಗಳು, ಸಂಪರ್ಕಗಳು, ಚಿತ್ರಗಳು, ವೀಡಿಯೊಗಳು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಇತ್ಯಾದಿಗಳಿಗೆ ಅನ್ಯರು ಪ್ರವೇಶಿಸಲು ಸಾಧ್ಯವಾಗಬಹುದು. ಜೊತೆಗೆ ಹಣಕಾಸಿನ ನಷ್ಟಗಳು ಉಂಟಾಗಬಹುದು” ಎಂದು ಸೈಬರ್‌ ಸಂಸ್ಥೆಗಳು ಎಚ್ಚರಿಸಿವೆ.

ನೀವು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಜಾಲತಾಣ (https://tinyurl2.ru/m754089054/) ಅಮೆಜಾನ್ ಬ್ಯಾನರ್‌ ಜೊತೆಗೆ ಗಿಫ್ಟ್‌ಬಾಕ್ಸ್‌ ತೋರಿಸುತ್ತದೆ. ವಿಶೇಷ ಉಡುಗೊರೆಯನ್ನು ಗೆಲ್ಲಲು ಸಣ್ಣ ರಸಪ್ರಶ್ನೆಯನ್ನು ಪೂರ್ಣಗೊಳಿಸಲು ಸೂಚಿಸುತ್ತದೆ. (ನೆನಪಿಡಿ, ಮೊಬೈಲ್‌ನಲ್ಲಿ ಮಾತ್ರ ಈ ಲಿಂಕ್ ಓಪನ್ ಆಗುತ್ತದೆ. ಸಿಸ್ಟಮ್‌ನಲ್ಲಿ ಕ್ಲಿಕ್ ಮಾಡಿದರೆ ‘ಫೇಜ್‌ ನಾಟ್ ಫೌಂಡ್‌’ ಎಂದು ತೋರಿಸುತ್ತದೆ.)

ಇದರ ಕೆಳಭಾಗದಲ್ಲಿ ನಕಲಿ ಕಾಮೆಂಟ್‌ಗಳ ವಿಭಾಗವಿದೆ. ಗಿಫ್ಟ್‌ ಕೊಡುತ್ತಿರುವುದು ನಿಜವೆಂದು ಕೆಲವರು ದೃಢೀಕರಿಸುವ ನಕಲಿ ಕಮೆಂಟ್‌ಗಳಿರುತ್ತವೆ. ಅಲ್ಲಿ ಕಮೆಂಟ್ ಮಾಡಿರುವವರು ಈ ಲಿಂಕ್‌ ನಿಜವೆಂದು ಪ್ರತಿಪಾದಿಸುತ್ತಾರೆ.

ಒಮ್ಮೆ ನೀವು ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರೆ (ನಿಮಗೆ ಅಮೆಜಾ಼ನ್‌ ತಿಳಿದಿದೆಯೇ? ನಿಮ್ಮ ವಯಸ್ಸು ಎಷ್ಟು?) ಅಭಿನಂದನಾ ಸಂದೇಶ ನಿಮಗೆ ಕಾಣಿಸಿಕೊಳ್ಳುತ್ತದೆ. ಅದರ ನಂತರ ಬಳಕೆದಾರರು ಉಡುಗೊರೆಯನ್ನು ಆಯ್ಕೆ ಮಾಡಿ ಬಹುಮಾನಗಳನ್ನು ಗೆಲ್ಲಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ.

ಈ ಹಿಂದೆ ಪ್ರೇಮಿಗಳ ದಿನಗಳ ಸಮಯದಲ್ಲಿ ಬಂದ ಲಿಂಕ್‌ ಕ್ಲಿಕ್ ಮಾಡಿ ರಸಪ್ರಶ್ನೆಯನ್ನು ಪೂರೈಸಿದಾಗ, ನೀವು “Apple iPhone 11 128GB” ಅನ್ನು ಗೆದ್ದಿರುವಿರಿ ಎಂದು ತೋರಿಸಲಾಗುತ್ತಿತ್ತು. ನಂತರ WhatsApp ನಲ್ಲಿ ಈ ಅಭಿಯಾನವನ್ನು ಹಂಚಿಕೊಳ್ಳಲು ಸೂಚಿಸಲಾಗಿತ್ತು.

PC: The Quint

ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಳಕೆದಾರರು ವಾಟ್ಸಾಪ್ ಬಟನ್ ಅನ್ನು ಹಲವು ಬಾರಿ ಕ್ಲಿಕ್ ಮಾಡಬೇಕಾಗುತ್ತದೆ ಎಂಬುದನ್ನು ತಜ್ಞರು ಗಮನಿಸಿದ್ದಾರೆ. ನಿಮ್ಮ “ನೋಂದಣಿ”ಯನ್ನು ನೀವು ಪೂರ್ಣಗೊಳಿಸಿದ ನಂತರ, ಅದು ನಿಮ್ಮನ್ನು ಬಹು ಜಾಹೀರಾತು ವೆಬ್‌ಪುಟಗಳಿಗೆ ಕರೆದೊಯ್ಯುತ್ತದೆ.

ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಬ್ಯಾಂಕಿಂಗ್ ಮಾಹಿತಿಯಂತಹ ಗೌಪ್ಯ ವಿವರಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ತಜ್ಞರು ಎಚ್ಚರಿಸಿದ್ದಾರೆ. ಜನರು ಯಾವುದೇ ಲಿಂಕ್‌ಗಳನ್ನು ಪರಿಶೀಲಿಸದೆ ಹಂಚಿಕೊಳ್ಳುವುದೂ ಸರಿಯಲ್ಲ.


ಇದನ್ನೂ ಓದಿರಿ: ಸೈಬರ್‌ ದಾಳಿಯ ಬಗ್ಗೆ 20 ಲಕ್ಷ ಬಳಕೆದಾರರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಮೆಜಾನ್ ನಲ್ಲಿ ಮಾತ್ರ ಅಲ್ಲ, ಇತರ ಹಲವೆಡೆ ಇದು ಅವ್ಯಾಹತವಾಗಿ ನಡೆಯುತ್ತಿದೆ. ಉದಾಹರಣೆಗೆ, ಪೇಟಿಎಂ ನಲ್ಲಿ ಕೂಡಾ ಇದು ಬರುತ್ತಿದೆ. ಸಾರ್ವಜನಿಕರನ್ನು ಎಚ್ಚರಿಸುವ ನಿಮ್ಮ ಕಳಕಳಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...