Homeಮುಖಪುಟಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

ಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

- Advertisement -
- Advertisement -

ಈಸ್ಟರ್‌‌ ದಿನದ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುವ ಬೆಳವಣಿಗೆ ಬೆಳಕಿಗೆ ಬಂದಿದೆ. ಅಮೆಜಾ಼ನ್‌ ಸ್ಪೆಷಲ್ ಗಿಫ್ಟ್‌ ಹೆಸರಲ್ಲಿ ವಾಟ್ಸ್‌ಆಪ್‌ನಲ್ಲಿ ಬರುತ್ತಿರುವ ಮೋಸದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಇರುವುದೇ ಇದಕ್ಕೆ ಉತ್ತರ.

ಹೌದು. ಯಾವುದಾದರೂ ಹಬ್ಬ, ಆಚರಣೆಗಳು ಬಂದಾಗ ಈ ರೀತಿಯ ಲಿಂಕ್‌ಗಳು ವಾಟ್ಸ್‌ಅಪ್‌ನಲ್ಲಿ ಬರುತ್ತವೆ. ಅವುಗಳನ್ನು ಕ್ಲಿಕ್ ಮಾಡಿದರೆ ಅಪಾಯ ಕಾದಿರುತ್ತದೆ. ನಮ್ಮ ಬ್ಯಾಂಕ್ ವಿವರಗಳೂ ಸೋರಿಯಾಗುವ ಸಾಧ್ಯತೆ ಇರುತ್ತದೆ.

ಕಳೆದ ಪ್ರೇಮಿಗಳ ದಿನದ ಸಂದರ್ಭದಲ್ಲಿ ಇಂಥದ್ದೇ  ಲಿಂಕ್ ಹರಿದಾಡಿತ್ತು. ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಭಾಗವಾಗಿ ಉಚಿತ ಉಡುಗೊರೆಯನ್ನು ಗೆಲ್ಲುವ ಅವಕಾಶ ಎಂದು ನಕಲಿ ಲಿಂಕ್‌ ಹರಿದಾಡಿತ್ತು. ಈ ಕುರಿತು ‘ದಿ ಕ್ವಿಂಟ್’ ಜಾಲತಾಣ ವಿಶೇಷ ವರದಿ ಮಾಡಿತ್ತು.

ಈ ಲಿಂಕ್‌ಗಳನ್ನು ನೀವು ಪ್ರವೇಶಿಸಿದರೆ, ಇಲ್ಲಿನ ಸೂಚನೆಗಳನ್ನು ಅನುಸರಿಸಿದರೆ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಮೂರನೇ ವ್ಯಕ್ತಿ ಕದಿಯಬಹುದು ಅಥವಾ ಮಾಲ್‌ವೇರ್‌ (ವೈರಸ್‌ ಸಾಫ್ಟ್‌ವೇರ್) ನಿಮ್ಮ ಮೊಬೈಲ್ ಪ್ರವೇಶಿಸಬಹುದು ಎಂದು CyberPeace Foundation ಮತ್ತು Autobot Infosec ಸಂಸ್ಥೆಗಳು ಎಚ್ಚರಿಸಿದ್ದವು. ಈಗ ಈಸ್ಟರ್‌‌ ದಿನದ ನೆಪದಲ್ಲಿ ಮತ್ತದೇ ಲಿಂಕ್‌ ಹರಿದಾಡುತ್ತಿದೆ.

“ಒಬ್ಬ ಬಳಕೆದಾರನು ಈ ಬಲೆಗೆ ಸಿಲುಕಿದರೆ, ಅದು ಮೈಕ್ರೊಫೋನ್, ಕ್ಯಾಮೆರಾ, ಪಠ್ಯ ಸಂದೇಶಗಳು, ಸಂಪರ್ಕಗಳು, ಚಿತ್ರಗಳು, ವೀಡಿಯೊಗಳು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಇತ್ಯಾದಿಗಳಿಗೆ ಅನ್ಯರು ಪ್ರವೇಶಿಸಲು ಸಾಧ್ಯವಾಗಬಹುದು. ಜೊತೆಗೆ ಹಣಕಾಸಿನ ನಷ್ಟಗಳು ಉಂಟಾಗಬಹುದು” ಎಂದು ಸೈಬರ್‌ ಸಂಸ್ಥೆಗಳು ಎಚ್ಚರಿಸಿವೆ.

ನೀವು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಜಾಲತಾಣ (https://tinyurl2.ru/m754089054/) ಅಮೆಜಾನ್ ಬ್ಯಾನರ್‌ ಜೊತೆಗೆ ಗಿಫ್ಟ್‌ಬಾಕ್ಸ್‌ ತೋರಿಸುತ್ತದೆ. ವಿಶೇಷ ಉಡುಗೊರೆಯನ್ನು ಗೆಲ್ಲಲು ಸಣ್ಣ ರಸಪ್ರಶ್ನೆಯನ್ನು ಪೂರ್ಣಗೊಳಿಸಲು ಸೂಚಿಸುತ್ತದೆ. (ನೆನಪಿಡಿ, ಮೊಬೈಲ್‌ನಲ್ಲಿ ಮಾತ್ರ ಈ ಲಿಂಕ್ ಓಪನ್ ಆಗುತ್ತದೆ. ಸಿಸ್ಟಮ್‌ನಲ್ಲಿ ಕ್ಲಿಕ್ ಮಾಡಿದರೆ ‘ಫೇಜ್‌ ನಾಟ್ ಫೌಂಡ್‌’ ಎಂದು ತೋರಿಸುತ್ತದೆ.)

ಇದರ ಕೆಳಭಾಗದಲ್ಲಿ ನಕಲಿ ಕಾಮೆಂಟ್‌ಗಳ ವಿಭಾಗವಿದೆ. ಗಿಫ್ಟ್‌ ಕೊಡುತ್ತಿರುವುದು ನಿಜವೆಂದು ಕೆಲವರು ದೃಢೀಕರಿಸುವ ನಕಲಿ ಕಮೆಂಟ್‌ಗಳಿರುತ್ತವೆ. ಅಲ್ಲಿ ಕಮೆಂಟ್ ಮಾಡಿರುವವರು ಈ ಲಿಂಕ್‌ ನಿಜವೆಂದು ಪ್ರತಿಪಾದಿಸುತ್ತಾರೆ.

ಒಮ್ಮೆ ನೀವು ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರೆ (ನಿಮಗೆ ಅಮೆಜಾ಼ನ್‌ ತಿಳಿದಿದೆಯೇ? ನಿಮ್ಮ ವಯಸ್ಸು ಎಷ್ಟು?) ಅಭಿನಂದನಾ ಸಂದೇಶ ನಿಮಗೆ ಕಾಣಿಸಿಕೊಳ್ಳುತ್ತದೆ. ಅದರ ನಂತರ ಬಳಕೆದಾರರು ಉಡುಗೊರೆಯನ್ನು ಆಯ್ಕೆ ಮಾಡಿ ಬಹುಮಾನಗಳನ್ನು ಗೆಲ್ಲಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ.

ಈ ಹಿಂದೆ ಪ್ರೇಮಿಗಳ ದಿನಗಳ ಸಮಯದಲ್ಲಿ ಬಂದ ಲಿಂಕ್‌ ಕ್ಲಿಕ್ ಮಾಡಿ ರಸಪ್ರಶ್ನೆಯನ್ನು ಪೂರೈಸಿದಾಗ, ನೀವು “Apple iPhone 11 128GB” ಅನ್ನು ಗೆದ್ದಿರುವಿರಿ ಎಂದು ತೋರಿಸಲಾಗುತ್ತಿತ್ತು. ನಂತರ WhatsApp ನಲ್ಲಿ ಈ ಅಭಿಯಾನವನ್ನು ಹಂಚಿಕೊಳ್ಳಲು ಸೂಚಿಸಲಾಗಿತ್ತು.

PC: The Quint

ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಳಕೆದಾರರು ವಾಟ್ಸಾಪ್ ಬಟನ್ ಅನ್ನು ಹಲವು ಬಾರಿ ಕ್ಲಿಕ್ ಮಾಡಬೇಕಾಗುತ್ತದೆ ಎಂಬುದನ್ನು ತಜ್ಞರು ಗಮನಿಸಿದ್ದಾರೆ. ನಿಮ್ಮ “ನೋಂದಣಿ”ಯನ್ನು ನೀವು ಪೂರ್ಣಗೊಳಿಸಿದ ನಂತರ, ಅದು ನಿಮ್ಮನ್ನು ಬಹು ಜಾಹೀರಾತು ವೆಬ್‌ಪುಟಗಳಿಗೆ ಕರೆದೊಯ್ಯುತ್ತದೆ.

ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಬ್ಯಾಂಕಿಂಗ್ ಮಾಹಿತಿಯಂತಹ ಗೌಪ್ಯ ವಿವರಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ತಜ್ಞರು ಎಚ್ಚರಿಸಿದ್ದಾರೆ. ಜನರು ಯಾವುದೇ ಲಿಂಕ್‌ಗಳನ್ನು ಪರಿಶೀಲಿಸದೆ ಹಂಚಿಕೊಳ್ಳುವುದೂ ಸರಿಯಲ್ಲ.


ಇದನ್ನೂ ಓದಿರಿ: ಸೈಬರ್‌ ದಾಳಿಯ ಬಗ್ಗೆ 20 ಲಕ್ಷ ಬಳಕೆದಾರರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಮೆಜಾನ್ ನಲ್ಲಿ ಮಾತ್ರ ಅಲ್ಲ, ಇತರ ಹಲವೆಡೆ ಇದು ಅವ್ಯಾಹತವಾಗಿ ನಡೆಯುತ್ತಿದೆ. ಉದಾಹರಣೆಗೆ, ಪೇಟಿಎಂ ನಲ್ಲಿ ಕೂಡಾ ಇದು ಬರುತ್ತಿದೆ. ಸಾರ್ವಜನಿಕರನ್ನು ಎಚ್ಚರಿಸುವ ನಿಮ್ಮ ಕಳಕಳಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...