Homeಕರ್ನಾಟಕಮುಸ್ಲಿಮರಿಗೆ ಮೀಸಲಾತಿ ನೀಡಲು 'ಸಂವಿಧಾನ ಬದಲಾಯಿಸುತ್ತೇವೆ' ಅಂದ್ರಾ ಡಿಕೆಶಿ...ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?

ಮುಸ್ಲಿಮರಿಗೆ ಮೀಸಲಾತಿ ನೀಡಲು ‘ಸಂವಿಧಾನ ಬದಲಾಯಿಸುತ್ತೇವೆ’ ಅಂದ್ರಾ ಡಿಕೆಶಿ…ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?

- Advertisement -
- Advertisement -

“ಮುಸ್ಲಿಮರಿಗೆ ಮೀಸಲಾತಿ ನೀಡಲು ನಾವು ಸಂವಿಧಾನ ಬದಲಾಯಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವುದಾಗಿ ಬಿಜೆಪಿ ಆರೋಪಿಸಿದ್ದು, ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ.

ಇಂದು (ಮಾ.24) ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು,”ಸ್ಪೀಕರ್ ಸರ್, ನಾನು ಬಹಳ ಗಂಭೀರವಾದ ವಿಷಯವನ್ನು ಪ್ರಸ್ತಾಪಿಸಲು ಎದ್ದು ನಿಂತಿದ್ದೇನೆ. ಎನ್‌ಡಿಎ ಸಂಸದರು ನನ್ನನ್ನು ಭೇಟಿಯಾಗಿ ಬಹಳ ಪ್ರಮುಖವಾದ ಈ ವಿಷಯವನ್ನು ಸಂಸತ್‌ನಲ್ಲಿ ಪ್ರಸ್ತಾಪಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸರ್..ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರು, ಬಹಳ ಜವಾಬ್ದಾರಿಯುತ ಕಾಂಗ್ರೆಸ್ ನಾಯಕ, ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವವರು ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಭಾರತದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ನಾವು ಹಗುರವಾಗಿ ತೆಗೆದುಕೊಳ್ಳುವುದಿಲ್ಲ” ಎಂದರು.

“ಈ ಹೇಳಿಕೆಯನ್ನು ಯಾವುದಾದರು ಸಾಮಾನ್ಯ ವ್ಯಕ್ತಿ ನೀಡಿದ್ದರೆ ನಾವು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ನಾವು ಸಂಸತ್ತಿನ ಹೊರಗೆ ಪ್ರತಿಕ್ರಿಯಿಸುತ್ತಿದ್ದೆವು. ಇದು ಒಬ್ಬರು ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ನೀಡಿರುವ ಹೇಳಿಕೆ. ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಮೀಸಲಾತಿ ನೀಡಲಿದೆ, ಅದಕ್ಕಾಗಿ ಸಂವಿಧಾನ ಬದಲಾಯಿಸಲಿದೆ ಎಂದು ಹೇಳಿದ್ದಾರೆ. ಇದು ಅತ್ಯಂತ ಗಂಭೀರ ವಿಚಾರ, ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇದು ಭಾರತದ ಸಂವಿಧಾನದ ಮೇಲಿನ ದಾಳಿ. ಡಾ.ಬಿಆರ್ ಅವರು ಕೊಟ್ಟಿರುವ ಸಂವಿಧಾನದ ಮೇಲಿನ ದಾಳಿ” ಎಂದು ಕಿಡಿಕಾರಿದರು.

“ಈ ಜನರು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋ ಹಿಡಿದುಕೊಂಡು ಬರುತ್ತಾರೆ. ಅದೇ ಜನರು ಭಾರತದ ಸಂವಿಧಾನವನ್ನು ಬದಲಾಯಿಸುವುದಾಗಿ ಅಧಿಕೃತ ಹೇಳಿಕೆ ನೀಡುತ್ತಾರೆ. ಇಲ್ಲಿ ಕುಳಿತಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಈ ವಿಚಾರದ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಬೇಕೆಂದು ನಾನು ಆಗ್ರಹಿಸುತ್ತೇನೆ. ಮುಸ್ಲಿಮರಿಗೆ ಮೀಸಲಾತಿ ನೀಡಲು ನೀವು ಹೇಗೆ ಮತ್ತು ಯಾವ ಕಾರಣಕ್ಕೆ ಭಾರತದ ಸಂವಿಧಾನ ಬದಲಾಯಿಸಲು ಬಯಸುತ್ತಿದ್ದೀರಿ? ನನಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಂದ ಅವರ ನಿಲುವಿನ ಕುರಿತು ಸ್ಪಷ್ಟವಾದ ಪ್ರತಿಕ್ರಿಯೆ ಬೇಕು” ಎಂದು ಒತ್ತಾಯಿಸಿದರು.

ಡಿ.ಕೆ ಶಿವಕುಮಾರ್ ಅವರ ಹೇಳಿಕೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್ ಮಾಳವೀಯ, “ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರು ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಸಂವಿಧಾನವನ್ನು ತಿದ್ದುಪಡಿ ಮಾಡಲಿದೆ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ” ಎಂದಿದ್ದಾರೆ.

“ಸ್ವಯಂ ಘೋಷಿತ ಸಂವಿಧಾನದ ರಕ್ಷಕ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ? ಕಾಂಗ್ರೆಸ್ ಯಾವಾಗಲೂ ರಾಷ್ಟ್ರೀಯ ಹಿತಾಸಕ್ತಿಗಿಂತ ಸಮಾಧಾನಕ್ಕೆ ಆದ್ಯತೆ ನೀಡಿದೆ. ಅವರು ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು ಹಿಂಜರಿಯಲಿಲ್ಲ ಮತ್ತು ಅದರ ನಂತರವೂ ಮುಸ್ಲಿಮರು ಹಿಂದೆ ಉಳಿಯುವಂತೆ ನೋಡಿಕೊಂಡರು. ಇದಕ್ಕಿಂತ ದೊಡ್ಡ ದ್ರೋಹ ಇನ್ನೊಂದಿಲ್ಲ”ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಎಂದಿಗೂ ಹಿಂದೂಗಳಿಗೆ ನ್ಯಾಯಯುತವಾಗಿ ವರ್ತಿಸಿಲ್ಲ – ಮತ್ತು ಅದು ಎಂದಿಗೂ ಆಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿಗರ ಆರೋಪದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, “ನಾನು ನಡ್ಡಾ ಅವರಿಗಿಂತ ಸಂವೇದನಾಶೀಲ, ಹಿರಿಯ ರಾಜಕಾರಣಿ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದೇನೆ. ನನಗೆ ಸಾಮಾನ್ಯ ಜ್ಞಾನವಿದೆ. ವಿವಿಧ ತೀರ್ಪುಗಳ ನಂತರ ಹಲವು ಬದಲಾವಣೆಗಳಾಗುತ್ತವೆ ಎಂದು ನಾನು ಸಾಂದರ್ಭಿಕವಾಗಿ ಹೇಳಿದ್ದೇನೆ. ಹಿಂದುಳಿದ ವರ್ಗಗಳ ಕೋಟಾದ ಪ್ರಕಾರ ಮೀಸಲಾತಿ ನೀಡಲಾಗಿದೆ. ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ನಾನು ಹೇಳಿಲ್ಲ. ಅವರು ಏನು ಉಲ್ಲೇಖಿಸುತ್ತಾರೋ ಅದು ತಪ್ಪು. ಅವರು ಅದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ನಾವು ರಾಷ್ಟ್ರೀಯ ಪಕ್ಷ… ಈ ದೇಶಕ್ಕೆ ಸಂವಿಧಾನವನ್ನು ತಂದಿದ್ದು ನಮ್ಮ ಪಕ್ಷ… ನಾನು ಇದರ ಮೇಲೆ ಹಕ್ಕುಚ್ಯುತಿ ನೋಟಿಸ್ ನೀಡುತ್ತೇನೆ. ನಾನು ಪ್ರಕರಣದ ವಿರುದ್ಧ ಹೋರಾಡುತ್ತೇನೆ. ಅವರು ನನ್ನನ್ನು ತಪ್ಪಾಗಿ ಉಲ್ಲೇಖಿಸುತ್ತಿದ್ದಾರೆ…” ಎಂದಿದ್ದಾರೆ.

ಡಿ.ಕೆ ಶಿವಕುಮಾರ್ ಸಂವಿಧಾನ ಬದಲಾಯಿಸುವುದಾಗಿ ಹೇಳಿದ್ದು ನಿಜಾನಾ?

ನ್ಯೂಸ್ 18 ಇಂಡಿಯಾ ಸುದ್ದಿ ಸಂಸ್ಥೆ ಆಯೋಜಿಸಿದ್ದ ‘ಡೈಮಂಡ್ ಸ್ಟೇಟ್ಸ್ ಸಮ್ಮಿಟ್’ ಎಂಬ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದರು. ಅಲ್ಲಿ ರಾಜಕೀಯ, ಸರ್ಕಾರ, ಕಾಂಗ್ರೆಸ್ ಪಕ್ಷ ಹಾಗೂ ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳಿಗೆ ಡಿ.ಕೆ ಶಿವಕುಮಾರ್ ಉತ್ತರಿಸಿದ್ದಾರೆ.

ಕಾರ್ಯಕ್ರಮದ ನಿರೂಪಕ ಇತ್ತೀಚೆಗೆ ಕರ್ನಾಟಕ ಸರ್ಕಾರ ಮಸೂದೆ ಮಂಡಿಸಿದ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಖಡ 4ರಷ್ಟು ಮೀಸಲಾತಿ ನೀಡುವ ವಿಚಾರವನ್ನು ಡಿ.ಕೆ ಶಿವಕುಮಾರ್ ಮುಂದೆ ಪ್ರಸ್ತಾಪಿಸಿ, “ಸಂವಿಧಾನದಲ್ಲಿ ಧರ್ಮಧಾರಿತ ಮೀಸಲಾತಿಗೆ ಅವಕಾಶ ಇಲ್ವಲ್ಲಾ”? ಎಂದಿದ್ದಾರೆ. ಅದಕ್ಕೆ ಉತ್ತರಿಸಿದ ಡಿಕೆಶಿ, “ಹೌದು, ನಾನು ಒಪ್ಪುತ್ತೇನೆ..ನೋಡೋಣ, ಕಾದು ನೋಡೋಣ. ನ್ಯಾಯಾಲಯದಲ್ಲಿ ಏನು ಬರುತ್ತದೆ ಎಂದು ಕಾದು ನೋಡೋಣ. ನಾವು ಏನೋ ಒಂದು ಪ್ರಾರಂಭಿಸಿದ್ದೇವೆ. ಎಲ್ಲರೂ ನ್ಯಾಯಾಲಯಕ್ಕೆ ಹೋಗುತ್ತಾರೆ ಎಂದು ನನಗೆ ಗೊತ್ತಿದೆ. ಶುಭದಿನಕ್ಕೆ ನಾವೆಲ್ಲ ಸ್ವಲ್ಪ ಕಾಯೋಣ.. ಶುಭದಿನ ಬರಲಿದೆ. ತುಂಬಾ ಬದಲಾವಣೆಗಳಿವೆ, ಸಂವಿಧಾನ ಬದಲಾಗಲಿದೆ. ಸಂವಿಧಾನದಲ್ಲಿ ಬದಲಾವಣೆಗಳನ್ನು ತಂದ ಕಾನೂನುಗಳಿವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...