Homeಮುಖಪುಟಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

ಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

- Advertisement -
- Advertisement -

ಈಸ್ಟರ್‌‌ ದಿನದ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುವ ಬೆಳವಣಿಗೆ ಬೆಳಕಿಗೆ ಬಂದಿದೆ. ಅಮೆಜಾ಼ನ್‌ ಸ್ಪೆಷಲ್ ಗಿಫ್ಟ್‌ ಹೆಸರಲ್ಲಿ ವಾಟ್ಸ್‌ಆಪ್‌ನಲ್ಲಿ ಬರುತ್ತಿರುವ ಮೋಸದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಇರುವುದೇ ಇದಕ್ಕೆ ಉತ್ತರ.

ಹೌದು. ಯಾವುದಾದರೂ ಹಬ್ಬ, ಆಚರಣೆಗಳು ಬಂದಾಗ ಈ ರೀತಿಯ ಲಿಂಕ್‌ಗಳು ವಾಟ್ಸ್‌ಅಪ್‌ನಲ್ಲಿ ಬರುತ್ತವೆ. ಅವುಗಳನ್ನು ಕ್ಲಿಕ್ ಮಾಡಿದರೆ ಅಪಾಯ ಕಾದಿರುತ್ತದೆ. ನಮ್ಮ ಬ್ಯಾಂಕ್ ವಿವರಗಳೂ ಸೋರಿಯಾಗುವ ಸಾಧ್ಯತೆ ಇರುತ್ತದೆ.

ಕಳೆದ ಪ್ರೇಮಿಗಳ ದಿನದ ಸಂದರ್ಭದಲ್ಲಿ ಇಂಥದ್ದೇ  ಲಿಂಕ್ ಹರಿದಾಡಿತ್ತು. ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಭಾಗವಾಗಿ ಉಚಿತ ಉಡುಗೊರೆಯನ್ನು ಗೆಲ್ಲುವ ಅವಕಾಶ ಎಂದು ನಕಲಿ ಲಿಂಕ್‌ ಹರಿದಾಡಿತ್ತು. ಈ ಕುರಿತು ‘ದಿ ಕ್ವಿಂಟ್’ ಜಾಲತಾಣ ವಿಶೇಷ ವರದಿ ಮಾಡಿತ್ತು.

ಈ ಲಿಂಕ್‌ಗಳನ್ನು ನೀವು ಪ್ರವೇಶಿಸಿದರೆ, ಇಲ್ಲಿನ ಸೂಚನೆಗಳನ್ನು ಅನುಸರಿಸಿದರೆ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಮೂರನೇ ವ್ಯಕ್ತಿ ಕದಿಯಬಹುದು ಅಥವಾ ಮಾಲ್‌ವೇರ್‌ (ವೈರಸ್‌ ಸಾಫ್ಟ್‌ವೇರ್) ನಿಮ್ಮ ಮೊಬೈಲ್ ಪ್ರವೇಶಿಸಬಹುದು ಎಂದು CyberPeace Foundation ಮತ್ತು Autobot Infosec ಸಂಸ್ಥೆಗಳು ಎಚ್ಚರಿಸಿದ್ದವು. ಈಗ ಈಸ್ಟರ್‌‌ ದಿನದ ನೆಪದಲ್ಲಿ ಮತ್ತದೇ ಲಿಂಕ್‌ ಹರಿದಾಡುತ್ತಿದೆ.

“ಒಬ್ಬ ಬಳಕೆದಾರನು ಈ ಬಲೆಗೆ ಸಿಲುಕಿದರೆ, ಅದು ಮೈಕ್ರೊಫೋನ್, ಕ್ಯಾಮೆರಾ, ಪಠ್ಯ ಸಂದೇಶಗಳು, ಸಂಪರ್ಕಗಳು, ಚಿತ್ರಗಳು, ವೀಡಿಯೊಗಳು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಇತ್ಯಾದಿಗಳಿಗೆ ಅನ್ಯರು ಪ್ರವೇಶಿಸಲು ಸಾಧ್ಯವಾಗಬಹುದು. ಜೊತೆಗೆ ಹಣಕಾಸಿನ ನಷ್ಟಗಳು ಉಂಟಾಗಬಹುದು” ಎಂದು ಸೈಬರ್‌ ಸಂಸ್ಥೆಗಳು ಎಚ್ಚರಿಸಿವೆ.

ನೀವು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಜಾಲತಾಣ (https://tinyurl2.ru/m754089054/) ಅಮೆಜಾನ್ ಬ್ಯಾನರ್‌ ಜೊತೆಗೆ ಗಿಫ್ಟ್‌ಬಾಕ್ಸ್‌ ತೋರಿಸುತ್ತದೆ. ವಿಶೇಷ ಉಡುಗೊರೆಯನ್ನು ಗೆಲ್ಲಲು ಸಣ್ಣ ರಸಪ್ರಶ್ನೆಯನ್ನು ಪೂರ್ಣಗೊಳಿಸಲು ಸೂಚಿಸುತ್ತದೆ. (ನೆನಪಿಡಿ, ಮೊಬೈಲ್‌ನಲ್ಲಿ ಮಾತ್ರ ಈ ಲಿಂಕ್ ಓಪನ್ ಆಗುತ್ತದೆ. ಸಿಸ್ಟಮ್‌ನಲ್ಲಿ ಕ್ಲಿಕ್ ಮಾಡಿದರೆ ‘ಫೇಜ್‌ ನಾಟ್ ಫೌಂಡ್‌’ ಎಂದು ತೋರಿಸುತ್ತದೆ.)

ಇದರ ಕೆಳಭಾಗದಲ್ಲಿ ನಕಲಿ ಕಾಮೆಂಟ್‌ಗಳ ವಿಭಾಗವಿದೆ. ಗಿಫ್ಟ್‌ ಕೊಡುತ್ತಿರುವುದು ನಿಜವೆಂದು ಕೆಲವರು ದೃಢೀಕರಿಸುವ ನಕಲಿ ಕಮೆಂಟ್‌ಗಳಿರುತ್ತವೆ. ಅಲ್ಲಿ ಕಮೆಂಟ್ ಮಾಡಿರುವವರು ಈ ಲಿಂಕ್‌ ನಿಜವೆಂದು ಪ್ರತಿಪಾದಿಸುತ್ತಾರೆ.

ಒಮ್ಮೆ ನೀವು ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರೆ (ನಿಮಗೆ ಅಮೆಜಾ಼ನ್‌ ತಿಳಿದಿದೆಯೇ? ನಿಮ್ಮ ವಯಸ್ಸು ಎಷ್ಟು?) ಅಭಿನಂದನಾ ಸಂದೇಶ ನಿಮಗೆ ಕಾಣಿಸಿಕೊಳ್ಳುತ್ತದೆ. ಅದರ ನಂತರ ಬಳಕೆದಾರರು ಉಡುಗೊರೆಯನ್ನು ಆಯ್ಕೆ ಮಾಡಿ ಬಹುಮಾನಗಳನ್ನು ಗೆಲ್ಲಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ.

ಈ ಹಿಂದೆ ಪ್ರೇಮಿಗಳ ದಿನಗಳ ಸಮಯದಲ್ಲಿ ಬಂದ ಲಿಂಕ್‌ ಕ್ಲಿಕ್ ಮಾಡಿ ರಸಪ್ರಶ್ನೆಯನ್ನು ಪೂರೈಸಿದಾಗ, ನೀವು “Apple iPhone 11 128GB” ಅನ್ನು ಗೆದ್ದಿರುವಿರಿ ಎಂದು ತೋರಿಸಲಾಗುತ್ತಿತ್ತು. ನಂತರ WhatsApp ನಲ್ಲಿ ಈ ಅಭಿಯಾನವನ್ನು ಹಂಚಿಕೊಳ್ಳಲು ಸೂಚಿಸಲಾಗಿತ್ತು.

PC: The Quint

ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಳಕೆದಾರರು ವಾಟ್ಸಾಪ್ ಬಟನ್ ಅನ್ನು ಹಲವು ಬಾರಿ ಕ್ಲಿಕ್ ಮಾಡಬೇಕಾಗುತ್ತದೆ ಎಂಬುದನ್ನು ತಜ್ಞರು ಗಮನಿಸಿದ್ದಾರೆ. ನಿಮ್ಮ “ನೋಂದಣಿ”ಯನ್ನು ನೀವು ಪೂರ್ಣಗೊಳಿಸಿದ ನಂತರ, ಅದು ನಿಮ್ಮನ್ನು ಬಹು ಜಾಹೀರಾತು ವೆಬ್‌ಪುಟಗಳಿಗೆ ಕರೆದೊಯ್ಯುತ್ತದೆ.

ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಬ್ಯಾಂಕಿಂಗ್ ಮಾಹಿತಿಯಂತಹ ಗೌಪ್ಯ ವಿವರಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ತಜ್ಞರು ಎಚ್ಚರಿಸಿದ್ದಾರೆ. ಜನರು ಯಾವುದೇ ಲಿಂಕ್‌ಗಳನ್ನು ಪರಿಶೀಲಿಸದೆ ಹಂಚಿಕೊಳ್ಳುವುದೂ ಸರಿಯಲ್ಲ.


ಇದನ್ನೂ ಓದಿರಿ: ಸೈಬರ್‌ ದಾಳಿಯ ಬಗ್ಗೆ 20 ಲಕ್ಷ ಬಳಕೆದಾರರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಮೆಜಾನ್ ನಲ್ಲಿ ಮಾತ್ರ ಅಲ್ಲ, ಇತರ ಹಲವೆಡೆ ಇದು ಅವ್ಯಾಹತವಾಗಿ ನಡೆಯುತ್ತಿದೆ. ಉದಾಹರಣೆಗೆ, ಪೇಟಿಎಂ ನಲ್ಲಿ ಕೂಡಾ ಇದು ಬರುತ್ತಿದೆ. ಸಾರ್ವಜನಿಕರನ್ನು ಎಚ್ಚರಿಸುವ ನಿಮ್ಮ ಕಳಕಳಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...