Homeಮುಖಪುಟಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

ಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

- Advertisement -
- Advertisement -

ಈಸ್ಟರ್‌‌ ದಿನದ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುವ ಬೆಳವಣಿಗೆ ಬೆಳಕಿಗೆ ಬಂದಿದೆ. ಅಮೆಜಾ಼ನ್‌ ಸ್ಪೆಷಲ್ ಗಿಫ್ಟ್‌ ಹೆಸರಲ್ಲಿ ವಾಟ್ಸ್‌ಆಪ್‌ನಲ್ಲಿ ಬರುತ್ತಿರುವ ಮೋಸದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಇರುವುದೇ ಇದಕ್ಕೆ ಉತ್ತರ.

ಹೌದು. ಯಾವುದಾದರೂ ಹಬ್ಬ, ಆಚರಣೆಗಳು ಬಂದಾಗ ಈ ರೀತಿಯ ಲಿಂಕ್‌ಗಳು ವಾಟ್ಸ್‌ಅಪ್‌ನಲ್ಲಿ ಬರುತ್ತವೆ. ಅವುಗಳನ್ನು ಕ್ಲಿಕ್ ಮಾಡಿದರೆ ಅಪಾಯ ಕಾದಿರುತ್ತದೆ. ನಮ್ಮ ಬ್ಯಾಂಕ್ ವಿವರಗಳೂ ಸೋರಿಯಾಗುವ ಸಾಧ್ಯತೆ ಇರುತ್ತದೆ.

ಕಳೆದ ಪ್ರೇಮಿಗಳ ದಿನದ ಸಂದರ್ಭದಲ್ಲಿ ಇಂಥದ್ದೇ  ಲಿಂಕ್ ಹರಿದಾಡಿತ್ತು. ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಭಾಗವಾಗಿ ಉಚಿತ ಉಡುಗೊರೆಯನ್ನು ಗೆಲ್ಲುವ ಅವಕಾಶ ಎಂದು ನಕಲಿ ಲಿಂಕ್‌ ಹರಿದಾಡಿತ್ತು. ಈ ಕುರಿತು ‘ದಿ ಕ್ವಿಂಟ್’ ಜಾಲತಾಣ ವಿಶೇಷ ವರದಿ ಮಾಡಿತ್ತು.

ಈ ಲಿಂಕ್‌ಗಳನ್ನು ನೀವು ಪ್ರವೇಶಿಸಿದರೆ, ಇಲ್ಲಿನ ಸೂಚನೆಗಳನ್ನು ಅನುಸರಿಸಿದರೆ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಮೂರನೇ ವ್ಯಕ್ತಿ ಕದಿಯಬಹುದು ಅಥವಾ ಮಾಲ್‌ವೇರ್‌ (ವೈರಸ್‌ ಸಾಫ್ಟ್‌ವೇರ್) ನಿಮ್ಮ ಮೊಬೈಲ್ ಪ್ರವೇಶಿಸಬಹುದು ಎಂದು CyberPeace Foundation ಮತ್ತು Autobot Infosec ಸಂಸ್ಥೆಗಳು ಎಚ್ಚರಿಸಿದ್ದವು. ಈಗ ಈಸ್ಟರ್‌‌ ದಿನದ ನೆಪದಲ್ಲಿ ಮತ್ತದೇ ಲಿಂಕ್‌ ಹರಿದಾಡುತ್ತಿದೆ.

“ಒಬ್ಬ ಬಳಕೆದಾರನು ಈ ಬಲೆಗೆ ಸಿಲುಕಿದರೆ, ಅದು ಮೈಕ್ರೊಫೋನ್, ಕ್ಯಾಮೆರಾ, ಪಠ್ಯ ಸಂದೇಶಗಳು, ಸಂಪರ್ಕಗಳು, ಚಿತ್ರಗಳು, ವೀಡಿಯೊಗಳು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಇತ್ಯಾದಿಗಳಿಗೆ ಅನ್ಯರು ಪ್ರವೇಶಿಸಲು ಸಾಧ್ಯವಾಗಬಹುದು. ಜೊತೆಗೆ ಹಣಕಾಸಿನ ನಷ್ಟಗಳು ಉಂಟಾಗಬಹುದು” ಎಂದು ಸೈಬರ್‌ ಸಂಸ್ಥೆಗಳು ಎಚ್ಚರಿಸಿವೆ.

ನೀವು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಜಾಲತಾಣ (https://tinyurl2.ru/m754089054/) ಅಮೆಜಾನ್ ಬ್ಯಾನರ್‌ ಜೊತೆಗೆ ಗಿಫ್ಟ್‌ಬಾಕ್ಸ್‌ ತೋರಿಸುತ್ತದೆ. ವಿಶೇಷ ಉಡುಗೊರೆಯನ್ನು ಗೆಲ್ಲಲು ಸಣ್ಣ ರಸಪ್ರಶ್ನೆಯನ್ನು ಪೂರ್ಣಗೊಳಿಸಲು ಸೂಚಿಸುತ್ತದೆ. (ನೆನಪಿಡಿ, ಮೊಬೈಲ್‌ನಲ್ಲಿ ಮಾತ್ರ ಈ ಲಿಂಕ್ ಓಪನ್ ಆಗುತ್ತದೆ. ಸಿಸ್ಟಮ್‌ನಲ್ಲಿ ಕ್ಲಿಕ್ ಮಾಡಿದರೆ ‘ಫೇಜ್‌ ನಾಟ್ ಫೌಂಡ್‌’ ಎಂದು ತೋರಿಸುತ್ತದೆ.)

ಇದರ ಕೆಳಭಾಗದಲ್ಲಿ ನಕಲಿ ಕಾಮೆಂಟ್‌ಗಳ ವಿಭಾಗವಿದೆ. ಗಿಫ್ಟ್‌ ಕೊಡುತ್ತಿರುವುದು ನಿಜವೆಂದು ಕೆಲವರು ದೃಢೀಕರಿಸುವ ನಕಲಿ ಕಮೆಂಟ್‌ಗಳಿರುತ್ತವೆ. ಅಲ್ಲಿ ಕಮೆಂಟ್ ಮಾಡಿರುವವರು ಈ ಲಿಂಕ್‌ ನಿಜವೆಂದು ಪ್ರತಿಪಾದಿಸುತ್ತಾರೆ.

ಒಮ್ಮೆ ನೀವು ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರೆ (ನಿಮಗೆ ಅಮೆಜಾ಼ನ್‌ ತಿಳಿದಿದೆಯೇ? ನಿಮ್ಮ ವಯಸ್ಸು ಎಷ್ಟು?) ಅಭಿನಂದನಾ ಸಂದೇಶ ನಿಮಗೆ ಕಾಣಿಸಿಕೊಳ್ಳುತ್ತದೆ. ಅದರ ನಂತರ ಬಳಕೆದಾರರು ಉಡುಗೊರೆಯನ್ನು ಆಯ್ಕೆ ಮಾಡಿ ಬಹುಮಾನಗಳನ್ನು ಗೆಲ್ಲಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ.

ಈ ಹಿಂದೆ ಪ್ರೇಮಿಗಳ ದಿನಗಳ ಸಮಯದಲ್ಲಿ ಬಂದ ಲಿಂಕ್‌ ಕ್ಲಿಕ್ ಮಾಡಿ ರಸಪ್ರಶ್ನೆಯನ್ನು ಪೂರೈಸಿದಾಗ, ನೀವು “Apple iPhone 11 128GB” ಅನ್ನು ಗೆದ್ದಿರುವಿರಿ ಎಂದು ತೋರಿಸಲಾಗುತ್ತಿತ್ತು. ನಂತರ WhatsApp ನಲ್ಲಿ ಈ ಅಭಿಯಾನವನ್ನು ಹಂಚಿಕೊಳ್ಳಲು ಸೂಚಿಸಲಾಗಿತ್ತು.

PC: The Quint

ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಳಕೆದಾರರು ವಾಟ್ಸಾಪ್ ಬಟನ್ ಅನ್ನು ಹಲವು ಬಾರಿ ಕ್ಲಿಕ್ ಮಾಡಬೇಕಾಗುತ್ತದೆ ಎಂಬುದನ್ನು ತಜ್ಞರು ಗಮನಿಸಿದ್ದಾರೆ. ನಿಮ್ಮ “ನೋಂದಣಿ”ಯನ್ನು ನೀವು ಪೂರ್ಣಗೊಳಿಸಿದ ನಂತರ, ಅದು ನಿಮ್ಮನ್ನು ಬಹು ಜಾಹೀರಾತು ವೆಬ್‌ಪುಟಗಳಿಗೆ ಕರೆದೊಯ್ಯುತ್ತದೆ.

ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಬ್ಯಾಂಕಿಂಗ್ ಮಾಹಿತಿಯಂತಹ ಗೌಪ್ಯ ವಿವರಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ತಜ್ಞರು ಎಚ್ಚರಿಸಿದ್ದಾರೆ. ಜನರು ಯಾವುದೇ ಲಿಂಕ್‌ಗಳನ್ನು ಪರಿಶೀಲಿಸದೆ ಹಂಚಿಕೊಳ್ಳುವುದೂ ಸರಿಯಲ್ಲ.


ಇದನ್ನೂ ಓದಿರಿ: ಸೈಬರ್‌ ದಾಳಿಯ ಬಗ್ಗೆ 20 ಲಕ್ಷ ಬಳಕೆದಾರರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಮೆಜಾನ್ ನಲ್ಲಿ ಮಾತ್ರ ಅಲ್ಲ, ಇತರ ಹಲವೆಡೆ ಇದು ಅವ್ಯಾಹತವಾಗಿ ನಡೆಯುತ್ತಿದೆ. ಉದಾಹರಣೆಗೆ, ಪೇಟಿಎಂ ನಲ್ಲಿ ಕೂಡಾ ಇದು ಬರುತ್ತಿದೆ. ಸಾರ್ವಜನಿಕರನ್ನು ಎಚ್ಚರಿಸುವ ನಿಮ್ಮ ಕಳಕಳಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...