Homeಮುಖಪುಟಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

ಅಮೆಜಾ಼ನ್‌ ಹೆಸರಿನ ಗಿಫ್ಟ್‌ಲಿಂಕ್‌ ನಿಮ್ಮ ವಾಟ್ಸ್‌ಅಪ್‌ಗೆ ಬಂದಿದೆಯೇ? ಹಾಗಾದರೆ ಎಚ್ಚರ!

- Advertisement -
- Advertisement -

ಈಸ್ಟರ್‌‌ ದಿನದ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುವ ಬೆಳವಣಿಗೆ ಬೆಳಕಿಗೆ ಬಂದಿದೆ. ಅಮೆಜಾ಼ನ್‌ ಸ್ಪೆಷಲ್ ಗಿಫ್ಟ್‌ ಹೆಸರಲ್ಲಿ ವಾಟ್ಸ್‌ಆಪ್‌ನಲ್ಲಿ ಬರುತ್ತಿರುವ ಮೋಸದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಇರುವುದೇ ಇದಕ್ಕೆ ಉತ್ತರ.

ಹೌದು. ಯಾವುದಾದರೂ ಹಬ್ಬ, ಆಚರಣೆಗಳು ಬಂದಾಗ ಈ ರೀತಿಯ ಲಿಂಕ್‌ಗಳು ವಾಟ್ಸ್‌ಅಪ್‌ನಲ್ಲಿ ಬರುತ್ತವೆ. ಅವುಗಳನ್ನು ಕ್ಲಿಕ್ ಮಾಡಿದರೆ ಅಪಾಯ ಕಾದಿರುತ್ತದೆ. ನಮ್ಮ ಬ್ಯಾಂಕ್ ವಿವರಗಳೂ ಸೋರಿಯಾಗುವ ಸಾಧ್ಯತೆ ಇರುತ್ತದೆ.

ಕಳೆದ ಪ್ರೇಮಿಗಳ ದಿನದ ಸಂದರ್ಭದಲ್ಲಿ ಇಂಥದ್ದೇ  ಲಿಂಕ್ ಹರಿದಾಡಿತ್ತು. ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಭಾಗವಾಗಿ ಉಚಿತ ಉಡುಗೊರೆಯನ್ನು ಗೆಲ್ಲುವ ಅವಕಾಶ ಎಂದು ನಕಲಿ ಲಿಂಕ್‌ ಹರಿದಾಡಿತ್ತು. ಈ ಕುರಿತು ‘ದಿ ಕ್ವಿಂಟ್’ ಜಾಲತಾಣ ವಿಶೇಷ ವರದಿ ಮಾಡಿತ್ತು.

ಈ ಲಿಂಕ್‌ಗಳನ್ನು ನೀವು ಪ್ರವೇಶಿಸಿದರೆ, ಇಲ್ಲಿನ ಸೂಚನೆಗಳನ್ನು ಅನುಸರಿಸಿದರೆ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಮೂರನೇ ವ್ಯಕ್ತಿ ಕದಿಯಬಹುದು ಅಥವಾ ಮಾಲ್‌ವೇರ್‌ (ವೈರಸ್‌ ಸಾಫ್ಟ್‌ವೇರ್) ನಿಮ್ಮ ಮೊಬೈಲ್ ಪ್ರವೇಶಿಸಬಹುದು ಎಂದು CyberPeace Foundation ಮತ್ತು Autobot Infosec ಸಂಸ್ಥೆಗಳು ಎಚ್ಚರಿಸಿದ್ದವು. ಈಗ ಈಸ್ಟರ್‌‌ ದಿನದ ನೆಪದಲ್ಲಿ ಮತ್ತದೇ ಲಿಂಕ್‌ ಹರಿದಾಡುತ್ತಿದೆ.

“ಒಬ್ಬ ಬಳಕೆದಾರನು ಈ ಬಲೆಗೆ ಸಿಲುಕಿದರೆ, ಅದು ಮೈಕ್ರೊಫೋನ್, ಕ್ಯಾಮೆರಾ, ಪಠ್ಯ ಸಂದೇಶಗಳು, ಸಂಪರ್ಕಗಳು, ಚಿತ್ರಗಳು, ವೀಡಿಯೊಗಳು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಇತ್ಯಾದಿಗಳಿಗೆ ಅನ್ಯರು ಪ್ರವೇಶಿಸಲು ಸಾಧ್ಯವಾಗಬಹುದು. ಜೊತೆಗೆ ಹಣಕಾಸಿನ ನಷ್ಟಗಳು ಉಂಟಾಗಬಹುದು” ಎಂದು ಸೈಬರ್‌ ಸಂಸ್ಥೆಗಳು ಎಚ್ಚರಿಸಿವೆ.

ನೀವು ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಜಾಲತಾಣ (https://tinyurl2.ru/m754089054/) ಅಮೆಜಾನ್ ಬ್ಯಾನರ್‌ ಜೊತೆಗೆ ಗಿಫ್ಟ್‌ಬಾಕ್ಸ್‌ ತೋರಿಸುತ್ತದೆ. ವಿಶೇಷ ಉಡುಗೊರೆಯನ್ನು ಗೆಲ್ಲಲು ಸಣ್ಣ ರಸಪ್ರಶ್ನೆಯನ್ನು ಪೂರ್ಣಗೊಳಿಸಲು ಸೂಚಿಸುತ್ತದೆ. (ನೆನಪಿಡಿ, ಮೊಬೈಲ್‌ನಲ್ಲಿ ಮಾತ್ರ ಈ ಲಿಂಕ್ ಓಪನ್ ಆಗುತ್ತದೆ. ಸಿಸ್ಟಮ್‌ನಲ್ಲಿ ಕ್ಲಿಕ್ ಮಾಡಿದರೆ ‘ಫೇಜ್‌ ನಾಟ್ ಫೌಂಡ್‌’ ಎಂದು ತೋರಿಸುತ್ತದೆ.)

ಇದರ ಕೆಳಭಾಗದಲ್ಲಿ ನಕಲಿ ಕಾಮೆಂಟ್‌ಗಳ ವಿಭಾಗವಿದೆ. ಗಿಫ್ಟ್‌ ಕೊಡುತ್ತಿರುವುದು ನಿಜವೆಂದು ಕೆಲವರು ದೃಢೀಕರಿಸುವ ನಕಲಿ ಕಮೆಂಟ್‌ಗಳಿರುತ್ತವೆ. ಅಲ್ಲಿ ಕಮೆಂಟ್ ಮಾಡಿರುವವರು ಈ ಲಿಂಕ್‌ ನಿಜವೆಂದು ಪ್ರತಿಪಾದಿಸುತ್ತಾರೆ.

ಒಮ್ಮೆ ನೀವು ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರೆ (ನಿಮಗೆ ಅಮೆಜಾ಼ನ್‌ ತಿಳಿದಿದೆಯೇ? ನಿಮ್ಮ ವಯಸ್ಸು ಎಷ್ಟು?) ಅಭಿನಂದನಾ ಸಂದೇಶ ನಿಮಗೆ ಕಾಣಿಸಿಕೊಳ್ಳುತ್ತದೆ. ಅದರ ನಂತರ ಬಳಕೆದಾರರು ಉಡುಗೊರೆಯನ್ನು ಆಯ್ಕೆ ಮಾಡಿ ಬಹುಮಾನಗಳನ್ನು ಗೆಲ್ಲಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ.

ಈ ಹಿಂದೆ ಪ್ರೇಮಿಗಳ ದಿನಗಳ ಸಮಯದಲ್ಲಿ ಬಂದ ಲಿಂಕ್‌ ಕ್ಲಿಕ್ ಮಾಡಿ ರಸಪ್ರಶ್ನೆಯನ್ನು ಪೂರೈಸಿದಾಗ, ನೀವು “Apple iPhone 11 128GB” ಅನ್ನು ಗೆದ್ದಿರುವಿರಿ ಎಂದು ತೋರಿಸಲಾಗುತ್ತಿತ್ತು. ನಂತರ WhatsApp ನಲ್ಲಿ ಈ ಅಭಿಯಾನವನ್ನು ಹಂಚಿಕೊಳ್ಳಲು ಸೂಚಿಸಲಾಗಿತ್ತು.

PC: The Quint

ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಳಕೆದಾರರು ವಾಟ್ಸಾಪ್ ಬಟನ್ ಅನ್ನು ಹಲವು ಬಾರಿ ಕ್ಲಿಕ್ ಮಾಡಬೇಕಾಗುತ್ತದೆ ಎಂಬುದನ್ನು ತಜ್ಞರು ಗಮನಿಸಿದ್ದಾರೆ. ನಿಮ್ಮ “ನೋಂದಣಿ”ಯನ್ನು ನೀವು ಪೂರ್ಣಗೊಳಿಸಿದ ನಂತರ, ಅದು ನಿಮ್ಮನ್ನು ಬಹು ಜಾಹೀರಾತು ವೆಬ್‌ಪುಟಗಳಿಗೆ ಕರೆದೊಯ್ಯುತ್ತದೆ.

ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಬ್ಯಾಂಕಿಂಗ್ ಮಾಹಿತಿಯಂತಹ ಗೌಪ್ಯ ವಿವರಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ತಜ್ಞರು ಎಚ್ಚರಿಸಿದ್ದಾರೆ. ಜನರು ಯಾವುದೇ ಲಿಂಕ್‌ಗಳನ್ನು ಪರಿಶೀಲಿಸದೆ ಹಂಚಿಕೊಳ್ಳುವುದೂ ಸರಿಯಲ್ಲ.


ಇದನ್ನೂ ಓದಿರಿ: ಸೈಬರ್‌ ದಾಳಿಯ ಬಗ್ಗೆ 20 ಲಕ್ಷ ಬಳಕೆದಾರರಿಗೆ ಎಚ್ಚರಿಕೆ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಮೆಜಾನ್ ನಲ್ಲಿ ಮಾತ್ರ ಅಲ್ಲ, ಇತರ ಹಲವೆಡೆ ಇದು ಅವ್ಯಾಹತವಾಗಿ ನಡೆಯುತ್ತಿದೆ. ಉದಾಹರಣೆಗೆ, ಪೇಟಿಎಂ ನಲ್ಲಿ ಕೂಡಾ ಇದು ಬರುತ್ತಿದೆ. ಸಾರ್ವಜನಿಕರನ್ನು ಎಚ್ಚರಿಸುವ ನಿಮ್ಮ ಕಳಕಳಿಗೆ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...