Homeಕರ್ನಾಟಕಮುಸ್ಲಿಮರಿಗೆ ಮೀಸಲಾತಿ ನೀಡಲು 'ಸಂವಿಧಾನ ಬದಲಾಯಿಸುತ್ತೇವೆ' ಅಂದ್ರಾ ಡಿಕೆಶಿ...ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?

ಮುಸ್ಲಿಮರಿಗೆ ಮೀಸಲಾತಿ ನೀಡಲು ‘ಸಂವಿಧಾನ ಬದಲಾಯಿಸುತ್ತೇವೆ’ ಅಂದ್ರಾ ಡಿಕೆಶಿ…ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?

- Advertisement -
- Advertisement -

“ಮುಸ್ಲಿಮರಿಗೆ ಮೀಸಲಾತಿ ನೀಡಲು ನಾವು ಸಂವಿಧಾನ ಬದಲಾಯಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವುದಾಗಿ ಬಿಜೆಪಿ ಆರೋಪಿಸಿದ್ದು, ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ.

ಇಂದು (ಮಾ.24) ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು,”ಸ್ಪೀಕರ್ ಸರ್, ನಾನು ಬಹಳ ಗಂಭೀರವಾದ ವಿಷಯವನ್ನು ಪ್ರಸ್ತಾಪಿಸಲು ಎದ್ದು ನಿಂತಿದ್ದೇನೆ. ಎನ್‌ಡಿಎ ಸಂಸದರು ನನ್ನನ್ನು ಭೇಟಿಯಾಗಿ ಬಹಳ ಪ್ರಮುಖವಾದ ಈ ವಿಷಯವನ್ನು ಸಂಸತ್‌ನಲ್ಲಿ ಪ್ರಸ್ತಾಪಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸರ್..ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರು, ಬಹಳ ಜವಾಬ್ದಾರಿಯುತ ಕಾಂಗ್ರೆಸ್ ನಾಯಕ, ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವವರು ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಭಾರತದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ನಾವು ಹಗುರವಾಗಿ ತೆಗೆದುಕೊಳ್ಳುವುದಿಲ್ಲ” ಎಂದರು.

“ಈ ಹೇಳಿಕೆಯನ್ನು ಯಾವುದಾದರು ಸಾಮಾನ್ಯ ವ್ಯಕ್ತಿ ನೀಡಿದ್ದರೆ ನಾವು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ನಾವು ಸಂಸತ್ತಿನ ಹೊರಗೆ ಪ್ರತಿಕ್ರಿಯಿಸುತ್ತಿದ್ದೆವು. ಇದು ಒಬ್ಬರು ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ನೀಡಿರುವ ಹೇಳಿಕೆ. ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಮೀಸಲಾತಿ ನೀಡಲಿದೆ, ಅದಕ್ಕಾಗಿ ಸಂವಿಧಾನ ಬದಲಾಯಿಸಲಿದೆ ಎಂದು ಹೇಳಿದ್ದಾರೆ. ಇದು ಅತ್ಯಂತ ಗಂಭೀರ ವಿಚಾರ, ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇದು ಭಾರತದ ಸಂವಿಧಾನದ ಮೇಲಿನ ದಾಳಿ. ಡಾ.ಬಿಆರ್ ಅವರು ಕೊಟ್ಟಿರುವ ಸಂವಿಧಾನದ ಮೇಲಿನ ದಾಳಿ” ಎಂದು ಕಿಡಿಕಾರಿದರು.

“ಈ ಜನರು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋ ಹಿಡಿದುಕೊಂಡು ಬರುತ್ತಾರೆ. ಅದೇ ಜನರು ಭಾರತದ ಸಂವಿಧಾನವನ್ನು ಬದಲಾಯಿಸುವುದಾಗಿ ಅಧಿಕೃತ ಹೇಳಿಕೆ ನೀಡುತ್ತಾರೆ. ಇಲ್ಲಿ ಕುಳಿತಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಈ ವಿಚಾರದ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಬೇಕೆಂದು ನಾನು ಆಗ್ರಹಿಸುತ್ತೇನೆ. ಮುಸ್ಲಿಮರಿಗೆ ಮೀಸಲಾತಿ ನೀಡಲು ನೀವು ಹೇಗೆ ಮತ್ತು ಯಾವ ಕಾರಣಕ್ಕೆ ಭಾರತದ ಸಂವಿಧಾನ ಬದಲಾಯಿಸಲು ಬಯಸುತ್ತಿದ್ದೀರಿ? ನನಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಂದ ಅವರ ನಿಲುವಿನ ಕುರಿತು ಸ್ಪಷ್ಟವಾದ ಪ್ರತಿಕ್ರಿಯೆ ಬೇಕು” ಎಂದು ಒತ್ತಾಯಿಸಿದರು.

ಡಿ.ಕೆ ಶಿವಕುಮಾರ್ ಅವರ ಹೇಳಿಕೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್ ಮಾಳವೀಯ, “ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರು ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಸಂವಿಧಾನವನ್ನು ತಿದ್ದುಪಡಿ ಮಾಡಲಿದೆ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ” ಎಂದಿದ್ದಾರೆ.

“ಸ್ವಯಂ ಘೋಷಿತ ಸಂವಿಧಾನದ ರಕ್ಷಕ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ? ಕಾಂಗ್ರೆಸ್ ಯಾವಾಗಲೂ ರಾಷ್ಟ್ರೀಯ ಹಿತಾಸಕ್ತಿಗಿಂತ ಸಮಾಧಾನಕ್ಕೆ ಆದ್ಯತೆ ನೀಡಿದೆ. ಅವರು ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು ಹಿಂಜರಿಯಲಿಲ್ಲ ಮತ್ತು ಅದರ ನಂತರವೂ ಮುಸ್ಲಿಮರು ಹಿಂದೆ ಉಳಿಯುವಂತೆ ನೋಡಿಕೊಂಡರು. ಇದಕ್ಕಿಂತ ದೊಡ್ಡ ದ್ರೋಹ ಇನ್ನೊಂದಿಲ್ಲ”ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಎಂದಿಗೂ ಹಿಂದೂಗಳಿಗೆ ನ್ಯಾಯಯುತವಾಗಿ ವರ್ತಿಸಿಲ್ಲ – ಮತ್ತು ಅದು ಎಂದಿಗೂ ಆಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿಗರ ಆರೋಪದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, “ನಾನು ನಡ್ಡಾ ಅವರಿಗಿಂತ ಸಂವೇದನಾಶೀಲ, ಹಿರಿಯ ರಾಜಕಾರಣಿ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದೇನೆ. ನನಗೆ ಸಾಮಾನ್ಯ ಜ್ಞಾನವಿದೆ. ವಿವಿಧ ತೀರ್ಪುಗಳ ನಂತರ ಹಲವು ಬದಲಾವಣೆಗಳಾಗುತ್ತವೆ ಎಂದು ನಾನು ಸಾಂದರ್ಭಿಕವಾಗಿ ಹೇಳಿದ್ದೇನೆ. ಹಿಂದುಳಿದ ವರ್ಗಗಳ ಕೋಟಾದ ಪ್ರಕಾರ ಮೀಸಲಾತಿ ನೀಡಲಾಗಿದೆ. ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ನಾನು ಹೇಳಿಲ್ಲ. ಅವರು ಏನು ಉಲ್ಲೇಖಿಸುತ್ತಾರೋ ಅದು ತಪ್ಪು. ಅವರು ಅದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ನಾವು ರಾಷ್ಟ್ರೀಯ ಪಕ್ಷ… ಈ ದೇಶಕ್ಕೆ ಸಂವಿಧಾನವನ್ನು ತಂದಿದ್ದು ನಮ್ಮ ಪಕ್ಷ… ನಾನು ಇದರ ಮೇಲೆ ಹಕ್ಕುಚ್ಯುತಿ ನೋಟಿಸ್ ನೀಡುತ್ತೇನೆ. ನಾನು ಪ್ರಕರಣದ ವಿರುದ್ಧ ಹೋರಾಡುತ್ತೇನೆ. ಅವರು ನನ್ನನ್ನು ತಪ್ಪಾಗಿ ಉಲ್ಲೇಖಿಸುತ್ತಿದ್ದಾರೆ…” ಎಂದಿದ್ದಾರೆ.

ಡಿ.ಕೆ ಶಿವಕುಮಾರ್ ಸಂವಿಧಾನ ಬದಲಾಯಿಸುವುದಾಗಿ ಹೇಳಿದ್ದು ನಿಜಾನಾ?

ನ್ಯೂಸ್ 18 ಇಂಡಿಯಾ ಸುದ್ದಿ ಸಂಸ್ಥೆ ಆಯೋಜಿಸಿದ್ದ ‘ಡೈಮಂಡ್ ಸ್ಟೇಟ್ಸ್ ಸಮ್ಮಿಟ್’ ಎಂಬ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದರು. ಅಲ್ಲಿ ರಾಜಕೀಯ, ಸರ್ಕಾರ, ಕಾಂಗ್ರೆಸ್ ಪಕ್ಷ ಹಾಗೂ ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳಿಗೆ ಡಿ.ಕೆ ಶಿವಕುಮಾರ್ ಉತ್ತರಿಸಿದ್ದಾರೆ.

ಕಾರ್ಯಕ್ರಮದ ನಿರೂಪಕ ಇತ್ತೀಚೆಗೆ ಕರ್ನಾಟಕ ಸರ್ಕಾರ ಮಸೂದೆ ಮಂಡಿಸಿದ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಖಡ 4ರಷ್ಟು ಮೀಸಲಾತಿ ನೀಡುವ ವಿಚಾರವನ್ನು ಡಿ.ಕೆ ಶಿವಕುಮಾರ್ ಮುಂದೆ ಪ್ರಸ್ತಾಪಿಸಿ, “ಸಂವಿಧಾನದಲ್ಲಿ ಧರ್ಮಧಾರಿತ ಮೀಸಲಾತಿಗೆ ಅವಕಾಶ ಇಲ್ವಲ್ಲಾ”? ಎಂದಿದ್ದಾರೆ. ಅದಕ್ಕೆ ಉತ್ತರಿಸಿದ ಡಿಕೆಶಿ, “ಹೌದು, ನಾನು ಒಪ್ಪುತ್ತೇನೆ..ನೋಡೋಣ, ಕಾದು ನೋಡೋಣ. ನ್ಯಾಯಾಲಯದಲ್ಲಿ ಏನು ಬರುತ್ತದೆ ಎಂದು ಕಾದು ನೋಡೋಣ. ನಾವು ಏನೋ ಒಂದು ಪ್ರಾರಂಭಿಸಿದ್ದೇವೆ. ಎಲ್ಲರೂ ನ್ಯಾಯಾಲಯಕ್ಕೆ ಹೋಗುತ್ತಾರೆ ಎಂದು ನನಗೆ ಗೊತ್ತಿದೆ. ಶುಭದಿನಕ್ಕೆ ನಾವೆಲ್ಲ ಸ್ವಲ್ಪ ಕಾಯೋಣ.. ಶುಭದಿನ ಬರಲಿದೆ. ತುಂಬಾ ಬದಲಾವಣೆಗಳಿವೆ, ಸಂವಿಧಾನ ಬದಲಾಗಲಿದೆ. ಸಂವಿಧಾನದಲ್ಲಿ ಬದಲಾವಣೆಗಳನ್ನು ತಂದ ಕಾನೂನುಗಳಿವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...