Homeಕರ್ನಾಟಕಮುಸ್ಲಿಮರಿಗೆ ಮೀಸಲಾತಿ ನೀಡಲು 'ಸಂವಿಧಾನ ಬದಲಾಯಿಸುತ್ತೇವೆ' ಅಂದ್ರಾ ಡಿಕೆಶಿ...ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?

ಮುಸ್ಲಿಮರಿಗೆ ಮೀಸಲಾತಿ ನೀಡಲು ‘ಸಂವಿಧಾನ ಬದಲಾಯಿಸುತ್ತೇವೆ’ ಅಂದ್ರಾ ಡಿಕೆಶಿ…ಡಿಸಿಎಂ ಮೇಲೆ ಬಿಜೆಪಿ ಮುಗಿಬಿದ್ದಿದ್ದೇಕೆ?

- Advertisement -
- Advertisement -

“ಮುಸ್ಲಿಮರಿಗೆ ಮೀಸಲಾತಿ ನೀಡಲು ನಾವು ಸಂವಿಧಾನ ಬದಲಾಯಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವುದಾಗಿ ಬಿಜೆಪಿ ಆರೋಪಿಸಿದ್ದು, ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ.

ಇಂದು (ಮಾ.24) ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು,”ಸ್ಪೀಕರ್ ಸರ್, ನಾನು ಬಹಳ ಗಂಭೀರವಾದ ವಿಷಯವನ್ನು ಪ್ರಸ್ತಾಪಿಸಲು ಎದ್ದು ನಿಂತಿದ್ದೇನೆ. ಎನ್‌ಡಿಎ ಸಂಸದರು ನನ್ನನ್ನು ಭೇಟಿಯಾಗಿ ಬಹಳ ಪ್ರಮುಖವಾದ ಈ ವಿಷಯವನ್ನು ಸಂಸತ್‌ನಲ್ಲಿ ಪ್ರಸ್ತಾಪಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸರ್..ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರು, ಬಹಳ ಜವಾಬ್ದಾರಿಯುತ ಕಾಂಗ್ರೆಸ್ ನಾಯಕ, ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವವರು ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಭಾರತದ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ನಾವು ಹಗುರವಾಗಿ ತೆಗೆದುಕೊಳ್ಳುವುದಿಲ್ಲ” ಎಂದರು.

“ಈ ಹೇಳಿಕೆಯನ್ನು ಯಾವುದಾದರು ಸಾಮಾನ್ಯ ವ್ಯಕ್ತಿ ನೀಡಿದ್ದರೆ ನಾವು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ನಾವು ಸಂಸತ್ತಿನ ಹೊರಗೆ ಪ್ರತಿಕ್ರಿಯಿಸುತ್ತಿದ್ದೆವು. ಇದು ಒಬ್ಬರು ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ನೀಡಿರುವ ಹೇಳಿಕೆ. ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಮೀಸಲಾತಿ ನೀಡಲಿದೆ, ಅದಕ್ಕಾಗಿ ಸಂವಿಧಾನ ಬದಲಾಯಿಸಲಿದೆ ಎಂದು ಹೇಳಿದ್ದಾರೆ. ಇದು ಅತ್ಯಂತ ಗಂಭೀರ ವಿಚಾರ, ಇದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇದು ಭಾರತದ ಸಂವಿಧಾನದ ಮೇಲಿನ ದಾಳಿ. ಡಾ.ಬಿಆರ್ ಅವರು ಕೊಟ್ಟಿರುವ ಸಂವಿಧಾನದ ಮೇಲಿನ ದಾಳಿ” ಎಂದು ಕಿಡಿಕಾರಿದರು.

“ಈ ಜನರು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋ ಹಿಡಿದುಕೊಂಡು ಬರುತ್ತಾರೆ. ಅದೇ ಜನರು ಭಾರತದ ಸಂವಿಧಾನವನ್ನು ಬದಲಾಯಿಸುವುದಾಗಿ ಅಧಿಕೃತ ಹೇಳಿಕೆ ನೀಡುತ್ತಾರೆ. ಇಲ್ಲಿ ಕುಳಿತಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಈ ವಿಚಾರದ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಬೇಕೆಂದು ನಾನು ಆಗ್ರಹಿಸುತ್ತೇನೆ. ಮುಸ್ಲಿಮರಿಗೆ ಮೀಸಲಾತಿ ನೀಡಲು ನೀವು ಹೇಗೆ ಮತ್ತು ಯಾವ ಕಾರಣಕ್ಕೆ ಭಾರತದ ಸಂವಿಧಾನ ಬದಲಾಯಿಸಲು ಬಯಸುತ್ತಿದ್ದೀರಿ? ನನಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಂದ ಅವರ ನಿಲುವಿನ ಕುರಿತು ಸ್ಪಷ್ಟವಾದ ಪ್ರತಿಕ್ರಿಯೆ ಬೇಕು” ಎಂದು ಒತ್ತಾಯಿಸಿದರು.

ಡಿ.ಕೆ ಶಿವಕುಮಾರ್ ಅವರ ಹೇಳಿಕೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್ ಮಾಳವೀಯ, “ಕರ್ನಾಟಕದ ಉಪಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರು ಮುಸ್ಲಿಮರಿಗೆ ಮೀಸಲಾತಿ ನೀಡಲು ಕಾಂಗ್ರೆಸ್ ಸಂವಿಧಾನವನ್ನು ತಿದ್ದುಪಡಿ ಮಾಡಲಿದೆ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ” ಎಂದಿದ್ದಾರೆ.

“ಸ್ವಯಂ ಘೋಷಿತ ಸಂವಿಧಾನದ ರಕ್ಷಕ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ? ಕಾಂಗ್ರೆಸ್ ಯಾವಾಗಲೂ ರಾಷ್ಟ್ರೀಯ ಹಿತಾಸಕ್ತಿಗಿಂತ ಸಮಾಧಾನಕ್ಕೆ ಆದ್ಯತೆ ನೀಡಿದೆ. ಅವರು ಧಾರ್ಮಿಕ ಆಧಾರದ ಮೇಲೆ ದೇಶವನ್ನು ವಿಭಜಿಸಲು ಹಿಂಜರಿಯಲಿಲ್ಲ ಮತ್ತು ಅದರ ನಂತರವೂ ಮುಸ್ಲಿಮರು ಹಿಂದೆ ಉಳಿಯುವಂತೆ ನೋಡಿಕೊಂಡರು. ಇದಕ್ಕಿಂತ ದೊಡ್ಡ ದ್ರೋಹ ಇನ್ನೊಂದಿಲ್ಲ”ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಎಂದಿಗೂ ಹಿಂದೂಗಳಿಗೆ ನ್ಯಾಯಯುತವಾಗಿ ವರ್ತಿಸಿಲ್ಲ – ಮತ್ತು ಅದು ಎಂದಿಗೂ ಆಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಬಿಜೆಪಿಗರ ಆರೋಪದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, “ನಾನು ನಡ್ಡಾ ಅವರಿಗಿಂತ ಸಂವೇದನಾಶೀಲ, ಹಿರಿಯ ರಾಜಕಾರಣಿ. ನಾನು ಕಳೆದ 36 ವರ್ಷಗಳಿಂದ ವಿಧಾನಸಭೆಯಲ್ಲಿದ್ದೇನೆ. ನನಗೆ ಸಾಮಾನ್ಯ ಜ್ಞಾನವಿದೆ. ವಿವಿಧ ತೀರ್ಪುಗಳ ನಂತರ ಹಲವು ಬದಲಾವಣೆಗಳಾಗುತ್ತವೆ ಎಂದು ನಾನು ಸಾಂದರ್ಭಿಕವಾಗಿ ಹೇಳಿದ್ದೇನೆ. ಹಿಂದುಳಿದ ವರ್ಗಗಳ ಕೋಟಾದ ಪ್ರಕಾರ ಮೀಸಲಾತಿ ನೀಡಲಾಗಿದೆ. ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ನಾನು ಹೇಳಿಲ್ಲ. ಅವರು ಏನು ಉಲ್ಲೇಖಿಸುತ್ತಾರೋ ಅದು ತಪ್ಪು. ಅವರು ಅದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ನಾವು ರಾಷ್ಟ್ರೀಯ ಪಕ್ಷ… ಈ ದೇಶಕ್ಕೆ ಸಂವಿಧಾನವನ್ನು ತಂದಿದ್ದು ನಮ್ಮ ಪಕ್ಷ… ನಾನು ಇದರ ಮೇಲೆ ಹಕ್ಕುಚ್ಯುತಿ ನೋಟಿಸ್ ನೀಡುತ್ತೇನೆ. ನಾನು ಪ್ರಕರಣದ ವಿರುದ್ಧ ಹೋರಾಡುತ್ತೇನೆ. ಅವರು ನನ್ನನ್ನು ತಪ್ಪಾಗಿ ಉಲ್ಲೇಖಿಸುತ್ತಿದ್ದಾರೆ…” ಎಂದಿದ್ದಾರೆ.

ಡಿ.ಕೆ ಶಿವಕುಮಾರ್ ಸಂವಿಧಾನ ಬದಲಾಯಿಸುವುದಾಗಿ ಹೇಳಿದ್ದು ನಿಜಾನಾ?

ನ್ಯೂಸ್ 18 ಇಂಡಿಯಾ ಸುದ್ದಿ ಸಂಸ್ಥೆ ಆಯೋಜಿಸಿದ್ದ ‘ಡೈಮಂಡ್ ಸ್ಟೇಟ್ಸ್ ಸಮ್ಮಿಟ್’ ಎಂಬ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದರು. ಅಲ್ಲಿ ರಾಜಕೀಯ, ಸರ್ಕಾರ, ಕಾಂಗ್ರೆಸ್ ಪಕ್ಷ ಹಾಗೂ ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳಿಗೆ ಡಿ.ಕೆ ಶಿವಕುಮಾರ್ ಉತ್ತರಿಸಿದ್ದಾರೆ.

ಕಾರ್ಯಕ್ರಮದ ನಿರೂಪಕ ಇತ್ತೀಚೆಗೆ ಕರ್ನಾಟಕ ಸರ್ಕಾರ ಮಸೂದೆ ಮಂಡಿಸಿದ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಖಡ 4ರಷ್ಟು ಮೀಸಲಾತಿ ನೀಡುವ ವಿಚಾರವನ್ನು ಡಿ.ಕೆ ಶಿವಕುಮಾರ್ ಮುಂದೆ ಪ್ರಸ್ತಾಪಿಸಿ, “ಸಂವಿಧಾನದಲ್ಲಿ ಧರ್ಮಧಾರಿತ ಮೀಸಲಾತಿಗೆ ಅವಕಾಶ ಇಲ್ವಲ್ಲಾ”? ಎಂದಿದ್ದಾರೆ. ಅದಕ್ಕೆ ಉತ್ತರಿಸಿದ ಡಿಕೆಶಿ, “ಹೌದು, ನಾನು ಒಪ್ಪುತ್ತೇನೆ..ನೋಡೋಣ, ಕಾದು ನೋಡೋಣ. ನ್ಯಾಯಾಲಯದಲ್ಲಿ ಏನು ಬರುತ್ತದೆ ಎಂದು ಕಾದು ನೋಡೋಣ. ನಾವು ಏನೋ ಒಂದು ಪ್ರಾರಂಭಿಸಿದ್ದೇವೆ. ಎಲ್ಲರೂ ನ್ಯಾಯಾಲಯಕ್ಕೆ ಹೋಗುತ್ತಾರೆ ಎಂದು ನನಗೆ ಗೊತ್ತಿದೆ. ಶುಭದಿನಕ್ಕೆ ನಾವೆಲ್ಲ ಸ್ವಲ್ಪ ಕಾಯೋಣ.. ಶುಭದಿನ ಬರಲಿದೆ. ತುಂಬಾ ಬದಲಾವಣೆಗಳಿವೆ, ಸಂವಿಧಾನ ಬದಲಾಗಲಿದೆ. ಸಂವಿಧಾನದಲ್ಲಿ ಬದಲಾವಣೆಗಳನ್ನು ತಂದ ಕಾನೂನುಗಳಿವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...