Homeಮುಖಪುಟಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ಕೊರೊನಾ ಕಾಲದಲ್ಲಿ ಚೀನಾವೊಂದನ್ನು ಬಿಟ್ಟು ವಿಶ್ವದ ಪ್ರಮುಖ ದೇಶಗಳ ಜಿಡಿಪಿ ಇಳಿಕೆಯಾಗಿದೆ. ಅದರಂತೆ ಕೊರೊನಾ ಕಾರಣದಿಂದ ಭಾರತದ ಜಿಡಿಪಿ ಕೂಡಾ ಇಳಿದಿದೆ ಎನ್ನಬಹುದಾದರೂ ಭಾರತರ ಜಿಡಿಪಿ ಕಳೆದ 4 ವರ್ಷಗಳಿಂದ ಇಳಿಯುತ್ತಲೆ ಇರುವುದನ್ನು ಮರೆಯಬಾರದು.

- Advertisement -
- Advertisement -

ಭಾರತದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ -23.9% ( ಗಮನಿಸಿ ಮೈನಸ್ ಇಪ್ಪತ್ತಮೂರು ಪಾಯಿಂಟ್ ಒಂಬತ್ತು) ಜಿಡಿಪಿ ಇಳಿಕೆಯಾಗಿದೆ. ಮಾಧ್ಯಮಗಳು ಹಾಗೂ ಸರ್ಕಾರಗಳು ಇದಕ್ಕೆ ಕೊರೊನಾ, ಲಾಕ್‌ಡೌನ್‌ ಇನ್ನು ಮುಂದೆ ಹೋಗಿ ದೇವರು ಕಾರಣ ಎಂದು ಸಮರ್ಥನೆ ಮಾಡಿಕೊಳ್ಳುತ್ತಿವೆ. ಈ ಮಟ್ಟದ ಕುಸಿತಕ್ಕೆ ಕೊರೊನಾ ಸಹ ಕಾರಣ ಎಂಬುದು ಅರ್ಧಸತ್ಯ ಮಾತ್ರ. ಉಳಿದ ಅರ್ಧ ಸತ್ಯವನ್ನು ಹೊರತೆಗೆಯುವ ಪ್ರಯತ್ನ ಈ ಲೇಖನವಾಗಿದೆ.

ಜಿಡಿಪಿ ಎಂದರೇನು?

ಜಿಡಿಪಿ ಎಂದರೆ Gross Domestic Product ಅರ್ಥಾತ್ ಒಟ್ಟು ದೇಶೀಯ ಉತ್ಪನ್ನ. ಅಂದರೆ ಒಂದು ನಿರ್ದಿಷ್ಟ ಅವಧಿಯಲ್ಲಿ ದೇಶದೊಳಗೆ ಉತ್ಪಾದನೆಯಾಗುವ ಸರಕು ಮತ್ತು ಸೇವೆಗಳ ಒಟ್ಟು ಮಾರುಕಟ್ಟೆ ಮೌಲ್ಯವಾಗಿದೆ. ಇದರೊಂದಿಗೆ ದೇಶದಲ್ಲಿ ಜಿಡಿಪಿ ಇಳಿಕೆಯಾಗಿದೆ ಎಂದರೆ ದೇಶದಲ್ಲಿ ಉತ್ಪಾದನೆಗಳು ಕಡಿಮೆಯಾಗಿದೆ ಎಂದರ್ಥ.

ದೇಶದ ಜಿಡಿಪಿ ಈ ಹಿಂದಿನಿಂದ ಹೇಗಿತ್ತು?

ವಿಶೇಷವಾಗಿ ದೇಶವು ಜಾಗತೀಕರಣಕ್ಕೆ ತೆರೆದುಕೊಂಡ 1992 ರಿಂದ ಮಾಹಿತಿ ಪಡೆಯುವುದಾದರೆ ದೇಶದ ಜಿಡಿಪಿ 5.48% ಇತ್ತು. ನಂತರದ ವರ್ಷಗಳಲ್ಲಿ ದೇಶದ ಜಿಡಿಪಿ ಏರಿದರೂ ಜಾಗತೀಕರಣದ ಐದು ವರ್ಷದ ನಂತರ ಅಂದರೆ 1997 ರಲ್ಲಿ ದೇಶದ ಜಿಡಿಪಿ ಮತ್ತೇ 4.5% ಕ್ಕೆ ಇಳಿಯಿತು. ಈ ವರ್ಷವನ್ನು ಏಷಿಯನ್ ಆರ್ಥಿಕ ಬಿಕ್ಕಟ್ಟು ಎನ್ನುತ್ತಾರೆ, ಏಷ್ಯಾದ ಎಲ್ಲಾ ರಾಷ್ಟ್ರಗಳಲ್ಲಿ ಜಿಡಿಪಿ ಇಳಿಕೆ ಕಂಡ ವರ್ಷವಾಗಿದೆ.

ಇದನ್ನೂ ಓದಿ: 1 ನೇ ಆರ್ಥಿಕ ತ್ರೈಮಾಸಿಕ ಜಿಡಿಪಿ 23.9% ಇಳಿಕೆ; ಐತಿಹಾಸಿಕ ಇಳಿಕೆ ಕಂಡ ಭಾರತ

ಇದಾದ ನಂತರ ದೇಶದ ಜಿಡಿಪಿ 3.84% ಇಳಿದಿದ್ದು 2000 ನೇ ಇಸವಿಯಲ್ಲಿ, ಈ ವರ್ಷದಲ್ಲಿ ಕೂಡಾ ಜಾಗತಿಕ ಆರ್ಥಿಕ ಬಿಕ್ಕಟ್ಟಿನ ವರ್ಷವಾಗಿದೆ. ಇದರ ನಂತರ ದೇಶದ ಜಿಡಿಪಿ ಸಮಾನಾಂತವಾಗಿ ಏರಿಕೆ ಕಂಡು 2007 ರ ಹೊತ್ತಿಗೆ ದೇಶದ ಜಿಡಿಪಿ 7.66% ಕ್ಕೆ ತಲುಪಿತ್ತು. ಇದರ ನಂತರದ ವರ್ಷ ದೇಶದ ಜಿಡಿಪಿ 2008 ರ ಜಾಗತಿಕ ಆರ್ಥಿಕ ಬಿಕ್ಕಟ್ಟಿದ್ದರೂ ಭಾರತದ ಜಿಡಿಪಿ 3.9% ಕ್ಕಿಂತ ಕಡಿಮೆಯಾಗಿರಲಿಲ್ಲ. ಇದರ ನಂತರ ಭಾರತದ ಜಿಡಿಪಿ ಈ ಮಟ್ಟದ ಇಳಿಕೆ ಕಾಣದಿದ್ದರೂ 2011 ರ ನಂತರ ಭಾರತದ ಜಿಡಿಪಿ ನಿರಂತರವಾಗಿ ಏರುತ್ತಲೇ ಹೋಗಿದೆ.

ಭಾರತದ ಜಿಡಿಪಿ (ಆಧಾರ: ವಲ್ಡ್‌ ಬ್ಯಾಂಕ್)

2011 ರಿಂದ ಭಾರತದ ಜಿಡಿಪಿ ನಿರಂತರವಾಗಿ ಏರುತ್ತಲೇ ಇದ್ದು ಮತ್ತೆ ಕುಸಿದಿದ್ದು 2016 ರ ನಂತರ, ಅಲ್ಲಿಂದ ಒಂದೇ ಸಮನೇ ಭಾರತದ ಜಿಡಿಪಿ ಇಳಿಕೆಯ ಹಾದಿಯಲ್ಲೇ ಇದೆ. 2016 ರಲ್ಲಿ ನೋಟ್‌ ಬ್ಯಾನ್‌ ಆಗಿದೆ ಮತ್ತು 2017ರಲ್ಲಿ ಜಿಎಸ್‌ಟಿ ಜಾರಿಗೆ ಬಂದಿದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳೋಣ.

ಭಾರತದ ಜಿಡಿಪಿ( ಆಧಾರ: ವಲ್ಡ್‌ ಬ್ಯಾಂಕ್)

ಇದೀಗ 2020-21 ಆರ್ಥಿಕ ವರ್ಷದ ಮೊದಲ ತ್ರೈಮಾಸಿದ ಏಪ್ರಿಲ್-ಜೂನ್ ಅವಧಿಯಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶೇಕಡಾ -23.9 ರಷ್ಟು ಇಳಿಕೆಯಾಗಿದೆ. ಭಾರತವು ತ್ರೈಮಾಸಿಕ ಅಂಕಿ ಅಂಶಗಳನ್ನು ಪ್ರಕಟಿಸಲು ಪ್ರಾರಂಭಿಸಿದ 1996 ರಿಂದೀಚೆಗೆ ಇದೇ ಮೊದಲ ಭಾರಿಗೆ ಆರ್ಥಿಕತೆ ಈ ಪ್ರಮಾಣದ ಇಳಿಕೆ ದಾಖಲಾಗಿದೆ. ಅಷ್ಟೇ ಅಲ್ಲದೆ ಏಷ್ಯಾದ ಪ್ರಮುಖ ಆರ್ಥಿಕತೆಯಲ್ಲಿ ಇದು ಅತ್ಯಂತ ಕೆಟ್ಟದಾದ ಆರ್ಥಿಕ ಕುಸಿತವಾಗಿದೆ.

2019–20 ರ ಇದೇ ಅವಧಿಯಲ್ಲಿ ದೇಶದ ಜಿಡಿಪಿ ಶೇ 5.2 ರಷ್ಟು ಬೆಳವಣಿಗೆ ಕಂಡಿತ್ತು ಎಂದು ಅಂಕಿ ಅಂಶ ಹೇಳುತ್ತದೆ.


ಆಧಾರ: tradingeconomics.com

ಋಣಾತ್ಮಕವಾಗಿ ಇಳಿಯುತ್ತಿರುವ ಜಿಡಿಪಿ ಕೊರೊನಾ ಕೊಡುಗೆಯೆ?

ಕೊರೊನಾ ಕಾಲದಲ್ಲಿ ಚೀನಾವೊಂದನ್ನು ಬಿಟ್ಟು ವಿಶ್ವದ ಪ್ರಮುಖ ದೇಶಗಳ ಜಿಡಿಪಿ ಇಳಿಕೆಯಾಗಿದೆ. ಅದರಂತೆ ಕೊರೊನಾ ಕಾರಣದಿಂದ ಭಾರತದ ಜಿಡಿಪಿ ಕೂಡಾ ಇಳಿದಿದೆ ಎನ್ನಬಹುದಾದರೂ ಭಾರತರ ಜಿಡಿಪಿ ಕಳೆದ 4 ವರ್ಷಗಳಿಂದ ಇಳಿಯುತ್ತಲೆ ಇರುವುದನ್ನು ಮರೆಯಬಾರದು.

ಈ ಬಗ್ಗೆ ನಾನುಗೌರಿ ಜೊತೆ ಮಾತನಾಡಿದ ಹಂಪಿ ಕನ್ನಡ ವಿಶ್ವವಿದ್ಯಾನಿಲಯ ನಿವೃತ್ತ ಪ್ರಾಧ್ಯಾಪಕರದ ಡಾ. ಚಂದ್ರ ಪೂಜಾರಿಯವರು, “ಕೊರೊನಾ ಕಾರಣದಿಂದ ವಿಶ್ವದಾದ್ಯಂತ ಜಿಡಿಪಿ ಇಳಿಯುತ್ತಲೆ ಇದೆ ಎಂಬುವುದು ನಿಜವಾದರು, ಭಾರತದಲ್ಲಿ ಜಿಡಿಪಿ ಇಳಿಯಲು 2018 ರಿಂದಲೇ ವೇದಿಕೆ ಸಿದ್ದವಾಗಿತ್ತು. ದೇಶದ ಆರ್ಥಿಕತೆ ಪಾತಾಳಕ್ಕೆ ಹೋಗುವ ಪ್ರಕ್ರಿಯೆ ನೋಟ್ ಬ್ಯಾನ್ ಆದಾಗಲೆ ಪ್ರಾರಂಭವಾಗಿದೆ. ಜಿಎಸ್‌ಟಿಯನ್ನು ಅವಸರವಸರವಾಗಿ ತಂದ ನಂತರ ಅದಕ್ಕೆ ಇನ್ನೂ ವೇಗ ಸಿಕ್ಕಿದೆ. ಪ್ರಸ್ತುತ ಕೊರೊನಾ ಇದಕ್ಕೆ ಇನ್ನಷ್ಟು ಕೊಡುಗೆ ನೀಡಿದೆ ಎನ್ನುವ ಅವರು, ಎಲ್ಲವನ್ನು ಕೊರೊನಾ ಮೇಲೆ ಹಾಕುವ ಹಾಗೂ ಇಲ್ಲ. ಏಕೆಂದರೆ ಸರ್ಕಾರ ಹೇರಿದ ಯಾವುದೇ ತಯಾರಿಯಿಲ್ಲದ ಲಾಕ್‌ಡೌನ್ ಕೂಡ‌ ಇದಕ್ಕೆ ಕೊಡುಗೆ ನೀಡಿದೆ” ಎಂದಿದ್ದಾರೆ.

ವಿಶ್ವದ ಇತರ ಪ್ರಮುಖ ದೇಶಗಳ ಜಿಡಿಪಿ ಕುಸಿದರೂ ಭಾರತದಷ್ಟು ಕುಸಿದಿಲ್ಲ ಎಂದು ಚಂದ್ರ ಪೂಜಾರಿ ಉಲ್ಲೇಖಿಸಿದ್ದಾರೆ. “ಒಂದನೆಯದಾಗಿ ಸರ್ಕಾರ ಆರ್ಥಿಕತೆಯನ್ನು ಸರಿಯಾಗಿ ನಿಭಾಯಿಸಿಲ್ಲ, ಎರಡನೆಯದಾಗಿ ಕೊರೊನಾವನ್ನೂ ಸರಿಯಾಗಿ ನಿಭಾಯಿಸಿಲ್ಲ, ಒಟ್ಟಾರೆಯಾಗಿ ಇದು ಸರ್ಕಾರದ ವೈಫಲ್ಯ” ಎಂದು ಅವರು ಹೇಳಿದ್ದಾರೆ.

ಇದರ ಬಗ್ಗೆ ಮಾತನಾಡಿದ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರಜ್ಞ ಡಾ.ಟಿ.ಆರ್‌. ಚಂದ್ರಶೇಖರ್‌, “ಸರ್ಕಾರಕ್ಕೆ ಸರಿಯಾದ ಆರ್ಥಿಕ ನೀತಿಗಳೇ ಇಲ್ಲ. ಅವರಿಗೆ ಇರುವುದು ಸಾಮಾಜಿಕ ಅಜೆಂಡ ಮಾತ್ರ, ಪ್ರಸ್ತುತ ಇಳಿಕೆಯಾಗಿರುವ ಜಿಡಿಪಿ ಸರಿಯಾಗುತ್ತದೆ ಎಂಬ ನಂಬಿಕೆ ನನಗಿಲ್ಲ” ಎಂದು ಹೇಳಿದ್ದಾರೆ.

ಜಿಡಿಪಿ ಮೇಲೆತ್ತಲು ಸರ್ಕಾರ ಮಾಡಬೇಕಾದದ್ದೇನು?

ಜಿಡಿಪಿ ಇಳಿಕೆಗೆ ಕೊರೊನಾವನ್ನು ದೂರಿದ ಕೇಂದ್ರ ಸರ್ಕಾರ, ಇದನ್ನು ನಿಭಾಯಿಸಲು 20 ಲಕ್ಷ ಕೋಟಿ ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿಕೊಂಡಿದೆ. ಆದರೆ ಇದ್ಯಾವುದು ಸಾಮಾನ್ಯ ಜನರ ಕೈಗಳಿಗೆ ತಲುಪಿಲ್ಲ. ಹಾಗಾಗಿ ಜನರ ಕೊಳ್ಳುವ ಶಕ್ತಿ ಕಡಿಮೆಯಾಗಿದೆ. ಜನರು ಕೊಳ್ಳದಿದ್ದ ಮೇಲೆ ಉತ್ಪಾದನೆ ಆಗುವುದು ಹೇಗೆ? ಹಾಗಾಗಿ ಜಿಡಿಪಿ ಪಾತಾಳಕ್ಕೆ ಕುಸಿದಿದೆ ಎಂದು ಪ್ರಾಧ್ಯಾಪಕ ಹಾಗೂ ಸಾಮಾಜಿಕ ಚಿಂತಕ ನಾಗೇಗೌಡ ಕೀಲಾರ ಶಿವಲಿಂಗಯ್ಯ ಹೇಳುತ್ತಾರೆ.

ಈ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಹೆಚ್ಚಿನ ಪಾಲು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ನೀಡಲಾಗುತ್ತದೆ ಎನ್ನುತ್ತಾರಾದರೂ ಜನರು ವಸ್ತುಗಳನ್ನು ಕೊಳ್ಳದಿದ್ದ ಮೇಲೆ ಅವರು ಉತ್ಪಾದನೆ ಮಾಡಿಯಾದರೂ ಏನು ಪ್ರಯೋಜನ? ಈ ಅಮಾನವೀಯ ಲಾಕ್‌ಡೌನ್‌ನಿಂದಾಗಿ ಕೋಟ್ಯಂತರ ಜನರು ಉದ್ಯೋಗ, ಆದಾಯ ಕಳೆದುಕೊಂಡಿದ್ದಾರೆ. ಅವರು ವಸ್ತುಗಳನ್ನು ಕೊಳ್ಳಲು ಹೇಗೆ ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜಿಡಿಪಿ ಪಾತಾಳದಲ್ಲಿದ್ದರೂ ಸುಳ್ಳು ಹೇಳುತ್ತಿರುವ ಕರ್ನಾಟಕ ಬಿಜೆಪಿ ;ಫ್ಯಾಕ್ಟ್‌ಚೆಕ್.

ಸರ್ಕಾರ ಎಲ್ಲಕ್ಕಿಂತ ಮೊದಲು ಎಪಿಎಲ್-ಬಿಪಿಎಲ್ ನೋಡದೆ ಎಲ್ಲರ ಹಸಿವನ್ನು ತಣಿಸುವ ಕೆಲಸ ಮಾಡಬೇಕು. ದೊಡ್ಡ ದೊಡ್ಡ ಕಾರ್ಪೊರೇಟ್ ಕಂಪನಿಗಳ ಸಾಲ ಮನ್ನಾ ಮಾಡುವ ಬದಲು ಜನಸಾಮಾನ್ಯರ ಕೈಗೆ ಹಣ ನೀಡಬೇಕು. ಸರ್ಕಾರ ನೇರ ನಗದನ್ನು ಜನರ ಜೇಬಿಗಿಟ್ಟರೆ ಅವರು ಕೊಳ್ಳಲು ಮುಂದಾಗುತ್ತಾರೆ. ಆಗ ಉತ್ಪಾದನೆ ಚಾಲನೆಗೊಳ್ಳುತ್ತದೆ, ಉತ್ಪಾದನೆ ಹೆಚ್ಚಾದಂತೆ ಉದ್ಯೋಗಗಳು ಹೆಚ್ಚುತ್ತವೆ. ಉದ್ಯೋಗದಿಂದ ಗಳಿಸಿದ ಹಣವನ್ನು  ಜನ ಖರ್ಚು ಮಾಡುತ್ತಾರೆ, ಅಂದರೆ ಕೊಳ್ಳುತ್ತಾರೆ. ಈ ಸರಣಿ ಚಕ್ರ ಕೆಲಸ ಮಾಡಿದಾಗ ಮಾತ್ರ ಜಿಡಿಪಿ ಏರಿಕೆಯಾಗಲು ಸಾಧ್ಯ.

ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಖಾತರಿ ಯೋಜನೆ ಇರುವ ಹಾಗೆ ನಗರ ಪ್ರದೇಶದಲ್ಲೂ ಅಂತಹ ಯೋಜನೆಯನ್ನು ಪ್ರಾರಂಭಿಸಬೇಕು. ಈ ಎರಡಕ್ಕೂ ಹೆಚ್ಚಿನ ಅನುದಾನ ಒದಗಿಸಬೇಕು ಮತ್ತು ಪರಿಣಾಮಕಾರಿ ಭ್ರಷ್ಟಾಚಾರ ರಹಿತವಾಗಿ ಜಾರಿಗೆ ತರಬೇಕು. ದೇಶದ ಜಿಡಿಪಿಗೆ 50% ಕೊಡುಗೆ ನೀಡುವ ಅಸಂಘಟಿತ ವಲಯಕ್ಕೆ ಸರ್ಕಾರ ಬೆಂಬಲ ನೀಡಬೇಕು ಎಂದು ಚಂದ್ರ ಪೂಜಾರಿ ಹೇಳಿದ್ದಾರೆ.


ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...